Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 24:15 - ಪರಿಶುದ್ದ ಬೈಬಲ್‌

15 ಯೆಹೋವನೇ ನಮ್ಮಿಬ್ಬರಿಗೂ ನ್ಯಾಯಾಧೀಶನಾಗಿದ್ದು ತೀರ್ಪು ನೀಡಲಿ. ಯೆಹೋವನು ನನ್ನ ಪರವಾಗಿ ವಾದಿಸಿ ನಾನು ನೀತಿವಂತನೆಂದು ನಿರೂಪಿಸಿ ನನ್ನನ್ನು ನಿನ್ನಿಂದ ರಕ್ಷಿಸುತ್ತಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಯೆಹೋವನು ನ್ಯಾಯಾಧಿಪತಿಯಾಗಿ ನಮ್ಮಿಬ್ಬರ ವ್ಯಾಜ್ಯವನ್ನು ತೀರಿಸಲಿ. ಆತನೇ ನೋಡಿ ನನಗೋಸ್ಕರ ವಾದಿಸಿ ನನ್ನನ್ನು ನಿನ್ನ ಕೈಯಿಂದ ತಪ್ಪಿಸಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಸರ್ವೇಶ್ವರ ನ್ಯಾಯಾಧಿಪತಿಯಾಗಿ ನಮ್ಮಿಬ್ಬರ ವ್ಯಾಜ್ಯವನ್ನು ತೀರಿಸಲಿ; ಅವರೇ ನೋಡಿ ನನ್ನ ಪರವಾಗಿ ವಾದಿಸಿ ನನ್ನನ್ನು ನಿಮ್ಮ ಕೈಯಿಂದ ತಪ್ಪಿಸಲಿ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಯೆಹೋವನು ನ್ಯಾಯಾಧಿಪತಿಯಾಗಿ ನವ್ಮಿುಬ್ಬರ ವ್ಯಾಜ್ಯವನ್ನು ತೀರಿಸಲಿ; ಆತನೇ ನೋಡಿ ನನಗೋಸ್ಕರ ವಾದಿಸಿ ನನ್ನನ್ನು ನಿನ್ನ ಕೈಗೆ ತಪ್ಪಿಸಲಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಯೆಹೋವ ದೇವರು ನ್ಯಾಯಾಧಿಪತಿಯಾಗಿದ್ದು ನನಗೂ ನಿನಗೂ ನ್ಯಾಯತೀರಿಸಿ, ನನ್ನ ಪರವಾಗಿ ವಾದಿಸಿ, ನನ್ನನ್ನು ನಿನ್ನ ಕೈಯಿಂದ ತಪ್ಪಿಸಿಬಿಡಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 24:15
12 ತಿಳಿವುಗಳ ಹೋಲಿಕೆ  

ದೇವರೇ, ನನ್ನನ್ನು ನಿರಪರಾಧಿಯೆಂದು ತೀರ್ಪು ನೀಡು. ವ್ಯಾಜ್ಯದಲ್ಲಿ ನನ್ನ ಪರವಾಗಿಯೂ ಅನ್ಯ ಜನಾಂಗಗಳಿಗೆ ವಿರೋಧವಾಗಿಯೂ ವಾದಿಸು. ಸುಳ್ಳುಗಾರರಿಂದಲೂ ಕೆಡುಕರಿಂದಲೂ ನನ್ನನ್ನು ರಕ್ಷಿಸು.


ವ್ಯಾಜ್ಯದಲ್ಲಿ ನನ್ನ ಪರವಾಗಿ ಹೋರಾಡಿ ನನ್ನನ್ನು ರಕ್ಷಿಸು. ನಿನ್ನ ವಾಗ್ದಾನಕ್ಕನುಸಾರವಾಗಿ ನನ್ನನ್ನು ಉಜ್ಜೀವಿಸಮಾಡು.


ಯೆಹೋವನೇ, ನನ್ನ ವ್ಯಾಜ್ಯಗಳಲ್ಲಿ ವಾದಿಸು! ನನ್ನ ಯುದ್ಧಗಳಲ್ಲಿ ಹೋರಾಡು!


ಯೆಹೋವನೇ ನಮಗೆ ನ್ಯಾಯಾಧೀಶನಾಗಿರಲಿ! ನೀನು ಮಾಡಿರುವ ತಪ್ಪಿಗಾಗಿ ಯೆಹೋವನು ನಿನ್ನನ್ನು ದಂಡಿಸಲಿ. ಆದರೆ ನಾನು ನಿನ್ನೊಡನೆ ಹೋರಾಡುವುದಿಲ್ಲ.


ನಾನು ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದ್ದೇನೆ. ಆದ್ದರಿಂದ ಆತನು ನನ್ನ ಮೇಲೆ ಕೋಪಿಸಿಕೊಂಡಿದ್ದಾನೆ. ಆದರೆ ನನ್ನ ಪರವಾಗಿ ಆತನು ವಾದಿಸುತ್ತಾನೆ. ನನಗೆ ಒಳ್ಳೆಯದನ್ನೇ ಆತನು ಮಾಡುತ್ತಾನೆ. ಆ ಬಳಿಕ ನನ್ನನ್ನು ಹೊರಗೆ ಬೆಳಕಿಗೆ ತರುವನು. ಆತನು ನೀತಿವಂತನೆಂಬುದು ಆಗ ನನಗೆ ತಿಳಿಯುವುದು.


ಎಲ್ಲಾ ಜನರೇ, ಕೇಳಿರಿ! ಭೂಮಿಯೂ ಅದರಲ್ಲಿರುವವರೆಲ್ಲರೂ ಕೇಳಿರಿ! ನನ್ನ ಒಡೆಯನಾದ ಯೆಹೋವನು ತನ್ನ ಪವಿತ್ರ ಆಲಯದಿಂದ ಬರುವನು. ನಿಮ್ಮ ವಿರುದ್ಧ ಸಾಕ್ಷಿಯಾಗಿ ಆತನು ಬರುವನು.


ಯೆಹೋವಾಷನು ಯೆಹೋಯಾದನ ಉಪಕಾರವನ್ನು ನೆನಸಲಿಲ್ಲ. ಯೆಹೋಯಾದನು ಜೆಕರ್ಯನ ತಂದೆ. ಯೆಹೋಯಾದನ ಮಗನನ್ನು ಯೆಹೋವಾಷನು ಕೊಂದನು. ಜೆಕರ್ಯನು ಸಾಯುವಾಗ, ಹೇಳಿದ್ದೇನೆಂದರೆ, “ನೀನು ಮಾಡುತ್ತಿರುವದನ್ನು ಯೆಹೋವನೇ ನೋಡಿ ನ್ಯಾಯ ತೀರಿಸಲಿ” ಎಂದು ಹೇಳಿದನು.


ಆಗ ದಾವೀದನು ಗೂಢಚಾರರನ್ನು ಕಳುಹಿಸಿದನು. ಸೌಲನು ಹಕೀಲಾಕ್ಕೆ ಬಂದಿರುವುದು ದಾವೀದನಿಗೆ ತಿಳಿಯಿತು.


ಇಸ್ರೇಲರು ನಿಮ್ಮ ವಿರುದ್ಧ ಯಾವ ಪಾಪವನ್ನೂ ಮಾಡಿಲ್ಲ. ಆದರೆ ನೀನು ಇಸ್ರೇಲರ ವಿರುದ್ಧ ಬಹಳ ಕೆಟ್ಟದ್ದನ್ನು ಮಾಡುತ್ತಿರುವೆ. ನ್ಯಾಯವು ಇಸ್ರೇಲರ ಪರವಾಗಿದೆಯೋ ಅಥವಾ ಅಮ್ಮೋನಿಯರ ಪರವಾಗಿದೆಯೋ ಎಂಬುದನ್ನು ನಿಜವಾದ ನ್ಯಾಯಾಧೀಶನಾದ ಯೆಹೋವನೇ ತೀರ್ಮಾನಿಸಬೇಕು.”


ನಾಬಾಲನು ಸತ್ತನೆಂಬುದು ದಾವೀದನಿಗೆ ತಿಳಿಯಿತು. ದಾವೀದನು, “ಯೆಹೋವನಿಗೆ ಸ್ತೋತ್ರವಾಗಲಿ! ನಾಬಾಲನು ನನ್ನ ಬಗ್ಗೆ ಕೆಟ್ಟಮಾತುಗಳನ್ನು ಆಡಿದನು, ಆದರೆ ಯೆಹೋವನು ನನಗೆ ಸಹಾಯ ಮಾಡಿದನು. ನಾನು ತಪ್ಪುಮಾಡದಂತೆ ಯೆಹೋವನು ನನ್ನನ್ನು ತಡೆದನು. ನಾಬಾಲನು ಕೆಟ್ಟದನ್ನು ಮಾಡಿದ್ದರಿಂದ ಯೆಹೋವನು ಅವನಿಗೆ ಸಾವನ್ನು ಬರಮಾಡಿದನು” ಎಂದು ಹೇಳಿದನು. ನಂತರ ದಾವೀದನು ಅಬೀಗೈಲಳಿಗೆ ಒಂದು ಸಂದೇಶವನ್ನು ಕಳುಹಿಸಿ ತನ್ನ ಹೆಂಡತಿಯಾಗಬೇಕೆಂದು ಕೇಳಿಕೊಂಡನು.


ಗೊಲ್ಯಾತನು ದಾವೀದನಿಗೆ, “ಈ ಕೋಲು ಏನಕ್ಕೆ? ನಾಯಿಯನ್ನು ಓಡಿಸುವಂತೆ ನನ್ನನ್ನು ಓಡಿಸುವುದಕ್ಕೆ ಬಂದೆಯಾ?” ಎಂದು ಕೇಳಿದನು. ಬಳಿಕ ಗೊಲ್ಯಾತನು ತನ್ನ ದೇವರ ಹೆಸರುಗಳ ಮೇಲೆ ದಾವೀದನನ್ನು ಶಪಿಸಿದನು.


ಯೆಹೋವನ ಸನ್ನಿಧಿಯಿಂದ ದೂರದಲ್ಲಿರುವ ಈ ಸ್ಥಳದಲ್ಲಿ ನನ್ನನ್ನು ಸಾಯಿಸಬೇಡಿ. ಇಸ್ರೇಲರ ರಾಜನು ಒಂದು ಸಣ್ಣ ಹುಳಕ್ಕಾಗಿ ಹುಡುಕುತ್ತಾ ಹೊರ ಬಂದಿದ್ದಾನೆ. ಕೌಜುಗ ಹಕ್ಕಿಯನ್ನು ಬೆಟ್ಟಗಳಲ್ಲಿ ಬೇಟೆಯಾಡುವ ಬೇಟೆಗಾರನಂತೆ ನೀನಿರುವೆಯಲ್ಲಾ!” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು