Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 21:2 - ಪರಿಶುದ್ದ ಬೈಬಲ್‌

2 ದಾವೀದನು ಅಹೀಮೆಲೆಕನಿಗೆ, “ರಾಜನು ನನಗೆ ಒಂದು ವಿಶೇಷ ಆಜ್ಞೆಯನ್ನು ಕೊಟ್ಟಿರುವನು. ಅವನು ನನಗೆ, ‘ಈ ಕೆಲಸದ ಬಗ್ಗೆ ಬೇರೆ ಯಾರಿಗೂ ತಿಳಿಸಬೇಡ. ನಾನು ನಿನಗೆ ಮಾಡಲು ಹೇಳಿದ ಕೆಲಸವು ಯಾರಿಗೂ ತಿಳಿಯಕೂಡದು’ ಎಂದು ಹೇಳಿದ್ದಾನೆ. ನಾನು ನನ್ನ ಜನರಿಗೆ ನನ್ನನ್ನು ಎಲ್ಲಿ ಭೇಟಿಯಾಗಬೇಕೆಂದು ತಿಳಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವನು, “ಅರಸನು ಒಂದು ಕೆಲಸವನ್ನು ಆಜ್ಞಾಪಿಸಿ, ಇದನ್ನು ಯಾರಿಗೂ ತಿಳಿಸಬಾರದೆಂದು ನನ್ನನ್ನು ಕಳುಹಿಸಿದ್ದಾನೆ. ನನ್ನ ಆಳುಗಳು ಇಂಥಿಂಥ ಸ್ಥಳದಲ್ಲಿ ನನ್ನನ್ನು ಸಂಧಿಸಬೇಕೆಂದು ಗೊತ್ತುಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅವನು, “ಅರಸರು ಒಂದು ಕೆಲಸವನ್ನು ಆಜ್ಞಾಪಿಸಿ ಇದನ್ನು ಯಾರಿಗೂ ತಿಳಿಸಬಾರದೆಂದು ಕಟ್ಟಪ್ಪಣೆಮಾಡಿ ನನ್ನನ್ನು ಕಳುಹಿಸಿದ್ದಾರೆ. ನನ್ನ ಆಳುಗಳು ಇಂಥಿಂಥ ಸ್ಥಳದಲ್ಲಿ ನನ್ನನ್ನು ಸಂಧಿಸಬೇಕೆಂದು ಗೊತ್ತುಮಾಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅರಸನು ಒಂದು ಕೆಲಸವನ್ನು ಆಜ್ಞಾಪಿಸಿ ಇದನ್ನು ಯಾರಿಗೂ ತಿಳಿಸಬಾರದೆಂದು ಕಟ್ಟುಮಾಡಿ ನನ್ನನ್ನು ಕಳುಹಿಸಿದ್ದಾನೆ. ನನ್ನ ಆಳುಗಳು ಇಂಥಿಂಥ ಸ್ಥಳದಲ್ಲಿ ನನ್ನನ್ನು ಸಂಧಿಸಬೇಕೆಂದು ಗೊತ್ತುಮಾಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ದಾವೀದನು ಯಾಜಕನಾದ ಅಹೀಮೆಲೆಕನಿಗೆ, “ಅರಸನು ನನಗೆ ಒಂದು ಕಾರ್ಯವನ್ನು ಆಜ್ಞಾಪಿಸಿದ್ದು, ಇಂಥದ್ದೆಂದು ಒಬ್ಬರಿಗೂ ತಿಳಿಯಬಾರದೆಂದು ನನಗೆ ಹೇಳಿದನು. ಇಂಥಿಂಥ ಸ್ಥಳಗಳಿಗೆ ಹೋಗಬೇಕೆಂದು ನಾನು ನನ್ನ ಕೆಲಸದವರಿಗೆ ನೇಮಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 21:2
13 ತಿಳಿವುಗಳ ಹೋಲಿಕೆ  

ನಡೆದ ಸಂಗತಿ ಏನೆಂದರೆ: ಪೇತ್ರನು ಮೊದಲು ಅಂತಿಯೋಕ್ಯಕ್ಕೆ ಬಂದಾಗ ಅವನು ಯೆಹೂದ್ಯರಲ್ಲದವರೊಂದಿಗೆ ಊಟಮಾಡಿದನು ಮತ್ತು ಅನ್ಯೋನ್ಯತೆಯಿಂದಿದ್ದನು. ಆ ಬಳಿಕ ಯಾಕೋಬನಿಂದ ಕಳುಹಿಸಲ್ಪಟ್ಟಿದ್ದ ಕೆಲವು ಯೆಹೂದ್ಯರು ಬಂದರು. ಆಗ, ಪೇತ್ರನು ಯೆಹೂದ್ಯರಲ್ಲದವರೊಂದಿಗೆ ಊಟಮಾಡುವುದನ್ನು ನಿಲ್ಲಿಸಿದನು. ಪೇತ್ರನು ತನ್ನನ್ನು ಯೆಹೂದ್ಯರಲ್ಲದವರಿಂದ ಬೇರ್ಪಡಿಸಿಕೊಂಡನು. ಯೆಹೂದ್ಯರಲ್ಲದವರೆಲ್ಲರೂ ಸುನ್ನತಿ ಮಾಡಿಸಿಕೊಳ್ಳಬೇಕೆಂದು ನಂಬಿಕೊಂಡಿದ್ದ ಯೆಹೂದ್ಯರಿಗೆ ಅವನು ಹೆದರಿಕೊಂಡನು.


ಒಬ್ಬರಿಗೊಬ್ಬರು ಸುಳ್ಳು ಹೇಳಬೇಡಿ. ಏಕೆಂದರೆ ನೀವು ನಿಮ್ಮ ಹಳೆಯ ಪಾಪಪೂರಿತ ಜೀವನವನ್ನು ಮತ್ತು ನಿಮ್ಮ ಮೊದಲಿನ ಕಾರ್ಯಗಳನ್ನು ಬಿಟ್ಟುಬಿಟ್ಟಿದ್ದೀರಿ.


ಆಗ ಆ ಪ್ರವಾದಿಯು, “ಆದರೆ ನಾನೂ ನಿನ್ನಂತೆಯೇ ಒಬ್ಬ ಪ್ರವಾದಿ” ಎಂದು ಹೇಳಿದನು. ನಂತರ ವಯಸ್ಸಾದ ಪ್ರವಾದಿಯು ಅವನಿಗೆ “ಯೆಹೋವನಿಂದ ಒಬ್ಬ ದೇವದೂತನು ನನ್ನ ಬಳಿಗೆ ಬಂದಿದ್ದನು. ಆ ದೂತನು ನಿನ್ನನ್ನು ನನ್ನ ಮನೆಗೆ ಕರೆತರಲು ನಿನ್ನೊಂದಿಗೆ ಅನ್ನಪಾನಗಳನ್ನು ತೆಗೆದುಕೊಳ್ಳಲು ನನಗೆ ತಿಳಿಸಿದನು” ಎಂದು ಸುಳ್ಳು ಹೇಳಿದನು.


ಆಗ ದಾವೀದನು ಎಬ್ಯಾತಾರನಿಗೆ, “ನಾನು ಎದೋಮ್ಯನಾದ ದೋಯೇಗನನ್ನು ಆ ದಿನ ನೋಬ್ ಪಟ್ಟಣದಲ್ಲಿ ನೋಡಿದೆ. ಅವನು ಸೌಲನಿಗೆ ತಿಳಿಸುತ್ತಾನೆಂದು ನನಗೆ ಗೊತ್ತಿತ್ತು! ನಿನ್ನ ತಂದೆಯ ಕುಟುಂಬದ ಮರಣಕ್ಕೆ ನಾನೇ ಕಾರಣ.


ಸೌಲನು ಮೀಕಲಳಿಗೆ, “ನೀನು ಈ ರೀತಿ ನನಗೆ ಮೋಸ ಮಾಡಿದ್ದೇಕೆ? ನನ್ನ ಶತ್ರುವು ತಪ್ಪಿಸಿಕೊಳ್ಳಲು ನೀನು ಅವಕಾಶ ಮಾಡಿಕೊಟ್ಟೆ! ದಾವೀದನು ಓಡಿಹೋದನಲ್ಲಾ!” ಎಂದು ಹೇಳಿದನು. ಮೀಕಲಳು ಸೌಲನಿಗೆ, “ತಪ್ಪಿಸಿಕೊಳ್ಳಲು ತನಗೆ ಸಹಾಯ ಮಾಡದಿದ್ದರೆ ನನ್ನನ್ನು ಕೊಲ್ಲುವುದಾಗಿ ದಾವೀದನು ತಿಳಿಸಿದ!” ಎಂದು ಹೇಳಿದಳು.


ಇಸಾಕನು ಅವನಿಗೆ, “ನೀನು ನಿಜವಾಗಿಯೂ ನನ್ನ ಮಗನಾದ ಏಸಾವನೋ?” ಎಂದು ಕೇಳಿದನು. ಅದಕ್ಕೆ ಯಾಕೋಬನು, “ಹೌದು, ನಾನೇ” ಎಂದು ಉತ್ತರಕೊಟ್ಟನು.


ಆದರೆ ಇಸಾಕನು ತನ್ನ ಮಗನಿಗೆ, “ನೀನು ಇಷ್ಟು ಬೇಗನೆ ಬೇಟೆಯಾಡಿಕೊಂಡು ಬಂದೆಯಾ?” ಎಂದು ಕೇಳಿದನು. ಅದಕ್ಕೆ ಯಾಕೋಬನು, “ನಾನು ಬಹುಬೇಗನೆ ಪ್ರಾಣಿಗಳನ್ನು ಕಂಡುಕೊಳ್ಳುವಂತೆ ನಿನ್ನ ದೇವರಾದ ಯೆಹೋವನು ಸಹಾಯ ಮಾಡಿದನು” ಎಂದು ಉತ್ತರಿಸಿದನು.


ಮೋಸಮಾರ್ಗದಲ್ಲಿ ಜೀವಿಸಲು ನನ್ನನ್ನು ಬಿಡಬೇಡ. ನಿನ್ನ ಉಪದೇಶಗಳಿಂದ ಮಾರ್ಗದರ್ಶನ ಮಾಡು.


ಈಗ, ನಿನ್ನ ಬಳಿ ತಿನ್ನಲು ಏನಾದರೂ ಆಹಾರವಿದೆಯೋ? ನನಗೆ ಐದು ರೊಟ್ಟಿಗಳನ್ನಾಗಲಿ ಅಥವಾ ಬೇರೆ ಯಾವ ಆಹಾರಪದಾರ್ಥವನ್ನಾಗಲಿ ಕೊಡು” ಎಂದು ಹೇಳಿದನು.


ಯೆಹೋವನೇ, ನನ್ನ ಮಾತುಗಳನ್ನು ಹಿಡಿತದಲ್ಲಿಟ್ಟುಕೊಳ್ಳುವುದಕ್ಕೂ ವಿವೇಚಿಸಿ ನುಡಿಯುವುದಕ್ಕೂ ನನಗೆ ಸಹಾಯ ಮಾಡು.


ಸೌಲನ ಅಧಿಕಾರಿಗಳೊಂದಿಗೆ ಎದೋಮ್ಯನಾದ ದೋಯೇಗನು ನಿಂತಿದ್ದನು. ದೋಯೇಗನು, “ನಾನು ನೋಬಿನಲ್ಲಿ ಇಷಯನ ಮಗನನ್ನು ನೋಡಿದೆನು. ದಾವೀದನು ಅಹೀಟೂಬನ ಮಗನಾದ ಅಹೀಮೆಲೆಕನನ್ನು ನೋಡಲು ಬಂದಿದ್ದನು.


ಅನಾತೋತ್, ನೋಬ್ ಮತ್ತು ಅನನ್ಯ,


ಈ ದಿವಸ ನೋಬಿನಲ್ಲಿ ಸೈನ್ಯವು ತಂಗುವದು. ಜೆರುಸಲೇಮಿನ ಪರ್ವತವಾಗಿರುವ ಚೀಯೋನ್ ಪರ್ವತಕ್ಕೆ ವಿರುದ್ಧವಾಗಿ ಯುದ್ಧಮಾಡಲು ಸೈನ್ಯವು ಸಿದ್ಧವಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು