Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 28:16 - ಪರಿಶುದ್ದ ಬೈಬಲ್‌

16 ಸಮುವೇಲನು, “ಯೆಹೋವನು ನಿನ್ನನ್ನು ತ್ಯಜಿಸಿದ್ದಾನೆ. ಈಗ ಆತನು ನಿನ್ನ ವಿರೋಧಿಯಾಗಿದ್ದಾನೆ. ಆದ್ದರಿಂದ ನನ್ನನ್ನೇಕೆ ಕರೆಯುವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆಗ ಸಮುವೇಲನು, “ಯೆಹೋವನು ನಿನ್ನನ್ನು ಬಿಟ್ಟು ನಿನಗೆ ವಿರೋಧಿಯಾದ ಮೇಲೆ, ನೀನು ನನ್ನನ್ನು ವಿಚಾರಿಸುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆಗ ಸಮುವೇಲನು, “ಸರ್ವೇಶ್ವರ ನಿನ್ನನ್ನು ಕೈಬಿಟ್ಟು ನಿನಗೆ ವಿರೋಧಿಯಾದ ಮೇಲೆ ನೀನು ನನ್ನನ್ನು ವಿಚಾರಿಸುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆಗ ಸಮುವೇಲನು - ಯೆಹೋವನು ನಿನ್ನನ್ನು ಬಿಟ್ಟು ನಿನಗೆ ವಿರೋಧಿಯಾದ ಮೇಲೆ ನೀನು ನನ್ನನ್ನು ವಿಚಾರಿಸುವದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಸಮುಯೇಲನು ಅವನಿಗೆ, “ಯೆಹೋವ ದೇವರು ನಿನ್ನನ್ನು ಬಿಟ್ಟು ಹೋಗಿ ನಿನಗೆ ಶತ್ರುವಾಗಿರುವಾಗ, ನೀನು ನನ್ನನ್ನು ಕೇಳುವುದು ಏಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 28:16
10 ತಿಳಿವುಗಳ ಹೋಲಿಕೆ  

ಅವಳು ಪ್ರವಾದಿಗಳ, ದೇವರ ಪರಿಶುದ್ಧಜನರ ಮತ್ತು ಭೂಮಿಯ ಮೇಲೆ ಕೊಲ್ಲಲ್ಪಟ್ಟವರೆಲ್ಲರ ರಕ್ತವನ್ನು ಸುರಿಸಿ ಅಪರಾಧಿಯಾದಳು.”


ಪರಲೋಕವೇ, ಇದರಿಂದ ನೀನೂ ಸಂತೋಷಪಡು! ದೇವರ ಪರಿಶುದ್ಧ ಜನರೇ, ಅಪೊಸ್ತಲರೇ, ಪ್ರವಾದಿಗಳೇ, ನೀವೂ ಸಂತೋಷಪಡಿರಿ! ಅವಳು ನಿಮಗೆ ಮಾಡಿದ ಕೇಡುಗಳಿಗಾಗಿ ದೇವರು ಅವಳನ್ನು ದಂಡಿಸಿದನು.’”


ಆತನು ಒಬ್ಬ ಶತ್ರುವಿನಂತಾಗಿದ್ದಾನೆ. ಆತನು ಇಸ್ರೇಲನ್ನು ನಾಶಮಾಡಿದನು. ಆತನು ಅವಳ ಎಲ್ಲ ಅರಮನೆಗಳನ್ನು ನುಂಗಿಬಿಟ್ಟನು. ಆತನು ಅವಳ ಎಲ್ಲ ಕೋಟೆಗಳನ್ನು ನುಂಗಿಬಿಟ್ಟನು. ಯೆಹೂದ ಜನಾಂಗದಲ್ಲಿ ಆತನು ಹೆಚ್ಚಿನ ದುಃಖವನ್ನು ಉಂಟುಮಾಡಿ ಶೋಕವನ್ನು ಹರಡಿದ್ದಾನೆ.


ಇಸ್ರೇಲಿನ ರಾಜನು, “ಯೆಹೋವನು ನಿನಗೆ ಸಹಾಯ ಮಾಡದಿದ್ದರೆ, ನಾನು ನಿನಗೆ ಹೇಗೆ ಸಹಾಯ ಮಾಡಲಿ? ನಿನಗೆ ಕೊಡಲು ನನ್ನ ಬಳಿ ಏನೂ ಇಲ್ಲ; ಕಣದಲ್ಲಿ ಕಾಳುಗಳಿಲ್ಲ, ದ್ರಾಕ್ಷಿಯ ಆಲೆಯಲ್ಲಿ ದ್ರಾಕ್ಷಾರಸವಿಲ್ಲ” ಎಂದನು.


“ಯೆಹೋವನೇ, ನಿನ್ನ ವೈರಿಗಳೆಲ್ಲಾ ಹೀಗೇ ಸಾಯಲಿ; ಆದರೆ ನಿನ್ನನ್ನು ಪ್ರೀತಿಸುವವರೆಲ್ಲರೂ ಬಲವಾಗಿದ್ದು ಉದಯಿಸುವ ಸೂರ್ಯನಂತೆ ಬೆಳಗಲಿ!” ನಲವತ್ತು ವರ್ಷಗಳವರೆಗೆ ದೇಶದಲ್ಲಿ ಶಾಂತಿ ನೆಲೆಸಿತ್ತು.


ಸಮುವೇಲನು, “ನನಗೆ ತೊಂದರೆಯನ್ನೇಕೆ ಕೊಡುತ್ತಿರುವೆ? ನೀನು ನನ್ನನ್ನು ನೆಲದ ಮೇಲಕ್ಕೆ ಬರಮಾಡಿದ್ದೇಕೆ?” ಎಂದು ಸೌಲನನ್ನು ಕೇಳಿದನು. ಸೌಲನು, “ನಾನು ತೊಂದರೆಯಲ್ಲಿದ್ದೇನೆ! ಫಿಲಿಷ್ಟಿಯರು ನನ್ನ ವಿರುದ್ಧ ಹೋರಾಡಲು ಬರುತ್ತಿದ್ದಾರೆ; ದೇವರು ನನ್ನನ್ನು ತ್ಯಜಿಸಿದ್ದಾನೆ. ದೇವರು ನನಗೆ ಉತ್ತರವನ್ನೇ ಕೊಡುತ್ತಿಲ್ಲ; ಆತನು ಪ್ರವಾದಿಗಳಿಂದಾಗಲೀ ಕನಸುಗಳಿಂದಾಗಲೀ ನನಗೆ ಉತ್ತರಿಸುತ್ತಿಲ್ಲ. ಆದ ಕಾರಣವೇ ನಾನು ನಿನ್ನನ್ನು ಕರೆದೆನು. ನಾನು ಮಾಡಬೇಕಾದದ್ದನ್ನು ನನಗೆ ತಿಳಿಸು!” ಎಂದನು.


ಯೆಹೋವನು ನಿನಗೆ ಹೇಳಿದ್ದಂತೆಯೇ ಮಾಡಿದನು. ಆತನು ಅವುಗಳ ಬಗ್ಗೆ ನನ್ನ ಮೂಲಕವಾಗಿ ನಿನಗೆ ತಿಳಿಸಿದನು. ಯೆಹೋವನು ರಾಜ್ಯಾಧಿಕಾರವನ್ನು ನಿನ್ನ ಕೈಗಳಿಂದ ಕಿತ್ತುಕೊಂಡು ನಿನ್ನ ನೆರೆಯವರಲ್ಲಿ ಒಬ್ಬನಿಗೆ ಕೊಟ್ಟಿದ್ದಾನೆ. ದಾವೀದನೇ ಆ ನೆರೆಯವನು.


ಯೆಹೋವನು ವೈರಿಯಂತೆ ತನ್ನ ಬಿಲ್ಲನ್ನು ಬಾಗಿಸಿದನು. ತನ್ನ ಬಲಗೈಯಲ್ಲಿ ಖಡ್ಗವನ್ನು ಧರಿಸಿದನು: ಆತನು ಯೆಹೂದದ ಎಲ್ಲ ಆಕರ್ಷಕ ಜನರನ್ನು ಕೊಂದುಹಾಕಿದನು. ಆತನು ಶತ್ರುವಿನಂತೆ ಅವರನ್ನು ಕೊಂದನು. ಆತನು ತನ್ನ ರೋಷಾಗ್ನಿಯನ್ನು ಹೊರಸೂಸಿದನು. ಆತನು ಅದನ್ನು ಚೀಯೋನಿನ ಗುಡಾರಗಳ ಮೇಲೆ ಸುರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು