Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 26:23 - ಪರಿಶುದ್ದ ಬೈಬಲ್‌

23 ಪ್ರತಿಯೊಬ್ಬನಿಗೂ ಅವನ ಕಾರ್ಯಗಳಿಗೆ ಮತ್ತು ನಂಬಿಗಸ್ತಿಕೆಗೆ ತಕ್ಕಂತೆ ಯೆಹೋವನು ಪ್ರತಿಫಲ ಕೊಡುವನು. ಇಂದು ಯೆಹೋವನು ನಿನ್ನನ್ನು ನನ್ನ ಕೈಗೆ ಒಪ್ಪಿಸಿಕೊಟ್ಟಿದ್ದರೂ ಯೆಹೋವನಿಂದ ಅಭಿಷೇಕಿಸಲ್ಪಟ್ಟ ರಾಜನಾಗಿರುವ ನಿನಗೆ ನಾನು ಕೇಡನ್ನು ಮಾಡುವುದಿಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಯೆಹೋವನು ಪ್ರತಿಯೊಬ್ಬನಿಗೂ ಅವನವನ ನೀತಿಸತ್ಯತೆಗಳಿಗೆ ಅನುಸಾರವಾಗಿ ಪ್ರತಿಫಲವನ್ನು ಕೊಡುವನು. ಆತನು ಈ ಹೊತ್ತು ನಿನ್ನನ್ನು ನನ್ನ ಕೈಗೆ ಒಪ್ಪಿಸಿಕೊಟ್ಟಿದ್ದರೂ, ನೀನು ಯೆಹೋವನ ಅಭಿಷಿಕ್ತನೆಂದು ನಾನು ನಿನ್ನ ಮೇಲೆ ಕೈಹಾಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಸರ್ವೇಶ್ವರ ಪ್ರತಿಯೊಬ್ಬನಿಗೂ ಅವನವನ ನೀತಿಸತ್ಯತೆಗಳಿಗೆ ಅನುಸಾರ ಫಲವನ್ನು ಕೊಡುವರು. ಅವರು ಈ ದಿನ ನಿಮ್ಮನ್ನು ನನ್ನ ಕೈಗೆ ಒಪ್ಪಿಸಿಕೊಟ್ಟಿದ್ದರೂ ನೀವು ಸರ್ವೇಶ್ವರನ ಅಭಿಷಿಕ್ತರೆಂದು ನಾನು ನಿಮ್ಮ ಮೇಲೆ ಕೈಹಾಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಯೆಹೋವನು ಪ್ರತಿಯೊಬ್ಬನಿಗೂ ಅವನವನ ನೀತಿಸತ್ಯತೆಗಳಿಗನುಸಾರವಾದ ಫಲವನ್ನು ಕೊಡುವನು. ಆತನು ಈಹೊತ್ತು ನಿನ್ನನ್ನು ನನ್ನ ಕೈಗೆ ಒಪ್ಪಿಸಿ ಕೊಟ್ಟಿದ್ದರೂ ನೀನು ಯೆಹೋವನ ಅಭಿಷಿಕ್ತನೆಂದು ನಾನು ನಿನ್ನ ಮೇಲೆ ಕೈಹಾಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆದರೆ ಯೆಹೋವ ದೇವರು ಪ್ರತಿಯೊಬ್ಬನಿಗೆ ಅವನ ನೀತಿಗೂ, ಅವನ ನಂಬಿಗಸ್ತಿಕೆಗೂ ತಕ್ಕ ಫಲವನ್ನು ಕೊಡಲಿ. ಯೆಹೋವ ದೇವರು ಈ ಹೊತ್ತು ನಿನ್ನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಟ್ಟರು. ಆದರೆ ನಾನು ಯೆಹೋವ ದೇವರ ಅಭಿಷಿಕ್ತನ ಮೇಲೆ ನನ್ನ ಕೈ ಚಾಚಲು ಮನಸ್ಸಿಲ್ಲದೆ ಇದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 26:23
16 ತಿಳಿವುಗಳ ಹೋಲಿಕೆ  

ನನ್ನ ಒಡೆಯನೇ, ನೀನು ಪ್ರೀತಿಸ್ವರೂಪನಾಗಿರುವೆ. ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಕೊಡುವವನು ನೀನೇ.


ದೇವರೇ, ನಾನು ಮಾಡಿದ ಈ ಕಾರ್ಯಗಳು ನಿನ್ನ ನೆನಪಿನಲ್ಲಿರಲಿ. ನಿನ್ನ ಆಲಯಕ್ಕೂ ಅದರ ಸೇವೆಗಳಿಗಾಗಿಯೂ ನಾನು ನಂಬಿಗಸ್ತಿಕೆಯಿಂದ ಮಾಡಿರುವ ಸೇವೆಯನ್ನೂ ಮರೆಯದಿರು.


ಪರಲೋಕದಲ್ಲಿರುವ ನೀನು ಅದನ್ನು ಕೇಳಿ, ಆ ವ್ಯಕ್ತಿಗೆ ತೀರ್ಪುನೀಡು. ಆ ವ್ಯಕ್ತಿಯು ತಪ್ಪಿತಸ್ಥನಾಗಿದ್ದರೆ, ಅವನು ತಪ್ಪಿತಸ್ಥನೆಂಬುದನ್ನು ನಮಗೆ ತೋರಿಸು. ಅವನು ನಿರಪರಾಧಿಯಾಗಿದ್ದರೆ ಅವನು ತಪ್ಪಿತಸ್ಥನಲ್ಲವೆಂಬುದನ್ನೂ ದಯವಿಟ್ಟು ನಮಗೆ ತೋರಿಸು.


ಆದರೆ ಯೆಹೋವನಿಂದ ಅಭಿಷೇಕಿಸಲ್ಪಟ್ಟ ರಾಜನನ್ನು ನಾನು ಕೊಲ್ಲುವಂತಹ ಪರಿಸ್ಥಿತಿಯನ್ನು ಎಂದಿಗೂ ನನಗೆ ಕೊಡದಂತೆ ಯೆಹೋವನಲ್ಲಿ ಪ್ರಾರ್ಥಿಸುತ್ತೇನೆ! ಈಗ ಸೌಲನ ತಲೆಯ ಹತ್ತಿರವಿರುವ ಭರ್ಜಿಯನ್ನೂ ನೀರಿನ ತಂಬಿಗೆಯನ್ನೂ ತೆಗೆದುಕೊಂಡ ನಂತರ ನಾವು ಹೋಗೋಣ” ಎಂದು ಹೇಳಿದನು.


ಆದರೆ ದಾವೀದನು ಅಬೀಷೈಗೆ, “ಸೌಲನನ್ನು ಕೊಲ್ಲಬೇಡ! ಯೆಹೋವನಿಂದ ಅಭಿಷೇಕಿಸಲ್ಪಟ್ಟ ರಾಜನಿಗೆ ಯಾರೇ ಕೇಡುಮಾಡಿದರೂ ಅವರನ್ನು ದಂಡಿಸಲೇಬೇಕು!


ಯೆಹೋವನೇ ನಮಗೆ ನ್ಯಾಯಾಧೀಶನಾಗಿರಲಿ! ನೀನು ಮಾಡಿರುವ ತಪ್ಪಿಗಾಗಿ ಯೆಹೋವನು ನಿನ್ನನ್ನು ದಂಡಿಸಲಿ. ಆದರೆ ನಾನು ನಿನ್ನೊಡನೆ ಹೋರಾಡುವುದಿಲ್ಲ.


ನೀನು ನನಗೆ ಮಾಡಿದ ಒಳ್ಳೆಯ ಕಾರ್ಯಗಳ ಬಗ್ಗೆ ನನಗೆ ತಿಳಿಸಿರುವೆ. ಯೆಹೋವನು ನನ್ನನ್ನು ನಿನ್ನ ಬಳಿಗೆ ಕರೆದು ತಂದನು, ಆದರೆ ನೀನು ನನ್ನನ್ನು ಕೊಲ್ಲಲಿಲ್ಲ.


ಒಬ್ಬ ಮನುಷ್ಯನು ತನ್ನ ಶತ್ರುವನ್ನು ಹಿಡಿದುಕೊಂಡರೆ, ಅವನಿಗೆ ಕೇಡನ್ನು ಮಾಡದೆ ಕಳುಹಿಸಿಬಿಡುವನೇ? ಅವನು ಶತ್ರುವಿಗೆ ಒಳ್ಳೆಯದನ್ನು ಮಾಡುವುದಿಲ್ಲ. ನೀನು ನನಗೆ ಈ ದಿನ ಒಳ್ಳೆಯದನ್ನು ಮಾಡಿರುವುದರಿಂದ ಯೆಹೋವನು ನಿನಗೆ ಒಳ್ಳೆಯದನ್ನು ಮಾಡಲಿ.


ದಾವೀದನು, “ರಾಜನ ಭರ್ಜಿಯು ಇಲ್ಲಿದೆ. ನಿನ್ನಲ್ಲಿರುವ ಒಬ್ಬ ಯುವಕನು ಇಲ್ಲಿಗೆ ಬಂದು ಅದನ್ನು ತೆಗೆದುಕೊಂಡು ಹೋಗಲಿ.


ನಾನು ನೀತಿಗನುಸಾರವಾಗಿ ನಡೆದುಕೊಂಡಿದ್ದರಿಂದ ಯೆಹೋವನು ನನಗೆ ಪ್ರತಿಫಲವನ್ನು ಕೊಟ್ಟನು. ನಾನು ನಿರ್ದೋಷಿಯಾಗಿದ್ದರಿಂದ ಆತನು ನನಗೆ ಒಳ್ಳೆಯದನ್ನೇ ಮಾಡಿದನು.


ನನ್ನ ತಂದೆಯೇ, ನನ್ನ ಕೈಯಲ್ಲಿರುವ ಚೂರು ಬಟ್ಟೆಯನ್ನು ನೋಡು. ನಾನು ನಿನ್ನ ಅಂಗಿಯ ಮೂಲೆಯನ್ನು ಕತ್ತರಿಸಿಹಾಕಿದೆ. ನಾನು ನಿನ್ನನ್ನು ಕೊಲ್ಲಬಹುದಿತ್ತು, ಆದರೆ ಕೊಲ್ಲಲಿಲ್ಲ! ನೀನು ಇದನ್ನು ಅರ್ಥಮಾಡಿಕೊಳ್ಳಬೇಕೆಂದು ನಾನು ಬಯಸಿದ್ದೇನೆ. ನಾನು ನಿನ್ನ ವಿರುದ್ಧವಾಗಿ ಯಾವ ಸಂಚನ್ನೂ ಮಾಡುತ್ತಿಲ್ಲವೆಂದು ನೀನು ತಿಳಿದುಕೊಳ್ಳಬೇಕಾಗಿದೆ! ನಾನು ನಿನಗೆ ಯಾವ ತಪ್ಪನ್ನೂ ಮಾಡಿಲ್ಲ! ಆದರೆ ನೀನು ನನ್ನನ್ನು ಹುಡುಕುತ್ತಿರುವೆ; ನನ್ನನ್ನು ಕೊಲ್ಲಲು ಪ್ರಯತ್ನಿಸುತ್ತಿರುವೆ.


ನಾನು ಒಳ್ಳೆಯದನ್ನೇ ಮಾಡಿದೆನು. ಯೆಹೋವನ ದೃಷ್ಟಿಯಲ್ಲಿ ನಾನು ತಪ್ಪೇನೂ ಮಾಡಲಿಲ್ಲ, ಆದ್ದರಿಂದ ಆತನು ನನಗೆ ಪ್ರತಿಫಲ ಕೊಡುವನು!


ಆತನು ಮನುಷ್ಯನಿಗೆ ಅವನ ಕೃತ್ಯಗಳಿಗೆ ತಕ್ಕಂತೆ ಪ್ರತಿಫಲ ಕೊಡುವನು. ಪ್ರತಿಯೊಬ್ಬನು ತನ್ನ ನಡತೆಗೆ ತಕ್ಕಂತೆ ದೇವರಿಂದ ಹೊಂದಿಕೊಳ್ಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು