Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 23:16 - ಪರಿಶುದ್ದ ಬೈಬಲ್‌

16 ಆದರೆ ಸೌಲನ ಮಗನಾದ ಯೋನಾತಾನನು ಹೋರೆಷಿಗೆ ಹೋಗಿ ದಾವೀದನನ್ನು ಸಂಧಿಸಿ ದೇವರಲ್ಲಿ ಹೆಚ್ಚು ನಂಬಿಕೆಯನ್ನಿಡುವಂತೆ ಅವನನ್ನು ಪ್ರೋತ್ಸಾಹಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆಗ ಸೌಲನ ಮಗನಾದ ಯೋನಾತಾನನು ಅಲ್ಲಿಗೆ ಹೋಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆಗ ಸೌಲನ ಮಗ ಯೋನಾತಾನನು ಅಲ್ಲಿಗೆ ಹೋಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆಗ ಸೌಲನ ಮಗನಾದ ಯೋನಾತಾನನು ಅಲ್ಲಿಗೆ ಹೋಗಿ ದಾವೀದನಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆಗ ಸೌಲನ ಮಗ ಯೋನಾತಾನನು ಎದ್ದು ಮರುಭೂಮಿಯಲ್ಲಿರುವ ದಾವೀದನ ಬಳಿಗೆ ಹೋಗಿ, ಅವನನ್ನು ದೇವರಲ್ಲಿ ಬಲಪಡಿಸಿ ಸಹಾಯಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 23:16
16 ತಿಳಿವುಗಳ ಹೋಲಿಕೆ  

ಕ್ರಿಸ್ತ ಯೇಸುವಿನ ನಿಷ್ಠಾವಂತ ಸೈನಿಕನಾಗಿರುವ ತಿಮೊಥೆಯನೇ, ನೀನು ನನಗೆ ಮಗನಂತಿರುವೆ. ಕ್ರಿಸ್ತ ಯೇಸುವಿನಲ್ಲಿರುವ ಕೃಪೆಯಿಂದ ಬಲ ಹೊಂದಿದವನಾಗು.


ಕಡೇ ಮಾತೇನೆಂದರೆ, ಪ್ರಭುವಿನಲ್ಲಿಯೂ ಆತನ ಮಹಾಶಕ್ತಿಯಲ್ಲಿಯೂ ಬಲವಾಗಿರಿ.


ನಿನ್ನ ನಂಬಿಕೆಯು ಕುಂದಿಹೋಗಬಾರದೆಂದು ನಾನು ಪ್ರಾರ್ಥಿಸಿದೆನು! ನೀನು ಪರಿವರ್ತನೆಗೊಂಡ ನಂತರ ನಿನ್ನ ಸಹೋದರರನ್ನು ಬಲಪಡಿಸು” ಎಂದು ಹೇಳಿದನು.


ಸೈನ್ಯದಲ್ಲಿದ್ದ ಎಲ್ಲರೂ ದುಃಖತಪ್ತರಾಗಿದ್ದರು ಮತ್ತು ಕೋಪಗೊಂಡಿದ್ದರು; ಯಾಕೆಂದರೆ ಅವರ ಗಂಡು ಮತ್ತು ಹೆಣ್ಣುಮಕ್ಕಳೆಲ್ಲ ಸೆರೆಯಾಳುಗಳಾಗಿ ಒಯ್ಯಲ್ಪಟ್ಟಿದರು. ದಾವೀದನನ್ನು ಕಲ್ಲುಗಳಿಂದ ಕೊಲ್ಲಬೇಕೆಂದು ಅವರು ಮಾತಾಡಿಕೊಳ್ಳುತ್ತಿದ್ದರು. ದಾವೀದನು ಇದರಿಂದ ತಳಮಳಗೊಂಡರೂ ತನ್ನ ದೇವರಾದ ಯೆಹೋವನಲ್ಲಿ ತನ್ನನ್ನು ಬಲಪಡಿಸಿಕೊಂಡನು.


ಆಗ ಪರಲೋಕದಿಂದ ಒಬ್ಬ ದೇವದೂತನು ಕಾಣಿಸಿಕೊಂಡನು. ಯೇಸುವನ್ನು ಬಲಪಡಿಸುವುದಕ್ಕಾಗಿ ಈ ದೇವದೂತನನ್ನು ಕಳುಹಿಸಲಾಗಿತ್ತು.


ನಾನು ಅವರಿಗೆ ದೇವರು ನನಗೆ ಕರುಣೆಯನ್ನು ತೋರಿಸಿದ್ದನ್ನು ಮತ್ತು ರಾಜನು ಹೇಳಿದ ವಿಷಯಗಳನ್ನು ತಿಳಿಸಿದೆನು. ಆಗ ಅವರು, “ನಾವು ಈಗಲೇ ಕೆಲಸ ಪ್ರಾರಂಭಿಸೋಣ” ಎಂದು ಹೇಳಿದರು. ಹೀಗೆ ನಾವು ಈ ಒಳ್ಳೆಯ ಕಾರ್ಯವನ್ನು ಪ್ರಾರಂಭಿಸಿದೆವು.


ಪರಿಮಳತೈಲ ಮತ್ತು ಧೂಪ ನಿನ್ನನ್ನು ಸಂತೋಷಗೊಳಿಸುತ್ತವೆ; ಆದರೆ ಸ್ನೇಹಿತನ ಮಧುರವಾದ ಉಪದೇಶದಿಂದ ಸ್ವಂತ ನಿರ್ಧಾರಕ್ಕಿಂತಲೂ ಹೆಚ್ಚು ಆನಂದವಾಗುವುದು.


ಕಬ್ಬಿಣವು ಕಬ್ಬಿಣವನ್ನು ಹರಿತಗೊಳಿಸುವುದು; ಅಂತೆಯೇ ಸ್ನೇಹಿತನು ಸ್ನೇಹಿತನನ್ನು ಉತ್ತಮಪಡಿಸುವನು.


ನೀನು ಯೆಹೋಶುವನನ್ನು ಪ್ರೋತ್ಸಾಹಿಸು. ಅವನಿಗೆ ವಿಷಯಗಳನ್ನೆಲ್ಲಾ ತಿಳಿಯಪಡಿಸು. ಅವನು ಜನರನ್ನು ಜೋರ್ಡನ್ ನದಿಯಾಚೆ ನಡೆಸಬೇಕು. ಆ ದೇಶವನ್ನು ಸ್ವಾಧೀನ ಮಾಡಿಕೊಳ್ಳಲು ಅವನು ಅವರಿಗೆ ಸಹಾಯ ಮಾಡುವನು. ಆದ್ದರಿಂದ ಅವನನ್ನು ಬಲಪಡಿಸು’ ಎಂದು ಹೇಳಿದನು.


ಆದರೆ ನಾನು ನಿಮ್ಮನ್ನು ನನ್ನ ಮಾತುಗಳಿಂದ ಪ್ರೋತ್ಸಾಹಿಸಿ ನಿಮ್ಮಲ್ಲಿ ನಿರೀಕ್ಷೆಯನ್ನು ಹುಟ್ಟಿಸಬಹುದಾಗಿತ್ತು.


“‘ಪ್ರವಾದಿನಿಯರೇ, ನೀವು ಸುಳ್ಳುಗಾರ್ತಿಯರಾಗಿದ್ದೀರಿ. ನಿಮ್ಮ ಸುಳ್ಳುಗಳು ಒಳ್ಳೆಯವರಿಗೆ ದುಃಖವನ್ನು ಬರಮಾಡುವವು. ಒಳ್ಳೆಯ ವ್ಯಕ್ತಿಗಳಿಗೆ ನೋವು ಮಾಡಲು ನನಗೆ ಮನಸ್ಸಿಲ್ಲ. ದುಷ್ಟ ಜನರು ತಮ್ಮ ದುರ್ಮಾರ್ಗಗಳನ್ನು ತೊರೆದುಬಿಡದಂತೆಯೂ ತಮ್ಮ ಪ್ರಾಣಗಳನ್ನು ರಕ್ಷಿಸಿಕೊಳ್ಳದಂತೆಯೂ ನೀವು ಪ್ರೋತ್ಸಾಹಿಸುತ್ತೀರಿ.


ದಾವೀದನು ಜೀಫ್ ಅರಣ್ಯದ ಹೋರೆಷದಲ್ಲಿ ಅಡಗಿಕೊಂಡಿದ್ದನು. ಸೌಲನು ತನ್ನನ್ನು ಕೊಲ್ಲಲು ಬರುತ್ತಾನೆಂದು ದಾವೀದನು ಹೆದರಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು