Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 28:21 - ಪರಿಶುದ್ದ ಬೈಬಲ್‌

21 ಆ ಹೆಂಗಸು ಸೌಲನ ಬಳಿಗೆ ಬಂದಳು. ಸೌಲನು ನಿಜವಾಗಿಯೂ ಭಯಗೊಂಡಿರುವುದನ್ನು ಅವಳು ನೋಡಿ, “ಇಲ್ಲಿ ನೋಡು, ನಾನು ನಿನ್ನ ಸೇವಕಿ. ನಾನು ನಿನಗೆ ವಿಧೇಯಳಾಗಿದ್ದೇನೆ. ನಾನು ನನ್ನ ಜೀವವನ್ನೇ ಕಡೆಗಣಿಸಿ ನೀನು ಹೇಳಿದ್ದನ್ನು ಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆ ಸ್ತ್ರೀಯು ಸೌಲನ ಹತ್ತಿರ ಬಂದು ಅವನು ಬಹು ಭೀತನಾಗಿದ್ದಾನೆಂದು ಕಂಡು ಅವನಿಗೆ, “ನಿನ್ನ ದಾಸಿಯಾದ ನಾನು ನಿನ್ನ ಮಾತನ್ನು ಕೇಳಿದೆನು. ಕೈಯಲ್ಲಿ ಜೀವಹಿಡಿದವಳಾಗಿ ನಿನ್ನ ಅಪ್ಪಣೆಯನ್ನು ನೆರವೇರಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಆ ಸ್ತ್ರೀ ಸೌಲನ ಹತ್ತಿರಕ್ಕೆ ಬಂದು ಅವನು ಬಹುಭೀತನಾಗಿದ್ದಾನೆಂದು ಕಂಡು, “ನಿಮ್ಮ ದಾಸಿಯಾದ ನಾನು ನಿಮ್ಮ ಮಾತು ಕೇಳಿದೆನು; ಕೈಯಲ್ಲಿ ಜೀವ ಹಿಡಿದವಳಾಗಿ ನಿಮ್ಮ ಅಪ್ಪಣೆಯನ್ನು ನೆರವೇರಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆ ಸ್ತ್ರೀಯು ಸೌಲನ ಹತ್ತಿರ ಬಂದು ಅವನು ಬಹು ಭೀತನಾಗಿದ್ದಾನೆಂದು ಕಂಡು ಅವನಿಗೆ - ನಿನ್ನ ದಾಸಿಯಾದ ನಾನು ನಿನ್ನ ಮಾತು ಕೇಳಿದೆನು; ಕೈಯಲ್ಲಿ ಜೀವಹಿಡಿದವಳಾಗಿ ನಿನ್ನ ಅಪ್ಪಣೆಯನ್ನು ನೆರವೇರಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆಗ ಆ ಸ್ತ್ರೀಯು ಸೌಲನ ಬಳಿಗೆ ಬಂದು, ಅವನು ಬಹಳ ತಲ್ಲಣಪಟ್ಟನೆಂದು ಕಂಡು ಅವನಿಗೆ, “ನಿನ್ನ ದಾಸಿಯಾದ ನಾನು ನಿನ್ನ ಮಾತನ್ನು ಕೇಳಿ, ನನ್ನ ಪ್ರಾಣವನ್ನು ನನ್ನ ಕೈಯಲ್ಲಿ ಇಟ್ಟುಕೊಂಡವಳಾಗಿ, ನೀನು ನನಗೆ ಹೇಳಿದ ಮಾತುಗಳನ್ನು ಕೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 28:21
6 ತಿಳಿವುಗಳ ಹೋಲಿಕೆ  

ನೀವು ನಮ್ಮ ಸಹಾಯಕ್ಕೆ ಬರುವುದಿಲ್ಲವೆಂದು ತಿಳಿದಾಗ ನಾನು ನನ್ನ ಜೀವವನ್ನೇ ಗಂಡಾಂತರಕ್ಕೆ ಒಡ್ಡಿದೆ. ಅಮ್ಮೋನಿಯರ ವಿರುದ್ಧ ಯುದ್ಧಮಾಡಲು ನಾನು ನದಿಯನ್ನು ದಾಟಿಹೋದೆ. ಅವರನ್ನು ಸೋಲಿಸಲು ಯೆಹೋವನು ನನಗೆ ಸಹಾಯ ಮಾಡಿದನು. ಈಗ ನೀವು ನನ್ನ ಸಂಗಡ ಯುದ್ಧ ಮಾಡುವುದಕ್ಕಾಗಿ ಏಕೆ ಬಂದಿದ್ದೀರಿ?” ಎಂದು ಕೇಳಿದನು.


ನಾನು ನನ್ನನ್ನು ಅಪಾಯಕ್ಕೊಡ್ಡುವೆನು; ನನ್ನ ಜೀವವನ್ನು ಕೈಯಲ್ಲಿ ಹಿಡಿದುಕೊಂಡಿರುವೆನು.


ದಾವೀದನು ಫಿಲಿಷ್ಟಿಯನಾದ ಗೊಲ್ಯಾತನನ್ನು ಕೊಂದಾಗ ತನ್ನ ಜೀವವನ್ನೇ ಪಣವಾಗಿಟ್ಟಿದ್ದನು. ಯೆಹೋವನು ಇಸ್ರೇಲರೆಲ್ಲರಿಗೂ ಬಹು ದೊಡ್ಡ ಜಯವನ್ನುಂಟುಮಾಡಿದನು. ನೀನು ಅದನ್ನು ನೋಡಿದೆ ಮತ್ತು ಸಂತೋಷಗೊಂಡೆ. ದಾವೀದನಿಗೆ ಕೇಡುಮಾಡಲು ನೀನು ಏಕೆ ಬಯಸಿರುವೆ? ಅವನು ನಿರಪರಾಧಿ. ಅವನನ್ನು ಕೊಲ್ಲಲು ಯಾವ ಕಾರಣವೂ ಇಲ್ಲ!” ಎಂದು ಹೇಳಿದನು.


ಆ ಕೂಡಲೇ ಸೌಲನು ನೆಲದ ಮೇಲೆ ಕುಸಿದು ಬಿದ್ದನು. ಸಮುವೇಲನು ಹೇಳಿದ ಮಾತುಗಳನ್ನು ಕೇಳಿ ಸೌಲನು ಭಯಗೊಂಡನು. ಸೌಲನು ಅಂದು ಹಗಲು ಮತ್ತು ರಾತ್ರಿ ಏನನ್ನೂ ತಿಂದಿರಲಿಲ್ಲ; ಆದ್ದರಿಂದ ಅವನು ಬಹಳ ಬಲಹೀನನಾಗಿದ್ದನು.


ಈಗ ದಯವಿಟ್ಟು ನನ್ನ ಮಾತನ್ನು ಆಲಿಸು. ನಾನು ನಿನಗೆ ಸ್ವಲ್ಪ ಆಹಾರವನ್ನು ಕೊಡುತ್ತೇನೆ. ನೀನು ತಿನ್ನಲೇಬೇಕು. ಆಗ ನಿನ್ನ ಪ್ರಯಾಣವನ್ನು ಮುಂದುವರಿಸಲು ನಿನಗೆ ಸಾಕಷ್ಟು ಶಕ್ತಿಯಿರುವುದು” ಎಂದು ಹೇಳಿದಳು.


ಅರಾಮ್ಯರ ರಾಜನು ಇದರಿಂದ ಬಹಳ ತಳಮಳಗೊಂಡನು. ಅರಾಮ್ಯರ ರಾಜನು ತನ್ನ ಸೇನಾಧಿಕಾರಿಗಳನ್ನು ಕರೆದು ಅವರಿಗೆ, “ಇಸ್ರೇಲಿನ ರಾಜನಿಗಾಗಿ ಗೂಢಚರ್ಯ ನಡೆಸುತ್ತಿರುವವರು ಯಾರೆಂಬುದನ್ನು ಹೇಳಿ?” ಎಂದು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು