Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 27:1 - ಪರಿಶುದ್ದ ಬೈಬಲ್‌

1 ಆದರೆ ದಾವೀದನು, “ಸೌಲನು ಎಂದಾದರೂ ಒಂದು ದಿನ ನನ್ನನ್ನು ಹಿಡಿದುಕೊಳ್ಳುವನು. ಈಗ ಫಿಲಿಷ್ಟಿಯರ ರಾಜ್ಯಕ್ಕೆ ತಪ್ಪಿಸಿಕೊಂಡು ಹೋಗುವುದೇ ನಾನು ಮಾಡಬಹುದಾದ ಒಳ್ಳೆಯ ಕೆಲಸ. ಆಗ ಸೌಲನು ಇಸ್ರೇಲಿನಲ್ಲಿ ನನ್ನನ್ನು ಹುಡುಕುವುದನ್ನು ಬಿಟ್ಟುಬಿಡುತ್ತಾನೆ. ಸೌಲನಿಂದ ತಪ್ಪಿಸಿಕೊಳ್ಳಲು ಇದೇ ಸರಿಯಾದ ಮಾರ್ಗ” ಎಂದು ತನ್ನಲ್ಲೇ ಯೋಚಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದಾವೀದನು ತನ್ನ ಮನಸ್ಸಿನಲ್ಲಿ, “ನಾನು ಇಲ್ಲೇ ಇದ್ದರೆ ಹೇಗೂ ಒಂದು ದಿನ ಸೌಲನ ಕೈಯಿಂದ ಸಾಯಲೇಬೇಕು ಆದ್ದರಿಂದ ಫಿಲಿಷ್ಟಿಯರ ದೇಶಕ್ಕೆ ಹೋಗಿ ತಪ್ಪಿಸಿಕೊಳ್ಳುವುದೇ ಉತ್ತಮ. ಆ ಮೇಲೆ ಸೌಲನು ಇಸ್ರಾಯೇಲ್ಯರ ಪ್ರಾಂತ್ಯಗಳಲ್ಲಿ ನನ್ನನ್ನು ಹುಡುಕದೆ ಬಿಟ್ಟುಬಿಡುವನು. ನಾನು ಅವನ ಕೈಗೆ ತಪ್ಪಿಸಿಕೊಂಡವನಾಗಿರುವೆನು” ಅಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ದಾವೀದನು ತನ್ನ ಮನಸ್ಸಿನಲ್ಲೇ, “ನಾನು ಇಲ್ಲಿದ್ದರೆ ಹೇಗೂ ಒಂದು ದಿನ ಸೌಲನ ಕೈಯಿಂದ ಮಡಿಯಲೇ ಬೇಕು. ಆದುದರಿಂದ ಫಿಲಿಷ್ಟಿಯರ ದೇಶಕ್ಕೆ ಹೋಗಿ ತಪ್ಪಿಸಿಕೊಳ್ಳುವುದೇ ಉತ್ತಮ. ಆಮೇಲೆ ಸೌಲನು ಇಸ್ರಯೇಲ್ ಪ್ರಾಂತ್ಯಗಳಲ್ಲಿ ನನ್ನನ್ನು ಹುಡುಕುವುದನ್ನು ಬಿಟ್ಟುಬಿಡುವನು. ನಾನು ಅವನ ಕೈಯಿಂದ ತಪ್ಪಿಸಿಕೊಂಡು ಸುರಕ್ಷಿತನಾಗಿರುವೆನು,” ಎಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ದಾವೀದನು ತನ್ನ ಮನಸ್ಸಿನಲ್ಲಿ - ನಾನು ಇಲ್ಲಿದ್ದರೆ ಹೇಗೂ ಒಂದು ದಿನ ಸೌಲನ ಕೈಯಿಂದ ಮಡಿಯಲೇಬೇಕು. ಆದದರಿಂದ ಫಿಲಿಷ್ಟಿಯರ ದೇಶಕ್ಕೆ ಹೋಗಿ ತಪ್ಪಿಸಿಕೊಳ್ಳುವದೇ ಉತ್ತಮ. ಆಮೇಲೆ ಸೌಲನು ಇಸ್ರಾಯೇಲ್‍ಪ್ರಾಂತಗಳಲ್ಲಿ ನನ್ನನ್ನು ಹುಡುಕದೆ ಬಿಟ್ಟುಬಿಡುವನು, ನಾನು ಅವನ ಕೈಗೆ ತಪ್ಪಿಸಿಕೊಂಡವನಾಗಿರುವೆನು ಅಂದುಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆದರೆ ದಾವೀದನು ತನ್ನ ಹೃದಯದಲ್ಲಿ, “ನಾನು ಎಂದಿಗಾದರೂ ಒಂದು ದಿನ ಸೌಲನ ಕೈಯಿಂದ ಸಾಯುತ್ತೇನೆ. ನಾನು ತ್ವರೆಯಾಗಿ ಫಿಲಿಷ್ಟಿಯರ ದೇಶಕ್ಕೆ ತಪ್ಪಿಸಿಕೊಂಡು ಓಡಿ ಹೋಗುವುದಕ್ಕಿಂತ ನನಗೆ ಉತ್ತಮವಾದ ಕಾರ್ಯವಿಲ್ಲ. ಸೌಲನು ನನ್ನನ್ನು ಇಸ್ರಾಯೇಲಿನಲ್ಲಿ ಇನ್ನು ಹುಡುಕಲು ದಿಕ್ಕು ಕಾಣದೆ ಹೋಗುವನು. ಈ ಪ್ರಕಾರ ನಾನು ಅವನ ಕೈಯಿಂದ ತಪ್ಪಿಸಿಕೊಂಡು ಹೋಗುವೆನು,” ಎಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 27:1
29 ತಿಳಿವುಗಳ ಹೋಲಿಕೆ  

ಯೆಹೋವನು ಹೇಳುವುದೇನೆಂದರೆ, “ನಿನ್ನನ್ನು ಸಂತೈಸುವಾತನು ನಾನೇ. ಆದ್ದರಿಂದ ನೀನು ಜನರಿಗೆ ಯಾಕೆ ಹೆದರಬೇಕು. ಅವರು ಹುಟ್ಟಿ ಸಾಯುವ ನರರಾಗಿದ್ದಾರೆ. ಅವರು ಹುಲ್ಲಿನಂತೆ ಸಾಯುವ ಕೇವಲ ಮಾನವರಾಗಿದ್ದಾರೆ.”


“ಹೆದರಬೇಡ, ನನ್ನ ತಂದೆಯಾದ ಸೌಲನು ನಿನಗೆ ತೊಂದರೆ ಮಾಡುವುದಿಲ್ಲ. ನೀನು ಇಸ್ರೇಲಿನ ರಾಜನಾಗುವೆ! ನಾನು ನಿನಗೆ ಎರಡನೆಯವನಾಗುತ್ತೇನೆ. ಇದು ನನ್ನ ತಂದೆಗೂ ಸಹ ತಿಳಿದಿದೆ” ಎಂದು ಹೇಳಿದನು.


ನಿರೀಕ್ಷೆಯು ನೆರವೇರದಿದ್ದರೆ ಹೃದಯವು ವ್ಯಸನವಾಗಿರುವುದು. ಬಯಸಿದ್ದು ನೆರವೇರಿದರೆ ಆನಂದವು ತುಂಬಿಕೊಳ್ಳುವುದು.


ನಾನು ಭಯಗೊಂಡು, “ಎಲ್ಲಾ ಮನುಷ್ಯರು ಸುಳ್ಳುಗಾರರಾಗಿದ್ದಾರೆ!” ಎಂದು ಹೇಳಿದಾಗಲೂ ನಂಬಿಕೊಂಡೇ ಇದ್ದೆನು.


ಫಿಲಿಷ್ಟಿಯರ ಅಧಿಪತಿಗಳು ನೂರು ಜನರ ಗುಂಪುಗಳಾಗಿಯೂ ಒಂದು ಸಾವಿರ ಜನರ ಗುಂಪುಗಳಾಗಿಯೂ ಬರುತ್ತಿದ್ದರು. ದಾವೀದನು ಮತ್ತು ಅವನ ಜನರು ಆಕೀಷನ ಹಿಂದೆ ಬರುತ್ತಿದ್ದರು.


ನಿನಗಾಗಿ ಅನೇಕ ಒಳ್ಳೆಯ ಕಾರ್ಯಗಳನ್ನು ಮಾಡುವುದಾಗಿ ಯೆಹೋವನು ವಾಗ್ದಾನ ಮಾಡಿದ್ದಾನೆ. ಯೆಹೋವನು ತನ್ನ ಎಲ್ಲ ವಾಗ್ದಾನಗಳನ್ನೂ ನೆರವೇರಿಸುತ್ತಾನೆ! ದೇವರು ನಿನ್ನನ್ನು ಇಸ್ರೇಲರ ನಾಯಕನನ್ನಾಗಿ ಮಾಡಿದಾಗ


ಆದರೆ ಗಾದ್ ಪ್ರವಾದಿಯು ದಾವೀದನಿಗೆ, “ನೀನು ಕೋಟೆಯಲ್ಲಿರಬೇಡ. ಯೆಹೂದ್ಯರ ದೇಶಕ್ಕೆ ಹೋಗು” ಎಂದು ಹೇಳಿದನು. ಆದ್ದರಿಂದ ದಾವೀದನು ಹೆರೆತ್ ಅರಣ್ಯಕ್ಕೆ ಹೊರಟುಹೋದನು.


ಸಮುವೇಲನು ಎಣ್ಣೆಯಿದ್ದ ಕೊಂಬನ್ನು ತೆಗೆದುಕೊಂಡು, ಅದರಲ್ಲಿದ್ದ ವಿಶೇಷವಾದ ಎಣ್ಣೆಯನ್ನು ಇಷಯನ ಕಿರಿಮಗನ ಮೇಲೆ, ಅವನ ಸೋದರರ ಎದುರಿನಲ್ಲೇ ಸುರಿದನು. ಆ ದಿನದಿಂದ ಯೆಹೋವನ ಆತ್ಮವು ಮಹಾಶಕ್ತಿಯೊಡನೆ ದಾವೀದನಲ್ಲಿ ನೆಲೆಸಿತು. ಅನಂತರ ಸಮುವೇಲನು ರಾಮಕ್ಕೆ ಹಿಂದಿರುಗಿದನು.


ಯೆಹೋವನು ಸಮುವೇಲನಿಗೆ, “ನೀನು ಸೌಲನಿಗಾಗಿ ಎಷ್ಟುಕಾಲ ಶೋಕಿಸುವೆ? ನಾನು ಸೌಲನನ್ನು ಇಸ್ರೇಲರ ರಾಜತ್ವದಿಂದ ತಿರಸ್ಕರಿಸಿರುತ್ತೇನೆ. ನೀನು ಕೊಂಬಿನಲ್ಲಿ ಎಣ್ಣೆಯನ್ನು ತುಂಬಿಕೊಂಡು ಬಾ. ನಾನು ನಿನ್ನನ್ನು ಇಷಯನೆಂಬ ಮನುಷ್ಯನ ಬಳಿಗೆ ಕಳುಹಿಸುತ್ತೇನೆ. ಇಷಯನು ಬೆತ್ಲೆಹೇಮಿನಲ್ಲಿ ವಾಸಿಸುತ್ತಿದ್ದನು. ನಾನು ಅವನ ಮಕ್ಕಳಲ್ಲಿ ಒಬ್ಬನನ್ನು ಹೊಸ ರಾಜನನ್ನಾಗಿ ಆರಿಸಿದ್ದೇನೆ” ಎಂದು ಹೇಳಿದನು.


ನಾವು ನಿನಗೆ ಈಜಿಪ್ಟಿನಲ್ಲೇ, ‘ದಯಮಾಡಿ ನಮ್ಮ ಗೊಡವೆಗೆ ಬರಬೇಡ. ನಾವು ಇಲ್ಲಿದ್ದುಕೊಂಡು ಈಜಿಪ್ಟಿನವರ ಸೇವೆಮಾಡಲು ಬಿಡು’ ಎಂದು ಹೇಳಿದ್ದೆವು. ನಾವು ಇಲ್ಲಿಗೆ ಬಂದು ಅರಣ್ಯದಲ್ಲಿ ಸಾಯುವುದಕ್ಕಿಂತ, ಅಲ್ಲೇ ಗುಲಾಮರಾಗಿ ಇದ್ದಿದ್ದರೆ ಒಳ್ಳೆಯದಾಗಿರುತ್ತಿತ್ತು” ಎಂದು ಹೇಳಿದರು.


ನಾವು ಮಕೆದೋನಿಯಕ್ಕೆ ಬಂದಾಗ ನಮಗೆ ವಿಶ್ರಾಂತಿಯೇ ಇರಲಿಲ್ಲ. ನಮ್ಮ ಸುತ್ತಮುತ್ತಲೆಲ್ಲಾ ಇಕ್ಕಟ್ಟುಗಳಿದ್ದವು. ಹೊರಗೆ ಕಲಹವಿತ್ತು, ಒಳಗೆ ಭಯವಿತ್ತು.


ಯೇಸು ತನ್ನ ಶಿಷ್ಯರಿಗೆ, “ನೀವೇಕೆ ಹೆದರುತ್ತೀರಿ? ನಿಮ್ಮಲ್ಲಿ ಇನ್ನೂ ನಂಬಿಕೆಯಿಲ್ಲವೇ?” ಎಂದು ಕೇಳಿದನು.


ಯೇಸು ತನ್ನ ಕೈ ಚಾಚಿ ಪೇತ್ರನನ್ನು ಹಿಡಿದುಕೊಂಡನು. ಯೇಸು, “ಅಲ್ಪವಿಶ್ವಾಸಿಯೇ, ಏಕೆ ಸಂದೇಹಪಟ್ಟೆ?” ಎಂದನು.


ಯುದ್ಧದಲ್ಲಿ ನಾವು ಸತ್ತುಹೋಗುವಂತೆ ಯೆಹೋವನು ನಮ್ಮನ್ನು ಈ ಹೊಸ ದೇಶಕ್ಕೆ ತರುತ್ತಿರುವುದೇಕೆ? ವೈರಿಗಳು ನಮ್ಮನ್ನು ಕೊಂದು ನಮ್ಮ ಹೆಂಡತಿಯರನ್ನೂ ಮಕ್ಕಳನ್ನೂ ತೆಗೆದುಕೊಳ್ಳುವರು. ನಾವು ಈಜಿಪ್ಟಿಗೆ ಮರಳಿಹೋಗುವುದೇ ಉತ್ತಮ” ಎಂದು ಹೇಳಿದರು.


ನನ್ನ ಒಡೆಯನೇ, ನನ್ನ ರಾಜನೇ, ನನ್ನ ಮಾತುಗಳನ್ನು ಆಲಿಸು! ನೀನು ನನ್ನ ಮೇಲೆ ಕೋಪಗೊಳ್ಳುವಂತೆ ಯೆಹೋವನು ಮಾಡಿರುವುದಾದರೆ ಆತನಿಗೆ ನೈವೇದ್ಯವನ್ನು ಅರ್ಪಿಸೋಣ. ಆದರೆ ನೀನು ನನ್ನ ಮೇಲೆ ಕೋಪಗೊಳ್ಳುವಂತೆ ಜನರು ಮಾಡಿದ್ದರೆ, ಅವರಿಗೆ ಯೆಹೋವನು ಕೇಡಾಗುವಂತೆ ಮಾಡಲಿ. ನನಗೆ ಯೆಹೋವನು ನೀಡಿದ ಭೂಮಿಯನ್ನು ನಾನು ಬಿಡುವಂತೆ ಜನರು ಬಲವಂತಪಡಿಸಿದರು. ‘ಹೋಗು, ಹೊರದೇಶೀಯರೊಂದಿಗೆ ನೆಲೆಸು. ಹೋಗು, ಇತರ ದೇವರುಗಳನ್ನು ಆರಾಧಿಸು’ ಎಂದು ಜನರು ನನಗೆ ಹೇಳಿದರು.


ಫಿಲಿಷ್ಟಿಯರ ಅಧಿಪತಿಗಳು, “ಈ ಇಬ್ರಿಯರು ಇಲ್ಲಿ ಮಾಡುತ್ತಿರುವುದೇನು?” ಎಂದು ಆಕೀಷನನ್ನು ಕೇಳಿದರು. ಆಕೀಷನು ಫಿಲಿಷ್ಟಿಯರ ಸೇನಾಧಿಪತಿಗಳಿಗೆ, “ಇವನು ದಾವೀದ. ದಾವೀದನು ಸೌಲನ ಅಧಿಕಾರಿಗಳಲ್ಲಿ ಒಬ್ಬನು. ದಾವೀದನು ಬಹಳ ಕಾಲದಿಂದ ನನ್ನೊಡನೆ ಇದ್ದಾನೆ. ದಾವೀದನು ಸೌಲನನ್ನು ತೊರೆದು ನನ್ನ ಬಳಿಗೆ ಬಂದಾಗಿನಿಂದ ನಾನು ಅವನಲ್ಲಿ ಯಾವ ತಪ್ಪುನ್ನೂ ಗುರುತಿಸಿಲ್ಲ” ಎಂದನು.


ಆದರೆ ದಾವೀದನು, “ನಾನು ನಿನ್ನ ಗೆಳೆಯನೆಂಬುದು ನಿನ್ನ ತಂದೆಗೆ ಚೆನ್ನಾಗಿ ತಿಳಿದಿದೆ. ನಿನ್ನ ತಂದೆಯು, ‘ಯೋನಾತಾನನಿಗೆ ಇದು ತಿಳಿಯಲೇಬಾರದು. ಅವನಿಗೆ ತಿಳಿದುಬಿಟ್ಟರೆ ಅವನು ತನ್ನ ಹೃದಯದಲ್ಲಿ ದುಃಖಪಟ್ಟು ದಾವೀದನಿಗೆ ಹೇಳಿಬಿಡುತ್ತಾನೆ’ ಎಂದುಕೊಂಡಿದ್ದಾನೆ. ಯೆಹೋವನಾಣೆ, ನಿನ್ನ ಜೀವದಾಣೆ, ನಾನು ಸಾವಿಗೆ ಬಹು ಹತ್ತಿರವಾಗಿದ್ದೇನೆ” ಎಂದು ಹೇಳಿದನು.


ಯಾರೊಬ್ಬಾಮನು ತನ್ನಲ್ಲೇ, “ಜನರು ಜೆರುಸಲೇಮಿನಲ್ಲಿರುವ ಯೆಹೋವನ ಆಲಯಕ್ಕೆ ಹೋಗುವುದನ್ನೇ ಮುಂದುವರಿಸಿದರೆ, ಆಗ ಅವರು ದಾವೀದನ ಕುಟುಂಬವೇ ನಮ್ಮನ್ನು ಆಳಲಿ ಎಂದು ಅಪೇಕ್ಷೆಪಡಬಹುದು. ಜನರು ಯೆಹೂದದ ರಾಜನಾದ ರೆಹಬ್ಬಾಮನನ್ನೇ ಮತ್ತೆ ಅನುಸರಿಸಬಹುದು. ನಂತರ ಅವರು ನನ್ನನ್ನು ಕೊಂದುಬಿಡಬಹುದು.” ಅಂದುಕೊಂಡನು.


ಬಳಿಕ ರಾಜನು ಈಗ ತಾನೇನು ಮಾಡಬೇಕೆಂದು ತನ್ನ ಸಲಹೆಗಾರರನ್ನು ಕೇಳಿದನು. ಅವರು ತಮ್ಮ ಸಲಹೆಯನ್ನು ಅವನಿಗೆ ನೀಡಿದರು. ಯಾರೊಬ್ಬಾಮನು ಎರಡು ಬಂಗಾರದ ಕರುಗಳನ್ನು ಮಾಡಿಸಿ ಜನರಿಗೆ, “ನೀವು ಆರಾಧಿಸಲು ಜೆರುಸಲೇಮಿಗೆ ಹೋಗಲೇಬಾರದು. ಇಸ್ರೇಲರೇ, ನಿಮ್ಮನ್ನು ಈಜಿಪ್ಟಿನಿಂದ ಹೊರತಂದ ದೇವರುಗಳು ಇಲ್ಲಿವೆ” ಎಂದು ಹೇಳಿದನು.


ಎಲೀಯನು ಇದನ್ನು ಕೇಳಿ ಭಯಗೊಂಡನು. ಅವನು ತನ್ನ ಜೀವರಕ್ಷಣೆಗಾಗಿ ಓಡಿಹೋದನು. ಅವನು ತನ್ನ ಸೇವಕನನ್ನೂ ತನ್ನ ಸಂಗಡ ಕರೆದೊಯ್ದನು. ಅವರು ಯೆಹೂದದ ಬೇರ್ಷೆಬಕ್ಕೆ ಹೋದರು. ಎಲೀಯನು ಬೇರ್ಷೆಬದಲ್ಲಿ ತನ್ನ ಸೇವಕನನ್ನು ಬಿಟ್ಟನು.


ಅಮಚ್ಯನು ತನ್ನ ಸಲಹೆಗಾರರೊಂದಿಗೆ ಆಲೋಚನೆ ನಡಿಸಿದನು. ಬಳಿಕ ಇಸ್ರೇಲರ ಅರಸನಾದ ಯೇಹುವಿನ ಮೊಮ್ಮಗನೂ ಯೆಹೋವಾಹಾಜನ ಮಗನೂ ಆದ ಯೋವಾಷನಿಗೆ, “ನಾವು ಮುಖಾಮುಖಿಯಾಗಿ ಸಂಧಿಸೋಣ” ಎಂಬ ಸಂದೇಶವನ್ನು ಕಳುಹಿಸಿದನು.


ನಾನು ಅರಣ್ಯದಲ್ಲಿ ಬಹು ದೂರಕ್ಕೆ ಹಾರಿಹೋಗುತ್ತಿದ್ದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು