Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 25:25 - ಪರಿಶುದ್ದ ಬೈಬಲ್‌

25 ನೀನು ಕಳುಹಿಸಿದ ಜನರನ್ನು ನಾನು ನೋಡಲಿಲ್ಲ. ಒಡೆಯನೇ, ಮೂರ್ಖನಾದ ಆ ಮನುಷ್ಯನ ಮೇಲೆ ಯಾವ ಲಕ್ಷ್ಯವನ್ನೂ ಇಡಬೇಡ. ಅವನು ತನ್ನ ಹೆಸರಿಗೆ ತಕ್ಕಂತೆ ಇದ್ದಾನೆ. ಅವನ ಹೆಸರಿನ ಅರ್ಥವೂ ‘ಮೂರ್ಖ’ ಮತ್ತು ಅವನು ನಿಜವಾಗಿಯೂ ಮೂರ್ಖ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಸ್ವಾಮಿಯು ಆ ಮೂರ್ಖನಾದ ನಾಬಾಲನನ್ನು ಲಕ್ಷಿಸದಿರಲಿ. ಅವನ ಹೆಸರು ನಾಬಾಲ. ಹೆಸರಿಗೆ ತಕ್ಕಂತೆ ಅವನು ಮೂರ್ಖನೇ ಆಗಿದ್ದಾನೆ. ನಿನ್ನ ದಾಸಿಯಾದ ನಾನು ಸ್ವಾಮಿಯು ಕಳುಹಿಸಿದ ಸೇವಕರನ್ನು ನೋಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಒಡೆಯಾ, ಮಂದಮತಿಯಾದ ಆ ನಾಬಾಲನನ್ನು ತಾವು ಲಕ್ಷಿಸಬೇಡಿ. ಅವನ ಹೆಸರು ನಾಬಾಲ್; ಅದಕ್ಕೆ ತಕ್ಕಂತೆ ಮೂರ್ಖನೇ ಆಗಿರುತ್ತಾನೆ. ನಿಮ್ಮ ದಾಸಿಯಾದ ನಾನು, ತಾವು ಕಳುಹಿಸಿದ ಸೇವಕರನ್ನು ನೋಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಸ್ವಾವಿುಯು ಮೂರ್ಖನಾದ ಆ ನಾಬಾಲನನ್ನು ಲಕ್ಷಿಸದಿರಲಿ. ಅವನ ಹೆಸರು ನಾಬಾಲ್; ಅದಕ್ಕೆ ತಕ್ಕಂತೆ ಅವನು ಮೂರ್ಖನೇ ಆಗಿರುತ್ತಾನೆ. ನಿನ್ನ ದಾಸಿಯಾದ ನಾನು ಸ್ವಾವಿುಯು ಕಳುಹಿಸಿದ ಸೇವಕರನ್ನು ನೋಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ನನ್ನ ಒಡೆಯನೇ, ದಯಮಾಡಿ ದುಷ್ಟನಾದ ನಾಬಾಲನ ಮೇಲೆ ಲಕ್ಷ್ಯವಿಡಬೇಡ. ಏಕೆಂದರೆ ಅವನ ಹೆಸರು ಹೇಗೋ, ಹಾಗೆಯೇ ಅವನು. ಅವನು ನಾಬಾಲನೆಂಬ ಹೆಸರುಳ್ಳವನು. ಬುದ್ಧಿಹೀನತೆ ಅವನಲ್ಲಿ ಇದೆ. ಆದರೆ ನನ್ನ ಒಡೆಯನಾದ ನೀನು ಕಳುಹಿಸಿದ ನಿನ್ನ ಸೇವಕರನ್ನು ನಿನ್ನ ದಾಸಿಯಾದ ನಾನು ನೋಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 25:25
9 ತಿಳಿವುಗಳ ಹೋಲಿಕೆ  

ಈಗ ಅದರ ಬಗ್ಗೆ ಯೋಚಿಸಿ ನೀನು ಮಾಡಬೇಕಾದದ್ದನ್ನು ತೀರ್ಮಾನಿಸು. ಮೂರ್ಖನಾದ ನಾಬಾಲನೊಂದಿಗೆ ಮಾತಾಡಿ ಅವನ ಮನಸ್ಸನ್ನು ಬದಲಾಯಿಸುವುದು ಅಸಾಧ್ಯ. ನಮ್ಮ ಒಡೆಯನಿಗೂ ಅವನ ಕುಟುಂಬಕ್ಕೂ ಭೀಕರವಾದ ಕೇಡು ಬರಲಿದೆ” ಎಂದು ಹೇಳಿದನು.


ನನ್ನ ನಾಮವನ್ನು ಘನಪಡಿಸದೆ ಹೋದರೆ ಕೆಟ್ಟ ವಿಷಯಗಳು ನಿಮಗೆ ಪ್ರಾಪ್ತಿಯಾಗುವವು. ನೀವು ಆಶೀರ್ವದಿಸುವಿರಿ. ಆದರೆ ಅದು ಶಾಪವಾಗುವದು. ಕೆಟ್ಟ ವಿಷಯಗಳು ನೆರವೇರುವಂತೆ ನಾನು ಮಾಡುವೆನು. ಯಾಕೆಂದರೆ ನೀವು ನನ್ನ ಹೆಸರನ್ನು ಘನಪಡಿಸುವದಿಲ್ಲ.” ಇದನ್ನು ಸರ್ವಶಕ್ತನಾದ ಯೆಹೋವನು ನುಡಿದಿದ್ದಾನೆ.


ರಾಜನಾದ ನನ್ನ ಒಡೆಯನೇ, ರಾಜನ ಮಕ್ಕಳೆಲ್ಲರೂ ಸತ್ತರೆಂದು ಯೋಚಿಸಬೇಡ. ಅಮ್ನೋನನು ಮಾತ್ರ ಸತ್ತುಹೋದನು” ಎಂದನು.


ಆದ್ದರಿಂದ ಯೆಹೋವನು ಅವರ ಮೇಲೆ ಕೋಪಗೊಂಡನು. ಅವರಿಗೆ ವಿರುದ್ಧವಾಗಿ ಬಲವಾದ ಯುದ್ಧಗಳು ನಡೆಯುವಂತೆ ಮಾಡಿದನು. ಇಸ್ರೇಲ್ ಜನರ ಸುತ್ತಲೂ ಬೆಂಕಿಯು ಆವರಿಸಿಕೊಂಡಿರುವಂತಿದ್ದರೂ ಅವರಿಗೆ ಅದರ ಪ್ರಜ್ಞೆಯಿರಲಿಲ್ಲ. ಅವರೇ ಉರಿಯುತ್ತಿರುವಂತೆ ಅದಿತ್ತು. ಆದರೆ ಅವರು ವಿಷಯಗಳನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಲಿಲ್ಲ.


ಮುಗ್ದಜನರನ್ನು ಕೊಂದು ಅಪರಾಧಿಯಾಗದಂತೆ ಯೆಹೋವನು ನಿನ್ನನ್ನು ಕಾಪಾಡಿದ್ದಾನೆ. ಯೆಹೋವನ ಆಣೆಯಾಗಿಯೂ ನಿನ್ನ ಆಣೆಯಾಗಿಯೂ ನಿನ್ನ ಶತ್ರುಗಳೂ ನಿನಗೆ ಕೇಡುಮಾಡುವವರೂ ನಾಬಾಲನಂತಾಗಲಿ.


ಅಬೀಗೈಲಳು ದಾವೀದನ ಪಾದಗಳಿಗೆ ಬಿದ್ದು, “ಒಡೆಯನೇ, ನಿನ್ನೊಂದಿಗೆ ಮಾತನಾಡಲು ದಯವಿಟ್ಟು ನನಗೆ ಅವಕಾಶ ಕೊಡು. ನಾನು ಹೇಳುವುದನ್ನು ಆಲಿಸು. ನಡೆದುಹೋದ ಸಂಗತಿಗೆ ನನ್ನನ್ನೇ ನಿಂದಿಸು.


ದುಷ್ಟರನ್ನು ಮಹಾವ್ಯಕ್ತಿಗಳೆಂದು ಕರೆಯುವದಿಲ್ಲ. ನೀಚನನ್ನು ಘನವಂತನೆಂದು ಕರೆಯುವದಿಲ್ಲ.


ಈ ಮನುಷ್ಯನ ಹೆಸರು ನಾಬಾಲ್. ಅವನ ಹೆಂಡತಿಯ ಹೆಸರು ಅಬೀಗೈಲ್. ಅಬೀಗೈಲಳು ಬುದ್ಧಿವಂತೆಯೂ ಸುಂದರಿಯೂ ಆಗಿದ್ದಳು. ಆದರೆ ನಾಬಾಲನು ಕ್ರೂರಿ ಮತ್ತು ಕೀಳಾದ ವ್ಯಕ್ತಿ. ನಾಬಾಲನು ಕಾಲೇಬನ ಕುಟುಂಬಕ್ಕೆ ಸೇರಿದವನು.


ನೀತಿವಂತರು ಬಡವರಿಗೆ ಒಳ್ಳೆಯದನ್ನು ಮಾಡಲು ಇಷ್ಟಪಡುತ್ತಾರೆ. ಕೆಡುಕರಾದರೋ ಬಡವರನ್ನು ಲಕ್ಷಿಸುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು