ಯೆಹೋಶುವನು ತೀರ್ಮಾನವೇನಾದರೂ ಮಾಡಬೇಕಾದರೆ ಅವನು ಯಾಜಕನಾದ ಎಲ್ಲಾಜಾರನ ಬಳಿಗೆ ಹೋಗಲಿ, ಎಲ್ಲಾಜಾರನು ಊರೀಮಿನಿಂದ ಯೆಹೋವನ ಉತ್ತರವನ್ನು ಪಡೆಯುವನು. ಆಗ ಯೆಹೋಶುವನೂ ಇಸ್ರೇಲರೆಲ್ಲರೂ ದೇವರು ಹೇಳುವ ಕಾರ್ಯಗಳನ್ನು ಮಾಡುವರು. ಆತನು, ‘ಯುದ್ಧಕ್ಕೆ ಹೋಗಿರಿ’ ಎಂದು ಹೇಳಿದರೆ ಅವರು ಯುದ್ಧಕ್ಕೆ ಹೋಗುವರು. ಆತನು, ‘ಮನೆಗೆ ಹೋಗಿರಿ’ ಎಂದು ಹೇಳಿದರೆ ಅವರು ಮನೆಗೆ ಹೋಗುವರು” ಎಂದು ಹೇಳಿದನು.
ನಂತರ ದಾವೀದನು ಯೆಹೋವನಲ್ಲಿ, “ನಮ್ಮ ಕುಟುಂಬಗಳನ್ನು ಅಪಹರಿಸಿದ ಜನರನ್ನು ನಾನು ಅಟ್ಟಿಸಿಕೊಂಡು ಹೋಗಬೇಕೇ? ನಾನು ಅವರನ್ನು ಸೆರೆಹಿಡಿಯುವೆನೇ?” ಎಂದು ಪ್ರಾರ್ಥಿಸಿದನು. ಯೆಹೋವನು, “ಅವರನ್ನು ಅಟ್ಟಿಸಿಕೊಂಡು ಹೋಗು. ಅವರನ್ನು ನೀನು ಸೆರೆಹಿಡಿಯಬಹುದು. ನಿಮ್ಮ ಕುಟುಂಬಗಳನ್ನು ನೀವು ರಕ್ಷಿಸಬಹುದು” ಎಂದು ಉತ್ತರಿಸಿದನು.
ದಾವೀದನು, “ನಾನು ಹೋಗಿ ಈ ಫಿಲಿಷ್ಟಿಯರೊಡನೆ ಹೋರಾಡಲೇ?” ಎಂದು ಯೆಹೋವನನ್ನು ಕೇಳಿದನು. ಯೆಹೋವನು ದಾವೀದನಿಗೆ, “ಹೋಗು ಫಿಲಿಷ್ಟಿಯರ ಮೇಲೆ ಆಕ್ರಮಣ ಮಾಡು. ಕೆಯೀಲಾವನ್ನು ರಕ್ಷಿಸು” ಎಂದು ಹೇಳಿದನು.
ದಾವೀದನಿಗಾಗಿ ನಾನು ದೇವರಲ್ಲಿ ಪ್ರಾರ್ಥಿಸಿದ್ದು ಅದು ಮೊದಲನೆಯ ಸಲವಂತೂ ಅಲ್ಲವೇ ಅಲ್ಲ. ನನ್ನ ಮೇಲಾಗಲಿ ನನ್ನ ಬಂಧುಗಳ ಮೇಲಾಗಲಿ ತಪ್ಪು ಹೊರಿಸಬೇಡ. ನಾವೆಲ್ಲ ನಿನ್ನ ಸೇವಕರು. ಈಗ ಏನು ನಡೆಯುತ್ತಿದೆಯೋ ಅದು ನನಗೆ ಸ್ವಲ್ಪವೂ ತಿಳಿದಿಲ್ಲ” ಎಂದು ಉತ್ತರಿಸಿದನು.
ಸೌಲನು ಅಹೀಮೆಲೆಕನಿಗೆ, “ನೀನು ಮತ್ತು ಇಷಯನ ಮಗ ನನ್ನ ವಿರುದ್ಧ ರಹಸ್ಯಯೋಜನಗೆಳನ್ನು ಏಕೆ ಮಾಡಿದಿರಿ? ನೀನು ದಾವೀದನಿಗೆ ರೊಟ್ಟಿಯನ್ನೂ ಖಡ್ಗವನ್ನೂ ಕೊಟ್ಟೆ! ನೀನು ಅವನಿಗಾಗಿ ದೇವರಲ್ಲಿ ಪ್ರಾರ್ಥಿಸಿದೆ. ಈಗ ದಾವೀದನು ನನ್ನ ಮೇಲೆ ಆಕ್ರಮಣಮಾಡಲು ಕಾಯುತ್ತಿದ್ದಾನೆ!” ಎಂದು ಹೇಳಿದನು.
ಆಗ ರಾಜನಾದ ಸೌಲನು ಯಾಜಕನನ್ನು ತನ್ನ ಹತ್ತಿರಕ್ಕೆ ಕರೆತರಲು ಕೆಲವು ಜನರಿಗೆ ಅಪ್ಪಣೆಕೊಟ್ಟನು. ಸೌಲನು, ಅಹೀಟೂಬನ ಮಗನಾದ ಅಹೀಮೆಲೆಕನನ್ನೂ ಅವನ ಎಲ್ಲ ಬಂಧುಗಳನ್ನೂ ಕರೆತರಲು ಅವರಿಗೆ ಹೇಳಿದನು. ಅಹೀಮೆಲೆಕನ ಬಂಧುಗಳು ನೋಬಿನಲ್ಲಿ ಯಾಜಕರಾಗಿದ್ದರು. ಅವರೆಲ್ಲ ರಾಜನ ಹತ್ತಿರಕ್ಕೆ ಬಂದರು.