Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 24:16 - ಪರಿಶುದ್ದ ಬೈಬಲ್‌

16 ದಾವೀದನು ಈ ಮಾತುಗಳನ್ನು ಹೇಳಿದಾಗ ಸೌಲನು, “ನನ್ನ ಮಗನಾದ ದಾವೀದನೇ, ಇದು ನಿನ್ನ ಧ್ವನಿಯೇ?” ಎಂದು ಕೇಳಿದನು. ನಂತರ ಸೌಲನು ಅಳಲಾರಂಭಿಸಿದನು. ಸೌಲನು ಬಹಳ ಅತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ದಾವೀದನ ಮಾತುಗಳು ಮುಗಿದ ನಂತರ ಸೌಲನು, “ದಾವೀದನೇ, ನನ್ನ ಮಗನೇ, ಇದು ನಿನ್ನ ಸ್ವರವೋ?” ಅಂದು ಗಟ್ಟಿಯಾಗಿ ಅತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ದಾವೀದನ ಮಾತುಗಳು ಮುಗಿದನಂತರ ಸೌಲನು, “ದಾವೀದನೇ, ನನ್ನ ಮಗನೇ, ಇದು ನಿಜವಾಗಿಯೂ ನಿನ್ನ ಸ್ವರವೇ?” ಎಂದು ಗಟ್ಟಿಯಾಗಿ ಅತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ದಾವೀದನ ಮಾತುಗಳು ಮುಗಿದನಂತರ ಸೌಲನು - ದಾವೀದನೇ, ನನ್ನ ಮಗನೇ, ಇದು ನಿನ್ನ ಸ್ವರವೋ ಅಂದು ಗಟ್ಟಿಯಾಗಿ ಅತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ದಾವೀದನ ಮಾತುಗಳು ಮುಗಿದ ನಂತರ, ಸೌಲನು ದಾವೀದನಿಗೆ, “ದಾವೀದನೇ, ನನ್ನ ಮಗನೇ, ಇದು ನಿನ್ನ ಸ್ವರವೋ?” ಎಂದು ಗಟ್ಟಿಯಾಗಿ ಅತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 24:16
13 ತಿಳಿವುಗಳ ಹೋಲಿಕೆ  

ದಾವೀದನ ಧ್ವನಿಯು ಸೌಲನಿಗೆ ತಿಳಿಯಿತು. ಸೌಲನು, “ನನ್ನ ಮಗನಾದ ದಾವೀದನೇ, ಇದು ನಿನ್ನ ಧ್ವನಿಯೇ?” ಎಂದು ಕೇಳಿದನು. ದಾವೀದನು, “ಹೌದು, ನನ್ನ ಒಡೆಯನಾದ ರಾಜನೇ, ಇದು ನನ್ನ ಧ್ವನಿ” ಎಂದನು.


ಆದರೆ ವಿವೇಕದಿಂದ ಮಾತಾಡಲು ಪವಿತ್ರಾತ್ಮನು ಅವನಿಗೆ ಸಹಾಯಮಾಡಿದನು. ಸ್ತೆಫನನ ಮಾತುಗಳು ಬಹು ಶಕ್ತಿಯುತವಾಗಿದ್ದ ಕಾರಣ ಅವನೊಂದಿಗೆ ವಾದಿಸಲು ಅವರಿಗೆ ಸಾಧ್ಯವಾಗದೆ,


ಏಕೆಂದರೆ ನಾನೇ ನಿಮಗೆ ಜ್ಞಾನವನ್ನು ಕೊಡುತ್ತೇನೆ. ಆದ್ದರಿಂದ ನಿಮ್ಮ ವೈರಿಗಳಲ್ಲಿ ಯಾರೂ ನಿಮ್ಮ ಮಾತಿಗೆ ಪ್ರತ್ಯುತ್ತರವನ್ನು ಕೊಡಲು ಸಾಧ್ಯವಿಲ್ಲ.


ಸಮಾಧಾನದ ಉತ್ತರ ಕೋಪವನ್ನು ಕಡಿಮೆ ಮಾಡುವುದು; ಒರಟು ಉತ್ತರ ಕೋಪವನ್ನು ಹೆಚ್ಚಿಸುವುದು.


ಯಥಾರ್ಥಾವಾದ ನುಡಿಗಳು ಶಕ್ತಿಯುತವಾಗಿವೆ. ಆದರೆ ನಿಮ್ಮ ವಾದಗಳು ಏನನ್ನೂ ನಿರೂಪಿಸುವುದಿಲ್ಲ.


ಏಸಾವನು ಯಾಕೋಬನನ್ನು ಕಂಡಾಗ, ಓಡಿಬಂದು ತನ್ನ ಕೈಗಳಿಂದ ತಬ್ಬಿಕೊಂಡು ಅವನ ಕೊರಳಿನ ಮೇಲೆ ಮುದ್ದಿಟ್ಟನು; ಅವರಿಬ್ಬರೂ ಕಣ್ಣೀರು ಸುರಿಸಿದರು.


ನೀನು ಸರಿಸಮಯದಲ್ಲಿ ಒಳ್ಳೆಯದನ್ನು ಹೇಳಿದರೆ, ಅದು ಬೆಳ್ಳಿಯ ತಟ್ಟೆಯಲ್ಲಿರುವ ಚಿನ್ನದ ಸೇಬಿನಂತಿರುವುದು.


ದೇವರು ತನ್ನ ಸೃಷ್ಟಿಕಾರ್ಯವನ್ನು ಮುಕ್ತಾಯಗೊಳಿಸಿ ಏಳನೆ ದಿನದಲ್ಲಿ ವಿಶ್ರಮಿಸಿಕೊಂಡನು.


ಆಗ ಸಾರಯಳು ಅಬ್ರಾಮನಿಗೆ, “ನನ್ನ ಸಂಕಟಕ್ಕೆ ನೀನೇ ಕಾರಣ. ನಾನು ಅವಳನ್ನು ನಿನಗೆ ಕೊಟ್ಟೆನು. ಈಗ ಅವಳು ಗರ್ಭಿಣಿಯಾಗಿದ್ದಾಳೆ ಮತ್ತು ನನ್ನನ್ನೇ ಕಡೆಗಣಿಸುತ್ತಿದ್ದಾಳೆ. ಯೆಹೋವನೇ ನನಗೂ ನಿನಗೂ ನ್ಯಾಯ ತೀರಿಸಲಿ” ಎಂದು ಹೇಳಿದಳು.


ಇಸ್ರೇಲರು ನಿಮ್ಮ ವಿರುದ್ಧ ಯಾವ ಪಾಪವನ್ನೂ ಮಾಡಿಲ್ಲ. ಆದರೆ ನೀನು ಇಸ್ರೇಲರ ವಿರುದ್ಧ ಬಹಳ ಕೆಟ್ಟದ್ದನ್ನು ಮಾಡುತ್ತಿರುವೆ. ನ್ಯಾಯವು ಇಸ್ರೇಲರ ಪರವಾಗಿದೆಯೋ ಅಥವಾ ಅಮ್ಮೋನಿಯರ ಪರವಾಗಿದೆಯೋ ಎಂಬುದನ್ನು ನಿಜವಾದ ನ್ಯಾಯಾಧೀಶನಾದ ಯೆಹೋವನೇ ತೀರ್ಮಾನಿಸಬೇಕು.”


ನಿನ್ನ ಜೀವವು ನನಗೆ ಮುಖ್ಯವೆಂಬುದನ್ನು ಈ ದಿನ ನಾನು ನಿನಗೆ ತೋರಿಸಿದೆ! ಇದೇ ರೀತಿ, ನನ್ನ ಜೀವವು ತನಗೆ ಮುಖ್ಯವೆಂಬುದನ್ನು ಯೆಹೋವನು ತೋರಿಸುತ್ತಾನೆ! ಯೆಹೋವನು ನನ್ನನ್ನು ಎಲ್ಲಾ ಕೇಡುಗಳಿಂದಲೂ ರಕ್ಷಿಸುತ್ತಾನೆ” ಎಂದು ಹೇಳಿದನು.


ಮೂವತ್ತು ಮಂದಿ ಶೂರರ ನಾಯಕನಾದ ಅಮಾಸೈಯು ಆತ್ಮನಿಂದ ತುಂಬಿದವನಾಗಿ ಹೇಳಿದ್ದೇನೆಂದರೆ: “ದಾವೀದನೇ, ನಾವು ನಿನ್ನವರು. ಇಷಯನ ಮಗನೇ, ನಾವು ನಿನಗೆ ಸೇರಿದವರು; ನಿನಗೆ ಸಮಾಧಾನ ಕೋರುವವರು; ನಿನಗೆ ಸಹಾಯ ಮಾಡುವವರಿಗೆ ಸಮಾಧಾನ ಕೋರುವೆವು; ಯಾಕೆಂದರೆ ನಿನ್ನ ದೇವರು ನಿನಗೆ ಸಹಾಯಮಾಡುತ್ತಿದ್ದಾನೆ.” ದಾವೀದನು ಇವರನ್ನು ಸ್ವಾಗತಿಸಿ ತನ್ನ ಸೈನ್ಯಾಧಿಪತಿಗಳನ್ನಾಗಿ ಮಾಡಿದನು.


ವ್ಯಾಜ್ಯದಲ್ಲಿ ನನ್ನ ಪರವಾಗಿ ಹೋರಾಡಿ ನನ್ನನ್ನು ರಕ್ಷಿಸು. ನಿನ್ನ ವಾಗ್ದಾನಕ್ಕನುಸಾರವಾಗಿ ನನ್ನನ್ನು ಉಜ್ಜೀವಿಸಮಾಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು