Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 24:11 - ಪರಿಶುದ್ದ ಬೈಬಲ್‌

11 ನನ್ನ ತಂದೆಯೇ, ನನ್ನ ಕೈಯಲ್ಲಿರುವ ಚೂರು ಬಟ್ಟೆಯನ್ನು ನೋಡು. ನಾನು ನಿನ್ನ ಅಂಗಿಯ ಮೂಲೆಯನ್ನು ಕತ್ತರಿಸಿಹಾಕಿದೆ. ನಾನು ನಿನ್ನನ್ನು ಕೊಲ್ಲಬಹುದಿತ್ತು, ಆದರೆ ಕೊಲ್ಲಲಿಲ್ಲ! ನೀನು ಇದನ್ನು ಅರ್ಥಮಾಡಿಕೊಳ್ಳಬೇಕೆಂದು ನಾನು ಬಯಸಿದ್ದೇನೆ. ನಾನು ನಿನ್ನ ವಿರುದ್ಧವಾಗಿ ಯಾವ ಸಂಚನ್ನೂ ಮಾಡುತ್ತಿಲ್ಲವೆಂದು ನೀನು ತಿಳಿದುಕೊಳ್ಳಬೇಕಾಗಿದೆ! ನಾನು ನಿನಗೆ ಯಾವ ತಪ್ಪನ್ನೂ ಮಾಡಿಲ್ಲ! ಆದರೆ ನೀನು ನನ್ನನ್ನು ಹುಡುಕುತ್ತಿರುವೆ; ನನ್ನನ್ನು ಕೊಲ್ಲಲು ಪ್ರಯತ್ನಿಸುತ್ತಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನನ್ನ ತಂದೆಯೇ, ಇಗೋ ನೋಡು, ನನ್ನ ಕೈಯಲ್ಲಿ ನಿನ್ನ ನಿಲುವಂಗಿಯ ತುಂಡು ಇದೆ. ನಾನು ನಿನ್ನನ್ನು ಕೊಲ್ಲದೆ, ನಿನ್ನ ನಿಲುವಂಗಿಯ ತುದಿಯನ್ನು ಕತ್ತರಿಸಿಕೊಂಡೆನಷ್ಟೇ ಇದರಿಂದ ನನ್ನಲ್ಲಿ ಯಾವ ದೋಷವೂ ಅಪರಾಧವೂ ಇರುವುದಿಲ್ಲ. ನಾನು ನಿನಗೆ ವಿರೋಧವಾಗಿ ದ್ರೋಹಮಾಡಲಿಲ್ಲ ಎಂದು ತಿಳಿದುಕೋ. ಆದರೂ ನೀನು ನನ್ನ ಪ್ರಾಣಕ್ಕೆ ಹೊಂಚು ಹಾಕುತ್ತಿರುವಿಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ನೀವು ನನ್ನ ತಂದೆ; ಇಗೋ ನೋಡಿ! ನನ್ನ ಕೈಯಲ್ಲಿ ನಿಮ್ಮ ನಿಲುವಂಗಿಯ ತುಂಡು ಇದೆ; ನಾನು ನಿಮ್ಮನ್ನು ಕೊಲ್ಲದೆ ನಿಮ್ಮ ನಿಲುವಂಗಿಯ ಮೂಲೆಯನ್ನು ಕತ್ತರಿಸಿಕೊಂಡೆನಷ್ಟೆ. ಇದರಿಂದ ನನ್ನಲ್ಲಿ ಯಾವ ದೋಷವೂ ಅಪರಾಧವೂ ಇರುವುದಿಲ್ಲ; ನಾನು ನಿಮಗೆ ವಿರೋಧವಾಗಿ ದ್ರೋಹಮಾಡಲಿಲ್ಲ ಎಂದು ತಿಳಿದುಕೊಳ್ಳಿ; ಆದರೂ ನೀವು ನನ್ನ ಪ್ರಾಣಕ್ಕೆ ಹೊಂಚು ಹಾಕುತ್ತಿರುವಿರಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನನ್ನ ತಂದೆಯೇ, ಇಗೋ ನೋಡು; ನನ್ನ ಕೈಯಲ್ಲಿ ನಿನ್ನ ನಿಲುವಂಗಿಯ ತುಂಡು ಇದೆ; ನಾನು ನಿನ್ನನ್ನು ಕೊಲ್ಲದೆ ನಿನ್ನ ನಿಲುವಂಗಿಯ ಮೂಲೆಯನ್ನು ಕತ್ತರಿಸಿಕೊಂಡೆನಷ್ಟೆ. ಇದರಿಂದ ನನ್ನಲ್ಲಿ ಯಾವ ದೋಷವೂ ಅಪರಾಧವೂ ಇರುವದಿಲ್ಲ. ನಾನು ನಿನಗೆ ವಿರೋಧವಾಗಿ ದ್ರೋಹಮಾಡಲಿಲ್ಲ ಎಂದು ತಿಳಿದುಕೋ. ಆದರೂ ನೀನು ನನ್ನ ಪ್ರಾಣಕ್ಕೆ ಹೊಂಚುಹಾಕುತ್ತಿರುವಿಯಲ್ಲಾ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಇದಲ್ಲದೆ ನನ್ನ ತಂದೆಯೇ, ಇಲ್ಲಿ ನೋಡು! ನನ್ನ ಕೈಯಲ್ಲಿರುವ ನಿನ್ನ ನಿಲುವಂಗಿಯ ತುಂಡನ್ನು ನೋಡು. ನಾನು ನಿನ್ನನ್ನು ಕೊಂದುಹಾಕದೆ, ನಿನ್ನ ನಿಲುವಂಗಿಯ ಅಂಚನ್ನು ಮಾತ್ರ ಕತ್ತರಿಸಿಕೊಂಡದ್ದರಿಂದ, ನನ್ನಲ್ಲಿ ಕೆಟ್ಟತನವೂ, ದ್ರೋಹವೂ ಇಲ್ಲವೆಂದು ಇದು ಸೂಚಿಸುತ್ತಿದೆ; ನಾನು ನಿನಗೆ ವಿರೋಧವಾಗಿ ತಪ್ಪುಮಾಡಲಿಲ್ಲವೆಂದು ತಿಳಿದುಕೋ. ಹೀಗಿದ್ದರೂ, ನೀನು ನನ್ನ ಪ್ರಾಣವನ್ನು ತೆಗೆಯಲು ಬೇಟೆಯಾಡುತ್ತೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 24:11
22 ತಿಳಿವುಗಳ ಹೋಲಿಕೆ  

ಯೆಹೋವನ ಸನ್ನಿಧಿಯಿಂದ ದೂರದಲ್ಲಿರುವ ಈ ಸ್ಥಳದಲ್ಲಿ ನನ್ನನ್ನು ಸಾಯಿಸಬೇಡಿ. ಇಸ್ರೇಲರ ರಾಜನು ಒಂದು ಸಣ್ಣ ಹುಳಕ್ಕಾಗಿ ಹುಡುಕುತ್ತಾ ಹೊರ ಬಂದಿದ್ದಾನೆ. ಕೌಜುಗ ಹಕ್ಕಿಯನ್ನು ಬೆಟ್ಟಗಳಲ್ಲಿ ಬೇಟೆಯಾಡುವ ಬೇಟೆಗಾರನಂತೆ ನೀನಿರುವೆಯಲ್ಲಾ!” ಎಂದು ಹೇಳಿದನು.


ದಾವೀದನು ಅಡಗಿಕೊಳ್ಳತಕ್ಕ ಎಲ್ಲಾ ಸ್ಥಳಗಳನ್ನು ಕಂಡುಹಿಡಿಯಿರಿ. ನೀವು ಹಿಂದಿರುಗಿ ನನ್ನ ಬಳಿಗೆ ಬಂದು ಎಲ್ಲವನ್ನೂ ನನಗೆ ತಿಳಿಸಿ. ಅನಂತರ ನಾನು ನಿಮ್ಮೊಂದಿಗೆ ಬರುತ್ತೇನೆ. ದಾವೀದನು ಆ ಪ್ರಾಂತ್ಯದಲ್ಲಿದ್ದರೆ, ನಾನು ಅವನನ್ನು ಕಂಡು ಹಿಡಿಯುತ್ತೇನೆ. ಅವನು ಯೆಹೂದ ಕುಲಗಳಲ್ಲಿ ಎಲ್ಲೇ ಇದ್ದರೂ ಸಹ ನಾನು ಅವನನ್ನು ಕಂಡುಹಿಡಿಯುತ್ತೇನೆ” ಎಂದು ಹೇಳಿದನು.


ದಾವೀದನು ಜೀಫ್ ಅರಣ್ಯದಲ್ಲಿರುವ ಬೆಟ್ಟಪ್ರದೇಶವಾದ ಆಶ್ರಯಗಿರಿಗಳಲ್ಲಿ ಅಡಗಿಕೊಂಡಿದ್ದನು. ಸೌಲನು ಪ್ರತಿದಿನವೂ ದಾವೀದನಿಗಾಗಿ ಹುಡುಕುತ್ತಿದ್ದನು, ಆದರೆ ದಾವೀದನನ್ನು ಹಿಡಿಯಲು ಯೆಹೋವನು ಸೌಲನಿಗೆ ಅವಕಾಶ ಕೊಡಲಿಲ್ಲ.


‘ಅವರು ನನ್ನನ್ನು ನಿಷ್ಕಾರಣವಾಗಿ ದ್ವೇಷಿಸಿದರು’ ಎಂದು ಅವರ ಧರ್ಮಶಾಸ್ತ್ರದಲ್ಲಿ ಬರೆದಿರುವ ಮಾತು ನಿಜವಾಗಲೆಂದು ಹೀಗಾಯಿತು.


ಆಗ ನಾಮಾನನ ಸೇವಕರು ಅವನ ಬಳಿಗೆ ಬಂದು ಅವನಿಗೆ, “ತಂದೆಯೇ, ಪ್ರವಾದಿಯು ಒಂದು ಕಠಿಣವಾದ ಕಾರ್ಯವನ್ನು ಹೇಳಿದ್ದರೆ, ನೀವು ಅದನ್ನು ಮಾಡುತ್ತಿದ್ದಿರಿ! ಅಲ್ಲವೇ? ಹೀಗಿರಲು ಸುಲಭವಾದ ಒಂದು ಕಾರ್ಯವನ್ನು ಅವನು ನಿಮಗೆ ಹೇಳಿರುವಾಗ ನೀವು ಅವನಿಗೆ ವಿಧೇಯರಾಗಬಾರದೇಕೆ? ನೀವು ಸ್ನಾನಮಾಡಿದರೆ, ಶುಚಿಗೊಂಡು ಶುದ್ಧರಾಗುವಿರಿ” ಎಂದು ಹೇಳಿದರು.


ದಾವೀದನು, “ಒಡೆಯನೇ, ನನ್ನನ್ನೇಕೆ ಅಟ್ಟಿಸಿಕೊಂಡು ಬರುತ್ತಿರುವೆ? ನಾನು ಮಾಡಿರುವ ತಪ್ಪಾದರೂ ಏನು? ನಾನು ತಪ್ಪಿತಸ್ಥನೇ?


ನಾನು ಹೇಳುವುದೇನೆಂದರೆ ನಂಬಿಗಸ್ತ ಜನರೆಲ್ಲಾ ಹೋಗಿಬಿಟ್ಟರು. ಈ ದೇಶದಲ್ಲಿ ಒಳ್ಳೆಯ ಜನರು ಯಾರೂ ಉಳಿಯಲಿಲ್ಲ. ಪ್ರತಿಯೊಬ್ಬನೂ ಇನ್ನೊಬ್ಬನನ್ನು ಕೊಲ್ಲಲು ಕಾಯುತ್ತಿದ್ದಾನೆ. ಪ್ರತಿಯೊಬ್ಬನೂ ತನ್ನ ಸೋದರನನ್ನು ಸಿಕ್ಕಿಸಿಹಾಕಲು ಕಾಯುತ್ತಿದ್ದಾನೆ.


ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ: ಪ್ರವಾದಿನಿಯರೇ, ನಿಮಗೆ ಕೇಡಾಗುವುದು. ಜನರು ತಮ್ಮ ತೋಳುಗಳಲ್ಲಿ ಕಟ್ಟಿಕೊಳ್ಳುವದಕ್ಕಾಗಿ ನೀವು ತಾಯಿತಿಗಳನ್ನು ಹೊಲಿದಿರಿ. ಜನರು ತಮ್ಮ ತಲೆಯ ಮೇಲೆ ಹಾಕಿಕೊಳ್ಳಲು ಮಂತ್ರದ ವಿವಿಧ ಅಳತೆಯ ಮುಸುಕುಗಳನ್ನು ನೀವು ತಯಾರಿಸುತ್ತೀರಿ. ನನ್ನ ಜನರ ಪ್ರಾಣಗಳನ್ನು ಬೇಟೆಯಾಡುವದಕ್ಕೂ ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳುವುದಕ್ಕೂ ನೀವು ಇದನ್ನು ಮಾಡುತ್ತೀರಿ.


ನಮ್ಮ ವೈರಿಗಳು ನಮ್ಮನ್ನು ಸತತವಾಗಿ ಬೇಟೆಯಾಡುತ್ತಿದ್ದುದರಿಂದ ನಾವು ಬೀದಿಗಳಿಗೆ ಹೋಗಲೂ ಸಾಧ್ಯವಾಗಲಿಲ್ಲ. ನಮ್ಮ ಅಂತ್ಯವು ಸಮೀಪಿಸಿತು. ನಮ್ಮ ಕಾಲವು ಮುಗಿಯಿತು; ನಮ್ಮ ಕೊನೆಯು ಬಂದಿತು!


ಸಮಾಧಾನದ ಉತ್ತರ ಕೋಪವನ್ನು ಕಡಿಮೆ ಮಾಡುವುದು; ಒರಟು ಉತ್ತರ ಕೋಪವನ್ನು ಹೆಚ್ಚಿಸುವುದು.


ಆ ಸುಳ್ಳುಗಾರರನ್ನು ಜೀವಂತವಾಗಿ ಉಳಿಸಬೇಡ. ಆ ಕೆಡುಕರಿಗೆ ಕೇಡುಗಳಾಗುವಂತೆ ಮಾಡು.


ನಾನು ನಿರಪರಾಧಿಯಾಗಿದ್ದರೂ ಅವರು ನನಗೆ ಬಲೆಯೊಡ್ಡಿದ್ದಾರೆ. ನಿಷ್ಕಾರಣವಾಗಿ ಅವರು ನನಗೆ ಬಲೆಯೊಡ್ಡಿದ್ದಾರೆ.


ನಾನು ತಲೆಯೆತ್ತಿದರೆ ನೀನು ಸಿಂಹದಂತೆ ನನ್ನನ್ನು ಬೇಟೆಯಾಡುವೆ; ನಿನ್ನ ಶಕ್ತಿಯನ್ನು ನನಗೆ ವಿರೋಧವಾಗಿ ಮತ್ತೆ ತೋರಿಸುವೆ.


ದಾವೀದನು ಮತ್ತು ಅವನ ಜನರು ಫಿಲಿಷ್ಟಿಯರೊಂದಿಗೆ ಹೋರಾಡಲು ಹೋದರು. ಅವರು ಇನ್ನೂರು ಜನ ಫಿಲಿಷ್ಟಿಯರನ್ನು ಕೊಂದು ಅವರ ಮುಂದೊಗಲುಗಳನ್ನು ತೆಗೆದುಕೊಂಡು ಬಂದು ರಾಜನ ಅಳಿಯನಾಗುವುದಕ್ಕೋಸ್ಕರ ಅವುಗಳನ್ನು ಸಂಪೂರ್ಣವಾಗಿ ಸೌಲನಿಗೆ ಒಪ್ಪಿಸಿದರು. ಆಗ ಸೌಲನು ತನ್ನ ಮಗಳಾದ ಮೀಕಲಳನ್ನು ದಾವೀದನಿಗೆ ಮದುವೆ ಮಾಡಿಕೊಟ್ಟನು.


ನಾನು ಮಾಡಿದ ತಪ್ಪನ್ನು ದಯವಿಟ್ಟು ಕ್ಷಮಿಸು. ಯೆಹೋವನು ನಿನ್ನ ಕುಟುಂಬವನ್ನು ಪ್ರಬಲಗೊಳಿಸುತ್ತಾನೆಂದೂ ನಿನ್ನ ಕುಟುಂಬದಿಂದ ಅನೇಕ ರಾಜರು ಬರುತ್ತಾರೆಂದೂ ನನಗೆ ತಿಳಿದಿದೆ! ನೀನು ಯೆಹೋವನ ಯುದ್ಧಗಳಲ್ಲಿ ಹೋರಾಡುವುದರಿಂದ ಯೆಹೋವನು ಇದನ್ನು ನೆರವೇರಿಸುತ್ತಾನೆ. ನೀನು ಜೀವಿಸಿರುವ ತನಕ ಜನರು ನಿನ್ನಲ್ಲಿ ಯಾವುದೇ ಬಗೆಯ ಕೆಟ್ಟದನ್ನು ಕಂಡುಹಿಡಿಯುವುದಿಲ್ಲ!


ಇಗೋ, ನನ್ನನ್ನು ಕೊಲ್ಲಲು ಬಲಿಷ್ಠರು ಹೊಂಚುಹಾಕಿದ್ದ್ದಾರೆ. ಆದರೆ ನಾನು ಪಾಪವನ್ನಾಗಲಿ ಅಪರಾಧವನ್ನಾಗಲಿ ಮಾಡಿಲ್ಲ.


ಅಧಿಪತಿಗಳು ನಿಷ್ಕಾರಣವಾಗಿ ನನ್ನ ಮೇಲೆ ಆಕ್ರಮಣ ಮಾಡಿದರು. ನಾನಾದರೋ ನಿನ್ನ ಧರ್ಮಶಾಸ್ತ್ರವೊಂದಕ್ಕೇ ಭಯಪಡುವೆನು, ಅದೊಂದನ್ನೇ ಗೌರವಿಸುವೆನು.


ನಾನು ಇಲ್ಲಿದ್ದೇನೆ. ನಾನು ಯಾವ ತಪ್ಪುಗಳನ್ನಾದರೂ ಮಾಡಿದ್ದರೆ, ನೀವು ಯೆಹೋವನಿಗೆ ಮತ್ತು ಆತನು ಆರಿಸಿರುವ ರಾಜನಿಗೆ ಅವುಗಳನ್ನು ಹೇಳಲೇಬೇಕು. ನಾನು ಬೇರೊಬ್ಬರ ಹಸುವನ್ನಾಗಲಿ ಕತ್ತೆಯನ್ನಾಗಲಿ ಕದ್ದಿರುವೆನೇ? ನಾನು ಯಾರನ್ನಾದರೂ ನೋಯಿಸಿರುವೆನೇ? ವಂಚಿಸಿರುವೆನೇ? ನಾನು ತಪ್ಪುಮಾಡಲು ಯಾರಿಂದಲಾದರೂ ಹಣವನ್ನಾಗಲೀ ಪಾದರಕ್ಷೆಗಳನ್ನಾಗಲೀ ತೆಗೆದುಕೊಂಡಿರುವೆನೇ? ನಾನು ಈ ಕಾರ್ಯಗಳನ್ನು ಮಾಡಿರುವುದಾದರೆ ತಿಳಿಸಿ, ಅವುಗಳನ್ನು ಸರಿಪಡಿಸುತ್ತೇನೆ” ಎಂದು ಹೇಳಿದನು.


ಪ್ರತಿಯೊಬ್ಬನಿಗೂ ಅವನ ಕಾರ್ಯಗಳಿಗೆ ಮತ್ತು ನಂಬಿಗಸ್ತಿಕೆಗೆ ತಕ್ಕಂತೆ ಯೆಹೋವನು ಪ್ರತಿಫಲ ಕೊಡುವನು. ಇಂದು ಯೆಹೋವನು ನಿನ್ನನ್ನು ನನ್ನ ಕೈಗೆ ಒಪ್ಪಿಸಿಕೊಟ್ಟಿದ್ದರೂ ಯೆಹೋವನಿಂದ ಅಭಿಷೇಕಿಸಲ್ಪಟ್ಟ ರಾಜನಾಗಿರುವ ನಿನಗೆ ನಾನು ಕೇಡನ್ನು ಮಾಡುವುದಿಲ್ಲ!


ದಾವೀದನು ಆ ಯುವಕನಿಗೆ, “ಯೆಹೋವನಿಂದ ಆರಿಸಲ್ಪಟ್ಟ ರಾಜನನ್ನು ಕೊಲ್ಲಲು ನೀನು ಹೆದರಲಿಲ್ಲವೇಕೆ?” ಎಂದು ಕೇಳಿದನು.


ಇವುಗಳಲ್ಲಿ ನಾನು ಯಾವುದನ್ನೇ ಮಾಡಿದ್ದರೂ, ಶತ್ರುವು ನನ್ನನ್ನು ಹಿಂದಟ್ಟಿ ಬಂದು ನನ್ನನ್ನು ಹಿಡಿದು ನೆಲಕ್ಕೆ ಕೆಡವಿ ತುಳಿಯಲಿ; ನನ್ನ ಪ್ರಾಣವನ್ನು ಮಣ್ಣುಪಾಲು ಮಾಡಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು