Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 25:29 - ಪರಿಶುದ್ದ ಬೈಬಲ್‌

29 ನಿನ್ನನ್ನು ಕೊಲ್ಲಲು ಒಬ್ಬ ವ್ಯಕ್ತಿಯು ಅಟ್ಟಿಸಿಕೊಂಡು ಬಂದರೆ, ನಿನ್ನ ದೇವರಾದ ಯೆಹೋವನು ನಿನ್ನ ಜೀವವನ್ನು ರಕ್ಷಿಸುತ್ತಾನೆ! ಆದರೆ ಯೆಹೋವನು ನಿನ್ನ ಶತ್ರುಗಳನ್ನು ಕವಣೆಯ ಕಲ್ಲನ್ನು ಎಸೆಯುವಂತೆ ಎಸೆದುಬಿಡುತ್ತಾನೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಯಾವನಾದರೂ ನನ್ನ ಒಡೆಯನಾದ ನಿನ್ನನ್ನು ಹಿಂಸಿಸಿ ಜೀವತೆಗೆಯಬೇಕೆಂದಿದ್ದರೂ, ಆ ನಿನ್ನ ಜೀವವು ನಿನ್ನ ದೇವರಾದ ಯೆಹೋವನ ರಕ್ಷಣೆಯಲ್ಲಿರುವ ಜೀವ ನಿಕ್ಷೇಪದಲ್ಲಿ ಭದ್ರವಾಗಿರಲಿ. ಆದರೆ ಆತನು ನಿನ್ನ ಶತ್ರುಗಳ ಜೀವವನ್ನು ಕವಣೆಯ ಕಲ್ಲನ್ನೋ ಎಂಬಂತೆ ಎಸೆದು ಬಿಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಯಾವನಾದರೂ ನನ್ನ ಒಡೆಯರಾದ ನಿಮ್ಮನ್ನು ಹಿಂಸಿಸಿ ಜೀವತೆಗೆಯಬೇಕೆಂದು ಇರುವಾಗ, ಆ ನಿಮ್ಮ ಜೀವ, ತಮ್ಮ ದೇವರಾದ ಸರ್ವೇಶ್ವರನ ರಕ್ಷಣೆಯಲ್ಲಿರುವ ಜೀವನಿಕ್ಷೇಪದಲ್ಲಿ ಸುಭದ್ರವಾಗಿರಲಿ; ಆದರೆ ನಿಮ್ಮ ಶತ್ರುಗಳ ಜೀವವನ್ನು ಕವಣೆಯ ಕಲ್ಲನ್ನೋ ಎಂಬಂತೆ ಎಸೆದುಬಿಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಯಾವನಾದರೂ ನನ್ನ ಸ್ವಾವಿುಯಾದ ನಿನ್ನನ್ನು ಹಿಂಸಿಸಿ ಜೀವತಗೆಯಬೇಕೆಂದಿರುವಾಗ ಆ ನಿನ್ನ ಜೀವವು ನಿನ್ನ ದೇವರಾದ ಯೆಹೋವನ ರಕ್ಷಣೆಯಲ್ಲಿರುವ ಜೀವನಿಕ್ಷೇಪದಲ್ಲಿ ಭದ್ರವಾಗಿರಲಿ; ಆದರೆ ಆತನು ನಿನ್ನ ಶತ್ರುಗಳ ಜೀವವನ್ನು ಕವಣೆಯ ಕಲ್ಲನ್ನೋ ಎಂಬಂತೆ ಎಸೆದುಬಿಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಈಗ ನಿನ್ನನ್ನು ಹಿಂದಟ್ಟಿ ನಿನ್ನ ಪ್ರಾಣವನ್ನು ಹುಡುಕುವುದಕ್ಕೆ ಒಬ್ಬನು ಎದ್ದಿದ್ದಾನೆ. ಆದರೂ ನನ್ನ ಒಡೆಯನ ಪ್ರಾಣವು ದೇವರಾದ ಯೆಹೋವ ದೇವರ ಬಳಿಯ ಜೀವದ ಕಟ್ಟಿನಲ್ಲಿ ಕಟ್ಟಿರುವುದು. ನಿನ್ನ ಶತ್ರುಗಳ ಪ್ರಾಣವನ್ನು ಕವಣೆಯ ಮಧ್ಯದಲ್ಲಿಟ್ಟು ಎಸೆದ ಹಾಗೆಯೇ ದೇವರು ಎಸೆದುಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 25:29
17 ತಿಳಿವುಗಳ ಹೋಲಿಕೆ  

ತಂದೆಯೇ, ನನ್ನಲ್ಲಿ ನಂಬಿಕೆ ಇಡುವ ಎಲ್ಲಾ ಜನರು ಒಂದಾಗಿರಬೇಕೆಂದು ನಾನು ಪ್ರಾರ್ಥಿಸುತ್ತೇನೆ. ನೀನು ನನ್ನಲ್ಲಿ ನೆಲೆಸಿರುವೆ ಮತ್ತು ನಾನು ನಿನ್ನಲ್ಲಿ ನೆಲೆಸಿರುವೆ. ನೀನು ನನ್ನನ್ನು ಕಳುಹಿಸಿರುವೆಯೆಂದು ಈ ಲೋಕವು ನಂಬಿಕೊಳ್ಳುವುದಕ್ಕಾಗಿ ಈ ಜನರು ಸಹ ನಮ್ಮೊಂದಿಗೆ ಒಂದಾಗಿರಬೇಕೆಂದು ನಾನು ಪ್ರಾರ್ಥಿಸುತ್ತೇನೆ.


ಯೆಹೋವನು ಹೇಳುವುದೇನೆಂದರೆ, “ಅವರು ನನ್ನ ಜನರು. ನಾನು ಅವರಿಗೆ ಕರುಣೆ ತೋರಿಸುವೆನು. ತಂದೆಯು ತನಗೆ ವಿಧೇಯತೆ ತೋರಿಸುವ ತನ್ನ ಮಕ್ಕಳಿಗೆ ಕನಿಕರವುಳ್ಳವನಾಗಿರುತ್ತಾನೆ. ಅದೇ ರೀತಿಯಲ್ಲಿ ನನ್ನನ್ನು ಅನುಸರಿಸುವವರ ಮೇಲೆ ನಾನು ದಯೆ ತೋರಿಸುವೆನು.


ಯೆಹೋವನು ಹೇಳುತ್ತಾನೆ: “ಈ ಸಾರಿ ಯೆಹೂದದ ಜನರನ್ನು ನಾನು ದೇಶದಿಂದ ಹೊರಗೆ ತಳ್ಳುತ್ತೇನೆ. ಅವರಿಗೆ ನಾನು ನೋವು ಮತ್ತು ಕಷ್ಟಗಳನ್ನು ತರುತ್ತೇನೆ. ಅವರು ಪಾಠ ಕಲಿಯುವದಕ್ಕೋಸ್ಕರ ನಾನು ಹೀಗೆ ಮಾಡುತ್ತೇನೆ.”


ಯೆಹೋವನು ತನ್ನ ಭಕ್ತರ ಮರಣವನ್ನು ಅಲ್ಪವೆಂದು ಎಣಿಸುವುದಿಲ್ಲ.


ದೇವರ ಶಕ್ತಿಯು ನಿಮ್ಮ ನಂಬಿಕೆಯ ಮೂಲಕ ನಿಮ್ಮನ್ನು ಕಾಯುತ್ತದೆ. ನಿಮಗೆ ರಕ್ಷಣೆಯಾಗುವವರೆಗೆ ನಿಮ್ಮನ್ನು ಸುರಕ್ಷಿತವಾಗಿಡುತ್ತದೆ. ಸಿದ್ಧವಾಗಿರುವ ಆ ರಕ್ಷಣೆಯು ಅಂತ್ಯಕಾಲದಲ್ಲಿ ನಿಮಗೆ ದೊರೆಯುವುದು.


ನಾನು ಅವರಲ್ಲಿ ಇರುವೆನು ಮತ್ತು ನೀನು ನನ್ನಲ್ಲಿರುವೆ. ಆದ್ದರಿಂದ ಅವರು ಸಂಪೂರ್ಣವಾಗಿ ಒಂದಾಗಿರುವರು. ನೀನೇ ನನ್ನನ್ನು ಕಳುಹಿಸಿರುವುದಾಗಿ ಮತ್ತು ನೀನು ನನ್ನನ್ನು ಪ್ರೀತಿಸಿದಂತೆಯೇ ಈ ಜನರನ್ನೂ ಪ್ರೀತಿಸಿರುವುದಾಗಿ ಈ ಲೋಕವು ಆಗ ತಿಳಿದುಕೊಳ್ಳುವುದು.


ನಮಗೆ ಜೀವಕೊಟ್ಟವನು ಆತನೇ. ನಮ್ಮನ್ನು ಕಾಪಾಡುವವನೂ ಆತನೇ.


ಯೆಹೋವನು ತನ್ನ ಪವಿತ್ರ ಜನರನ್ನು ರಕ್ಷಿಸುವನು. ಆತನು ಅವರನ್ನು ಎಡವದಂತೆ ಕಾಪಾಡುವನು. ಆದರೆ ಕೆಟ್ಟವರು ನಾಶವಾಗಿ ಕತ್ತಲೆಯಲ್ಲಿ ಬೀಳುವರು. ಅವರ ಶಕ್ತಿ ಅವರಿಗೆ ಜಯನೀಡಲಾರದು.


ಇಸ್ರೇಲೇ, ನೀವು ಆಶೀರ್ವದಿಸಲ್ಪಟ್ಟವರು. ನಿಮ್ಮ ದೇಶದ ಹಾಗೆ ಯಾವ ದೇಶವೂ ಇರದು. ಯೆಹೋವನು ನಿಮ್ಮನ್ನು ರಕ್ಷಿಸಿದನು. ಆತನು ನಿಮ್ಮನ್ನು ಕಾಪಾಡುವ ಬಲವಾದ ಗುರಾಣಿ. ಆತನು ನಿಮಗೆ ಶಕ್ತಿಯುತವಾದ ಖಡ್ಗ. ವೈರಿಗಳು ನಿಮಗೆ ಭಯಪಡುವರು. ನೀವು ಅವರ ಪವಿತ್ರ ಸ್ಥಳವನ್ನು ತುಳಿದುಬಿಡುವಿರಿ!”


ಈ ಸಂಗತಿಗಳಾದ ಮೇಲೆ, ಅಬ್ರಾಮನಿಗೆ ದರ್ಶನದಲ್ಲಿ ಯೆಹೋವನ ಸಂದೇಶ ಬಂದಿತು. ದೇವರು ಅವನಿಗೆ, “ಅಬ್ರಾಮನೇ ಭಯಪಡಬೇಡ; ನಾನೇ ನಿನಗೆ ಗುರಾಣಿಯಾಗಿದ್ದೇನೆ. ನಾನು ನಿನಗೆ ದೊಡ್ಡ ಪ್ರತಿಫಲವನ್ನು ಕೊಡುತ್ತೇನೆ” ಎಂದು ಹೇಳಿದನು.


ಇನ್ನು ಸ್ವಲ್ಪ ಕಾಲವಾದ ಮೇಲೆ ಈ ಲೋಕದ ಜನರು ನನ್ನನ್ನು ಇನ್ನೆಂದಿಗೂ ಕಾಣುವುದಿಲ್ಲ. ಆದರೆ ನೀವು ನನ್ನನ್ನು ನೋಡುವಿರಿ. ನಾನು ಜೀವಿಸುವುದರಿಂದ ನೀವೂ ಜೀವಿಸುವಿರಿ.


ಹೆಬ್ರೋನಿಗೆ ಬಂದು ಈಷ್ಬೋಶೆತನ ತಲೆಯನ್ನು ದಾವೀದನಿಗೆ ಕೊಟ್ಟರು. ರೇಕಾಬನು ಮತ್ತು ಬಾಣನು ರಾಜನಾದ ದಾವೀದನಿಗೆ, “ಸೌಲನ ಮಗನೂ ನಿನ್ನ ಶತ್ರುವೂ ಅದ ಈಷ್ಬೋಶೆತನ ತಲೆಯು ಇಲ್ಲಿದೆ. ಅವನು ನಿನ್ನನ್ನು ಕೊಲ್ಲಲು ಪ್ರಯತ್ನಿಸಿದನು. ನಿನಗಾಗಿ ಯೆಹೋವನು ಈ ದಿನ ಸೌಲನನ್ನೂ ಅವನ ಕುಲವನ್ನೂ ದಂಡಿಸಿದನು” ಎಂದು ಹೇಳಿದರು.


ದೇವರ ಕುರಿತು ಆಲೋಚಿಸದ ಅನ್ಯರು ನನಗೆ ವಿರೋಧವಾಗಿ ತಿರುಗಿದ್ದಾರೆ. ಆ ಬಲಾತ್ಕಾರಿಗಳು ನನ್ನನ್ನು ಕೊಲ್ಲಲು ಪ್ರಯತ್ನಿಸುತ್ತಿದ್ದಾರೆ.


ದುಷ್ಟನು ಬಿರುಗಾಳಿಯ ಶಕ್ತಿಯಿಂದ ಓಡಿಹೋಗಲು ಪ್ರಯತ್ನಿಸುವನು. ಆದರೆ ಬಿರುಗಾಳಿಯು ಕರುಣೆಯಿಲ್ಲದೆ ಅವನಿಗೆ ಬಡಿಯುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು