Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 27:10 - ಪರಿಶುದ್ದ ಬೈಬಲ್‌

10 ದಾವೀದನು ಅನೇಕ ಸಲ ಹೀಗೆ ಮಾಡಿದನು. ಪ್ರತಿಸಲವೂ ಆಕೀಷನು ದಾವೀದನನ್ನು, “ನೀನು ಎಲ್ಲಿ ಯುದ್ಧಮಾಡಿದೆ ಮತ್ತು ಇವುಗಳನ್ನು ಎಲ್ಲಿಂದ ತಂದೆ” ಎಂದು ಕೇಳುತ್ತಿದ್ದನು. ದಾವೀದನು, “ನಾನು ಯೆಹೂದ ದೇಶದ ದಕ್ಷಿಣ ಭಾಗದ ವಿರುದ್ಧ ಯುದ್ಧಮಾಡಿದೆ” ಎಂದಾಗಲಿ, “ನಾನು ಎರಹ್ಮೇಲ್ಯರ ದಕ್ಷಿಣಭಾಗದ ವಿರುದ್ಧ ಯುದ್ಧಮಾಡಿದೆ” ಎಂದಾಗಲೀ “ನಾನು ಕೇನ್ಯರ ದಕ್ಷಿಣ ಭಾಗದ ವಿರುದ್ಧ ಯುದ್ಧಮಾಡಿದೆ” ಎಂದಾಗಲೀ ಹೇಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆಕೀಷನು ಅವನನ್ನು “ಈ ಹೊತ್ತು ಯಾವ ಪ್ರಾಂತ್ಯದವರನ್ನು ಸೂರೆಮಾಡಿಕೊಂಡು ಬಂದಿರಿ” ಎಂದು ಕೇಳುವನು. ದಾವೀದನು ಅವನಿಗೆ “ದಕ್ಷಿಣ ಪ್ರಾಂತ್ಯದಲ್ಲಿರುವ ಯೆಹೂದ್ಯರು, ಎರಹ್ಮೇಲ್ಯರು ಕೇನ್ಯರು ಇವರಲ್ಲಿ ಯಾರ ಹೆಸರನ್ನಾದರೂ” ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆಕೀಷನು, “ಈ ಹೊತ್ತು ಯಾವ ಪ್ರಾಂತ್ಯದವರನ್ನು ಸೂರೆಮಾಡಿಕೊಂಡು ಬಂದಿರಿ?” ಎಂದು ಕೇಳುತ್ತಿದ್ದನು. ದಾವೀದನು ಅವನಿಗೆ, ದಕ್ಷಿಣ ಪ್ರಾಂತ್ಯದಲ್ಲಿರುವ ಯೆಹೂದ್ಯರು, ಎರಹ್ಮೇಲ್ಯರು, ಕೇನ್ಯರು ಇವರಲ್ಲಿ ಯಾರ ಹೆಸರನ್ನಾದರೂ ಹೇಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆಕೀಷನು ಅವನನ್ನು - ಈಹೊತ್ತು ಯಾವ ಪ್ರಾಂತದವರನ್ನು ಸೂರೆಮಾಡಿಕೊಂಡು ಬಂದಿರಿ ಎಂದು ಕೇಳುವನು. ದಾವೀದನು ಅವನಿಗೆ - ದಕ್ಷಿಣಪ್ರಾಂತದಲ್ಲಿರುವ ಯೆಹೂದ್ಯರು, ಎರಹ್ಮೇಲ್ಯರು, ಕೇನ್ಯರು ಇವರಲ್ಲಿ ಯಾರ ಹೆಸರನ್ನಾದರೂ ಹೇಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಗ ಆಕೀಷನು, “ಈ ಹೊತ್ತು ಎಲ್ಲಿ ಸುಲಿದುಕೊಂಡಿರಿ?” ಎಂದಾಗ ದಾವೀದನು, “ನಾವು ಯೆಹೂದದ ದಕ್ಷಿಣ ಸೀಮೆಯ ಮೇಲೆಯೂ, ಯೆರಹ್ಮೇಲ್ಯರ ದಕ್ಷಿಣ ಸೀಮೆಯ ಮೇಲೆಯೂ, ಕೇನ್ಯರ ದಕ್ಷಿಣ ಸೀಮೆಯ ಮೇಲೆಯೂ ಬಿದ್ದೆವು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 27:10
21 ತಿಳಿವುಗಳ ಹೋಲಿಕೆ  

ಕೇನ್ಯರು (ಕೇನ್ಯರು ಮೋಶೆಯ ಮಾವನ ಗೋತ್ರದವರಾಗಿದ್ದರು.) ಖರ್ಜೂರ ನಗರವನ್ನು (ಜೆರಿಕೊವನ್ನು) ಬಿಟ್ಟು ಯೆಹೂದ್ಯರ ಸಂಗಡ ಹೋದರು. ಅವರು ನೆಗೆವಿನಲ್ಲಿ ಅರಾದ್ ನಗರದ ಹತ್ತಿರವಿದ್ದ ಯೆಹೂದ ಅರಣ್ಯಕ್ಕೆ ಬಂದು ಅಲ್ಲಿನ ಜನರ ಸಂಗಡ ವಾಸ ಮಾಡಿದರು.


ಹೆಚ್ರೋನನ ಚೊಚ್ಚಲಮಗನು ಯೆರಹ್ಮೇಲ. ಇವನ ಗಂಡುಮಕ್ಕಳು ಯಾರೆಂದರೆ: ರಾಮ್, ಬೂನ, ಓರೆನ್, ಓಚೆಮ್ ಮತ್ತು ಅಹೀಯ. ರಾಮನು ಯೆರಹ್ಮೇಲನ ಚೊಚ್ಚಲಮಗನು.


ಹೆಚ್ರೋನನ ಗಂಡುಮಕ್ಕಳು ಯಾರೆಂದರೆ: ಯೆರಹ್ಮೇಲ್, ರಾಮ್ ಮತ್ತು ಕಾಲೇಬ್.


ರಾಕಾಲಿನವರಿಗೆ, ಎರಹ್ಮೇಲ್ಯರ ಮತ್ತು ಕೇನ್ಯರ ಪಟ್ಟಣಗಳಿಗೆ,


ಹೆಬೆರನೆಂಬ ಒಬ್ಬ ಮನುಷ್ಯನಿದ್ದನು. ಅವನು ಕೇನ್ಯರ ಕುಲದವನಾಗಿದ್ದನು. ಅವನು ಉಳಿದ ಕೇನ್ಯರನ್ನು ಬಿಟ್ಟು ಚಾನನ್ನೀಮ್ ಎಂಬ ಊರಲ್ಲಿ ಓಕ್ ವೃಕ್ಷದ ಬಳಿ ಮನೆ ಮಾಡಿಕೊಂಡಿದ್ದನು. (ಕೇನ್ಯರು ಹೋಬಾಬನ ಸಂತತಿಯವರಾಗಿದ್ದರು. ಹೋಬಾಬನು ಮೋಶೆಯ ಮಾವನಾಗಿದ್ದನು.) ಚಾನನ್ನೀಮ್ ಕೆದೆಷ್ ನಗರದ ಸಮೀಪದಲ್ಲಿತ್ತು.


ಆದ್ದರಿಂದ ನೀವು ಸುಳ್ಳು ಹೇಳದೆ ಒಬ್ಬರಿಗೊಬ್ಬರು ಯಾವಾಗಲೂ ಸತ್ಯವನ್ನೇ ಹೇಳಿರಿ. ಏಕೆಂದರೆ ನಾವೆಲ್ಲರೂ ಒಂದೇ ದೇಹಕ್ಕೆ ಸೇರಿದ ಅಂಗಗಳಾಗಿದ್ದೇವೆ.


ಮನುಷ್ಯರ ಭಯ ಉರುಲಾಗಬಹುದು. ಆದರೆ ಯೆಹೋವನ ಮೇಲಿರುವ ಭರವಸೆ ಕ್ಷೇಮವಾಗಿಡುವುದು.


ನಾನು ಸುಳ್ಳುಗಳನ್ನು ದ್ವೇಷಿಸುವೆನು! ಅವು ನನಗೆ ಅಸಹ್ಯವಾಗಿವೆ. ನಿನ್ನ ಉಪದೇಶಗಳು ನನಗೆ ಪ್ರಿಯವಾಗಿವೆ.


ಮೋಸಮಾರ್ಗದಲ್ಲಿ ಜೀವಿಸಲು ನನ್ನನ್ನು ಬಿಡಬೇಡ. ನಿನ್ನ ಉಪದೇಶಗಳಿಂದ ಮಾರ್ಗದರ್ಶನ ಮಾಡು.


ಅಬ್ಷಾಲೋಮನ ಸೇವಕರು ಆ ಮನೆಯಲ್ಲಿದ್ದ ಹೆಂಗಸಿನ ಬಳಿಗೆ ಬಂದು, “ಅಹೀಮಾಚ್ ಮತ್ತು ಯೋನಾತಾನರು ಎಲ್ಲಿ?” ಎಂದು ಕೇಳಿದರು. ಆ ಸ್ತ್ರೀಯು ಅಬ್ಷಾಲೋಮನ ಸೇವಕರಿಗೆ, “ಅವರು ಈಗಾಗಲೇ ಹಳ್ಳವನ್ನು ದಾಟಿಹೋಗಿರಬೇಕು” ಎಂದಳು. ಆಗ ಅಬ್ಷಾಲೋಮನ ಸೇವಕರು ಯೋನಾತಾನ್ ಮತ್ತು ಅಹೀಮಾಚರನ್ನು ಹುಡುಕಲು ಹೋದರು. ಆದರೆ ಅವರು ಸೇವಕರಿಗೆ ಸಿಗಲಿಲ್ಲ. ಆದ್ದರಿಂದ ಅಬ್ಷಾಲೋಮನ ಸೇವಕರು ಜೆರುಸಲೇಮಿಗೆ ಹಿಂದಿರುಗಿದರು.


ಆದರೆ ಸೌಲನ ಬಳಿಗೆ ಒಬ್ಬ ಸಂದೇಶಕನು ಬಂದು, “ಫಿಲಿಷ್ಟಿಯರು ನಮ್ಮನ್ನು ಆಕ್ರಮಣ ಮಾಡುತ್ತಿದ್ದಾರೆ, ಬೇಗ ಬಾ!” ಎಂದು ಹೇಳಿದನು.


ದಾವೀದನು ಅಹೀಮೆಲೆಕನಿಗೆ, “ರಾಜನು ನನಗೆ ಒಂದು ವಿಶೇಷ ಆಜ್ಞೆಯನ್ನು ಕೊಟ್ಟಿರುವನು. ಅವನು ನನಗೆ, ‘ಈ ಕೆಲಸದ ಬಗ್ಗೆ ಬೇರೆ ಯಾರಿಗೂ ತಿಳಿಸಬೇಡ. ನಾನು ನಿನಗೆ ಮಾಡಲು ಹೇಳಿದ ಕೆಲಸವು ಯಾರಿಗೂ ತಿಳಿಯಕೂಡದು’ ಎಂದು ಹೇಳಿದ್ದಾನೆ. ನಾನು ನನ್ನ ಜನರಿಗೆ ನನ್ನನ್ನು ಎಲ್ಲಿ ಭೇಟಿಯಾಗಬೇಕೆಂದು ತಿಳಿಸಿದ್ದೇನೆ.


ಸೌಲನು ಕೇನ್ಯದ ಜನರಿಗೆ, “ಅಮಾಲೇಕ್ಯರನ್ನು ತ್ಯಜಿಸಿ ಹೊರಗೆ ಹೋಗಿ, ಆಗ ನಿಮ್ಮನ್ನು ಅಮಾಲೇಕ್ಯರೊಂದಿಗೆ ನಾಶಗೊಳಿಸುವುದಿಲ್ಲ. ಇಸ್ರೇಲರು ಈಜಿಪ್ಟಿನಿಂದ ಹೊರ ಬಂದಾಗ ನೀವು ಅವರಿಗೆ ಅನುಕಂಪ ತೋರಿದ್ದೀರಿ” ಎಂದು ಹೇಳಿದನು. ಆದ್ದರಿಂದ ಕೇನ್ಯರು ಅಮಾಲೇಕ್ಯರನ್ನು ಬಿಟ್ಟುಹೋದರು.


ಕೇನ್ಯನಾದ ಹೆಬೆರನ ಹೆಂಡತಿ ಯಾಯೇಲಳಿಗೆ ಎಲ್ಲ ಹೆಂಗಸರಿಗಿಂತಲೂ ಹೆಚ್ಚಿಗೆ ದೇವರ ಆಶೀರ್ವಾದವಾಗುವುದು.


ಆಗ ಬಿಳಾಮನು ಕೇನ್ಯರನ್ನು ನೋಡಿ ಹೀಗೆಂದನು: “ನಿಮ್ಮ ಮನೆಯು ಬೆಟ್ಟದ ತುದಿಯಲ್ಲಿರುವ ಪಕ್ಷಿಯ ಗೂಡಿನಂತೆ ಸುರಕ್ಷಿತವಾಗಿದೆಯೆಂದು ನೀವು ನಂಬುತ್ತೀರಿ.


ಇಸಾಕನು ಅವನಿಗೆ, “ನೀನು ನಿಜವಾಗಿಯೂ ನನ್ನ ಮಗನಾದ ಏಸಾವನೋ?” ಎಂದು ಕೇಳಿದನು. ಅದಕ್ಕೆ ಯಾಕೋಬನು, “ಹೌದು, ನಾನೇ” ಎಂದು ಉತ್ತರಕೊಟ್ಟನು.


ದಾವೀದನು ಒಬ್ಬ ಗಂಡಸನ್ನಾಗಲಿ ಹೆಂಗಸನ್ನಾಗಲಿ ಗತ್ ಊರಿಗೆ ಜೀವಸಹಿತ ಎಂದೂ ತರಲಿಲ್ಲ. ದಾವೀದನು, “ನಾವು ಒಬ್ಬ ಮನುಷ್ಯನನ್ನು ಜೀವಸಹಿತ ಬಿಟ್ಟರೆ, ನಾನು ನಿಜವಾಗಿ ಮಾಡುತ್ತಿರುವುದನ್ನು ಅವನು ಆಕೀಷನಿಗೆ ತಿಳಿಸಬಹುದು” ಎಂದು ಯೋಚಿಸಿದನು. ದಾವೀದನು ಫಿಲಿಷ್ಟಿಯರ ದೇಶದಲ್ಲಿ ವಾಸವಾಗಿದ್ದ ಕಾಲದಲ್ಲೆಲ್ಲಾ ಹೀಗೆಯೇ ಮಾಡುತ್ತಿದ್ದನು.


ದಾವೀದನು, “ನಾನು ಮಾಡಿರುವ ತಪ್ಪಾದರೂ ಏನು? ನಾನು ನಿನ್ನ ಹತ್ತಿರಕ್ಕೆ ಬಂದಾಗಿನಿಂದ ಈಗಿನವರೆಗೆ ನನ್ನಲ್ಲಿ ನೀನು ಗುರುತಿಸಿರುವ ದುಷ್ಟತನವಾದರೂ ಏನು? ರಾಜನಾದ ನನ್ನ ಒಡೆಯನ ಶತ್ರುಗಳ ವಿರುದ್ಧ ಹೋರಾಡಲು ನನ್ನನ್ನು ಬಿಡುವುದಿಲ್ಲವೇಕೆ?” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು