Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 28:10 - ಪರಿಶುದ್ದ ಬೈಬಲ್‌

10 ಸೌಲನು ಯೆಹೋವನ ಹೆಸರಿನಲ್ಲಿ ಆ ಬೇತಾಳಿಕಳಿಗೆ ವಾಗ್ದಾನಮಾಡಿ, “ಯೆಹೋವನಾಣೆ, ಈ ಕಾರ್ಯವನ್ನು ಮಾಡಿದ್ದಕ್ಕಾಗಿ ನಿನಗೆ ದಂಡನೆಯಾಗುವುದಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅದಕ್ಕೆ ಸೌಲನು, “ಯೆಹೋವನಾಣೆ, ಈ ವಿಷಯದಲ್ಲಿ ನೀನು ದಂಡನೆಗೆ ಗುರಿಯಾಗುವುದಿಲ್ಲ” ಎಂದು ಆಕೆಗೆ ಯೆಹೋವನ ಹೆಸರಿನಲ್ಲಿ ಪ್ರಮಾಣಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅದಕ್ಕೆ ಸೌಲನು, ” ಸರ್ವೇಶ್ವರನಾಣೆ, ಈ ವಿಷಯದಲ್ಲಿ ನೀನು ದಂಡನೆಗೆ ಗುರಿಯಾಗುವುದಿಲ್ಲ,” ಎಂದು ಆಕೆಗೆ ಸರ್ವೇಶ್ವರನ ಹೆಸರಿನಲ್ಲಿ ಪ್ರಮಾಣ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅದಕ್ಕೆ ಸೌಲನು - ಯೆಹೋವನಾಣೆ, ಈ ವಿಷಯದಲ್ಲಿ ನೀನು ದಂಡನೆಗೆ ಗುರಿಯಾಗುವದಿಲ್ಲ ಎಂದು ಆಕೆಗೆ ಯೆಹೋವನ ಹೆಸರಿನಲ್ಲಿ ಪ್ರಮಾಣಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಗ ಸೌಲನು, “ಯೆಹೋವ ದೇವರ ಜೀವದಾಣೆ, ಈ ಕಾರ್ಯಕ್ಕೋಸ್ಕರ ನಿನಗೆ ದಂಡನೆ ಬರುವುದಿಲ್ಲ,” ಎಂದು ಅವಳಿಗೆ ಯೆಹೋವ ದೇವರ ಮೇಲೆ ಪ್ರಮಾಣ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 28:10
10 ತಿಳಿವುಗಳ ಹೋಲಿಕೆ  

ನನ್ನ ರಾಜ್ಯದಲ್ಲಿ ಅರ್ಧವನ್ನು ಕೇಳಿಕೊಂಡರೂ ಕೊಡುತ್ತೇನೆ” ಎಂದು ಪ್ರಮಾಣಮಾಡಿದನು.


ಆಗ ಪೇತ್ರನು, “ನಾನು ದೇವರ ಮೇಲೆ ಆಣೆಯಿಟ್ಟು ಹೇಳುತ್ತೇನೆ. ನನಗೆ ಯೇಸುವೆಂಬ ಮನುಷ್ಯನು ತಿಳಿದೇ ಇಲ್ಲ!” ಎಂದು ನಿರಾಕರಿಸಿದನು.


ಆ ಸ್ತ್ರೀಯು, “ಅವರು ನನಗೆ ತೊಂದರೆ ಕೊಡದಂತೆ ನೀನು ನೋಡಿಕೊಳ್ಳುವುದಾಗಿ ನಿನ್ನ ದೇವರಾದ ಯೆಹೋವನ ಮೇಲೆ ದಯವಿಟ್ಟು ಪ್ರಮಾಣ ಮಾಡು. ಆಗ ಕೊಲೆಗಾರರನ್ನು ದಂಡಿಸಲು ಇಚ್ಛಿಸುವ ಈ ಜನರು, ನನ್ನ ಮಗನನ್ನು ದಂಡಿಸುವುದಿಲ್ಲ” ಎಂದು ಹೇಳಿದಳು. ದಾವೀದನು, “ಯೆಹೋವನಾಣೆ, ನಿನ್ನ ಮಗನನ್ನು ಯಾವ ವ್ಯಕ್ತಿಯೂ ತೊಂದರೆಗೊಳಿಸುವುದಿಲ್ಲ. ನಿನ್ನ ಮಗನ ತಲೆಯ ಮೇಲಿನ ಕೂದಲುಗಳಲ್ಲಿ ಒಂದಾದರೂ ನೆಲಕ್ಕೆ ಬೀಳುವುದಿಲ್ಲ” ಎಂದನು.


ಯೋನಾತಾನನು ಹೇಳಿದ್ದನ್ನೆಲ್ಲ ಸೌಲನು ಕೇಳಿ, “ಯೆಹೋವನಾಣೆ, ದಾವೀದನನ್ನು ಕೊಲ್ಲುವುದಿಲ್ಲ” ಎಂದು ಪ್ರಮಾಣ ಮಾಡಿ ಹೇಳಿದನು.


ಇಸ್ರೇಲನ್ನು ರಕ್ಷಿಸುವ ಯೆಹೋವನಾಣೆಯಿಟ್ಟು ಹೇಳುತ್ತಿದ್ದೇನೆ, ನನ್ನ ಸ್ವಂತ ಮಗನಾದ ಯೋನಾತಾನನೇ ಈ ಪಾಪ ಮಾಡಿದ್ದರೂ ಅವನು ಸಾಯಲೇಬೇಕು” ಎಂದು ಹೇಳಿದನು. ಜನರಲ್ಲಿ ಯಾರೊಬ್ಬರೂ ಮಾತನಾಡಲಿಲ್ಲ.


“ನಿಮ್ಮ ದೇವರಾದ ಯೆಹೋವನ ಹೆಸರನ್ನು ಅಯೋಗ್ಯ ಕಾರ್ಯಕ್ಕಾಗಿ ಉಪಯೋಗಿಸಬಾರದು. ಯೆಹೋವನು ತನ್ನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ ಉಪಯೋಗಿಸುವವನನ್ನು ಶಿಕ್ಷಿಸದೆ ಬಿಡುವುದಿಲ್ಲ.


ನೀವು ಆ ಮರದ ಹಣ್ಣನ್ನು ತಿಂದರೆ ನಿಮಗೆ ಒಳ್ಳೆಯದರ ಮತ್ತು ಕೆಟ್ಟದ್ದರ ಬಗ್ಗೆ ಜ್ಞಾನ ಬರುತ್ತದೆಯೆಂದು ದೇವರಿಗೆ ಗೊತ್ತಿದೆ. ಅಲ್ಲದೆ ನೀವು ದೇವರಿಗೆ ಸರಿಸಮಾನರಾಗುವಿರಿ” ಎಂದು ಹೇಳಿತು.


ಆದರೆ ಆ ಬೇತಾಳಿಕಳು ಸೌಲನಿಗೆ, “ಸೌಲನು ಏನು ಮಾಡಿದನೆಂಬುದು ನಿನಗೆ ನಿಜವಾಗಿಯೂ ತಿಳಿದಿದೆ. ಅವನು ಮಾಂತ್ರಿಕರನ್ನೂ ಜ್ಯೋತಿಷಿಗಳನ್ನೂ ಬಲಾತ್ಕಾರವಾಗಿ ದೇಶದಿಂದ ಹೊರಗಟ್ಟಿದನು. ನೀನು ನನ್ನನ್ನು ಬಲೆಗೆ ಬೀಳಿಸಿ ಕೊಲ್ಲಲು ಪ್ರಯತ್ನಿಸುತ್ತಿರುವೆ” ಎಂದಳು.


ಅವಳು, “ನಿನಗಾಗಿ ನಾನು ಯಾರನ್ನು ಬರಮಾಡಬೇಕು?” ಎಂದು ಕೇಳಿದಳು. ಸೌಲನು, “ಸಮುವೇಲನನ್ನು ಬರಮಾಡು” ಎಂದು ಉತ್ತರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು