1 ಸಮುಯೇಲ 23:8 - ಪರಿಶುದ್ದ ಬೈಬಲ್8 ಸೌಲನು ಯುದ್ಧಕ್ಕಾಗಿ ತನ್ನ ಸೈನ್ಯವನ್ನೆಲ್ಲ ಒಟ್ಟಿಗೆ ಕರೆದನು. ದಾವೀದನನ್ನೂ ಅವನ ಜನರನ್ನೂ ಆಕ್ರಮಿಸಲು ಕೆಯೀಲಾಕ್ಕೆ ಹೋಗಲು ಅವರೆಲ್ಲ ಸಿದ್ಧಗೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಕೆಯೀಲದಲ್ಲಿದ್ದ ದಾವೀದನನ್ನೂ, ಅವನ ಜನರನ್ನೂ ಹಿಡಿಯಲು ಹೋಗುವುದಕ್ಕೋಸ್ಕರ ಸೈನ್ಯವನ್ನು ಕೂಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಕೆಯೀಲಾದಲ್ಲಿದ್ದ ದಾವೀದನನ್ನೂ ಅವನ ಜನರನ್ನೂ ಹಿಡಿಯುವುದಕ್ಕಾಗಿ ಸೈನ್ಯವನ್ನು ಕೂಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಕೆಯೀಲದಲ್ಲಿದ್ದ ದಾವೀದನನ್ನೂ ಅವನ ಜನರನ್ನೂ ಹಿಡಿಯ ಹೋಗುವದಕ್ಕೋಸ್ಕರ ಸೈನ್ಯವನ್ನು ಕೂಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆಗ ಸೌಲನು ದಾವೀದನನ್ನೂ, ಅವನ ಜನರನ್ನೂ ಮುತ್ತಿಕೊಳ್ಳಲು ತನ್ನ ಸೈನಿಕರನ್ನು ಯುದ್ಧಕ್ಕೆ ಹೋಗಲು ಕೆಯೀಲಾ ನಗರಕ್ಕೆ ಕರೆದನು. ಅಧ್ಯಾಯವನ್ನು ನೋಡಿ |
ಆಗ ರಾಜನಾದ ಸೊಲೊಮೋನನು ಯಾಜಕನಾದ ಎಬ್ಯಾತಾರನಿಗೆ, “ನಾನು ನಿನ್ನನ್ನು ಕೊಲ್ಲಲೇಬೇಕು. ಆದರೆ ಅಣತೋತಿನಲ್ಲಿರುವ ನಿನ್ನ ಮನೆಗೆ ಹಿಂತಿರುಗಿ ಹೋಗಲು ನಿನಗೆ ಅವಕಾಶ ಕೊಡುತ್ತೇನೆ. ನಾನು ನಿನ್ನನ್ನು ಕೊಲ್ಲುವುದಿಲ್ಲ ಏಕೆಂದರೆ ನನ್ನ ತಂದೆಯಾದ ದಾವೀದನೊಂದಿಗೆ ನಡೆಯುವಾಗ ಯೆಹೋವನ ಪವಿತ್ರಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗಲು ನೀನು ಸಹಾಯ ಮಾಡಿದೆ. ನನ್ನ ತಂದೆಯ ಕಷ್ಟದ ದಿನಗಳಲ್ಲೆಲ್ಲಾ ನೀನೂ ಅವನ ಕಷ್ಟಗಳಲ್ಲಿ ಪಾಲುಗಾರನಾಗಿದ್ದದ್ದು ನನಗೆ ತಿಳಿದಿದೆ” ಎಂದು ಹೇಳಿದನು.