1 ಸಮುಯೇಲ 28:11 - ಪರಿಶುದ್ದ ಬೈಬಲ್11 ಅವಳು, “ನಿನಗಾಗಿ ನಾನು ಯಾರನ್ನು ಬರಮಾಡಬೇಕು?” ಎಂದು ಕೇಳಿದಳು. ಸೌಲನು, “ಸಮುವೇಲನನ್ನು ಬರಮಾಡು” ಎಂದು ಉತ್ತರಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆಗ ಸ್ತ್ರೀಯು, “ನಿನಗೆ ಯಾರನ್ನು ಬರಮಾಡಬೇಕು?” ಎನ್ನಲು, “ಸಮುವೇಲನನ್ನು” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಆಗ ಆ ಸ್ತ್ರೀ, “ನಿನಗೆ ಯಾರನ್ನು ಬರಮಾಡಬೇಕು?” ಎಂದಳು. “ಸಮುವೇಲನನ್ನು,” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಆಗ ಸ್ತ್ರೀಯು - ನಿನಗೆ ಯಾರನ್ನು ಬರಮಾಡಬೇಕು ಎನ್ನಲು - ಸಮುವೇಲನನ್ನು ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಅವಳು, “ನಿನಗೆ ನಾನು ಯಾರನ್ನು ಇಲ್ಲಿ ಬರಮಾಡಬೇಕು?” ಎಂದಳು. ಅದಕ್ಕವನು, “ಸಮುಯೇಲನನ್ನು ಬರಮಾಡು,” ಎಂದನು. ಅಧ್ಯಾಯವನ್ನು ನೋಡಿ |
ಸಮುವೇಲನು, “ನನಗೆ ತೊಂದರೆಯನ್ನೇಕೆ ಕೊಡುತ್ತಿರುವೆ? ನೀನು ನನ್ನನ್ನು ನೆಲದ ಮೇಲಕ್ಕೆ ಬರಮಾಡಿದ್ದೇಕೆ?” ಎಂದು ಸೌಲನನ್ನು ಕೇಳಿದನು. ಸೌಲನು, “ನಾನು ತೊಂದರೆಯಲ್ಲಿದ್ದೇನೆ! ಫಿಲಿಷ್ಟಿಯರು ನನ್ನ ವಿರುದ್ಧ ಹೋರಾಡಲು ಬರುತ್ತಿದ್ದಾರೆ; ದೇವರು ನನ್ನನ್ನು ತ್ಯಜಿಸಿದ್ದಾನೆ. ದೇವರು ನನಗೆ ಉತ್ತರವನ್ನೇ ಕೊಡುತ್ತಿಲ್ಲ; ಆತನು ಪ್ರವಾದಿಗಳಿಂದಾಗಲೀ ಕನಸುಗಳಿಂದಾಗಲೀ ನನಗೆ ಉತ್ತರಿಸುತ್ತಿಲ್ಲ. ಆದ ಕಾರಣವೇ ನಾನು ನಿನ್ನನ್ನು ಕರೆದೆನು. ನಾನು ಮಾಡಬೇಕಾದದ್ದನ್ನು ನನಗೆ ತಿಳಿಸು!” ಎಂದನು.
ಕೆಲವರು, “ಏನು ಮಾಡಬೇಕೆಂದು ಕಣಿಹೇಳುವವರನ್ನೂ ಬೇತಾಳಿಕರನ್ನೂ ವಿಚಾರಿಸು” ಎಂದು ಹೇಳುತ್ತಾರೆ. (ಕಣಿಹೇಳುವವರು ತಾವು ಮಂತ್ರಶಕ್ತಿಯುಳ್ಳವರೆಂದು ಜನರಿಗೆ ತೋರಿಸಲು ಪಕ್ಷಿಗಳು ಮಾಡುವ ಶಬ್ದವನ್ನು ಬಾಯಿಂದ ಮಾಡಿ ತಮಗೆ ರಹಸ್ಯಗಳು ಗೊತ್ತಿವೆ ಎಂದು ತೋರಿಸಿಕೊಳ್ಳುತ್ತಾರೆ.) ನಾನು ಹೇಳುವುದೇನೆಂದರೆ, “ಜನರು ಸಹಾಯಕ್ಕಾಗಿ ದೇವರನ್ನೇ ಕೇಳಿಕೊಳ್ಳಬೇಕು. ಆ ಕಣಿಹೇಳುವವರೂ ಬೇತಾಳಿಕರೂ ತಾವು ಏನು ಮಾಡಬೇಕೆಂದು ಸತ್ತವರನ್ನು ವಿಚಾರಿಸುವರು. ಜೀವಿಸುವವರು ಸತ್ತವರನ್ನು ಯಾಕೆ ವಿಚಾರಿಸಬೇಕು?”