Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 23:21 - ಪರಿಶುದ್ದ ಬೈಬಲ್‌

21 ಸೌಲನು, “ನೀವು ನನಗೆ ಸಹಾಯ ಮಾಡುತ್ತಿರುವುದಕ್ಕಾಗಿ ಯೆಹೋವನು ನಿಮ್ಮನ್ನು ಆಶೀರ್ವದಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆಗ ಸೌಲನು ಅವರಿಗೆ, “ನೀವು ನನ್ನ ಮೇಲೆ ಕನಿಕರ ತೋರಿಸಿ ಸಹಾಯ ಮಾಡುತ್ತಿರುವುದರಿಂದ ಯೆಹೋವನ ಆಶೀರ್ವಾದವು ನಿಮ್ಮ ಮೇಲಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಆಗ ಸೌಲನು ಅವರಿಗೆ, “ನೀವು ನನ್ನ ಮೇಲೆ ಕನಿಕರಪಟ್ಟದ್ದರಿಂದ ಸರ್ವೇಶ್ವರನ ಆಶೀರ್ವಾದ ನಿಮ್ಮ ಮೇಲಿರಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆಗ ಸೌಲನು ಅವರಿಗೆ - ನೀವು ನನ್ನ ಮೇಲೆ ಕನಿಕರಪಟ್ಟದರಿಂದ ಯೆಹೋವನ ಆಶೀರ್ವಾದವು ನಿಮ್ಮ ಮೇಲಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆಗ ಸೌಲನು, “ನೀವು ನನ್ನ ಮೇಲೆ ಕನಿಕರಪಟ್ಟ ಕಾರಣ, ಯೆಹೋವ ದೇವರಿಂದ ನಿಮಗೆ ಆಶೀರ್ವಾದವಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 23:21
9 ತಿಳಿವುಗಳ ಹೋಲಿಕೆ  

ನೀವು ನನ್ನ ವಿರುದ್ಧವಾಗಿ ಸಂಚುನಡೆಸುತ್ತಿರುವಿರಿ! ನೀವು ರಹಸ್ಯಯೋಜನೆಗಳನ್ನು ಮಾಡಿದ್ದೀರಿ. ನನ್ನ ಮಗ ಯೋನಾತಾನನ ಬಗ್ಗೆ ನಿಮ್ಮಲ್ಲಿ ಒಬ್ಬರೂ ನನಗೆ ತಿಳಿಸಲಿಲ್ಲ! ಅವನು ಇಷಯನ ಮಗನ ಜೊತೆ ಒಪ್ಪಂದ ಮಾಡಿಕೊಂಡಿದ್ದಾನೆಂದು ನಿಮ್ಮಲ್ಲಿ ಒಬ್ಬರೂ ನನಗೆ ತಿಳಿಸಲಿಲ್ಲ! ನಿಮ್ಮಲ್ಲಿ ಒಬ್ಬರೂ ನನ್ನ ಬಗ್ಗೆ ಚಿಂತಿಸುವುದಿಲ್ಲ! ನನ್ನ ಮಗ ಯೋನಾತಾನನು ದಾವೀದನನ್ನು ಪ್ರೋತ್ಸಾಹಿಸಿದ್ದಾನೆಂದು ನಿಮ್ಮಲ್ಲಿ ಒಬ್ಬರೂ ನನಗೆ ತಿಳಿಸಲಿಲ್ಲ. ಅಡಗಿಕೊಂಡು ನನ್ನ ಮೇಲೆ ಆಕ್ರಮಣ ಮಾಡುವಂತೆ ನನ್ನ ಸೇವಕನಾದ ದಾವೀದನಿಗೆ ಯೋನಾತಾನನು ಹೇಳಿಕೊಟ್ಟಿದ್ದಾನೆ! ಈಗ ದಾವೀದನು ಮಾಡುತ್ತಿರುವುದು ಅದನ್ನೇ!” ಎಂದು ಹೇಳಿದನು.


ಜೆರುಸಲೇಮಿನ ನ್ಯಾಯಾಧೀಶರು ಲಂಚ ತೆಗೆದುಕೊಂಡು ಅನ್ಯಾಯವಾದ ತೀರ್ಪುಕೊಡುವರು. ಜನರಿಗೆ ಬೋಧಿಸುವ ಮೊದಲು ಜೆರುಸಲೇಮಿನ ಯಾಜಕರು ಹಣವನ್ನು ವಸೂಲಿ ಮಾಡುವರು. ಜನರು ತಮ್ಮ ಭವಿಷ್ಯದ ಬಗ್ಗೆ ಕೇಳಲು ಪ್ರವಾದಿಗಳಿಗೆ ಮುಂಗಡವಾಗಿ ಹಣ ಕೊಡುವರು. ಆಮೇಲೆ ಆ ನಾಯಕರು, “ಯೆಹೋವನು ನಮ್ಮಲ್ಲಿ ವಾಸಮಾಡುತ್ತಿದ್ದಾನೆ. ಆದ್ದರಿಂದ ನಮಗೆ ಕೆಟ್ಟದ್ದು ಏನೂ ಸಂಭವಿಸುವದಿಲ್ಲ” ಎಂದು ಹೇಳುವರು.


ಯೆಹೋವನ ಆಜ್ಞೆಗಳನ್ನು ಪರಿಪಾಲಿಸುವ ನೀವು ಆತನು ಹೇಳುವ ಸಂಗತಿಗಳನ್ನು ಕಿವಿಗೊಟ್ಟು ಕೇಳಬೇಕು. ಆತನು ಹೇಳುವುದೇನೆಂದರೆ, “ನಿಮ್ಮ ಸಹೋದರರು ನಿಮ್ಮನ್ನು ದ್ವೇಷಿಸಿದರು. ನೀವು ನನ್ನನ್ನು ಅನುಸರಿಸಿದ್ದರಿಂದ ನಿಮ್ಮ ಮೇಲೆರಗಿದರು. ‘ಯೆಹೋವನು ಸನ್ಮಾನ ಹೊಂದಿದ ಬಳಿಕ ನಿಮ್ಮ ಬಳಿಗೆ ಬರುತ್ತೇವೆ. ಆಮೇಲೆ ನಿಮ್ಮ ಆನಂದವನ್ನು ಅನುಭವಿಸುತ್ತೇವೆ’ ಎಂದು ನಿಮ್ಮ ಸಹೋದರರು ಅಂದರು. ಆ ದುಷ್ಟ ಜನರು ಶಿಕ್ಷಿಸಲ್ಪಡುವರು.”


ಕೆಡುಕರು ತಮ್ಮ ಇಷ್ಟವಾದ ವಸ್ತುಗಳ ಬಗ್ಗೆ ಕೊಚ್ಚಿಕೊಳ್ಳುವರು. ದುರಾಶೆಯುಳ್ಳ ಅವರು ದೇವರನ್ನು ಶಪಿಸುತ್ತಾ ಆತನ ಮೇಲೆ ತಮಗಿರುವ ದ್ವೇಷವನ್ನು ತೋರ್ಪಡಿಸಿಕೊಳ್ಳುವರು.


ಮೀಕನು ತನ್ನ ತಾಯಿಗೆ, “ಅಮ್ಮಾ, ಯಾರೋ ನಿನ್ನ ಇಪ್ಪತ್ತೆಂಟು ತೊಲೆ ಬೆಳ್ಳಿಯನ್ನು ಕದ್ದಿದ್ದರಲ್ಲಾ, ನಿನಗೆ ನೆನಪಿದೆಯಾ? ನೀನು ಅದರ ಸಲುವಾಗಿ ಶಾಪಹಾಕುವದನ್ನು ನಾನು ಕೇಳಿದ್ದೆ. ನಾನು ಅದನ್ನು ತೆಗೆದುಕೊಂಡಿದ್ದೆ. ಇಗೋ ಆ ಬೆಳ್ಳಿ ನನ್ನ ಹತ್ತಿರ ಇದೆ” ಎಂದು ಹೇಳಿದನು. ಅವನ ತಾಯಿಯು ಅವನಿಗೆ, “ಮಗನೇ, ಯೆಹೋವನು ನಿನ್ನನ್ನು ಆಶೀರ್ವದಿಸಲಿ” ಎಂದು ಹರಸಿದಳು.


ಹೋಗಿ, ಅವನ ಬಗ್ಗೆ ಹೆಚ್ಚು ತಿಳಿದುಕೊಳ್ಳಿ. ದಾವೀದನು ಎಲ್ಲಿ ನೆಲೆಸಿದ್ದಾನೆಂಬುದನ್ನೂ ಅವನನ್ನು ನೋಡಿದವರು ಯಾರೆಂಬುದನ್ನೂ ಕಂಡುಹಿಡಿಯಿರಿ. ಅವನು ಬಹಳ ಯುಕ್ತಿವಂತನಾಗಿದ್ದಾನೆ.


ಯಾಬೇಷ್ ಗಿಲ್ಯಾದಿನ ಜನರಿಗೆ ದಾವೀದನು ಸಂದೇಶಕರನ್ನು ಕಳುಹಿಸಿ, “ಸೌಲನ ದೇಹದ ಬೂದಿಯನ್ನು ಸಮಾಧಿಮಾಡುವುದರ ಮೂಲಕ ನೀವು ನಿಮ್ಮ ಒಡೆಯನಾದ ಸೌಲನಿಗೆ ಕರುಣೆ ತೋರಿದ್ದೀರಿ. ಅದಕ್ಕಾಗಿ ಯೆಹೋವನು ನಿಮ್ಮನ್ನು ಆಶೀರ್ವದಿಸಲಿ.


ದೇವರು ನನ್ನನ್ನು ತಂದೆಯ ಮನೆಯಿಂದ ಹೊರಡಿಸಿ ಪರಸ್ಥಳಗಳಲ್ಲಿ ಸಂಚರಿಸುವಂತೆ ಮಾಡಿದ್ದರಿಂದ ನಾನು ಸಾರಳಿಗೆ, ‘ನಿನ್ನಿಂದ ನನಗೆ ಒಂದು ಉಪಕಾರವಾಗಬೇಕು. ಅದೇನೆಂದರೆ ನೀನು ನನ್ನನ್ನು ಅಣ್ಣನೆಂಬುದಾಗಿ ಹೇಳಬೇಕು ಎಂದು ಆಕೆಗೆ ತಿಳಿಸಿದೆನು’” ಎಂದನು.


ಸೌಲನು ಸಮುವೇಲನ ಹತ್ತಿರಕ್ಕೆ ಹೋಗಿ, “ಯೆಹೋವನು ನಿನ್ನನ್ನು ಆಶೀರ್ವದಿಸಲಿ; ನಾನು ಯೆಹೋವನ ಆಜ್ಞೆಗಳನ್ನು ಪಾಲಿಸಿದ್ದೇನೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು