Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 23:27 - ಪರಿಶುದ್ದ ಬೈಬಲ್‌

27 ಆದರೆ ಸೌಲನ ಬಳಿಗೆ ಒಬ್ಬ ಸಂದೇಶಕನು ಬಂದು, “ಫಿಲಿಷ್ಟಿಯರು ನಮ್ಮನ್ನು ಆಕ್ರಮಣ ಮಾಡುತ್ತಿದ್ದಾರೆ, ಬೇಗ ಬಾ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆಗಲೇ ಒಬ್ಬ ದೂತನು ಸೌಲನ ಬಳಿಗೆ ಬಂದು ಅವನಿಗೆ, “ಬೇಗ ಬಾ, ಫಿಲಿಷ್ಟಿಯರು ದೇಶದೊಳಗೆ ನುಗ್ಗಿದ್ದಾರೆ” ಎಂದು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಅದೇ ವೇಳೆಗೆ ದೂತನೊಬ್ಬನು ಸೌಲನ ಬಳಿಗೆ ಬಂದು, “ಬೇಗ ಬನ್ನಿ, ಫಿಲಿಷ್ಟಿಯರು ನಾಡಿನೊಳಕ್ಕೆ ನುಗ್ಗಿದ್ದಾರೆ,” ಎಂದು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆಗಲೇ ಒಬ್ಬ ದೂತನು ಸೌಲನ ಬಳಿಗೆ ಬಂದು ಅವನಿಗೆ - ಬೇಗ ಬಾ; ಫಿಲಿಷ್ಟಿಯರು ದೇಶದೊಳಕ್ಕೆ ನುಗ್ಗಿದ್ದಾರೆ ಎಂದು ತಿಳಿಸಿದ್ದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಆದರೆ ಒಬ್ಬ ಸೇವಕನು ಸೌಲನ ಬಳಿಗೆ ಬಂದು, “ನೀನು ತ್ವರೆಯಾಗಿ ಬಾ. ಫಿಲಿಷ್ಟಿಯರು ದೇಶದ ಮೇಲೆ ದಂಡೆತ್ತಿ ಬಂದಿದ್ದಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 23:27
9 ತಿಳಿವುಗಳ ಹೋಲಿಕೆ  

ಇಥಿಯೋಪಿಯದ ರಾಜ ತಿರ್ಹಾಕನ ಬಗ್ಗೆ ಅಶ್ಶೂರದ ರಾಜ ಒಂದು ಗಾಳಿ ಸುದ್ದಿಯನ್ನು ಕೇಳಿದನು. “ತಿರ್ಹಾಕನು ನಿನ್ನ ವಿರುದ್ಧ ಹೋರಾಡಲು ಬಂದಿದ್ದಾನೆ” ಎಂಬುದೇ ಆ ಗಾಳಿಸುದ್ದಿಯಾಗಿತ್ತು. ಆದ್ದರಿಂದ ಅಶ್ಶೂರದ ರಾಜನು ಹಿಜ್ಕೀಯನ ಬಳಿಗೆ ಮತ್ತೆ ಸಂದೇಶಕರನ್ನು ಕಳುಹಿಸಿದನು. ಅಶ್ಶೂರದ ರಾಜನು ಈ ಸಂದೇಶಕರಿಗೆ ಒಂದು ಸಂದೇಶವನ್ನು ನೀಡಿದನು.


ಆದರೆ ಭೂಮಿಯು ಆ ಸ್ತ್ರೀಗೆ ಸಹಾಯ ಮಾಡಲು ತನ್ನ ಬಾಯನ್ನು ತೆರೆದು, ಘಟಸರ್ಪದ ಬಾಯಿಂದ ಹೊರಬಂದ ನದಿಯನ್ನು ಕುಡಿದುಬಿಟ್ಟಿತು.


ಮರಣಕರವಾದ ಹಗ್ಗಗಳು ನನ್ನನ್ನು ಸುತ್ತಿಕೊಂಡಿದ್ದವು. ಸಮಾಧಿಯು ನನ್ನನ್ನು ಮುಚ್ಚಿಕೊಳ್ಳುತ್ತಿತ್ತು. ನಾನು ಭಯಗೊಂಡಿದ್ದೆನು; ಚಿಂತೆಗೊಳಗಾಗಿದ್ದೆನು.


ಫಿಲಿಷ್ಟಿಯರು ಮತ್ತೆ ರೆಫಾಯೀಮ್ ತಗ್ಗಿನಲ್ಲಿ ವಾಸಮಾಡುತ್ತಿದ್ದ ಇಸ್ರೇಲರ ಮೇಲೆ ದಾಳಿಮಾಡಿದರು.


“ಯೆಹೋವನು ತನ್ನ ಜನರಿಗೆ ನ್ಯಾಯತೀರಿಸುವನು. ಅವರು ಆತನ ಸೇವಕರಾಗಿದ್ದಾರೆ. ಆತನು ಅವರಿಗೆ ಕರುಣೆ ತೋರುವನು. ಅವರ ಬಲವು ಕುಂದುವಂತೆ ಮಾಡುವನು. ಗುಲಾಮರಾಗಿರಲಿ ಸ್ವತಂತ್ರರಾಗಿರಲಿ ಅವರನ್ನು ಆತನು ನಿಸ್ಸಹಾಯಕರನ್ನಾಗಿ ಮಾಡುವನು.


ಅಲ್ಲದೆ ಆ ಸ್ಥಳಕ್ಕೆ “ಯೆಹೋವ ಯೀರೆ” ಎಂದು ಹೆಸರಿಟ್ಟನು. ಇಂದಿಗೂ ಜನರು, “ಯೆಹೋವನ ಬೆಟ್ಟದಲ್ಲಿ ಒದಗಿಸಲ್ಪಡುವುದು” ಎಂದು ಹೇಳುತ್ತಾರೆ.


ಸೌಲನು ಬೆಟ್ಟದ ಒಂದು ದಿಕ್ಕಿನಲ್ಲಿದ್ದನು. ದಾವೀದ ಮತ್ತು ಅವನ ಜನರು ಅದೇ ಬೆಟ್ಟದ ಮತ್ತೊಂದು ದಿಕ್ಕಿನಲ್ಲಿದ್ದರು. ದಾವೀದನು ಸೌಲನಿಂದ ದೂರ ಹೋಗಲು ತವಕಿಸುತ್ತಿದ್ದನು. ದಾವೀದನನ್ನು ಅವನ ಜನರೊಡನೆ ಬಂಧಿಸಲು ಸೌಲನು ತನ್ನ ಸೈನಿಕರೊಂದಿಗೆ ಬೆಟ್ಟದ ಸುತ್ತಲೂ ಹೋಗುತ್ತಿದ್ದನು.


ಆದ್ದರಿಂದ ದಾವೀದನನ್ನು ಅಟ್ಟಿಸಿಕೊಂಡು ಹೋಗುವುದನ್ನು ಸೌಲನು ನಿಲ್ಲಿಸಿ ಫಿಲಿಷ್ಟಿಯರೊಡನೆ ಹೋರಾಡಲು ಹೋದನು. ಆದ್ದರಿಂದಲೇ ಜನರು ಆ ಜಾಗವನ್ನು “ಜಾರುಬಂಡೆ” ಎಂದು ಕರೆಯುತ್ತಾರೆ.


ದಾವೀದನು ಅನೇಕ ಸಲ ಹೀಗೆ ಮಾಡಿದನು. ಪ್ರತಿಸಲವೂ ಆಕೀಷನು ದಾವೀದನನ್ನು, “ನೀನು ಎಲ್ಲಿ ಯುದ್ಧಮಾಡಿದೆ ಮತ್ತು ಇವುಗಳನ್ನು ಎಲ್ಲಿಂದ ತಂದೆ” ಎಂದು ಕೇಳುತ್ತಿದ್ದನು. ದಾವೀದನು, “ನಾನು ಯೆಹೂದ ದೇಶದ ದಕ್ಷಿಣ ಭಾಗದ ವಿರುದ್ಧ ಯುದ್ಧಮಾಡಿದೆ” ಎಂದಾಗಲಿ, “ನಾನು ಎರಹ್ಮೇಲ್ಯರ ದಕ್ಷಿಣಭಾಗದ ವಿರುದ್ಧ ಯುದ್ಧಮಾಡಿದೆ” ಎಂದಾಗಲೀ “ನಾನು ಕೇನ್ಯರ ದಕ್ಷಿಣ ಭಾಗದ ವಿರುದ್ಧ ಯುದ್ಧಮಾಡಿದೆ” ಎಂದಾಗಲೀ ಹೇಳುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು