Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 24:6 - ಪರಿಶುದ್ದ ಬೈಬಲ್‌

6 ದಾವೀದನು ತನ್ನ ಜನರಿಗೆ, “ಸೌಲನು ಯೆಹೋವನಿಂದ ಅಭಿಷೇಕಿಸಲ್ಪಟ್ಟವನೂ ನನ್ನ ರಾಜನೂ ಆಗಿರುವುದರಿಂದ ನಾನು ಅವನ ವಿರುದ್ಧವಾಗಿ ಏನೂ ಮಾಡಬಾರದು!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವನು ತನ್ನ ಜನರಿಗೆ, “ಅವನು ಯೆಹೋವನಿಂದ ಅಭಿಷೇಕಿಸಲ್ಪಟ್ಟವನೂ, ನನ್ನ ಒಡೆಯನೂ ಆಗಿದ್ದಾನೆ. ನಾನು ನಿಮ್ಮ ಮಾತು ಕೇಳಿ ಯೆಹೋವನ ಅಭಿಷಿಕ್ತನಿಗೆ ವಿರೋಧವಾಗಿ ಕೈಯೆತ್ತದಂತೆ ಯೆಹೋವನೇ ನನಗೆ ಅಡ್ಡಿ ಮಾಡಲಿ” ಎಂದು ಹೇಳಿದನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅವನು ತನ್ನ ಜನರಿಗೆ, “ಆತ ಸರ್ವೇಶ್ವರನಿಂದ ಅಭಿಷಿಕ್ತನು ಹಾಗು ಆತನು ನನ್ನ ಒಡೆಯನು ಆಗಿದ್ದಾರೆ; ನಾನು ನಿಮ್ಮ ಮಾತು ಕೇಳಿ ಸರ್ವೇಶ್ವರನ ಅಭಿಷಿಕ್ತನ ವಿರೋಧವಾಗಿ ಕೈಯೆತ್ತದಂತೆ ಆ ಸರ್ವೇಶ್ವರನೇ ನನಗೆ ಅಡ್ಡಿಮಾಡಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅವನು ತನ್ನ ಜನರಿಗೆ - ಅವನು ಯೆಹೋವನಿಂದ ಅಭಿಷೇಕಿಸಲ್ಪಟ್ಟವನೂ ನನ್ನ ಒಡೆಯನೂ ಆಗಿದ್ದಾನೆ; ನಾನು ನಿಮ್ಮ ಮಾತು ಕೇಳಿ ಯೆಹೋವನ ಅಭಿಷಿಕ್ತನಿಗೆ ವಿರೋಧವಾಗಿ ಕೈಯೆತ್ತದಂತೆ ಯೆಹೋವನೇ ನನಗೆ ಅಡ್ಡಿಮಾಡಲಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ದಾವೀದನು ತನ್ನ ಜನರಿಗೆ, “ಅವನು ಯೆಹೋವ ದೇವರ ಅಭಿಷಿಕ್ತನಾದದರಿಂದ ನನ್ನ ಕೈ ಅವನಿಗೆ ವಿರೋಧವಾಗಿ ಚಾಚಿ, ನನ್ನ ಒಡೆಯನಿಗೆ ಈ ಕಾರ್ಯ ಮಾಡುವುದನ್ನು ಯೆಹೋವ ದೇವರು ತಡೆಯಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 24:6
11 ತಿಳಿವುಗಳ ಹೋಲಿಕೆ  

ನಿಮಗೆ ಕೇಡುಮಾಡುವವರನ್ನು ಶಪಿಸದೆ ಆಶೀರ್ವದಿಸಿರಿ.


ಯಾರೂ ಅಪಕಾರಕ್ಕೆ ಅಪಕಾರ ಮಾಡದಂತೆ ನೋಡಿಕೊಳ್ಳಿರಿ; ಒಬ್ಬರಿಗೊಬ್ಬರಿಗೆ ಮತ್ತು ಎಲ್ಲರಿಗೆ ಯಾವಾಗಲೂ ಒಳ್ಳೆಯದನ್ನು ಮಾಡಲು ಪ್ರಯತ್ನಿಸಿರಿ.


ಆದರೆ ನಾನು ನಿಮಗೆ ಹೇಳುವುದೇನೆಂದರೆ, ನಿಮ್ಮ ಶತ್ರುಗಳನ್ನು ಪ್ರೀತಿಸಿರಿ. ನಿಮಗೆ ಕೆಟ್ಟದ್ದನ್ನು ಮಾಡುವ ಜನರಿಗಾಗಿ ಪ್ರಾರ್ಥಿಸಿರಿ.


ನಾಬೋತನು, “ನಾನು ನನ್ನ ಭೂಮಿಯನ್ನು ಎಂದಿಗೂ ನಿನಗೆ ಕೊಡುವುದಿಲ್ಲ. ಅದು ನನ್ನ ವಂಶಕ್ಕೆ ಸೇರಿದ್ದು” ಎಂದು ಉತ್ತರಿಸಿದನು.


ದಾವೀದನು ಆ ಯುವಕನಿಗೆ, “ಯೆಹೋವನಿಂದ ಆರಿಸಲ್ಪಟ್ಟ ರಾಜನನ್ನು ಕೊಲ್ಲಲು ನೀನು ಹೆದರಲಿಲ್ಲವೇಕೆ?” ಎಂದು ಕೇಳಿದನು.


ನಾನು ಇಲ್ಲಿದ್ದೇನೆ. ನಾನು ಯಾವ ತಪ್ಪುಗಳನ್ನಾದರೂ ಮಾಡಿದ್ದರೆ, ನೀವು ಯೆಹೋವನಿಗೆ ಮತ್ತು ಆತನು ಆರಿಸಿರುವ ರಾಜನಿಗೆ ಅವುಗಳನ್ನು ಹೇಳಲೇಬೇಕು. ನಾನು ಬೇರೊಬ್ಬರ ಹಸುವನ್ನಾಗಲಿ ಕತ್ತೆಯನ್ನಾಗಲಿ ಕದ್ದಿರುವೆನೇ? ನಾನು ಯಾರನ್ನಾದರೂ ನೋಯಿಸಿರುವೆನೇ? ವಂಚಿಸಿರುವೆನೇ? ನಾನು ತಪ್ಪುಮಾಡಲು ಯಾರಿಂದಲಾದರೂ ಹಣವನ್ನಾಗಲೀ ಪಾದರಕ್ಷೆಗಳನ್ನಾಗಲೀ ತೆಗೆದುಕೊಂಡಿರುವೆನೇ? ನಾನು ಈ ಕಾರ್ಯಗಳನ್ನು ಮಾಡಿರುವುದಾದರೆ ತಿಳಿಸಿ, ಅವುಗಳನ್ನು ಸರಿಪಡಿಸುತ್ತೇನೆ” ಎಂದು ಹೇಳಿದನು.


ದಾವೀದನು ತನ್ನ ಜನರನ್ನು ತಡೆಯಲು ಈ ಮಾತುಗಳನ್ನು ಹೇಳಿದನು. ಸೌಲನನ್ನು ಆಕ್ರಮಿಸಲು ದಾವೀದನು ತನ್ನ ಜನರಿಗೆ ಅವಕಾಶ ಕೊಡಲಿಲ್ಲ. ಸೌಲನು ಗವಿಯನ್ನು ಬಿಟ್ಟು ತನ್ನ ದಾರಿಯಲ್ಲಿ ಹೊರಟನು.


ದಾವೀದನು ಜನರನ್ನು ಲೆಕ್ಕಹಾಕಿದ ನಂತರ ಅವಮಾನಗೊಂಡಂತೆ ಭಾವಿಸಿದನು. ದಾವೀದನು ಯೆಹೋವನಿಗೆ, “ನಾನು ಈ ಕಾರ್ಯವನ್ನು ಮಾಡಿ ಮಹಾಪಾಪಕ್ಕೆ ಒಳಗಾದೆನು! ಯೆಹೋವನೇ, ನನ್ನ ಪಾಪಕ್ಕಾಗಿ ನನ್ನನ್ನು ಕ್ಷಮಿಸೆಂದು ಬೇಡುತ್ತೇನೆ. ನಾನು ಬಹಳ ಮೂರ್ಖನಾಗಿಬಿಟ್ಟೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು