Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 22:20 - ಪರಿಶುದ್ದ ಬೈಬಲ್‌

20 ಆದರೆ ಎಬ್ಯಾತಾರನು ತಪ್ಪಿಸಿಕೊಂಡನು. ಎಬ್ಯಾತಾರನು ಅಹೀಮೆಲೆಕನ ಮಗ. ಅಹೀಮೆಲೆಕನು ಅಹೀಟೂಬನ ಮಗ. ಎಬ್ಯಾತಾರನು ಓಡಿಹೋಗಿ ದಾವೀದನ ಜೊತೆ ಸೇರಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅಹೀಟೂಬನ ಮಗನಾದ ಅಹೀಮೆಲೆಕನ ಮಕ್ಕಳಲ್ಲೊಬ್ಬನಾದ ಎಬ್ಯಾತಾರನೆಂಬುವನು ತಪ್ಪಿಸಿಕೊಂಡು ದಾವೀದನ ಬಳಿಗೆ ಓಡಿಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಅಹೀಟೂಬನ ಮಗನಾದ ಅಹೀಮೆಲೆಕನ ಮಕ್ಕಳಲ್ಲೊಬ್ಬನಾದ ಏಬ್ಯಾತಾರನೆಂಬವನು ತಪ್ಪಿಸಿಕೊಂಡು ದಾವೀದನ ಬಳಿಗೆ ಓಡಿಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅಹೀಟೂಬನ ಮಗನಾದ ಅಹೀಮೆಲೆಕನ ಮಕ್ಕಳಲ್ಲೊಬ್ಬನಾದ ಎಬ್ಯಾತಾರನೆಂಬವನು ತಪ್ಪಿಸಿಕೊಂಡು ದಾವೀದನ ಬಳಿಗೆ ಓಡಿಬಂದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆದರೆ ಅಹೀಟೂಬನ ಮಗನಾಗಿರುವ ಅಹೀಮೆಲೆಕನ ಮಕ್ಕಳಲ್ಲಿ ಒಬ್ಬನಾದ ಅಬಿಯಾತರನು ತಪ್ಪಿಸಿಕೊಂಡು ದಾವೀದನ ಬಳಿಗೆ ಓಡಿಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 22:20
15 ತಿಳಿವುಗಳ ಹೋಲಿಕೆ  

(ಎಬ್ಯಾತಾರನು ದಾವೀದನ ಹತ್ತಿರಕ್ಕೆ ಓಡಿಹೋದಾಗ ತನ್ನೊಂದಿಗೆ ಒಂದು ಏಫೋದನ್ನು ತೆಗೆದುಕೊಂಡಿದ್ದನು.)


ದಾವೀದನು ಯಾಜಕನಾದ ಎಬ್ಯಾತಾರನಿಗೆ, “ಏಫೋದನ್ನು ತೆಗೆದುಕೊಂಡು ಬಾ” ಎಂದನು. ಅವನು ಎಫೋದನ್ನು ತಂದನು.


ಸೌಲನು ತನ್ನ ವಿರುದ್ಧವಾಗಿ ಉಪಾಯಗಳನ್ನು ಮಾಡುತ್ತಿದ್ದಾನೆಂಬುದು ದಾವೀದನಿಗೆ ತಿಳಿಯಿತು. ಆಗ ದಾವೀದನು ಯಾಜಕನಾದ ಎಬ್ಯಾತಾರನಿಗೆ, “ಎಫೋದನ್ನು ತೆಗೆದುಕೊಂಡು ಬಾ” ಎಂದನು.


ಆಗ ಇದ್ದಕ್ಕಿದಂತೆ ಮರುಭೂಮಿಯಿಂದ ಬಿರುಗಾಳಿ ಬೀಸಿದ್ದರಿಂದ ಮನೆಯು ನಿನ್ನ ಗಂಡು ಹೆಣ್ಣುಮಕ್ಕಳ ಮೇಲೆ ಕುಸಿದು ಬಿದ್ದಿತು; ಅವರೆಲ್ಲಾ ಸತ್ತುಹೋದರು. ನಾನೊಬ್ಬನು ಮಾತ್ರ ತಪ್ಪಿಸಿಕೊಂಡೆನು! ಇದನ್ನು ನಿನಗೆ ತಿಳಿಸುವುದಕ್ಕಾಗಿಯೇ ಬಂದೆನು” ಎಂದು ಹೇಳಿದನು.


ಆ ದಿನದಂದು ಬೆನ್ಯಾಮೀನ್ ಕುಲದ ಒಬ್ಬನು ದುಃಖದಿಂದ ಬಟ್ಟೆಗಳನ್ನು ಹರಿದುಕೊಂಡು, ತಲೆಯ ಮೇಲೆ ಧೂಳನ್ನು ಹಾಕಿಕೊಂಡು, ರಣರಂಗದಿಂದ ತಪ್ಪಿಸಿಕೊಂಡು ಓಡಿಹೋದನು.


ನನ್ನ ಯಜ್ಞವೇದಿಕೆಯ ಬಳಿಯಲ್ಲಿ ಯಾಜಕಸೇವೆ ಮಾಡುವುದಕ್ಕಾಗಿ ನಾನು ಒಬ್ಬನನ್ನು ಉಳಿಸಿಕೊಳ್ಳುವೆನು. ಅವನು ಬಹುಮುಪ್ಪಿನವರೆಗೂ ಬದುಕುವನು. ಅವನ ಕಣ್ಣುಗಳು ಕಾಣದೆ ಹೋಗುವವರೆಗೂ ಬಲಹೀನನಾಗುವವರೆಗೂ ಅವನು ಬದುಕುವನು. ಉಳಿದ ನಿನ್ನ ಸಂತತಿಯವರೆಲ್ಲಾ ಖಡ್ಗದಿಂದ ಸಾಯುವರು.


ಶೆವನು ಕಾರ್ಯದರ್ಶಿಯಾಗಿದ್ದನು. ಚಾದೋಕ್ ಮತ್ತು ಎಬ್ಯಾತಾರರು ಯಾಜಕರಾಗಿದ್ದರು.


ಅವರಲ್ಲಿ ಅಹೀಯನೂ ಒಬ್ಬನು. ಶೀಲೋವಿನಲ್ಲಿ ಏಲಿಯು ಯೆಹೋವನ ಯಾಜಕನಾಗಿದ್ದನು. ಏಫೋದನ್ನು ಧರಿಸಿದ್ದ ಅಹೀಯನು ಆಗ ಅಲ್ಲಿ ಯಾಜಕನಾಗಿದ್ದನು. ಅಹೀಯನು ಈಕಾಬೋದನ ಸೋದರನಾದ ಅಹೀಟೂಬನ ಮಗ. ಈಕಾಬೋದನು ಫೀನೆಹಾಸನ ಮಗ. ಫೀನೆಹಾಸನು ಏಲಿಯ ಮಗ. ಯೋನಾತಾನನು ಹೊರಟುಹೋದನೆಂಬುದು ಜನರಿಗೆ ಗೊತ್ತಿರಲಿಲ್ಲ.


ಯೆಹೋವನ ಯಾಜಕರನ್ನು ಸೌಲನು ಕೊಲ್ಲಿಸಿದನೆಂದು ಎಬ್ಯಾತಾರನು ದಾವೀದನಿಗೆ ತಿಳಿಸಿದನು.


ಚಾದೋಕನು ಮತ್ತು ಅವನೊಂದಿಗಿದ್ದ ಲೇವಿಯರೆಲ್ಲ ದೇವರ ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡಿದ್ದರು. ಅವರು ದೇವರ ಪವಿತ್ರ ಪೆಟ್ಟಿಗೆಯನ್ನು ಇಳಿಸಿದರು. ಜೆರುಸಲೇಮಿನಿಂದ ಜನರೆಲ್ಲರೂ ಹೊರಗೆ ಹೋಗುವವರೆಗೆ ಎಬ್ಯಾತಾರನು ಪ್ರಾರ್ಥನೆಗಳನ್ನು ಮಾಡಿದನು.


ಅದೋನೀಯನು ಚೆರೂಯಳ ಮಗನಾದ ಯೋವಾಬ ಮತ್ತು ಯಾಜಕನಾದ ಎಬ್ಯಾತಾರನೊಂದಿಗೆ ಮಾತನಾಡಿದನು. ತಾನು ರಾಜನಾಗಬೇಕೆಂಬ ಅದೋನೀಯನ ಯೋಜನೆಗೆ ಅವರು ಬೆಂಬಲ ನೀಡಿದರು.


ನಂತರ ದಾವೀದನು ಯಾಜಕರಾದ ಚಾದೋಕನನ್ನು ಮತ್ತು ಎಬ್ಯಾತಾರನನ್ನು ಮತ್ತು ಕೆಳಕಂಡ ಲೇವಿಯರನ್ನು ಸಹ ಕರೆಸಿದನು: ಊರೀಯೇಲ್, ಅಸಾಯ, ಯೋವೇಲ್, ಶೆಮಾಯ, ಎಲೀಯೇಲ್ ಮತ್ತು ಅಮ್ಮೀನಾದಾಬ್.


ಅಹೀಟೂಬನ ಮಗನಾದ ಚಾದೋಕನೂ ಎಬ್ಯಾತಾರನ ಮಗನಾದ ಅಬೀಮೆಲೆಕನೂ ಯಾಜಕರಾಗಿದ್ದರು. ಶವ್ಷನು ಲೇಖಕನಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು