Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 24:4 - ಪರಿಶುದ್ದ ಬೈಬಲ್‌

4 ಜನರು ದಾವೀದನಿಗೆ, “ಯೆಹೋವನು ಈ ದಿನವನ್ನೇ ಕುರಿತು ನಿನ್ನೊಂದಿಗೆ ಮಾತನಾಡಿದನು. ಯೆಹೋವನು ನಿನಗೆ, ‘ನಾನು ನಿನ್ನ ಶತ್ರುವನ್ನು ನಿನಗೆ ಒಪ್ಪಿಸುತ್ತೇನೆ. ನಿನ್ನ ಇಷ್ಟದಂತೆ ಶತ್ರುವಿಗೆ ಏನು ಬೇಕಾದರೂ ಮಾಡು’ ಎಂದು ಹೇಳಿದನು” ಎಂದರು. ನಂತರ ದಾವೀದನು ಸೌಲನ ಹತ್ತಿರಕ್ಕೆ ತೆವಳುತ್ತಾ ಹೋಗಿ ಸೌಲನ ಅಂಗಿಯ ಒಂದು ಮೂಲೆಯನ್ನು ಕತ್ತರಿಸಿದನು. ದಾವೀದನನ್ನು ಸೌಲನು ನೋಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಜನರು ದಾವೀದನಿಗೆ “ನಿನ್ನ ಶತ್ರುವನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು, ಆಗ ನೀನು ಅವನನ್ನು ಮನಸ್ಸಿಗೆ ಬಂದಂತೆ ನಡೆಸಬಹುದು ಎಂದು ಯೆಹೋವನು ನಿನಗೆ ಹೇಳಿದ ಮಾತು ನೆರವೇರುವ ದಿನ ಇದೇ” ಅಂದಾಗ ಅವನೆದ್ದು ಮೆಲ್ಲನೆ ಹೋಗಿ ಸೌಲನ ನಿಲುವಂಗಿಯ ತುದಿಯನ್ನು ಕತ್ತರಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಜನರು ದಾವೀದನಿಗೆ, “’ನಿನ್ನ ಶತ್ರುವನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು; ಆಗ ನೀನು ಅವನನ್ನು ನಿನ್ನ ಇಷ್ಟಾನುಸಾರ ನಡೆಸಬಹುದು,’ ಎಂದು ಸರ್ವೇಶ್ವರ ನಿನಗೆ ಹೇಳಿದ ಮಾತು ನೆರವೇರುವ ಸುದಿನವಿದು,” ಎಂದರು. ಅವನೆದ್ದು ಮೆಲ್ಲಗೆ ಹೋಗಿ ಸೌಲನ ನಿಲುವಂಗಿಯ ಮೂಲೆಯನ್ನು ಕತ್ತರಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಜನರು ದಾವೀದನಿಗೆ - ನಿನ್ನ ಶತ್ರುವನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು; ಆಗ ನೀನು ಅವನನ್ನು ಮನಸ್ಸಿಗೆ ಬಂದಂತೆ ನಡಿಸಬಹುದು ಎಂದು ಯೆಹೋವನು ನಿನಗೆ ಹೇಳಿದ ಮಾತು ನೆರವೇರುವ ದಿವಸ ಇದೇ ಅಂದಾಗ ಅವನೆದ್ದು ಮೆಲ್ಲಗೆ ಹೋಗಿ ಸೌಲನ ನಿಲುವಂಗಿಯ ಮೂಲೆಯನ್ನು ಕತ್ತರಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆಗ ದಾವೀದನ ಜನರು ಅವನಿಗೆ, “ ‘ನಾನು ನಿನ್ನ ಶತ್ರುವನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು. ಆಗ ನೀನು ನಿನ್ನ ಇಷ್ಟಾನುಸಾರ ಅವನಿಗೆ ಮಾಡಬಹುದು,’ ಎಂದು ಯೆಹೋವ ದೇವರು ನಿನಗೆ ಹೇಳಿದ ದಿನವು ಇದೇ,” ಎಂದರು. ಆಗ ದಾವೀದನು ಎದ್ದು ಹೋಗಿ ರಹಸ್ಯವಾಗಿ ಸೌಲನ ನಿಲುವಂಗಿಯ ಮೂಲೆಯನ್ನು ಕತ್ತರಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 24:4
13 ತಿಳಿವುಗಳ ಹೋಲಿಕೆ  

ಪ್ರತಿಯೊಬ್ಬನಿಗೂ ಅವನ ಕಾರ್ಯಗಳಿಗೆ ಮತ್ತು ನಂಬಿಗಸ್ತಿಕೆಗೆ ತಕ್ಕಂತೆ ಯೆಹೋವನು ಪ್ರತಿಫಲ ಕೊಡುವನು. ಇಂದು ಯೆಹೋವನು ನಿನ್ನನ್ನು ನನ್ನ ಕೈಗೆ ಒಪ್ಪಿಸಿಕೊಟ್ಟಿದ್ದರೂ ಯೆಹೋವನಿಂದ ಅಭಿಷೇಕಿಸಲ್ಪಟ್ಟ ರಾಜನಾಗಿರುವ ನಿನಗೆ ನಾನು ಕೇಡನ್ನು ಮಾಡುವುದಿಲ್ಲ!


ನಾನು ನಿನಗೆ ಕೇಡುಮಾಡಲು ಇಚ್ಛಿಸುವುದಿಲ್ಲ! ನೀನು ಅದನ್ನು ನಿನ್ನ ಸ್ವಂತ ಕಣ್ಣುಗಳಿಂದ ನೋಡಬಹುದು! ಈ ದಿನ ಗವಿಯಲ್ಲಿ ಯೆಹೋವನು ನಿನ್ನನ್ನು ನನಗೆ ಒಪ್ಪಿಸಿದ್ದನು. ಆದರೆ ನಾನು ನಿನ್ನನ್ನು ಕೊಲ್ಲಲು ನಿರಾಕರಿಸಿದೆ. ನಾನು ನಿನಗೆ ದಯಾಳುವಾಗಿದ್ದೆ. ‘ನಾನು ನನ್ನ ಒಡೆಯನಿಗೆ ಕೇಡು ಮಾಡುವುದಿಲ್ಲ. ಸೌಲನು ಯೆಹೋವನಿಂದ ಅಭಿಷೇಕಿಸಲ್ಪಟ್ಟ ರಾಜ!’


ನೀನು ನನಗೆ ಮಾಡಿದ ಒಳ್ಳೆಯ ಕಾರ್ಯಗಳ ಬಗ್ಗೆ ನನಗೆ ತಿಳಿಸಿರುವೆ. ಯೆಹೋವನು ನನ್ನನ್ನು ನಿನ್ನ ಬಳಿಗೆ ಕರೆದು ತಂದನು, ಆದರೆ ನೀನು ನನ್ನನ್ನು ಕೊಲ್ಲಲಿಲ್ಲ.


“ಹೆದರಬೇಡ, ನನ್ನ ತಂದೆಯಾದ ಸೌಲನು ನಿನಗೆ ತೊಂದರೆ ಮಾಡುವುದಿಲ್ಲ. ನೀನು ಇಸ್ರೇಲಿನ ರಾಜನಾಗುವೆ! ನಾನು ನಿನಗೆ ಎರಡನೆಯವನಾಗುತ್ತೇನೆ. ಇದು ನನ್ನ ತಂದೆಗೂ ಸಹ ತಿಳಿದಿದೆ” ಎಂದು ಹೇಳಿದನು.


ದಾವೀದನು ಈಗ ಕೆಯೀಲಾದಲ್ಲಿದ್ದಾನೆಂದು ಜನರು ಸೌಲನಿಗೆ ತಿಳಿಸಿದರು. ಸೌಲನು, “ದೇವರು ದಾವೀದನನ್ನು ನನಗೆ ಕೊಟ್ಟಿದ್ದಾನೆ! ದಾವೀದನು ತಾನಾಗಿಯೇ ಸಿಕ್ಕಿಹಾಕಿಕೊಂಡಿದ್ದಾನೆ. ಅವನು, ಬಾಗಿಲುಗಳಿರುವ ಹಾಗೂ ಕಬ್ಬಿಣದ ಸಲಾಕೆಗಳಿಂದ ಬೀಗ ಹಾಕಬಲ್ಲ ಬಾಗಿಲುಗಳಿರುವ ಪಟ್ಟಣದೊಳಕ್ಕೆ ಹೋಗಿದ್ದಾನೆ” ಎಂದು ಹೇಳಿದನು.


ನಾನು ಅಪರಿಚಿತರಿಗೆ ಯಾವಾಗಲೂ ಊಟ ಕೊಟ್ಟದ್ದು ನನ್ನ ಮನೆಯಲ್ಲಿರುವ ಎಲ್ಲರಿಗೂ ಗೊತ್ತಿದೆ.


ಹೆಬ್ರೋನಿಗೆ ಬಂದು ಈಷ್ಬೋಶೆತನ ತಲೆಯನ್ನು ದಾವೀದನಿಗೆ ಕೊಟ್ಟರು. ರೇಕಾಬನು ಮತ್ತು ಬಾಣನು ರಾಜನಾದ ದಾವೀದನಿಗೆ, “ಸೌಲನ ಮಗನೂ ನಿನ್ನ ಶತ್ರುವೂ ಅದ ಈಷ್ಬೋಶೆತನ ತಲೆಯು ಇಲ್ಲಿದೆ. ಅವನು ನಿನ್ನನ್ನು ಕೊಲ್ಲಲು ಪ್ರಯತ್ನಿಸಿದನು. ನಿನಗಾಗಿ ಯೆಹೋವನು ಈ ದಿನ ಸೌಲನನ್ನೂ ಅವನ ಕುಲವನ್ನೂ ದಂಡಿಸಿದನು” ಎಂದು ಹೇಳಿದರು.


ಆದರೆ ಕೊಲ್ಲಬೇಕೆಂಬ ಉದ್ದೇಶವಿಲ್ಲದೆ ಹೊಡೆದಾಗ ಸತ್ತುಹೋದರೆ ಅದು ದೇವರ ಸಂಕಲ್ಪವೆಂದು ಪರಿಗಣಿಸಬೇಕು. ನಾನು ನೇಮಿಸಲಿರುವ ಆಶ್ರಯಸ್ಥಳಗಳಿಗೆ ಹೊಡೆದವನು ಓಡಿಹೋಗಿ ಸುರಕ್ಷಿತವಾಗಿ ಬದುಕಲಿ.


ದಾವೀದನು ಗತ್ ಊರನ್ನು ಬಿಟ್ಟು ಅದುಲ್ಲಾಮ್ ಗವಿಗೆ ಓಡಿಹೋದನು. ದಾವೀದನು ಅದುಲ್ಲಾಮಿನಲ್ಲಿರುವುದು ಅವನ ಅಣ್ಣಂದಿರಿಗೂ ಬಂಧುಗಳಿಗೂ ತಿಳಿಯಿತು. ಅವರು ದಾವೀದನನ್ನು ನೋಡಲು ಅಲ್ಲಿಗೆ ಹೋದರು.


ದೇವರೇ, ನನ್ನನ್ನು ಕರುಣಿಸು, ನನ್ನನ್ನು ಕನಿಕರಿಸು. ನನ್ನ ಆತ್ಮವು ನಿನ್ನನ್ನೇ ಆಶ್ರಯಿಸಿಕೊಂಡಿದೆ. ಆಪತ್ತು ಕೊನೆಗೊಳ್ಳುವ ತನಕ ಸಂರಕ್ಷಣೆಗಾಗಿ ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವೆನು.


ನಾನು ಯೆಹೋವನಿಗೆ ಮೊರೆಯಿಡುವೆನು; ಯೆಹೋವನನ್ನು ಕೂಗಿಕೊಳ್ಳುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು