Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 20:41 - ಪರಿಶುದ್ದ ಬೈಬಲ್‌

41 ಬಾಲಕನು ಹೊರಟುಹೋದನು. ದಾವೀದನು ತಾನು ಅಡಗಿದ್ದ ಬೆಟ್ಟದ ಮತ್ತೊಂದು ಕಡೆಯ ಸ್ಥಳದಿಂದ ಹೊರಬಂದನು. ದಾವೀದನು ಯೋನಾತಾನನ ಮುಂದೆ ಬಂದು ಮೂರು ಸಲ ತನ್ನ ಮುಖವನ್ನು ನೆಲದವರೆಗೂ ಬಗ್ಗಿಸಿ ನಮಸ್ಕರಿಸಿದನು. ನಂತರ ದಾವೀದ ಮತ್ತು ಯೋನಾತಾನರು ಪರಸ್ಪರ ಮುದ್ದಿಟ್ಟರು, ಅವರಿಬ್ಬರೂ ಒಟ್ಟಾಗಿ ಅತ್ತರು. ದಾವೀದನು ಯೋನಾತಾನನಿಗಿಂತ ಹೆಚ್ಚು ಅತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಹುಡುಗನು ಹೋಗುತ್ತಲೇ ದಾವೀದನು ಕಲ್ಲುಕುಪ್ಪೆಯ ಬಳಿಯಿಂದ ಎದ್ದುಬಂದು ಮೂರು ಸಾರಿ ಸಾಷ್ಟಾಂಗವಾಗಿ ಯೋನಾತಾನನನ್ನು ವಂದಿಸಿದನು. ಅವರು ಒಬ್ಬರಿಗೊಬ್ಬರು ಮುದ್ದಿಟ್ಟುಕೊಂಡು ಅತ್ತರು. ದಾವೀದನು ಬಹಳವಾಗಿ ಅತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 ಹುಡುಗನು ಹೋಗುತ್ತಲೇ ದಾವೀದನು ಕಲ್ಲುಕುಪ್ಪೆಯ ಬಳಿಯಿಂದೆದ್ದು ಬಂದು ಮೂರು ಸಾರಿ ಸಾಷ್ಟಾಂಗವಾಗಿ ಯೋನಾತಾನನನ್ನು ವಂದಿಸಿದನು. ಅವರು ಒಬ್ಬರನ್ನೊಬ್ಬರು ಅಪ್ಪಿಕೊಂಡು ಅತ್ತರು. ದಾವೀದನು ಬಹಳವಾಗಿ ಅತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ಹುಡುಗನು ಹೋಗುತ್ತಲೆ ದಾವೀದನು ಕಲ್ಲುಕುಪ್ಪೆಯ ಬಳಿಯಿಂದೆದ್ದು ಬಂದು ಮೂರು ಸಾರಿ ಸಾಷ್ಟಾಂಗವಾಗಿ ಯೋನಾತಾನನನ್ನು ವಂದಿಸಿದನು. ಅವರು ಒಬ್ಬರಿಗೊಬ್ಬರು ಮುದ್ದಿಟ್ಟುಕೊಂಡು ಅತ್ತರು; ದಾವೀದನು ಬಹಳವಾಗಿ ಅತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ಹುಡುಗನು ಹೋಗುತ್ತಲೇ ದಾವೀದನು ದಕ್ಷಿಣ ಕಡೆಯಿಂದ ಎದ್ದು ಬಂದು ಯೋನಾತಾನನ ಮುಂದೆ ಬೋರಲು ಬಿದ್ದು ಮೂರು ಸಾರಿ ವಂದಿಸಿದನು. ಅವರು ಒಬ್ಬರಿಗೊಬ್ಬರು ಮುದ್ದಿಟ್ಟುಕೊಂಡು, ಒಬ್ಬರನ್ನೊಬ್ಬರು ನೋಡಿ ಅತ್ತರು. ದಾವೀದನು ಬಹಳವಾಗಿ ಅತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 20:41
20 ತಿಳಿವುಗಳ ಹೋಲಿಕೆ  

ಯೋನಾತಾನನು ದಾವೀದನನ್ನು ಬಹಳವಾಗಿ ಪ್ರೀತಿಸುತ್ತಿದ್ದನು. ಅವನು ದಾವೀದನೊಂದಿಗೆ ಒಂದು ಒಪ್ಪಂದವನ್ನು ಮಾಡಿಕೊಂಡನು.


ಬಳಿಕ ಯಾಕೋಬನು ರಾಹೇಲಳಿಗೆ ಮುದ್ದಿಟ್ಟು ಅತ್ತನು.


ಅವರೆಲ್ಲರೂ ಬಹಳವಾಗಿ ಅತ್ತರು. “ನೀವು ನನ್ನನ್ನು ಮತ್ತೆಂದಿಗೂ ನೋಡುವುದಿಲ್ಲ”ವೆಂದು ಪೌಲನು ಹೇಳಿದ್ದರಿಂದ ಅವರು ಬಹಳ ದುಃಖಗೊಂಡಿದ್ದರು. ಅವರು ಪೌಲನನ್ನು ಅಪ್ಪಿಕೊಂಡು ಮುದ್ದಿಟ್ಟರು. ಅವರು ಹಡಗಿನವರೆಗೂ ಹೋಗಿ ಅವನನ್ನು ಬೀಳ್ಕೊಟ್ಟರು.


ರಾಜನು ಬರ್ಜಿಲ್ಲೈಯನಿಗೆ ಮುದ್ದಿಟ್ಟು ಆಶೀರ್ವದಿಸಿದನು. ಬರ್ಜಿಲ್ಲೈಯನು ಮನೆಗೆ ಹಿಂದಿರುಗಿದನು. ರಾಜನು ತನ್ನ ಜನರೆಲ್ಲರೊಂದಿಗೆ ನದಿಯನ್ನು ದಾಟಿದನು.


ಯೋನಾತಾನನ ಮಗನಾದ ಮೆಫೀಬೋಶೆತನು ದಾವೀದನ ಬಳಿಗೆ ಬಂದು ಸಾಷ್ಟಾಂಗನಮಸ್ಕಾರ ಮಾಡಿದನು. ದಾವೀದನು, “ಮೆಫೀಬೋಶೆತನೇ” ಎಂದನು. ಮೆಫೀಬೋಶೆತನು, “ನಿನ್ನ ಸೇವಕನಾದ ನಾನು ಇಲ್ಲಿದ್ದೇನೆ” ಎಂದನು.


ನನ್ನ ಸೋದರನಾದ ಯೋನಾತಾನನೇ, ನಿನಗಾಗಿ ನಾನು ದುಃಖಿಸುವೆ! ನಿನ್ನ ಗೆಳೆತನವು ನನಗೆ ಉಲ್ಲಾಸದಾಯಕವಾಗಿತ್ತು. ನನ್ನ ಮೇಲಿನ ನಿನ್ನ ಪ್ರೀತಿಯು ಸ್ತ್ರೀಯರ ಪ್ರೀತಿಗಿಂತಲೂ ಅತಿಶಯವಾಗಿತ್ತು.


ಅಬೀಗೈಲಳು ದಾವೀದನನ್ನು ಕಂಡ ಕೂಡಲೆ ಕತ್ತೆಯಿಂದ ಬೇಗನೆ ಇಳಿದು ದಾವೀದನಿಗೆ ಸಾಷ್ಟಾಂಗನಮಸ್ಕಾರ ಮಾಡಿದಳು.


ಸಮುವೇಲನು ವಿಶೇಷವಾದ ಎಣ್ಣೆಯ ಕುಪ್ಪಿಯನ್ನು ತೆಗೆದುಕೊಂಡು ಸೌಲನ ತಲೆಯ ಮೇಲೆ ಆ ಎಣ್ಣೆಯನ್ನು ಸುರಿದನು. ಸಮುವೇಲನು ಸೌಲನಿಗೆ ಮುದ್ದಿಟ್ಟು, “ಯೆಹೋವನು ತನ್ನ ಜನರನ್ನು ಮುಂದೆ ನಡೆಸಲು ನಿನ್ನನ್ನು ಅವರಿಗೆ ನಾಯಕನನ್ನಾಗಿ ಅಭಿಷೇಕಿಸಿದ್ದಾನೆ. ನೀನು ಯೆಹೋವನ ಜನರನ್ನು ಆಳುವೆ; ಅವರನ್ನು ಸುತ್ತುವರೆದಿರುವ ಶತ್ರುಗಳಿಂದ ರಕ್ಷಿಸುವೆ. ಯೆಹೋವನು ತನ್ನ ಜನರನ್ನು ಆಳುವುದಕ್ಕಾಗಿ ನಿನ್ನನ್ನು ಅಭಿಷೇಕಿಸಿದ್ದಾನೆ. ಇದು ನಿಜವೆಂಬುದಕ್ಕೆ ಸಾಕ್ಷಿಯೇನೆಂದರೆ:


ಆಮೇಲೆ ಯೋಸೇಫನು ತನ್ನ ಎಲ್ಲಾ ಸಹೋದರರಿಗೂ ಮುದ್ದಿಟ್ಟು ಅತ್ತನು. ಇದಾದ ಮೇಲೆ ಆ ಸಹೋದರರು ಅವನೊಂದಿಗೆ ಮಾತಾಡತೊಡಗಿದರು.


ಸಹೋದರರು, “ಸ್ವಾಮೀ, ನಮ್ಮ ತಂದೆ ಕ್ಷೇಮವಾಗಿದ್ದಾನೆ. ಅವನು ಇನ್ನೂ ಜೀವಂತವಾಗಿದ್ದಾನೆ” ಎಂದು ಹೇಳಿದನು. ಬಳಿಕ ಅವರು ಮತ್ತೆ ಯೋಸೇಫನಿಗೆ ಅಡ್ಡಬಿದ್ದರು.


ಲಾಬಾನನು ತನ್ನ ತಂಗಿಯ ಮಗನಾದ ಯಾಕೋಬನ ವಿಷಯವನ್ನು ಕೇಳಿ ಭೇಟಿಯಾಗಲು ಓಡಿಬಂದನು. ಲಾಬಾನನು ಅವನನ್ನು ಅಪ್ಪಿಕೊಂಡು ಮುದ್ದಿಟ್ಟು ಮನೆಗೆ ಕರೆದುಕೊಂಡು ಬಂದನು. ಯಾಕೋಬನು ನಡೆದ ಪ್ರತಿಯೊಂದನ್ನೂ ಲಾಬಾನನಿಗೆ ತಿಳಿಸಿದನು.


ಯೋಸೇಫನು ಈಜಿಪ್ಟಿನ ರಾಜ್ಯಪಾಲನಾಗಿದ್ದರಿಂದ ಅವನ ಅನುಮತಿಯಿಲ್ಲದೆ ದವಸಧಾನ್ಯಗಳನ್ನು ಕೊಂಡುಕೊಳ್ಳಲು ಯಾರಿಗೂ ಸಾಧ್ಯವಿರಲಿಲ್ಲ. ಯೋಸೇಫನ ಸಹೋದರರು ಬಂದು ಅವನ ಮುಂದೆ ಅಡ್ಡಬಿದ್ದರು.


ಯೋನಾತಾನನು ತನ್ನ ಬಿಲ್ಲು ಮತ್ತು ಬಾಣಗಳನ್ನು ಬಾಲಕನಿಗೆ ಕೊಟ್ಟನು. ನಂತರ ಯೋನಾತಾನನು ಆ ಬಾಲಕನಿಗೆ, “ಪಟ್ಟಣಕ್ಕೆ ಹಿಂದಿರುಗಿ ಹೋಗು” ಎಂದು ಹೇಳಿದನು.


ಏಸಾವನು ಯಾಕೋಬನನ್ನು ಕಂಡಾಗ, ಓಡಿಬಂದು ತನ್ನ ಕೈಗಳಿಂದ ತಬ್ಬಿಕೊಂಡು ಅವನ ಕೊರಳಿನ ಮೇಲೆ ಮುದ್ದಿಟ್ಟನು; ಅವರಿಬ್ಬರೂ ಕಣ್ಣೀರು ಸುರಿಸಿದರು.


“‘ದಾವೀದನು ನಿನಗೆ ಕೇಡುಮಾಡಲು ಸಂಚುಗಳನ್ನು ಮಾಡುತ್ತಿದ್ದಾನೆ’ ಎಂಬುದಾಗಿ ಜನರು ಹೇಳುವಾಗ ನೀನು ಕೇಳುವುದೇಕೆ?


ಮೂರನೆಯ ದಿನ ಒಬ್ಬ ಯುವ ಸೈನಿಕನು ಚಿಕ್ಲಗಿಗೆ ಬಂದನು. ಈ ಮನುಷ್ಯನು ಸೌಲನಿದ್ದ ಪಾಳೆಯದಿಂದ ಬಂದವನು. ಅವನು ಬಟ್ಟೆಗಳೆಲ್ಲವನ್ನು ಹರಿದುಕೊಂಡಿದ್ದನು; ತಲೆಯ ಮೇಲೆ ಧೂಳನ್ನು ಹಾಕಿಕೊಂಡಿದ್ದನು. ಅವನು ದಾವೀದನ ಬಳಿಗೆ ಬಂದು ಅವನ ಮುಂದೆ, ತನ್ನ ತಲೆಯನ್ನು ನೆಲಕ್ಕೆ ಬಾಗಿಸಿ ನಮಸ್ಕರಿಸಿದನು.


ತೆಕೋವದ ಆ ಸ್ತ್ರೀಯು ರಾಜನ ಬಳಿಗೆ ಬಂದಾಗ ಅವನಿಗೆ ಸಾಷ್ಟಾಂಗನಮಸ್ಕಾರ ಮಾಡಿ, “ರಾಜನೇ, ನನಗೆ ಸಹಾಯಮಾಡು” ಎಂದು ಹೇಳಿದಳು.


ರಾಜನ ಎದುರಿನಲ್ಲಿ ಬತ್ಷೆಬೆಳು ಬಾಗಿ ನಮಸ್ಕರಿಸಿದಳು. ರಾಜನು, “ನಾನು ನಿನಗಾಗಿ ಏನು ಮಾಡಬೇಕು?” ಎಂದು ಕೇಳಿದನು.


ಸೇವಕರು ರಾಜನಿಗೆ, “ಪ್ರವಾದಿಯಾದ ನಾತಾನನು ಬಂದಿರುವನು” ಎಂದು ಹೇಳಿದರು. ಆಗ ನಾತಾನನು ಪ್ರವೇಶಿಸಿ, ರಾಜನಿಗೆ ಸಾಷ್ಟಾಂಗನಮಸ್ಕಾರ ಮಾಡಿದನು.


ಆಗ ಬತ್ಷೆಬೆಳು ರಾಜನಿಗೆ ಸಾಷ್ಟಾಂಗನಮಸ್ಕಾರ ಮಾಡಿದಳು. ಅವಳು, “ರಾಜನಾದ ದಾವೀದನು ಚಿರಾಯುವಾಗಿರಲಿ!” ಎಂದು ಹೇಳಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು