Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 25:23 - ಪರಿಶುದ್ದ ಬೈಬಲ್‌

23 ಅಬೀಗೈಲಳು ದಾವೀದನನ್ನು ಕಂಡ ಕೂಡಲೆ ಕತ್ತೆಯಿಂದ ಬೇಗನೆ ಇಳಿದು ದಾವೀದನಿಗೆ ಸಾಷ್ಟಾಂಗನಮಸ್ಕಾರ ಮಾಡಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅಬೀಗೈಲಳು ದಾವೀದನನ್ನು ಕಂಡ ಕೂಡಲೇ ಕತ್ತೆಯಿಂದಿಳಿದು, ಅವನಿಗೆ ಸಾಷ್ಟಾಂಗವಾಗಿ ನಮಸ್ಕರಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅಬೀಗೈಲಳು ದಾವೀದನನ್ನು ಕಂಡ ಕೂಡಲೆ ಕತ್ತೆಯಿಂದಿಳಿದು ಅವನಿಗೆ ಸಾಷ್ಟಾಂಗ ನಮಸ್ಕರಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅಬೀಗೈಲಳು ದಾವೀದನನ್ನು ಕಂಡ ಕೂಡಲೆ ಕತ್ತೆಯಿಂದಿಳಿದು ಅವನಿಗೆ ಸಾಷ್ಟಾಂಗವಾಗಿ ನಮಸ್ಕರಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಅಬೀಗೈಲಳು ದಾವೀದನನ್ನು ಕಂಡಾಗ, ಕತ್ತೆಯಿಂದಿಳಿದು ದಾವೀದನಿಗೆ ಎದುರಾಗಿ ಹೋಗಿ, ಅವನ ಮುಂದೆ ಬೋರಲು ಬಿದ್ದು ನಮಸ್ಕರಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 25:23
12 ತಿಳಿವುಗಳ ಹೋಲಿಕೆ  

ಬಾಲಕನು ಹೊರಟುಹೋದನು. ದಾವೀದನು ತಾನು ಅಡಗಿದ್ದ ಬೆಟ್ಟದ ಮತ್ತೊಂದು ಕಡೆಯ ಸ್ಥಳದಿಂದ ಹೊರಬಂದನು. ದಾವೀದನು ಯೋನಾತಾನನ ಮುಂದೆ ಬಂದು ಮೂರು ಸಲ ತನ್ನ ಮುಖವನ್ನು ನೆಲದವರೆಗೂ ಬಗ್ಗಿಸಿ ನಮಸ್ಕರಿಸಿದನು. ನಂತರ ದಾವೀದ ಮತ್ತು ಯೋನಾತಾನರು ಪರಸ್ಪರ ಮುದ್ದಿಟ್ಟರು, ಅವರಿಬ್ಬರೂ ಒಟ್ಟಾಗಿ ಅತ್ತರು. ದಾವೀದನು ಯೋನಾತಾನನಿಗಿಂತ ಹೆಚ್ಚು ಅತ್ತನು.


ಅಕ್ಷಾಳು ಒತ್ನೀಯೇಲನ ಜೊತೆ ವಾಸಿಸಲು ಹೋದಳು. ಒತ್ನೀಯೇಲನು ಅಕ್ಷಾಳಿಗೆ, “ನಿನ್ನ ತಂದೆಯಿಂದ ಸ್ವಲ್ಪ ಭೂಮಿಯನ್ನು ಕೇಳು” ಎಂದು ಹೇಳಿದನು. ಅಕ್ಷಾಳು ತನ್ನ ತಂದೆಯ ಹತ್ತಿರ ಹೋದಳು. ಅವಳು ತನ್ನ ಕತ್ತೆಯ ಮೇಲಿಂದ ಇಳಿದಾಗ, “ನಿನಗೇನು ಬೇಕು?” ಎಂದು ಕಾಲೇಬನು ಕೇಳಿದನು.


ಒತ್ನೀಯೇಲನ ಮನೆಗೆ ಅಕ್ಷಾ ಹೋದಳು. ಕಾಲೇಬನಿಂದ ಇನ್ನಷ್ಟು ಭೂಮಿಯನ್ನು ಕೇಳಲು ಅಕ್ಷಾಳನ್ನು ಒತ್ನೀಯೇಲನು ಪ್ರೇರೇಪಿಸಿದನು. ಅಕ್ಷಾಳು ತನ್ನ ತಂದೆಯ ಬಳಿಗೆ ಬಂದು ಕತ್ತೆಯ ಮೇಲಿಂದ ಇಳಿದಾಗ, “ನಿನಗೆ ಏನುಬೇಕು?” ಎಂದು ಕಾಲೇಬನು ಕೇಳಿದನು.


ದಾವೀದನು ಗವಿಯಿಂದ ಹೊರಗೆ ಬಂದನು. ದಾವೀದನು ಸೌಲನಿಗೆ, “ಅರಸನೇ, ನನ್ನ ಒಡೆಯನೇ!” ಎಂದು ಕೂಗಿದನು. ಸೌಲನು ಹಿಂದಿರುಗಿ ನೋಡಿದಾಗ ದಾವೀದನು ಅವನಿಗೆ ಸಾಷ್ಟಾಂಗನಮಸ್ಕಾರಮಾಡಿ,


ಆಗ ರೂತಳು ತಲೆಬಾಗಿ ವಂದಿಸಿದಳು. ಅವಳು ಬೋವಜನಿಗೆ, “ನನಗೆ ಆಶ್ಚರ್ಯವಾಗುತ್ತದೆ. ನಾನೊಬ್ಬ ಪರದೇಶಿಯಾಗಿದ್ದರೂ ನೀನು ನನ್ನನ್ನು ಗಮನಿಸಿ ಕೃಪೆ ತೋರಿದೆ” ಎಂದಳು.


ಅಬೀಗೈಲಳು ದಾವೀದನ ಪಾದಗಳಿಗೆ ಬಿದ್ದು, “ಒಡೆಯನೇ, ನಿನ್ನೊಂದಿಗೆ ಮಾತನಾಡಲು ದಯವಿಟ್ಟು ನನಗೆ ಅವಕಾಶ ಕೊಡು. ನಾನು ಹೇಳುವುದನ್ನು ಆಲಿಸು. ನಡೆದುಹೋದ ಸಂಗತಿಗೆ ನನ್ನನ್ನೇ ನಿಂದಿಸು.


ಅಬೀಗೈಲಳು ಸಾಷ್ಟಾಂಗನಮಸ್ಕಾರಮಾಡಿ, “ನಾನು ನಿಮ್ಮ ದಾಸಿ. ನಾನು ನಿಮ್ಮ ಸೇವೆಗೆ ಸಿದ್ಧಳಾಗಿದ್ದೇನೆ. ನಾನು ನನ್ನ ಒಡೆಯನ ಸೇವಕರ ಪಾದಗಳನ್ನು ತೊಳೆಯಲು ಸಿದ್ಧಳಾಗಿರುವೆ” ಎಂದಳು.


ಮೂರನೆಯ ದಿನ ಒಬ್ಬ ಯುವ ಸೈನಿಕನು ಚಿಕ್ಲಗಿಗೆ ಬಂದನು. ಈ ಮನುಷ್ಯನು ಸೌಲನಿದ್ದ ಪಾಳೆಯದಿಂದ ಬಂದವನು. ಅವನು ಬಟ್ಟೆಗಳೆಲ್ಲವನ್ನು ಹರಿದುಕೊಂಡಿದ್ದನು; ತಲೆಯ ಮೇಲೆ ಧೂಳನ್ನು ಹಾಕಿಕೊಂಡಿದ್ದನು. ಅವನು ದಾವೀದನ ಬಳಿಗೆ ಬಂದು ಅವನ ಮುಂದೆ, ತನ್ನ ತಲೆಯನ್ನು ನೆಲಕ್ಕೆ ಬಾಗಿಸಿ ನಮಸ್ಕರಿಸಿದನು.


ಯೋನಾತಾನನ ಮಗನಾದ ಮೆಫೀಬೋಶೆತನು ದಾವೀದನ ಬಳಿಗೆ ಬಂದು ಸಾಷ್ಟಾಂಗನಮಸ್ಕಾರ ಮಾಡಿದನು. ದಾವೀದನು, “ಮೆಫೀಬೋಶೆತನೇ” ಎಂದನು. ಮೆಫೀಬೋಶೆತನು, “ನಿನ್ನ ಸೇವಕನಾದ ನಾನು ಇಲ್ಲಿದ್ದೇನೆ” ಎಂದನು.


ತೆಕೋವದ ಆ ಸ್ತ್ರೀಯು ರಾಜನ ಬಳಿಗೆ ಬಂದಾಗ ಅವನಿಗೆ ಸಾಷ್ಟಾಂಗನಮಸ್ಕಾರ ಮಾಡಿ, “ರಾಜನೇ, ನನಗೆ ಸಹಾಯಮಾಡು” ಎಂದು ಹೇಳಿದಳು.


ಅಹೀಮಾಚನು ರಾಜನ ಬಳಿಗೆ ಬಂದು, “ಎಲ್ಲವೂ ಶುಭಕರವಾಗಿದೆ” ಎಂದು ಹೇಳಿ ರಾಜನಿಗೆ ಸಾಷ್ಟಾಂಗನಮಸ್ಕಾರ ಮಾಡಿದನು. ಅಹೀಮಾಚನು, “ನಿನ್ನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ! ರಾಜನಾದ ಒಡೆಯನೇ, ನಿನ್ನ ವಿರುದ್ಧವಾಗಿದ್ದ ಜನರನ್ನು ಯೆಹೋವನು ಸೋಲಿಸಿದ್ದಾನೆ” ಎಂದು ಹೇಳಿದನು.


ದಾವೀದನು ಒರ್ನಾನನ ಬಳಿಗೆ ಬೆಟ್ಟ ಹತ್ತಿಕೊಂಡು ಬರುತ್ತಿರುವುದನ್ನು ಒರ್ನಾನನು ಕಂಡು ಅವನನ್ನು ಎದುರುಗೊಂಡು ಬಗ್ಗಿ ನಮಸ್ಕರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು