Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 29:6 - ಪರಿಶುದ್ದ ಬೈಬಲ್‌

6 ಆದ್ದರಿಂದ ಆಕೀಷನು ದಾವೀದನನ್ನು ಕರೆದು, “ಯೆಹೋವನಾಣೆ, ನೀನು ನನಗೆ ಯಥಾರ್ಥನಾಗಿರುವೆ. ನೀನು ನನ್ನ ಸೈನ್ಯದಲ್ಲಿ ಸೇವೆ ಮಾಡುವುದೂ ನನಗೆ ಇಷ್ಟ. ನೀನು ನನ್ನ ಹತ್ತಿರಕ್ಕೆ ಬಂದಾಗಿನಿಂದ ನಾನು ನಿನ್ನಲ್ಲಿ ಯಾವ ತಪ್ಪನ್ನೂ ಗುರುತಿಸಿಲ್ಲ. ನೀನು ಒಳ್ಳೆಯವನೆಂದು ಫಿಲಿಷ್ಟಿಯರ ಅಧಿಪತಿಗಳು ಸಹ ಯೋಚಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆಗ ಆಕೀಷನು ದಾವೀದನನ್ನು ಕರೆದು ಅವನಿಗೆ, “ಯೆಹೋವನಾಣೆ ನೀನು ಯಥಾರ್ಥನು. ನೀನು ನನ್ನ ಸಂಗಡ ಪಾಳೆಯದಲ್ಲಿದ್ದುಕೊಂಡು ಯುದ್ಧಕ್ಕೆ ಹೋಗುತ್ತಾ ಬರುತ್ತಾ ಇರುವುದು ಯುಕ್ತವೆಂದು ನನಗೆ ತೋರಿತು. ನೀನು ಬಂದಂದಿನಿಂದ ಇಂದಿನವರೆಗೂ ನಾನು ನಿನ್ನಲ್ಲಿ ಯಾವ ದೋಷವನ್ನೂ ಕಾಣಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆಗ ಆಕೀಷನು ದಾವೀದನನ್ನು ಕರೆದು, “ಸರ್ವೇಶ್ವರನಾಣೆ, ನೀನು ಯಥಾರ್ಥನು; ನೀನು ನನ್ನ ಸಂಗಡ ಪಾಳೆಯದಲ್ಲಿದ್ದುಕೊಂಡು ಯುದ್ಧಕ್ಕೆ ಹೋಗುತ್ತಾ ಬರುತ್ತಾ ಇರುವುದು ಯುಕ್ತವೆಂದು ನನಗೆ ತೋರಿತು. ನೀನು ಬಂದಂದಿನಿಂದ ಇಂದಿನವರೆಗೂ ನಿನ್ನಲ್ಲಿ ಯಾವ ದೋಷವನ್ನೂ ಕಾಣಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆಗ ಆಕೀಷನು ದಾವೀದನನ್ನು ಕರೆದು ಅವನಿಗೆ - ಯೆಹೋವನಾಣೆ, ನೀನು ಯಥಾರ್ಥನು; ನೀನು ನನ್ನ ಸಂಗಡ ಪಾಳೆಯದಲ್ಲಿದ್ದುಕೊಂಡು ಯುದ್ಧಕ್ಕೆ ಹೋಗುತ್ತಾ ಬರುತ್ತಾ ಇರುವದು ಯುಕ್ತವೆಂದು ನನಗೆ ತೋರಿತು. ನೀನು ಬಂದಂದಿನಿಂದ ಇಂದಿನವರೆಗೂ ನಿನ್ನಲ್ಲಿ ಯಾವ ದೋಷವನ್ನೂ ಕಾಣಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಗ ಆಕೀಷನು ದಾವೀದನನ್ನು ಕರೆದು ಅವನಿಗೆ, “ನಿಜವಾಗಿಯೂ ಯೆಹೋವ ದೇವರಾಣೆ, ನೀನು ಯಥಾರ್ಥನು, ನೀನು ನನ್ನ ಸಂಗಡ ದಂಡಿನಲ್ಲಿ ಹೋಗುತ್ತಾ ಬರುತ್ತಾ ಇರುವುದು ನನ್ನ ದೃಷ್ಟಿಗೆ ಒಳ್ಳೆಯದು. ನೀನು ನನ್ನ ಬಳಿಗೆ ಬಂದ ದಿನದಿಂದ ಈವರೆಗೂ ನಿನ್ನಲ್ಲಿ ಕೆಟ್ಟದ್ದನ್ನು ಕಂಡಿಲ್ಲ. ಆದರೆ ಈಗ ನೀನು ಅಧಿಪತಿಗಳ ದೃಷ್ಟಿಗೆ ಒಳ್ಳೆಯವನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 29:6
19 ತಿಳಿವುಗಳ ಹೋಲಿಕೆ  

ನೀನು ಮೇಲೇಳುವುದೂ ಕುಳಿತುಕೊಳ್ಳುವುದೂ ನನಗೆ ಗೊತ್ತಿದೆ. ನೀನು ಒಳಗೆ ಬರುವುದೂ ಹೊರಗೆ ಹೋಗುವುದೂ ನನಗೆ ತಿಳಿದಿದೆ. ನೀನು ನನ್ನ ವಿರುದ್ಧ ಯಾವಾಗ ದಂಗೆಯೇಳುವೆ ಎಂಬುದೂ ನನಗೆ ತಿಳಿದಿದೆ.


ಅಬ್ನೇರನು ನೇರನ ಮಗನೆಂಬುದು ನಿನಗೆ ತಿಳಿದಿದೆ. ಅವನು ನಿನ್ನನ್ನು ವಂಚಿಸಲು ಬಂದಿದ್ದನು. ನೀನು ಮಾಡುತ್ತಿರುವುದನ್ನೆಲ್ಲಾ ತಿಳಿದುಕೊಳ್ಳಲು ಅವನು ಬಂದಿದ್ದನು” ಎಂದು ಹೇಳಿದನು.


ನೀನು ಹೋಗುವಾಗಲೂ ಬರುವಾಗಲೂ ಯೆಹೋವನು ನಿನಗೆ ಸಹಾಯಮಾಡುವನು. ಆತನು ನಿನ್ನನ್ನು ಸದಾಕಾಲ ಕಾಪಾಡುವನು.


ಆದರೆ ದಾವೀದನು, “ನಾನು ನಿನ್ನ ಗೆಳೆಯನೆಂಬುದು ನಿನ್ನ ತಂದೆಗೆ ಚೆನ್ನಾಗಿ ತಿಳಿದಿದೆ. ನಿನ್ನ ತಂದೆಯು, ‘ಯೋನಾತಾನನಿಗೆ ಇದು ತಿಳಿಯಲೇಬಾರದು. ಅವನಿಗೆ ತಿಳಿದುಬಿಟ್ಟರೆ ಅವನು ತನ್ನ ಹೃದಯದಲ್ಲಿ ದುಃಖಪಟ್ಟು ದಾವೀದನಿಗೆ ಹೇಳಿಬಿಡುತ್ತಾನೆ’ ಎಂದುಕೊಂಡಿದ್ದಾನೆ. ಯೆಹೋವನಾಣೆ, ನಿನ್ನ ಜೀವದಾಣೆ, ನಾನು ಸಾವಿಗೆ ಬಹು ಹತ್ತಿರವಾಗಿದ್ದೇನೆ” ಎಂದು ಹೇಳಿದನು.


ಆದರೆ ಸಾತ್ವಿಕತೆಯಿಂದ ಗೌರವಕರವಾದ ರೀತಿಯಲ್ಲಿ ಅವರಿಗೆ ಉತ್ತರವನ್ನು ಹೇಳಿ. ನೀವು ಮಾಡುತ್ತಿರುವುದು ಯೋಗ್ಯವಾದದ್ದೆಂಬುದು ನಿಮಗೆ ಯಾವಾಗಲೂ ಖಚಿತವಾಗಿ ತಿಳಿದಿರಬೇಕು. ಆಗ, ನೀವು ಕ್ರಿಸ್ತನಲ್ಲಿ ಒಳ್ಳೆಯವರಾಗಿ ಜೀವಿಸುವುದನ್ನು ನೋಡಿ ನಿಮ್ಮ ಬಗ್ಗೆ ಕೆಟ್ಟಮಾತುಗಳನ್ನು ಹೇಳುವವರು ತಾವು ಹೇಳಿದ ಕೆಟ್ಟ ಸಂಗತಿಗಳಿಗಾಗಿ ನಾಚಿಕೆಪಡುವರು.


ನಂಬಿಕೆಯಿಲ್ಲದ ಜನರು ನಿಮ್ಮ ಸುತ್ತಮುತ್ತಲೆಲ್ಲಾ ವಾಸಿಸುತ್ತಿದ್ದಾರೆ. ನೀವು ತಪ್ಪು ಮಾಡುತ್ತಿರುವಿರೆಂದು ಅವರು ಹೇಳುವ ಸಾಧ್ಯತೆಯಿದೆ. ಆದ್ದರಿಂದ ಒಳ್ಳೆಯವರಾಗಿ ಬಾಳಿರಿ. ನೀವು ಮಾಡುವ ಒಳ್ಳೆಯ ಕಾರ್ಯಗಳನ್ನು ಅವರು ನೋಡುವರು ಮತ್ತು ದೇವರು ಪ್ರತ್ಯಕ್ಷನಾದ ದಿನದಂದು ಆತನನ್ನು ಕೊಂಡಾಡುವರು.


ಅದೇ ರೀತಿಯಲ್ಲಿ ನೀವು ಜನರಿಗೆ ಬೆಳಕಾಗಿರಬೇಕು. ಹೀಗೆ ಅವರು ನಿಮ್ಮ ಸತ್ಕಾರ್ಯಗಳನ್ನು ಕಂಡು ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಕೊಂಡಾಡಲಿ.


ಆ ಜನರು ತಮ್ಮ ಪಾಠಗಳನ್ನು ಸರಿಯಾಗಿ ಕಲಿತುಕೊಳ್ಳಬೇಕೆಂಬುದು ನನ್ನ ಅಪೇಕ್ಷೆ. ಮೊದಲು, ಆ ಜನರು ಬಾಳನ ಹೆಸರೆತ್ತಿ ಪ್ರಮಾಣ ಮಾಡುವುದನ್ನು ನನ್ನ ಜನರಿಗೆ ಕಲಿಸಿಕೊಟ್ಟರು. ಈಗ ಆ ಜನರು ಅದೇ ರೀತಿಯಲ್ಲಿ ತಮ್ಮ ಪಾಠವನ್ನು ಕಲಿತುಕೊಳ್ಳಬೇಕೆಂಬುದು ನನ್ನ ಇಚ್ಛೆ. ಅವರು, ‘ಯೆಹೋವನ ಜೀವದಾಣೆ’ ಎಂದು ಹೇಳಿದರೆ ಅವರನ್ನು ಅಭಿವೃದ್ಧಿಪಡಿಸಿ ಅವರನ್ನು ನಮ್ಮ ಜನರ ಮಧ್ಯದಲ್ಲಿ ನೆಲೆಗೊಳಿಸುವೆನು.


“ಈಗ ಜನರು ಭೂಮಿಯಿಂದ ಆಶೀರ್ವಾದ ಕೇಳುತ್ತಾರೆ. ಆದರೆ ಮುಂದಿನ ದಿನಗಳಲ್ಲಿ ಅವರು ನಂಬಿಗಸ್ತನಾದ ದೇವರಿಂದ ಆಶೀರ್ವಾದ ಕೇಳುವರು. ಈಗ ಜನರು ವಾಗ್ದಾನ ಮಾಡುವಾಗ ಭೂಮಿಯ ಬಲದಲ್ಲಿ ಭರವಸವಿಡುವರು. ಆದರೆ ಮುಂದಿನ ದಿನಗಳಲ್ಲಿ ನಂಬಿಗಸ್ತನಾದ ದೇವರ ಮೇಲೆ ಭರವಸವಿಡುವರು. ಯಾಕೆಂದರೆ ಗತಿಸಿದ ಸಂಕಟಗಳೆಲ್ಲವೂ ಮರೆತುಹೋಗುತ್ತವೆ. ಇವುಗಳು ನನ್ನ ಕಣ್ಣುಗಳಿಗೆ ಮರೆಯಾಗಿರುತ್ತವೆ.”


ನಿನ್ನ ಸೈನ್ಯದ ಬಗ್ಗೆಯೂ ನಿನ್ನ ಯುದ್ಧಗಳ ಬಗ್ಗೆಯೂ ನನಗೆ ಗೊತ್ತಿದೆ. ನೀನು ವಿಶ್ರಾಂತಿ ತೆಗೆದುಕೊಂಡದ್ದೂ ನನಗೆ ಗೊತ್ತಿದೆ. ನೀನು ಯುದ್ಧಕ್ಕೆ ಹೋದದ್ದೂ ನನಗೆ ಗೊತ್ತಿದೆ. ನೀನು ಯುದ್ಧದಿಂದ ಹಿಂತಿರುಗಿ ಮನೆಗೆ ಬಂದದ್ದೂ ನನಗೆ ಗೊತ್ತಿದೆ. ನೀನು ನನ್ನ ಮೇಲೆ ಕೋಪಗೊಂಡಿರುವುದೂ ನನಗೆ ಗೊತ್ತಿದೆ.


ಫಿಲಿಷ್ಟಿಯರ ಅಧಿಪತಿಗಳು, “ಈ ಇಬ್ರಿಯರು ಇಲ್ಲಿ ಮಾಡುತ್ತಿರುವುದೇನು?” ಎಂದು ಆಕೀಷನನ್ನು ಕೇಳಿದರು. ಆಕೀಷನು ಫಿಲಿಷ್ಟಿಯರ ಸೇನಾಧಿಪತಿಗಳಿಗೆ, “ಇವನು ದಾವೀದ. ದಾವೀದನು ಸೌಲನ ಅಧಿಕಾರಿಗಳಲ್ಲಿ ಒಬ್ಬನು. ದಾವೀದನು ಬಹಳ ಕಾಲದಿಂದ ನನ್ನೊಡನೆ ಇದ್ದಾನೆ. ದಾವೀದನು ಸೌಲನನ್ನು ತೊರೆದು ನನ್ನ ಬಳಿಗೆ ಬಂದಾಗಿನಿಂದ ನಾನು ಅವನಲ್ಲಿ ಯಾವ ತಪ್ಪುನ್ನೂ ಗುರುತಿಸಿಲ್ಲ” ಎಂದನು.


ಸೌಲನು ಯೆಹೋವನ ಹೆಸರಿನಲ್ಲಿ ಆ ಬೇತಾಳಿಕಳಿಗೆ ವಾಗ್ದಾನಮಾಡಿ, “ಯೆಹೋವನಾಣೆ, ಈ ಕಾರ್ಯವನ್ನು ಮಾಡಿದ್ದಕ್ಕಾಗಿ ನಿನಗೆ ದಂಡನೆಯಾಗುವುದಿಲ್ಲ” ಎಂದು ಹೇಳಿದನು.


ಯಾಜಕನಾದ ಫೀನೆಹಾಸನು ಮತ್ತು ಅವನ ಜೊತೆಯಲ್ಲಿ ಬಂದ ಕುಲಾಧಿಪತಿಗಳು ರೂಬೇನ್ಯರ, ಗಾದ್ಯರ ಮತ್ತು ಮನಸ್ಸೆಕುಲದ ಅರ್ಧಜನರ ಮಾತುಗಳನ್ನು ಕೇಳಿದರು. ಇವರು ಹೇಳುತ್ತಿರುವುದು ಸತ್ಯ ಎಂದು ಅವರಿಗೆ ಮನದಟ್ಟಾಯಿತು.


“ನೀವು ನಿಮ್ಮ ದೇವರಾದ ಯೆಹೋವನನ್ನು ಗೌರವಿಸಿ ಆತನೊಬ್ಬನನ್ನೇ ಆರಾಧಿಸಬೇಕು. ಆತನನ್ನು ಬಿಟ್ಟು ತೊಲಗದಿರಿ. ವಾಗ್ದಾನ, ಒಡಂಬಡಿಕೆಗಳನ್ನು ಮಾಡುವಾಗ ಆತನ ಹೆಸರಿನಲ್ಲಿಯೇ ಮಾಡಿರಿ.


ಅವನು ಅವರನ್ನು ಯುದ್ಧದಲ್ಲಿ ಮುನ್ನಡೆಸುವವನೂ ಸೈನ್ಯದ ಯೋಜನೆಗಳನ್ನು ರೂಪಿಸುವವನೂ ಆಗಿರಲಿ. ಆಗ ಯೆಹೋವನ ಸಮೂಹವು ಕುರುಬನಿಲ್ಲದ ಕುರಿಯಂತಾಗುವುದಿಲ್ಲ.”


ಅದಕ್ಕೆ ಅಬ್ರಾಮನು ಸಾರಯಳಿಗೆ, “ನೀನು ಹಾಗರಳ ಯಜಮಾನಿ. ನೀನು ಅವಳಿಗೆ ಏನುಬೇಕಾದರೂ ಮಾಡಬಹುದು” ಎಂದು ಹೇಳಿದನು. ಆದ್ದರಿಂದ ಸಾರಯಳು ಹಾಗರಳನ್ನು ಶಿಕ್ಷಿಸಿದಳು. ಆಗ ಹಾಗರಳು ಓಡಿಹೋದಳು.


ಅಷ್ಡೋದಿನ ಜನರು ಫಿಲಿಷ್ಟಿಯರ ಐದು ಮಂದಿ ಅಧಿಪತಿಗಳನ್ನು ಒಟ್ಟಿಗೆ ಸೇರಿಸಿ “ಇಸ್ರೇಲರ ಯೆಹೋವನ ಪವಿತ್ರ ಪೆಟ್ಟಿಗೆಯನ್ನು ನಾವು ಏನು ಮಾಡೋಣ?” ಎಂದು ಕೇಳಿದರು. ಅಧಿಪತಿಗಳು, “ಇಸ್ರೇಲರ ಪವಿತ್ರ ಪೆಟ್ಟಿಗೆಯನ್ನು ‘ಗತ್’ ನಗರಕ್ಕೆ ಕಳುಹಿಸಿ” ಎಂದು ಹೇಳಿದರು. ಅಂತೆಯೇ, ಅವರು ಅದನ್ನು ಗತ್ ನಗರಕ್ಕೆ ಕಳುಹಿಸಿದರು.


ಆದ್ದರಿಂದ ಸಮಾಧಾನದಿಂದ ಹಿಂದಿರುಗಿ ಹೋಗು. ಫಿಲಿಷ್ಟಿಯರ ಅಧಿಪತಿಗಳ ವಿರುದ್ಧ ಏನನ್ನೂ ಮಾಡಬೇಡ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು