Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 25:41 - ಪರಿಶುದ್ದ ಬೈಬಲ್‌

41 ಅಬೀಗೈಲಳು ಸಾಷ್ಟಾಂಗನಮಸ್ಕಾರಮಾಡಿ, “ನಾನು ನಿಮ್ಮ ದಾಸಿ. ನಾನು ನಿಮ್ಮ ಸೇವೆಗೆ ಸಿದ್ಧಳಾಗಿದ್ದೇನೆ. ನಾನು ನನ್ನ ಒಡೆಯನ ಸೇವಕರ ಪಾದಗಳನ್ನು ತೊಳೆಯಲು ಸಿದ್ಧಳಾಗಿರುವೆ” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಆಕೆ ಎದ್ದು ನಮಸ್ಕಾರಮಾಡಿ ಸೇವಕರಿಗೆ, “ನಿನ್ನ ದಾಸಿಯಾದ ನಾನು ನನ್ನ ಸ್ವಾಮಿಯ ಸೇವಕರ ಪಾದಗಳನ್ನು ತೊಳೆಯುವ ಸೇವಕಿಯಾಗುವುದಕ್ಕೆ ಸಿದ್ಧಳಾಗಿದ್ದೇನೆ” ಎಂದು ಉತ್ತರಕೊಟ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 ಆಕೆ ಎದ್ದು ನಮಸ್ಕಾರ ಮಾಡಿ, ಮಾತಾಡಿಸಿದವನಿಗೆ, “ನಿನ್ನ ದಾಸಿಯಾದ ನಾನು ನನ್ನ ಒಡೆಯರ ಕೈಕೆಳಗಿರುವ ಸೇವಕರ ಪಾದ ತೊಳೆಯುವುದಕ್ಕೂ ಸಿದ್ಧಳಾಗಿದ್ದೇನೆ,” ಎಂದು ಉತ್ತರಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ಆಕೆ ಎದ್ದು ನಮಸ್ಕಾರಮಾಡಿ ಮಾತಾಡಿಸಿದವನಿಗೆ - ನಿನ್ನ ದಾಸಿಯಾದ ನಾನು ನನ್ನ ಸ್ವಾವಿುಯ ಸೇವಕರ ಪಾದಗಳನ್ನು ತೊಳೆಯುವ ಸೇವಕಿಯಾಗುವದಕ್ಕೆ ಸಿದ್ಧಳಾಗಿದ್ದೇನೆ ಎಂದು ಉತ್ತರಕೊಟ್ಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ಆಗ ಅವಳು ಎದ್ದು ಬೋರಲು ಬಿದ್ದು, “ನಿನ್ನ ದಾಸಿಯಾದ ನಾನು ನನ್ನ ಒಡೆಯನ ಸೇವಕರ ಪಾದಗಳನ್ನು ತೊಳೆಯುವುದಕ್ಕೂ ಸಿದ್ಧಳಾಗಿದ್ದೇನೆ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 25:41
10 ತಿಳಿವುಗಳ ಹೋಲಿಕೆ  

ಒಳ್ಳೆಯ ಕಾರ್ಯಗಳನ್ನು ಮಾಡುತ್ತಿದ್ದವಳೆಂದೂ ಹೆಸರನ್ನು ಪಡೆದಿರಬೇಕು. ಅಂದರೆ, ಅವಳು ತನ್ನ ಮಕ್ಕಳನ್ನು ಸಾಕಿಸಲಹಿದವಳೂ, ಅತಿಥಿಗಳನ್ನು ಸತ್ಕರಿಸಿದವಳೂ, ದೇವಜನರ ಪಾದಗಳನ್ನು ತೊಳೆದವಳೂ, ತೊಂದರೆಯಲ್ಲಿರುವ ಜನರಿಗೆ ಸಹಾಯ ಮಾಡಿದವಳೂ ಮತ್ತು ತನ್ನಿಂದಾದಷ್ಟು ಒಳ್ಳೆಯ ಕಾರ್ಯಗಳನ್ನು ಮಾಡಿದವಳೂ ಆಗಿರಬೇಕು.


ಆಗ ರೂತಳು ತಲೆಬಾಗಿ ವಂದಿಸಿದಳು. ಅವಳು ಬೋವಜನಿಗೆ, “ನನಗೆ ಆಶ್ಚರ್ಯವಾಗುತ್ತದೆ. ನಾನೊಬ್ಬ ಪರದೇಶಿಯಾಗಿದ್ದರೂ ನೀನು ನನ್ನನ್ನು ಗಮನಿಸಿ ಕೃಪೆ ತೋರಿದೆ” ಎಂದಳು.


ಗರ್ವಿಯು ಬೇಗನೆ ಹಾಳಾಗುವನು; ದೀನನಾದರೋ ಸನ್ಮಾನವನ್ನು ಹೊಂದುವನು.


ಯೆಹೋವನಲ್ಲಿ ಭಯಭಕ್ತಿಯುಳ್ಳವನು ಜ್ಞಾನಿಯಾಗುತ್ತಿದ್ದಾನೆ. ಸನ್ಮಾನ ಹೊಂದಬೇಕೆನ್ನುವವನು ಮೊದಲು ದೀನನಾಗಿರಬೇಕು.


ನಿಮ್ಮ ಕಾಲುಗಳನ್ನು ತೊಳೆದುಕೊಳ್ಳಲು ನೀರನ್ನು ತಂದುಕೊಡುವೆನು. ನೀವು ಮರದ ಕೆಳಗೆ ವಿಶ್ರಾಂತಿ ತೆಗೆದುಕೊಳ್ಳಿರಿ.


ಆಗ ರೂತಳು, “ನನ್ನ ಸ್ವಾಮೀ, ನೀವು ನನಗೆ ತುಂಬ ದಯೆ ತೋರಿದಿರಿ. ನಾನು ಕೇವಲ ಒಬ್ಬ ದಾಸಿ. ನಾನು ನಿಮ್ಮ ಒಬ್ಬ ದಾಸಿಯ ಸಮಾನಳಲ್ಲದಿದ್ದರೂ ನೀವು ಒಳ್ಳೆಯ ಮಾತುಗಳಿಂದ ನನಗೆ ಕನಿಕರ ತೋರಿದಿರಿ” ಎಂದು ತನ್ನ ಕೃತಜ್ಞತೆಯನ್ನು ಸೂಚಿಸಿದಳು.


ಯೋಹಾನನು ಜನರಿಗೆ, “ನನ್ನ ತರುವಾಯ ಬರುವಾತನು ನನಗಿಂತಲೂ ಶಕ್ತನಾಗಿದ್ದಾನೆ. ನಾನು ಮೊಣಕಾಲೂರಿ, ಆತನ ಪಾದರಕ್ಷೆಗಳನ್ನು ಬಿಚ್ಚುವುದಕ್ಕೂ ಯೋಗ್ಯನಲ್ಲ.


ಅಬೀಗೈಲಳು ದಾವೀದನನ್ನು ಕಂಡ ಕೂಡಲೆ ಕತ್ತೆಯಿಂದ ಬೇಗನೆ ಇಳಿದು ದಾವೀದನಿಗೆ ಸಾಷ್ಟಾಂಗನಮಸ್ಕಾರ ಮಾಡಿದಳು.


ದಾವೀದನ ಸೈನಿಕರು ಕರ್ಮೆಲಿಗೆ ಹೋಗಿ ಅಬೀಗೈಲಳಿಗೆ, “ದಾವೀದನು ನಿನ್ನನ್ನು ಕರೆತರಲು ಹೇಳಿದ್ದಾನೆ. ನಿನ್ನನ್ನು ತನ್ನ ಹೆಂಡತಿಯನ್ನಾಗಿ ಸ್ವೀಕರಿಸಿಕೊಳ್ಳಬೇಕೆಂಬುದು ದಾವೀದನ ಅಪೇಕ್ಷೆ” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು