Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 26:11 - ಪರಿಶುದ್ದ ಬೈಬಲ್‌

11 ಆದರೆ ಯೆಹೋವನಿಂದ ಅಭಿಷೇಕಿಸಲ್ಪಟ್ಟ ರಾಜನನ್ನು ನಾನು ಕೊಲ್ಲುವಂತಹ ಪರಿಸ್ಥಿತಿಯನ್ನು ಎಂದಿಗೂ ನನಗೆ ಕೊಡದಂತೆ ಯೆಹೋವನಲ್ಲಿ ಪ್ರಾರ್ಥಿಸುತ್ತೇನೆ! ಈಗ ಸೌಲನ ತಲೆಯ ಹತ್ತಿರವಿರುವ ಭರ್ಜಿಯನ್ನೂ ನೀರಿನ ತಂಬಿಗೆಯನ್ನೂ ತೆಗೆದುಕೊಂಡ ನಂತರ ನಾವು ಹೋಗೋಣ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ತನ್ನ ಅಭಿಷಿಕ್ತನಿಗೆ ಕೈಯೆತ್ತದಂತೆ ಯೆಹೋವನು ನನ್ನನ್ನು ತಡೆಯಲಿ. ಈಗ ಅವನ ತಲೆಯ ಬಳಿಯಲ್ಲಿರುವ ಬರ್ಜಿಯನ್ನು, ನೀರಿನ ತಂಬಿಗೆಯನ್ನೂ ತೆಗೆದುಕೊಂಡು ಹೋಗೋಣ” ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ತಮ್ಮ ಅಭಿಷಿಕ್ತನಿಗೆ ವಿರೋಧವಾಗಿ ಕೈಯೆತ್ತದಂತೆ ಸರ್ವೇಶ್ವರನೇ ನನ್ನನ್ನು ತಡೆಯಲಿ. ಈಗ ಬಾ, ಅವನ ತಲೆಯ ಬಳಿಯಲ್ಲಿರುವ ಭರ್ಜಿಯನ್ನೂ ತಂಬಿಗೆಯನ್ನೂ ತೆಗೆದುಕೊಂಡು ಹೋಗೋಣ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ತನ್ನ ಅಭಿಷಿಕ್ತನಿಗೆ ವಿರೋಧವಾಗಿ ಕೈಯೆತ್ತದಂತೆ ಯೆಹೋವನೇ ನನ್ನನ್ನು ತಡೆಯಲಿ. ಈಗ ಅವನ ತಲೆಯ ಬಳಿಯಲ್ಲಿರುವ ಬರ್ಜಿಯನ್ನೂ ತಂಬಿಗೆಯನ್ನೂ ತೆಗೆದುಕೊಂಡು ಹೋಗೋಣ ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನಾನು ನನ್ನ ಕೈಯನ್ನು ಯೆಹೋವ ದೇವರ ಅಭಿಷಿಕ್ತನ ಮೇಲೆ ಹಾಕದ ಹಾಗೆ ಯೆಹೋವ ದೇವರು ನನಗೆ ತಡೆಯಲಿ. ಈಗ ಅವನ ತಲೆದಿಂಬಿನ ಬಳಿಯಲ್ಲಿರುವ ಈಟಿಯನ್ನೂ, ನೀರಿನ ತಂಬಿಗೆಯನ್ನೂ ತೆಗೆದುಕೋ ನಾವು ಹೋಗೋಣ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 26:11
11 ತಿಳಿವುಗಳ ಹೋಲಿಕೆ  

ದಾವೀದನು ತನ್ನ ಜನರಿಗೆ, “ಸೌಲನು ಯೆಹೋವನಿಂದ ಅಭಿಷೇಕಿಸಲ್ಪಟ್ಟವನೂ ನನ್ನ ರಾಜನೂ ಆಗಿರುವುದರಿಂದ ನಾನು ಅವನ ವಿರುದ್ಧವಾಗಿ ಏನೂ ಮಾಡಬಾರದು!” ಎಂದು ಹೇಳಿದನು.


ಯೆಹೋವನೇ ನಮಗೆ ನ್ಯಾಯಾಧೀಶನಾಗಿರಲಿ! ನೀನು ಮಾಡಿರುವ ತಪ್ಪಿಗಾಗಿ ಯೆಹೋವನು ನಿನ್ನನ್ನು ದಂಡಿಸಲಿ. ಆದರೆ ನಾನು ನಿನ್ನೊಡನೆ ಹೋರಾಡುವುದಿಲ್ಲ.


ದಾವೀದನು ಆ ಯುವಕನಿಗೆ, “ಯೆಹೋವನಿಂದ ಆರಿಸಲ್ಪಟ್ಟ ರಾಜನನ್ನು ಕೊಲ್ಲಲು ನೀನು ಹೆದರಲಿಲ್ಲವೇಕೆ?” ಎಂದು ಕೇಳಿದನು.


ಯಾವನಾದರು ನಿಮಗೆ ಕೇಡುಮಾಡಿದರೆ, ಅದಕ್ಕೆ ಪ್ರತಿಯಾಗಿ ಅವನಿಗೆ ಕೇಡುಮಾಡಬೇಡಿ. ಎಲ್ಲಾ ಜನರು ಒಳ್ಳೆಯದೆಂದು ಯೋಚಿಸುವ ಕಾರ್ಯಗಳನ್ನು ಮಾಡಲು ಪ್ರಯತ್ನಿಸಿರಿ.


ನನ್ನ ಸ್ನೇಹಿತರೇ, ನಿಮಗೆ ಕೇಡುಮಾಡುವ ಜನರನ್ನು ದಂಡಿಸಲು ಪ್ರಯತ್ನಿಸಬೇಡಿ. ದೇವರು ತನ್ನ ಕೋಪದಿಂದ ಅವರನ್ನು ದಂಡಿಸುವವರೆಗೆ ಕಾದುಕೊಂಡಿರಿ. “ನಾನೇ ದಂಡಿಸುವವನು; ನಾನೇ ಜನರಿಗೆ ಮುಯ್ಯಿತೀರಿಸುವವನು ಎಂದು ಪ್ರಭುವು ಹೇಳುತ್ತಾನೆ” ಎಂಬುದಾಗಿ ಬರೆಯಲ್ಪಟ್ಟಿದೆ.


ಅಪಕಾರ ಮಾಡಿದವನಿಗೆ ಅಪಕಾರ ಮಾಡದೆ, ನಿಂದಿಸಿದವನನ್ನು ನಿಂದಿಸದೆ, ಅವನನ್ನು ಆಶೀರ್ವದಿಸುವಂತೆ ದೇವರಲ್ಲಿ ಬೇಡಿಕೊಳ್ಳಿರಿ. ಏಕೆಂದರೆ ಆಶೀರ್ವಾದವನ್ನು ಹೊಂದಿಕೊಳ್ಳಲು ನೀವು ಕರೆಯಲ್ಪಟ್ಟವರಾಗಿದ್ದೀರಿ.


ಜನರು ದಾವೀದನಿಗೆ, “ಯೆಹೋವನು ಈ ದಿನವನ್ನೇ ಕುರಿತು ನಿನ್ನೊಂದಿಗೆ ಮಾತನಾಡಿದನು. ಯೆಹೋವನು ನಿನಗೆ, ‘ನಾನು ನಿನ್ನ ಶತ್ರುವನ್ನು ನಿನಗೆ ಒಪ್ಪಿಸುತ್ತೇನೆ. ನಿನ್ನ ಇಷ್ಟದಂತೆ ಶತ್ರುವಿಗೆ ಏನು ಬೇಕಾದರೂ ಮಾಡು’ ಎಂದು ಹೇಳಿದನು” ಎಂದರು. ನಂತರ ದಾವೀದನು ಸೌಲನ ಹತ್ತಿರಕ್ಕೆ ತೆವಳುತ್ತಾ ಹೋಗಿ ಸೌಲನ ಅಂಗಿಯ ಒಂದು ಮೂಲೆಯನ್ನು ಕತ್ತರಿಸಿದನು. ದಾವೀದನನ್ನು ಸೌಲನು ನೋಡಲಿಲ್ಲ.


ನಾನು ಇಲ್ಲಿದ್ದೇನೆ. ನಾನು ಯಾವ ತಪ್ಪುಗಳನ್ನಾದರೂ ಮಾಡಿದ್ದರೆ, ನೀವು ಯೆಹೋವನಿಗೆ ಮತ್ತು ಆತನು ಆರಿಸಿರುವ ರಾಜನಿಗೆ ಅವುಗಳನ್ನು ಹೇಳಲೇಬೇಕು. ನಾನು ಬೇರೊಬ್ಬರ ಹಸುವನ್ನಾಗಲಿ ಕತ್ತೆಯನ್ನಾಗಲಿ ಕದ್ದಿರುವೆನೇ? ನಾನು ಯಾರನ್ನಾದರೂ ನೋಯಿಸಿರುವೆನೇ? ವಂಚಿಸಿರುವೆನೇ? ನಾನು ತಪ್ಪುಮಾಡಲು ಯಾರಿಂದಲಾದರೂ ಹಣವನ್ನಾಗಲೀ ಪಾದರಕ್ಷೆಗಳನ್ನಾಗಲೀ ತೆಗೆದುಕೊಂಡಿರುವೆನೇ? ನಾನು ಈ ಕಾರ್ಯಗಳನ್ನು ಮಾಡಿರುವುದಾದರೆ ತಿಳಿಸಿ, ಅವುಗಳನ್ನು ಸರಿಪಡಿಸುತ್ತೇನೆ” ಎಂದು ಹೇಳಿದನು.


ದಾವೀದನು, “ಚೆರೂಯಳ ಮಕ್ಕಳೇ, ನಾನು ನಿಮಗೆ ಏನು ಮಾಡಲಿ? ನೀವಿಂದು ನನಗೆ ವಿರುದ್ಧರಾಗಿರುವಿರಿ. ವಿಶೇಷವಾದ ಈ ದಿನದಲ್ಲಿ ಒಬ್ಬ ಇಸ್ರೇಲನನ್ನು ಸಾವಿಗೆ ಗುರಿಮಾಡುವುದು ಸರಿಯಾಗಿರುವುದೇ? ಇಸ್ರೇಲಿನಲ್ಲಿ ಈ ದಿನ ನಾನು ಇಸ್ರೇಲಿಗೆಲ್ಲ ರಾಜನೆಂಬುದು ನನಗೆ ತಿಳಿದಿದೆ” ಎಂದನು.


ನಿನ್ನ ಆಜ್ಞೆಗಳಿಗೆ ವಿಧೇಯನಾಗಲು ನನ್ನಿಂದಾದಷ್ಟು ಪ್ರಯತ್ನಿಸಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು