Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 27:6 - ಪರಿಶುದ್ದ ಬೈಬಲ್‌

6 ಆಕೀಷನು ಕೂಡಲೆ ದಾವೀದನಿಗೆ ಚಿಕ್ಲಗ್ ಎಂಬ ಊರನ್ನು ಕೊಟ್ಟನು. ಅಂದಿನಿಂದಲೂ ಚಿಕ್ಲಗ್ ಊರು ಯೆಹೂದದ ರಾಜನಿಗೆ ಸೇರಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆಕೀಷನು ಕೂಡಲೇ ಅವನಿಗೆ ಚಿಕ್ಲಗ್ ಊರನ್ನು ಕೊಟ್ಟುಬಿಟ್ಟನು. ಆದ್ದರಿಂದ ಚಿಕ್ಲಗ್ ಎಂಬುದು ಇಂದಿನವರೆಗೂ ಯೆಹೂದ ರಾಜರಿಗೆ ಸೇರಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆಕೀಷನು ಕೂಡಲೆ ಅವನಿಗೆ ಚಿಕ್ಲಗ್ ಊರನ್ನು ಕೊಟ್ಟನು. ಆದುದರಿಂದ “ಚಿಕ್ಲಗ್” ಎಂಬುದು ಇಂದಿನವರೆಗೂ ಯೆಹೂದ ಅರಸರಿಗೆ ಸೇರಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆಕೀಷನು ಕೂಡಲೆ ಅವನಿಗೆ ಚಿಕ್ಲಗ್ ಊರನ್ನು ಕೊಟ್ಟುಬಿಟ್ಟನು. ಆದದರಿಂದ ಚಿಕ್ಲಗ್ ಎಂಬದು ಇಂದಿನವರೆಗೂ ಯೆಹೂದರಾಜರಿಗೆ ಸೇರಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಗ ಆಕೀಷನು ಆ ದಿವಸದಲ್ಲಿ ಚಿಕ್ಲಗ್ ಊರನ್ನು ಅವನಿಗೆ ಕೊಟ್ಟನು. ಆದ್ದರಿಂದ ಚಿಕ್ಲಗ್ ಇಂದಿನವರೆಗೂ ಯೆಹೂದದ ಅರಸರಿಗೆ ಸೇರಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 27:6
12 ತಿಳಿವುಗಳ ಹೋಲಿಕೆ  

ಚಿಕ್ಲಗ್, ಮೆಕೋನ ಮತ್ತು ಸುತ್ತಲಿದ್ದ ಚಿಕ್ಕ ಪಟ್ಟಣಗಳು,


ಚಿಕ್ಲಗ್, ಮದ್ಮನ್ನಾ, ಸನ್ಸನ್ನಾ,


ದಾವೀದನು ಚಿಕ್ಲಗಿನಲ್ಲಿ ವಾಸವಾಗಿದ್ದಾಗ ಅವನೊಂದಿಗೆ ಸೇರಿದ ಮನಸ್ಸೆಕುಲದವರು ಯಾರೆಂದರೆ: ಅದ್ನ, ಯೋಜಾಬಾದ್, ಎದೀಗಯೇಲ್, ಮೀಕಾಯೇಲ್, ಯೋಜಾಬಾದ್, ಎಲೀಹೂ ಮತ್ತು ಚಿಲ್ಲತೈ. ಇವರೆಲ್ಲರೂ ಮನಸ್ಸೆಕುಲದ ಮುಖ್ಯಾಧಿಕಾರಿಗಳಾಗಿದ್ದರು.


ದಾವೀದನು ಚಿಕ್ಲಗಿನಲ್ಲಿದ್ದಾಗ ಕೆಲವು ಪರಾಕ್ರಮಶಾಲಿಗಳು ಬಂದು ದಾವೀದನೊಂದಿಗೆ ಸೇರಿಕೊಂಡರು. ಕೀಷನ ಮಗನಾದ ಸೌಲನಿಂದ ತಪ್ಪಿಸಿಕೊಳ್ಳಲು ದಾವೀದನು ಚಿಕ್ಲಗಿನಲ್ಲಿ ಅಡಗಿಕೊಂಡಿದ್ದನು. ಇವರು ಯುದ್ಧದಲ್ಲಿ ದಾವೀದನಿಗೆ ನೆರವಾದರು.


ದಾವೀದನು ಅಮಾಲೇಕ್ಯರನ್ನು ಸೋಲಿಸಿದ ಬಳಿಕ, ಚಿಕ್ಲಗಿಗೆ ಹಿಂದಿರುಗಿಬಂದು, ಅಲ್ಲಿ ಎರಡು ದಿವಸ ಇದ್ದನು. ಸೌಲನ ಮರಣಾನಂತರ ಇದು ಸಂಭವಿಸಿತು.


ಕೆರೇತ್ಯರು ವಾಸಿಸುವ ನೆಗೆವ್ ಮೇಲೆ ನಾವು ಆಕ್ರಮಣ ಮಾಡಿದೆವು. ನಾವು ಯೆಹೂದ ದೇಶದ ಮೇಲೆ ಮತ್ತು ಕಾಲೇಬ್ಯರು ವಾಸಿಸುವ ನೆಗೆವ್ ಪ್ರಾಂತ್ಯಗಳ ಮೇಲೆ ಆಕ್ರಮಣ ಮಾಡಿದೆವು. ನಾವು ಚಿಕ್ಲಗನ್ನು ಸುಟ್ಟುಹಾಕಿದೆವು” ಎಂದು ಹೇಳಿದನು.


ಮೂರನೆಯ ದಿನ ದಾವೀದನು ಮತ್ತು ಅವನ ಜನರು ಚಿಕ್ಲಗ್ ಊರಿಗೆ ಬಂದರು. ಅಮಾಲೇಕ್ಯರು ಚಿಕ್ಲಗನ್ನು ಆಕ್ರಮಣ ಮಾಡಿರುವುದನ್ನು ಅವರು ನೋಡಿದರು. ಅಮಾಲೇಕ್ಯರು ನೆಗೆವ್ ಪ್ರದೇಶದ ಮೇಲೆ ದಾಳಿ ಮಾಡಿದರು. ಅವರು ಚಿಕ್ಲಗನ್ನು ಆಕ್ರಮಿಸಿದ್ದರು ಮತ್ತು ಆ ನಗರವನ್ನು ಸುಟ್ಟುಹಾಕಿದ್ದರು.


ದಾವೀದನು ಫಿಲಿಷ್ಟಿಯನಾದ ಗೊಲ್ಯಾತನನ್ನು ಕೊಂದಾಗ ತನ್ನ ಜೀವವನ್ನೇ ಪಣವಾಗಿಟ್ಟಿದ್ದನು. ಯೆಹೋವನು ಇಸ್ರೇಲರೆಲ್ಲರಿಗೂ ಬಹು ದೊಡ್ಡ ಜಯವನ್ನುಂಟುಮಾಡಿದನು. ನೀನು ಅದನ್ನು ನೋಡಿದೆ ಮತ್ತು ಸಂತೋಷಗೊಂಡೆ. ದಾವೀದನಿಗೆ ಕೇಡುಮಾಡಲು ನೀನು ಏಕೆ ಬಯಸಿರುವೆ? ಅವನು ನಿರಪರಾಧಿ. ಅವನನ್ನು ಕೊಲ್ಲಲು ಯಾವ ಕಾರಣವೂ ಇಲ್ಲ!” ಎಂದು ಹೇಳಿದನು.


ಹೊರ್ಮಾ, ಚಿಕ್ಲಗ್, ಬೇತ್‌ಮರ್ಕಾಬೋತ್, ಹಚರ್‌ಸೂಸಾ,


ದಾವೀದನು ಆಕೀಷನಿಗೆ, “ನೀನು ನನ್ನನ್ನು ಮೆಚ್ಚಿಕೊಂಡಿದ್ದರೆ ಯಾವುದಾದರೊಂದು ಊರಲ್ಲ್ಲಿ ನನಗೆ ಸ್ಥಳವನ್ನು ಕೊಡು. ನಾನು ನಿನ್ನ ಸೇವಕನಷ್ಟೆ. ನಾನು ನಿನ್ನೊಡನೆ ಈ ರಾಜಧಾನಿಯಲ್ಲಿ ಇರುವುದಕ್ಕಿಂತ ಅಲ್ಲಿ ವಾಸಮಾಡುತ್ತೇನೆ” ಎಂದು ಹೇಳಿದನು.


ಆದರೆ ಫಿಲಿಷ್ಟಿಯರ ಅಧಿಪತಿಗಳು ಆಕೀಷನ ಮೇಲೆ ಬಹಳ ಕೋಪಗೊಂಡು, “ದಾವೀದನನ್ನು ಹಿಂದಕ್ಕೆ ಕಳುಹಿಸು! ನೀನು ಕೊಟ್ಟಿರುವ ನಗರಕ್ಕೆ ದಾವೀದನು ಹಿಂದಿರುಗಿ ಹೋಗಲೇಬೇಕು. ಅವನು ನಮ್ಮೊಡನೆ ಯುದ್ಧಕ್ಕೆ ಬರುವಂತಿಲ್ಲ. ಅವನು ನಮ್ಮ ಜೊತೆಯಲ್ಲಿದ್ದರೆ, ಆಗ ನಮ್ಮ ಪಾಳೆಯದಲ್ಲಿ ಒಬ್ಬ ಶತ್ರುವಿದ್ದಂತಾಗುತ್ತದೆ. ಅವನು ನಮ್ಮ ಜನರನ್ನು ಕೊಲ್ಲುವುದರ ಮೂಲಕ ತನ್ನ ರಾಜನ ಮೆಚ್ಚಿಕೆಯನ್ನು ಗಳಿಸುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು