Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 25:26 - ಪರಿಶುದ್ದ ಬೈಬಲ್‌

26 ಮುಗ್ದಜನರನ್ನು ಕೊಂದು ಅಪರಾಧಿಯಾಗದಂತೆ ಯೆಹೋವನು ನಿನ್ನನ್ನು ಕಾಪಾಡಿದ್ದಾನೆ. ಯೆಹೋವನ ಆಣೆಯಾಗಿಯೂ ನಿನ್ನ ಆಣೆಯಾಗಿಯೂ ನಿನ್ನ ಶತ್ರುಗಳೂ ನಿನಗೆ ಕೇಡುಮಾಡುವವರೂ ನಾಬಾಲನಂತಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಸ್ವಾಮೀ, ನೀನು ಸ್ವಹಸ್ತದಿಂದ ಮುಯ್ಯಿ ತೀರಿಸಿ ರಕ್ತಾಪರಾಧಕ್ಕೆ ಗುರಿಯಾಗದಂತೆ ಯೆಹೋವನು ನಿನ್ನನ್ನು ಕಾಪಾಡಿದ್ದಾನೆ. ಯೆಹೋವನಾಣೆ, ನಿನ್ನ ಜೀವದಾಣೆ ನಿನ್ನ ವಿರೋಧಿಗಳೂ, ನಿನಗೆ ಕೇಡು ಬಗೆಯುವವರೂ ನಾಬಾಲನ ಗತಿಯನ್ನು ಹೊಂದಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಒಡೆಯಾ, ತಾವು ಸ್ವಹಸ್ತದಿಂದ ಮುಯ್ಯಿತೀರಿಸಿ ರಕ್ತಾಪರಾಧಕ್ಕೆ ಗುರಿಯಾಗದಂತೆ ಸರ್ವೇಶ್ವರ ತಮ್ಮನ್ನು ಕಾಪಾಡಿದ್ದಾರೆ. ಸರ್ವೇಶ್ವರನಾಣೆ, ನಿಮ್ಮ ಜೀವದಾಣೆ, ನಿಮ್ಮ ವಿರೋಧಿಗಳೂ ನಿಮಗೆ ಕೇಡು ಬಗೆಯುವವರೂ ನಾಬಾಲನ ಗತಿಯನ್ನು ಹೊಂದಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಸ್ವಾಮೀ, ನೀನು ಸ್ವಹಸ್ತದಿಂದ ಮುಯ್ಯಿತೀರಿಸಿ ರಕ್ತಾಪರಾಧಕ್ಕೆ ಗುರಿಯಾಗದಂತೆ ಯೆಹೋವನು ನಿನ್ನನ್ನು ಕಾಪಾಡಿದ್ದಾನೆ. ಯೆಹೋವನ ಆಣೆ, ನಿನ್ನ ಜೀವದಾಣೆ, ನಿನ್ನ ವಿರೋಧಿಗಳೂ ನಿನಗೆ ಕೇಡು ಬಗೆಯುವವರೂ ನಾಬಾಲನ ಗತಿಯನ್ನು ಹೊಂದಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಆದಕಾರಣ ನನ್ನ ಒಡೆಯನೇ, ನೀನು ರಕ್ತ ಚೆಲ್ಲುವುದಕ್ಕೂ, ನಿನ್ನ ಕೈಯಿಂದ ನಿನಗೆ ಮುಯ್ಯಿ ತೀರಿಸಿಕೊಳ್ಳುವುದಕ್ಕೂ ಹೋಗುವುದನ್ನು ದೇವರು ತಡೆದದ್ದರಿಂದ, ಯೆಹೋವ ದೇವರ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ ನಿನ್ನ ಶತ್ರುಗಳೂ, ನನ್ನ ಒಡೆಯನಿಗೆ ಕೇಡನ್ನು ಹುಡುಕುವವರೂ ನಾಬಾಲನ ಹಾಗೆಯೇ ಆಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 25:26
20 ತಿಳಿವುಗಳ ಹೋಲಿಕೆ  

ರಾಜನು ಅವನಿಗೆ, “ಯುವಕನಾದ ಅಬ್ಷಾಲೋಮನು ಕ್ಷೇಮವಾಗಿರುವನೇ?” ಎಂದು ಕೇಳಿದನು. ಇಥಿಯೋಪ್ಯದವನು, “ನಿನ್ನ ಶತ್ರುಗಳು ಮತ್ತು ನಿನಗೆ ಕೇಡುಮಾಡಲು ನಿನಗೆ ವಿರುದ್ಧವಾಗಿ ಬಂದ ಜನರೆಲ್ಲರು ಈ ಯುವಕನಂತೆಯೇ ದಂಡಿಸಲ್ಪಡುವರು” ಎಂದು ಉತ್ತರಿಸಿದನು.


ಆಗ ದೇವರು ಅಬೀಮೆಲೆಕನಿಗೆ ಕನಸಿನಲ್ಲಿ, “ಹೌದು, ನೀನು ನಿರಪರಾಧಿಯೆಂದು ನನಗೆ ಗೊತ್ತಿದೆ. ನೀನು ಮಾಡಲಿದ್ದ ತಪ್ಪು ನಿನಗೆ ತಿಳಿದಿರಲಿಲ್ಲವೆಂದೂ ನನಗೆ ಗೊತ್ತಿದೆ. ಆದ್ದರಿಂದಲೇ ನಾನು ನಿನ್ನನ್ನು ಕಾಪಾಡಿದೆ. ನನಗೆ ವಿರೋಧವಾಗಿ ಪಾಪಮಾಡಲು ನಾನು ನಿನಗೆ ಅವಕಾಶ ಕೊಡಲಿಲ್ಲ.


“ಜನರು ಮಾಡುವ ತಪ್ಪು ಕಾರ್ಯಗಳಿಗಾಗಿ ನಾನು ಅವರನ್ನು ದಂಡಿಸುತ್ತೇನೆ. ನಾನು ಮುಯ್ಯಿಗೆ ಮುಯ್ಯಿ ತೀರಿಸುತ್ತೇನೆ.” ಎಂದು ದೇವರು ಹೇಳಿದ್ದು ನಮಗೆ ತಿಳಿದೇ ಇದೆ.


ಆಗ ದಾನಿಯೇಲನು (ಬೇಲ್ತೆಶಚ್ಚರನು) ಸುಮಾರು ಒಂದು ಗಂಟೆಯವರೆಗೆ ಮೌನವಾಗಿದ್ದನು. ಅವನ ಬುದ್ಧಿಗೆ ತೋರಿದ ವಿಷಯಗಳು ಅವನನ್ನು ಗಾಬರಿಪಡಿಸಿದವು. ಆಗ ರಾಜನು, “ಬೇಲ್ತೆಶಚ್ಚರನೇ, ಕನಸು ಅಥವಾ ಕನಸಿನ ಅರ್ಥವು ನಿನ್ನನ್ನು ಭಯಗೊಳಿಸದಿರಲಿ” ಎಂದು ಧೈರ್ಯ ಹೇಳಿದನು. ಆಗ ಬೇಲ್ತೆಶಚ್ಚರನು ಅರಸನಿಗೆ, “ನನ್ನ ಒಡೆಯನೇ, ಈ ಕನಸು ನಿನ್ನ ವಿರೋಧಿಗಳಿಗೆ ಫಲಿಸಲಿ. ಇದರ ಅರ್ಥವು ನಿನ್ನ ವಿರೋಧಿಗಳ ಅನುಭವಕ್ಕೆ ಬರಲಿ ಎಂದು ನಾನು ಹಾರೈಸುತ್ತೇನೆ.


ಈ ದೇಶವು ನಮಗೆ ದೊರೆತದ್ದು ನಮ್ಮ ಪೂರ್ವಿಕರ ಖಡ್ಗಗಳಿಂದಲ್ಲ. ಅವರನ್ನು ಜಯಶಾಲಿಗಳನ್ನಾಗಿ ಮಾಡಿದ್ದು ಅವರ ಭುಜಬಲವಲ್ಲ. ನಮ್ಮ ಪೂರ್ವಿಕರೊಂದಿಗೆ ನೀನಿದ್ದುದರಿಂದ ಅವರಿಗೆ ಜಯವು ದೊರೆಯಿತು. ದೇವರೇ, ನಿನ್ನ ಮಹಾಶಕ್ತಿಯು ಅವರನ್ನು ರಕ್ಷಿಸಿತು. ಅವರ ಮೇಲೆ ನಿನಗಿದ್ದ ಪ್ರೀತಿಯನ್ನು ಅದು ತೋರಿಸಿತು.


ಯೆಹೂದದ ಬಂಧಿಗಳೆಲ್ಲಾ ಬೇರೆಯವರಿಗೆ ಕೇಡಾಗಲಿ ಎಂದು ಕೇಳಿಕೊಳ್ಳುವಾಗ ಆ ಜನರ ಉದಾಹರಣೆ ಕೊಡುವರು. ಆ ಬಂಧಿಗಳು ಹೀಗೆನ್ನುವರು: ‘ಬಾಬಿಲೋನಿನ ರಾಜನು ಬೆಂಕಿಯಲ್ಲಿ ಸುಟ್ಟುಬಿಟ್ಟ ಚಿದ್ಕೀಯನ ಮತ್ತು ಅಹಾಬನ ಗತಿಯನ್ನು ಯೆಹೋವನು ನಿನಗೆ ತರಲಿ.’


ಅವಳು ಅನೇಕ ಪಾತ್ರೆಗಳನ್ನು ತುಂಬಿಸಿಟ್ಟು ತನ್ನ ಮಗನಿಗೆ, “ಇನ್ನೊಂದು ಪಾತ್ರೆಯನ್ನು ನನ್ನ ಬಳಿಗೆ ತೆಗೆದುಕೊಂಡು ಬಾ” ಎಂದಳು. ಆದರೆ ಎಲ್ಲಾ ಪಾತ್ರೆಗಳು ತುಂಬಿಹೋಗಿದ್ದವು. ಅವಳ ಮಕ್ಕಳಲ್ಲಿ ಒಬ್ಬನು, “ಇಲ್ಲಿ ಯಾವ ಪಾತ್ರೆಗಳೂ ಇಲ್ಲ” ಎಂದು ಹೇಳಿದನು. ಆ ಸಮಯಕ್ಕೆ ಸರಿಯಾಗಿ ಪಾತ್ರೆಯಲ್ಲಿದ್ದ ಎಣ್ಣೆಯು ಮುಗಿದಿತ್ತು.


ಎಲೀಯನು ಎಲೀಷನಿಗೆ, “ದಯವಿಟ್ಟು ಇಲ್ಲಿಯೇ ಇರು; ಏಕೆಂದರೆ ಬೇತೇಲಿಗೆ ಹೋಗುವಂತೆ ಯೆಹೋವನು ನನಗೆ ಆಜ್ಞಾಪಿಸಿದ್ದಾನೆ” ಎಂದು ಹೇಳಿದನು. ಆದರೆ ಎಲೀಷನು, “ಯೆಹೋವನಾಣೆ, ನಿನ್ನಾಣೆ, ನಾನು ನಿನ್ನನ್ನು ಬಿಟ್ಟಿರುವುದಿಲ್ಲವೆಂದು ಪ್ರಮಾಣ ಮಾಡುತ್ತೇನೆ” ಎಂದು ಹೇಳಿದನು. ಇಬ್ಬರೂ ಬೇತೇಲಿಗೆ ಹೋದರು.


ದಾವೀದನು ಅದುಲ್ಲಾಮನ್ನು ಬಿಟ್ಟು ಮೋವಾಬಿನ ಮಿಚ್ಪೆಗೆ ಹೋದನು. ದಾವೀದನು ಮೋವಾಬ್ ರಾಜನಿಗೆ, “ದೇವರು ನನಗೇನು ಮಾಡುತ್ತಾನೆಂಬುದನ್ನು ನಾನು ತಿಳಿದುಕೊಳ್ಳುವ ತನಕ, ನನ್ನ ತಂದೆತಾಯಿಗಳು ನಿನ್ನಲ್ಲಿಗೆ ಬಂದು ಇರಲು ದಯವಿಟ್ಟು ನನಗೆ ಅವಕಾಶ ಕೊಡು” ಎಂದು ಕೇಳಿಕೊಂಡನು.


ಹನ್ನಳು, “ಸ್ವಾಮೀ, ನನ್ನನ್ನು ಕ್ಷಮಿಸಿ. ನಿಮ್ಮ ಬಳಿ ನಿಂತಿರುವ ನಾನೇ ಅಂದು ಯೆಹೋವನಿಗೆ ಪ್ರಾರ್ಥನೆ ಮಾಡಿದವಳು. ನಾನು ಹೇಳುತ್ತಿರುವುದು ನಿಜವೆಂದು ಪ್ರಮಾಣ ಮಾಡುತ್ತೇನೆ.


ಆದರೆ ದಾವೀದನು, “ನಾನು ನಿನ್ನ ಗೆಳೆಯನೆಂಬುದು ನಿನ್ನ ತಂದೆಗೆ ಚೆನ್ನಾಗಿ ತಿಳಿದಿದೆ. ನಿನ್ನ ತಂದೆಯು, ‘ಯೋನಾತಾನನಿಗೆ ಇದು ತಿಳಿಯಲೇಬಾರದು. ಅವನಿಗೆ ತಿಳಿದುಬಿಟ್ಟರೆ ಅವನು ತನ್ನ ಹೃದಯದಲ್ಲಿ ದುಃಖಪಟ್ಟು ದಾವೀದನಿಗೆ ಹೇಳಿಬಿಡುತ್ತಾನೆ’ ಎಂದುಕೊಂಡಿದ್ದಾನೆ. ಯೆಹೋವನಾಣೆ, ನಿನ್ನ ಜೀವದಾಣೆ, ನಾನು ಸಾವಿಗೆ ಬಹು ಹತ್ತಿರವಾಗಿದ್ದೇನೆ” ಎಂದು ಹೇಳಿದನು.


ನೀನು ಕಳುಹಿಸಿದ ಜನರನ್ನು ನಾನು ನೋಡಲಿಲ್ಲ. ಒಡೆಯನೇ, ಮೂರ್ಖನಾದ ಆ ಮನುಷ್ಯನ ಮೇಲೆ ಯಾವ ಲಕ್ಷ್ಯವನ್ನೂ ಇಡಬೇಡ. ಅವನು ತನ್ನ ಹೆಸರಿಗೆ ತಕ್ಕಂತೆ ಇದ್ದಾನೆ. ಅವನ ಹೆಸರಿನ ಅರ್ಥವೂ ‘ಮೂರ್ಖ’ ಮತ್ತು ಅವನು ನಿಜವಾಗಿಯೂ ಮೂರ್ಖ.


ನಾಬಾಲನು ಸತ್ತನೆಂಬುದು ದಾವೀದನಿಗೆ ತಿಳಿಯಿತು. ದಾವೀದನು, “ಯೆಹೋವನಿಗೆ ಸ್ತೋತ್ರವಾಗಲಿ! ನಾಬಾಲನು ನನ್ನ ಬಗ್ಗೆ ಕೆಟ್ಟಮಾತುಗಳನ್ನು ಆಡಿದನು, ಆದರೆ ಯೆಹೋವನು ನನಗೆ ಸಹಾಯ ಮಾಡಿದನು. ನಾನು ತಪ್ಪುಮಾಡದಂತೆ ಯೆಹೋವನು ನನ್ನನ್ನು ತಡೆದನು. ನಾಬಾಲನು ಕೆಟ್ಟದನ್ನು ಮಾಡಿದ್ದರಿಂದ ಯೆಹೋವನು ಅವನಿಗೆ ಸಾವನ್ನು ಬರಮಾಡಿದನು” ಎಂದು ಹೇಳಿದನು. ನಂತರ ದಾವೀದನು ಅಬೀಗೈಲಳಿಗೆ ಒಂದು ಸಂದೇಶವನ್ನು ಕಳುಹಿಸಿ ತನ್ನ ಹೆಂಡತಿಯಾಗಬೇಕೆಂದು ಕೇಳಿಕೊಂಡನು.


ಯೆಹೋವನಾಣೆ, ಸೌಲನನ್ನು ಸ್ವತಃ ಯೆಹೋವನೇ ದಂಡಿಸುತ್ತಾನೆ. ಸೌಲನು ಸ್ವಾಭಾವಿಕನಾದ ಮರಣಹೊಂದಬಹುದು ಅಥವಾ ಯುದ್ಧದಲ್ಲಿ ಕೊಲ್ಲಲ್ಪಡಬಹುದು.


ಯೆಹೋವನು ತನ್ನ ಪವಿತ್ರ ಜನರನ್ನು ರಕ್ಷಿಸುವನು. ಆತನು ಅವರನ್ನು ಎಡವದಂತೆ ಕಾಪಾಡುವನು. ಆದರೆ ಕೆಟ್ಟವರು ನಾಶವಾಗಿ ಕತ್ತಲೆಯಲ್ಲಿ ಬೀಳುವರು. ಅವರ ಶಕ್ತಿ ಅವರಿಗೆ ಜಯನೀಡಲಾರದು.


ಒಂದುವೇಳೆ ಆ ಸಮಯದಲ್ಲಿ ಯೋನಾತಾನನ ಕುಟುಂಬವು ದಾವೀದನಿಂದ ಅಗಲಿ ಹೋಗಬೇಕಿದ್ದರೆ ಅಗಲಿ ಹೋಗಲಿ. ದಾವೀದನ ಶತ್ರುಗಳನ್ನು ಯೆಹೋವನು ದಂಡಿಸಲಿ” ಎಂದು ಹೇಳಿದನು.


ಒಳ್ಳೆಯ ಹೆಂಡತಿ ತನ್ನ ಗಂಡನಿಗೆ ತನ್ನ ಜೀವಮಾನವೆಲ್ಲಾ ಒಳ್ಳೆಯದನ್ನು ಮಾಡುವಳು. ಅವನಿಗೆಂದಿಗೂ ತೊಂದರೆ ಮಾಡುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು