Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 28:19 - ಪರಿಶುದ್ದ ಬೈಬಲ್‌

19 ಯೆಹೋವನು ನಿನ್ನನ್ನು ಮತ್ತು ಇಸ್ರೇಲರನ್ನು ಫಿಲಿಷ್ಟಿಯರ ವಶಕ್ಕೆ ಒಪ್ಪಿಸುತ್ತಾನೆ. ಫಿಲಿಷ್ಟಿಯರು ಇಸ್ರೇಲ್ ಸೈನ್ಯವನ್ನು ಸೋಲಿಸುವಂತೆ ಯೆಹೋವನು ಮಾಡುತ್ತಾನೆ. ಮಾರನೆಯ ದಿನ, ನೀನು ಮತ್ತು ನಿನ್ನ ಮಕ್ಕಳು ನನ್ನೊಡನೆ ಇಲ್ಲಿರುತ್ತೀರಿ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆತನು ನಿನ್ನ ಕೂಡ ಇಸ್ರಾಯೇಲ್ಯರೆಲ್ಲರನ್ನೂ ಫಿಲಿಷ್ಟಿಯರ ಕೈಗೆ ಒಪ್ಪಿಸುವನು. ನಾಳೆ ನೀನೂ ನಿನ್ನ ಮಕ್ಕಳೂ ನಾನಿರುವಲ್ಲಿಗೆ ಬರುವಿರಿ. ಆತನು ಇಸ್ರಾಯೇಲ್ಯರ ಸೈನ್ಯವನ್ನು ಫಿಲಿಷ್ಟಿಯರ ಕೈಗೆ ಒಪ್ಪಿಸುವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ನಿನ್ನ ಸಮೇತ ಇಸ್ರಯೇಲರನ್ನು ಫಿಲಿಷ್ಟಿಯರ ಕೈಗೆ ಒಪ್ಪಿಸುವರು. ನಾಳೆ ನೀನೂ ನಿನ್ನ ಮಕ್ಕಳೂ ನಾನಿರುವಲ್ಲಿಗೆ ಬರುವಿರಿ. ಸರ್ವೇಶ್ವರ ಇಸ್ರಯೇಲ್ ಸೈನ್ಯವನ್ನು ಫಿಲಿಷ್ಟಿಯರ ಕೈಗೆ ಒಪ್ಪಿಸುವರು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆತನು ನಿನ್ನ ಕೂಡ ಇಸ್ರಾಯೇಲ್ಯರನ್ನೂ ಫಿಲಿಷ್ಟಿಯರ ಕೈಗೆ ಒಪ್ಪಿಸುವನು. ನಾಳೆ ನೀನೂ ನಿನ್ನ ಮಕ್ಕಳೂ ನಾನಿರುವಲ್ಲಿಗೆ ಬರುವಿರಿ; ಆತನು ಇಸ್ರಾಯೇಲ್ ಸೈನ್ಯವನ್ನು ಫಿಲಿಷ್ಟಿಯರ ಕೈಗೆ ಒಪ್ಪಿಸುವನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಯೆಹೋವ ದೇವರು ನಿನ್ನ ಸಹಿತವಾಗಿ ಇಸ್ರಾಯೇಲನ್ನು ಫಿಲಿಷ್ಟಿಯರ ಕೈಯಲ್ಲಿ ಒಪ್ಪಿಸಿಕೊಡುವರು. ನಾಳೆ ನೀನೂ, ನಿನ್ನ ಪುತ್ರರೂ ನನ್ನ ಸಂಗಡ ಇರುವಿರಿ. ಯೆಹೋವ ದೇವರು ಇಸ್ರಾಯೇಲ್ ಸೈನ್ಯವನ್ನು ಫಿಲಿಷ್ಟಿಯರ ಕೈಯಲ್ಲಿ ಒಪ್ಪಿಸಿಕೊಡುವರು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 28:19
12 ತಿಳಿವುಗಳ ಹೋಲಿಕೆ  

ಅನನೀಯನು ಇದನ್ನು ಕೇಳಿದ ಕೂಡಲೇ ಕೆಳಗೆ ಬಿದ್ದು ಸತ್ತುಹೋದನು. ಕೆಲವು ಯೌವನಸ್ಥರು ಬಂದು ಅವನ ದೇಹವನ್ನು ಬಟ್ಟೆಯಲ್ಲಿ ಸುತ್ತಿದರು. ಅವರು ಅದನ್ನು ಹೊತ್ತುಕೊಂಡು ಹೋಗಿ ಸಮಾಧಿಮಾಡಿದರು. ಇದರ ಬಗ್ಗೆ ಕೇಳಿದ ಪ್ರತಿಯೊಬ್ಬರೂ ಭಯಭ್ರಾಂತರಾದರು.


ಪವಿತ್ರ ಗ್ರಂಥದಲ್ಲಿ ಬರೆದಿರುವ ಪ್ರಕಾರ ಮನುಷ್ಯಕುಮಾರನು ಹೊರಟುಹೋಗಿ ಮರಣ ಹೊಂದುತ್ತಾನೆ. ಆದರೆ ಆತನನ್ನು ಕೊಲ್ಲಲು ಒಪ್ಪಿಸುವವನಿಗೆ ಬಹಳ ಕೇಡಾಗುತ್ತದೆ. ಅವನು ಹುಟ್ಟದೆ ಇದ್ದಿದ್ದರೆ ಎಷ್ಟೋ ಚೆನ್ನಾಗಿತ್ತು!” ಎಂದು ಹೇಳಿದನು.


ಮೀಕಾಯೆಹು ಗಟ್ಟಿಯಾದ ಧ್ವನಿಯಲ್ಲಿ, “ನಾನು ಏನು ಹೇಳುತ್ತೇನೆಂಬುದನ್ನು ಜನರೆಲ್ಲರೂ ಕೇಳಿರಿ! ರಾಜನಾದ ಅಹಾಬನೇ, ನೀನು ಈ ಹೋರಾಟದಿಂದ ಜೀವಸಹಿತ ಮನೆಗೆ ಬಂದರೆ, ಯೆಹೋವನು ನನ್ನ ಮೂಲಕ ಮಾತನಾಡಿಲ್ಲ” ಎಂದು ಹೇಳಿದನು.


ಯೆಹೋವನು ಅವರಿಗೆ, ‘ನಿಮ್ಮಲ್ಲಿ ಯಾರಾದರೂ ರಾಜನಾದ ಅಹಾಬನನ್ನು ಪ್ರೇರೇಪಿಸುವಿರಾ? ಅವನು ಅರಾಮ್ಯರ ಸೇನೆಯ ವಿರುದ್ಧ ಹೋರಾಡಲು ರಾಮೋತಿಗೆ ಹೋಗಬೇಕೆಂದು ನಾನು ಅಪೇಕ್ಷೆಪಟ್ಟಿದ್ದೇನೆ. ಅಲ್ಲಿ ಅವನು ಕೊಲ್ಲಲ್ಪಡುವನು’ ಎಂದು ಹೇಳಿದನು. ತಾವು ಏನು ಮಾಡಬೇಕೆಂಬುದರ ಬಗ್ಗೆ ದೂತರಲ್ಲಿ ಒಮ್ಮತದ ಅಭಿಪ್ರಾಯವುಂಟಾಗಲಿಲ್ಲ.


ಆದರೆ ನೀವು ಮೊಂಡರಾಗಿ ಕೆಟ್ಟಕಾರ್ಯಗಳನ್ನು ಮಾಡಿದ್ದಾದರೆ ಯೆಹೋವನು ನಿಮ್ಮನ್ನು ಮತ್ತು ನಿಮ್ಮ ರಾಜನನ್ನು ನಾಶಪಡಿಸುತ್ತಾನೆ” ಎಂದು ಹೇಳಿದನು.


ಆದ್ದರಿಂದ ನಾಳೆ ಇದೇ ಸಮಯಕ್ಕೆ ಸರಿಯಾಗಿ ಭೀಕರವಾದ ಆಲಿಕಲ್ಲಿನ ಮಳೆಯನ್ನು ಸುರಿಸುವೆನು. ಈಜಿಪ್ಟ್ ರಾಜ್ಯವು ಸ್ಥಾಪನೆಯಾದಂದಿನಿಂದ ಇಂಥ ಆಲಿಕಲ್ಲಿನ ಮಳೆ ಬಿದ್ದಿಲ್ಲ.


ಆ ಕೂಡಲೇ ಸೌಲನು ನೆಲದ ಮೇಲೆ ಕುಸಿದು ಬಿದ್ದನು. ಸಮುವೇಲನು ಹೇಳಿದ ಮಾತುಗಳನ್ನು ಕೇಳಿ ಸೌಲನು ಭಯಗೊಂಡನು. ಸೌಲನು ಅಂದು ಹಗಲು ಮತ್ತು ರಾತ್ರಿ ಏನನ್ನೂ ತಿಂದಿರಲಿಲ್ಲ; ಆದ್ದರಿಂದ ಅವನು ಬಹಳ ಬಲಹೀನನಾಗಿದ್ದನು.


ದುಷ್ಟರು ಸಮಾಧಿಯಲ್ಲಿರುವಾಗ ಕೇಡುಮಾಡುವುದನ್ನು ನಿಲ್ಲಿಸುವರು. ಆಯಾಸಗೊಂಡಿರುವ ಜನರು ಸಮಾಧಿಯಲ್ಲಿ ವಿಶ್ರಾಂತಿಯನ್ನು ಕಂಡುಕೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು