Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 3:19 - ಪರಿಶುದ್ದ ಬೈಬಲ್‌

19 ಯೆಹೋವನು ಸಮುವೇಲನ ಸಂಗಡವಿದ್ದನು; ಸಮುವೇಲನು ಬೆಳೆದು ದೊಡ್ಡವನಾದನು; ಸಮುವೇಲನ ಯಾವ ಸಂದೇಶವೂ ಸುಳ್ಳಾಗದಂತೆ ಯೆಹೋವನು ನೋಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಸಮುವೇಲನು ದೊಡ್ಡವನಾಗುತ್ತಾ ಬಂದನು. ಯೆಹೋವನು ಅವನೊಡನೆ ಇದ್ದುದ್ದರಿಂದ ಅವನ ಪ್ರವಾದನೆಗಳಲ್ಲಿ ಒಂದೂ ಬಿದ್ದುಹೋಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಸಮುವೇಲನು ದೊಡ್ಡವನಾಗುತ್ತಾ ಬಂದನು. ಸರ್ವೇಶ್ವರ ಅವನೊಡನೆ ಇದ್ದರು. ಆದುದರಿಂದಲೆ ಅವನು ಪ್ರವಾದನೆ ಮಾಡಿದವುಗಳಲ್ಲಿ ಒಂದೂ ತಪ್ಪಿಹೋಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಸಮುವೇಲನು ದೊಡ್ಡವನಾಗುತ್ತಾ ಬಂದನಷ್ಟೆ. ಯೆಹೋವನು ಅವನೊಡನೆ ಇದ್ದದರಿಂದ ಅವನ ಪ್ರವಾದನೆಗಳಲ್ಲಿ ಒಂದೂ ಬಿದ್ದುಹೋಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಸಮುಯೇಲನು ಬೆಳೆಯುತ್ತಾ ಬಂದನು. ಯೆಹೋವ ದೇವರು ಅವನ ಸಂಗಡ ಇದ್ದು, ಅವರ ವಾಕ್ಯಗಳಲ್ಲಿ ಒಂದಾದರೂ ಬಿದ್ದು ಹೋಗಗೊಡಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 3:19
32 ತಿಳಿವುಗಳ ಹೋಲಿಕೆ  

ಆದರೆ ಯೆಹೋವನ ಸಹಾಯದಿಂದ ಯೋಸೇಫನು ಏಳಿಗೆಯಾಗಿ ತನ್ನ ಯಜಮಾನನಾದ ಈಜಿಪ್ಟಿನ ಪೋಟೀಫರನ ಮನೆಯಲ್ಲಿ ಸೇವಕನಾದನು.


ಆದರೆ ಆ ಸೇವಕನು, “ಈ ಪಟ್ಟಣದಲ್ಲಿ ಒಬ್ಬ ದೇವರ ಮನುಷ್ಯನಿದ್ದಾನೆ. ಜನರು ಅವನನ್ನು ಗೌರವಿಸುತ್ತಾರೆ. ಅವನು ಹೇಳುವ ವಿಷಯಗಳೆಲ್ಲ ನಿಜವಾಗುತ್ತವೆ. ಆದ್ದರಿಂದ ಈ ಪಟ್ಟಣಕ್ಕೆ ಹೋಗೋಣ ಬಹುಶಃ ನಾವು ಮುಂದೆ ಎಲ್ಲಿಗೆ ಹೋಗಬೇಕೆಂಬುದನ್ನು ಈ ದೇವರ ಮನುಷ್ಯನು ತಿಳಿಸಬಹುದು” ಎಂದು ಉತ್ತರಿಸಿದನು.


“ಯೆಹೋವನಿಗೆ ಸ್ತೋತ್ರ ಮಾಡಿರಿ! ಆತನು ಇಸ್ರೇಲಿನ ತನ್ನ ಜನರಿಗೆ ವಿಶ್ರಾಂತಿಯನ್ನು ಕೊಡುವುದಾಗಿ ವಾಗ್ದಾನ ಮಾಡಿದ್ದಾನೆ. ಆತನು ನಮಗೆ ವಿಶ್ರಾಂತಿಯನ್ನು ದಯಪಾಲಿಸಿರುವನು! ಯೆಹೋವನು ತನ್ನ ಸೇವಕನಾದ ಮೋಶೆಯಿಂದ, ಇಸ್ರೇಲಿನ ಜನರಿಗೆ ಅನೇಕ ಒಳ್ಳೆಯ ವಾಗ್ದಾನಗಳನ್ನು ಮಾಡಿದ್ದಾನೆ. ಯೆಹೋವನು ತನ್ನ ವಾಗ್ದಾನಗಳನ್ನೆಲ್ಲ ಈಡೇರಿಸಿರುವನು.


ಯೇಸುವು ಜ್ಞಾನದಲ್ಲಿಯೂ ದೇಹಬಲದಲ್ಲಿಯೂ ವೃದ್ಧಿಯಾಗುತ್ತಾ ಬಂದನು. ದೇವರಿಗೂ ಜನರಿಗೂ ಅಚ್ಚುಮೆಚ್ಚಾದನು.


ಪ್ರಭುವು ನಿನ್ನ ಆತ್ಮದ ಸಂಗಡ ಇರಲಿ. ಆತನ ಕೃಪೆಯು ನಿನ್ನೊಂದಿಗಿರಲಿ.


ಯೆಹೋವನು ಹನ್ನಳಿಗೆ ದಯೆತೋರಿದನು. ಅವಳಿಗೆ ಮೂರು ಮಂದಿ ಗಂಡುಮಕ್ಕಳೂ ಇಬ್ಬರು ಹೆಣ್ಣುಮಕ್ಕಳೂ ಆದರು. ಬಾಲಕನಾದ ಸಮುವೇಲನು ಯೆಹೋವನ ಸನ್ನಿಧಿಯಲ್ಲಿ ದೊಡ್ಡವನಾದನು.


ಸಹೋದರ ಸಹೋದರಿಯರೇ, ನಿಮಗೆ ವಂದನೆಗಳು. ಪರಿಪೂರ್ಣರಾಗಿರಲು ಪ್ರಯತ್ನಿಸಿ. ನಾನು ಕೇಳಿಕೊಂಡ ಕಾರ್ಯಗಳನ್ನು ಮಾಡಿರಿ. ಒಂದೇ ಮನಸ್ಸು ಉಳ್ಳವರಾಗಿದ್ದು ಸಮಾಧಾನದಿಂದ ಜೀವಿಸಿರಿ. ಆಗ ಪ್ರೀತಿಸ್ವರೂಪನೂ ಶಾಂತಿದಾಯಕನೂ ಆದ ದೇವರು ನಿಮ್ಮೊಂದಿಗೆ ಇರುವನು.


ಬಾಲಕ ಯೇಸು ಬೆಳೆದು ಬಲಗೊಂಡು ಸಂಪೂರ್ಣ ಜ್ಞಾನಿಯಾದನು. ದೇವರ ಆಶೀರ್ವಾದವು ಆತನೊಡನೆ ಇತ್ತು.


ಆ ಮಗುವು (ಯೋಹಾನನು) ಬೆಳೆದು ದೊಡ್ಡವನಾಗಿ ಆತ್ಮದಲ್ಲಿ ಬಲವುಳ್ಳವನಾದನು. ಇಸ್ರೇಲರಿಗೆ ತನ್ನ ಉಪದೇಶವನ್ನು ಆರಂಭಿಸುವ ತನಕ ಯೋಹಾನನು ಅಡವಿಯಲ್ಲಿ ವಾಸವಾಗಿದ್ದನು.


ನಿನ್ನ ಕಷ್ಟಕಾಲದಲ್ಲಿ ನಾನು ನಿನ್ನೊಂದಿಗಿರುವೆನು. ನೀನು ಜಲರಾಶಿಯನ್ನು ಹಾದುಹೋಗುವಾಗ ನಾನೇ ನಿನ್ನೊಂದಿಗಿರುವೆ. ನೀನು ನದಿಗಳನ್ನು ದಾಟುವಾಗ ಅಪಾಯಕ್ಕೆ ಗುರಿಯಾಗದಿರುವೆ. ಬೆಂಕಿಯೊಳಗಿಂದ ನಡೆಯುವಾಗ ನಿನಗೆ ಹಾನಿಯಾಗದು.


ಯೆಹೋವನು ದಾವೀದನ ಜೊತೆಗಿದ್ದನು. ಆದ್ದರಿಂದ ದಾವೀದನು ಎಲ್ಲದರಲ್ಲೂ ಯಶ್ವಸಿಯಾದನು.


ಅದೇನೆಂದರೆ: “ಕನ್ನಿಕೆಯೊಬ್ಬಳು ಗರ್ಭಿಣಿಯಾಗಿ ಒಬ್ಬ ಮಗನಿಗೆ ಜನ್ಮ ಕೊಡುತ್ತಾಳೆ. ಆತನಿಗೆ ಇಮ್ಮಾನುವೇಲ್ ಎಂಬ ಹೆಸರನ್ನು ಇಡುವರು.” (ಇಮ್ಮಾನುವೇಲ್ ಎಂದರೆ “ದೇವರು ನಮ್ಮ ಸಂಗಡ ಇದ್ದಾನೆ” ಎಂದರ್ಥ.)


ಯೆಹೋವನು ತನ್ನ ಸೇವಕರನ್ನು ಜನರಿಗೆ ಸಂದೇಶ ತಿಳಿಸುವದಕ್ಕಾಗಿ ಉಪಯೋಗಿಸಿಕೊಳ್ಳುತ್ತಿದ್ದಾನೆ. ಆತನ ಸಂದೇಶಗಳು ಸತ್ಯವಾದವುಗಳಾಗಿವೆ. ಜನರು ಮಾಡಬೇಕಾದ ಕಾರ್ಯಗಳ ಬಗ್ಗೆ ಯೆಹೋವನು ಸಂದೇಶಕರನ್ನು ಕಳುಹಿಸುತ್ತಾನೆ. ಅವರ ಸಲಹೆಯು ಒಳ್ಳೆಯದೆಂದು ಯೆಹೋವನು ತೋರಿಸಿಕೊಡುತ್ತಾನೆ. ಯೆಹೋವನು ಜೆರುಸಲೇಮಿಗೆ, “ಜನರು ನಿನ್ನಲ್ಲಿ ಮತ್ತೆ ವಾಸಮಾಡುವರು” ಎಂತಲೂ ಯೆಹೂದದ ನಗರಗಳಿಗೆ, “ನೀವು ತಿರುಗಿ ಕಟ್ಟಲ್ಪಡುವಿರಿ” ಎಂತಲೂ ಕೆಡವಲ್ಪಟ್ಟ ನಗರಗಳಿಗೆ, “ನಾನು ತಿರುಗಿ ನಿಮ್ಮನ್ನು ನಗರಗಳನ್ನಾಗಿ ಮಾಡುತ್ತೇನೆ” ಎಂತಲೂ ಹೇಳುತ್ತಾನೆ.


ಆಮೇಲೆ ಅಬೀಮೆಲೆಕನು ಮತ್ತು ಫೀಕೋಲನು ಅಬ್ರಹಾಮನೊಡನೆ ಮಾತಾಡಿದರು. ಫೀಕೋಲನು ಅಬೀಮೆಲೆಕನ ಸೈನ್ಯಾಧಿಕಾರಿಯಾಗಿದ್ದನು. ಅಬೀಮೆಲೆಕನು ಅಬ್ರಹಾಮನಿಗೆ, “ನೀನು ಮಾಡುವ ಪ್ರತಿಯೊಂದರಲ್ಲೂ ದೇವರು ನಿನ್ನೊಡನೆ ಇದ್ದಾನೆ.


ದೇವದೂತನು ಆಕೆಯ ಬಳಿಗೆ ಬಂದು, “ದೇವರಾಶೀರ್ವಾದ ಹೊಂದಿದವಳೇ, ನಿನಗೆ ಶುಭವಾಗಲಿ! ಪ್ರಭುವು ನಿನ್ನೊಡನೆ ಇದ್ದಾನೆ” ಎಂದು ಹೇಳಿದನು.


ಆ ಸ್ತ್ರೀಗೆ ಒಂದು ಗಂಡುಮಗು ಜನಿಸಿತು. ಅವಳು ಅದಕ್ಕೆ ಸಂಸೋನ ಎಂದು ಹೆಸರಿಟ್ಟಳು. ಸಂಸೋನನು ಬೆಳೆದು ದೊಡ್ಡವನಾದನು. ಯೆಹೋವನು ಅವನನ್ನು ಆಶೀರ್ವದಿಸಿದನು.


“ನಾನು ನಿನ್ನ ಸಂಗಡವಿದ್ದು ನೀನು ಹೋಗುವ ಪ್ರತಿಯೊಂದು ಸ್ಥಳದಲ್ಲಿಯೂ ನಿನ್ನನ್ನು ಕಾಪಾಡುವೆನು; ನಿನ್ನನ್ನು ಈ ಸ್ಥಳಕ್ಕೆ ಮತ್ತೆ ಕರೆದುಕೊಂಡು ಬರುವೆನು. ನಾನು ವಾಗ್ದಾನ ಮಾಡಿದ್ದನ್ನು ನೆರವೇರಿಸುವ ತನಕ ನಾನು ನಿನ್ನನ್ನು ಬಿಟ್ಟು ಹೋಗುವುದಿಲ್ಲ” ಎಂದು ಹೇಳಿದನು.


ಈಗ ನಿಮ್ಮನ್ನು ಮುನ್ನಡೆಸಲು ಒಬ್ಬ ರಾಜನಿದ್ದಾನೆ. ನಾನು ಮುದುಕನಾಗಿರುವೆ ಮತ್ತು ನನ್ನ ತಲೆ ನರೆತುಹೋಗಿದೆ. ನನ್ನ ಗಂಡುಮಕ್ಕಳು ನಿಮ್ಮೊಂದಿಗಿದ್ದಾರೆ. ನಾನು ಚಿಕ್ಕಂದಿನಿಂದಲೇ ನಿಮ್ಮ ನಾಯಕನಾಗಿದ್ದೆ.


ಅವನ ಸೇವಕರಲ್ಲಿ ಒಬ್ಬನು, “ಇಷಯ ಎಂಬ ಹೆಸರಿನ ಒಬ್ಬ ಮನುಷ್ಯನು ಬೆತ್ಲೆಹೇಮಿನಲ್ಲಿ ವಾಸಿಸುತ್ತಿದ್ದಾನೆ. ನಾನು ಇಷಯನ ಮಗನನ್ನು ನೋಡಿದ್ದೇನೆ. ಅವನು ಕಿನ್ನರಿ ಬಾರಿಸುತ್ತಾನೆ. ಅವನು ಧೈರ್ಯಶಾಲಿ ಮತ್ತು ಒಳ್ಳೆಯ ಹೋರಾಟಗಾರ; ಅವನು ಬುದ್ಧಿವಂತನೂ ರಣಶೂರನೂ ರೂಪವಂತನೂ ಆಗಿದ್ದಾನೆ. ಅದಲ್ಲದೆ ಯೆಹೋವನು ಅವನೊಂದಿಗಿದ್ದಾನೆ” ಎಂದು ಹೇಳಿದನು.


ಯೆಹೋವನು ಯೋಸೇಫನ ಸಂಗಡವಿದ್ದು ಅವನನ್ನು ಎಲ್ಲಾ ಕೆಲಸಕಾರ್ಯಗಳಲ್ಲಿ ಯಶಸ್ವಿಯಾಗುವಂತೆ ಮಾಡುತ್ತಿರುವುದನ್ನು ಪೋಟೀಫರನು ಗಮನಿಸಿದನು.


ಒಬ್ಬ ಪ್ರವಾದಿಯು ತಾನು ಯೆಹೋವನಿಂದ ಕಳುಹಿಸಲ್ಪಟ್ಟವನು ಎಂದು ಹೇಳಿಕೊಂಡರೆ ಮತ್ತು ಅವನು ಹೇಳಿದ ಮಾತುಗಳು ನೆರವೇರದೆ ಹೋದರೆ ಆಗ ಆ ವಿಷಯಗಳನ್ನು ಯೆಹೋವನು ಹೇಳಲಿಲ್ಲವೆಂದು ನಿಮಗೆ ಗೊತ್ತಾಗುವುದು. ಆ ಪ್ರವಾದಿಯು ತನ್ನದೆ ಆದ ಆಲೋಚನೆಯನ್ನು ನಿಮಗೆ ಹೇಳುತ್ತಿದ್ದಾನೆಂದು ನಿಮಗೆ ತಿಳಿಯುವುದು. ನೀವು ಅವನಿಗೆ ಭಯಪಡಬೇಡಿರಿ.


ಯೆಹೋವನು ಇಸ್ರೇಲರಿಗೆ ಮಾಡಿದ ಪ್ರತಿಯೊಂದು ವಾಗ್ದಾನವನ್ನು ನೆರವೇರಿಸಿದನು. ಆತನು ಕಾರ್ಯರೂಪಕ್ಕೆ ತರದ ವಾಗ್ದನವೇ ಉಳಿಯಲಿಲ್ಲ. ಪ್ರತಿಯೊಂದು ವಾಗ್ದಾನವೂ ನೆರವೇರಿತು.


ಬಾಲಕನಾದ ಸಮುವೇಲನು ದೊಡ್ಡವನಾಗುತ್ತಲೇ ಇದ್ದನು. ಅವನು ದೇವರಿಗೆ ಮತ್ತು ಜನರಿಗೆ ಪ್ರಿಯನಾದನು.


ಈ ಕಾರ್ಯಗಳು ಸಂಭವಿಸಿದ ಮೇಲೆ, ನೀನು ನಿನ್ನ ನಿರ್ಧಾರದಂತೆ ಮಾಡು. ಯಾಕೆಂದರೆ ದೇವರು ನಿನ್ನೊಂದಿಗಿರುತ್ತಾನೆ.


ಸೌಲನು ದಾವೀದನನ್ನು ಬೇರೆಬೇರೆ ಯುದ್ಧಗಳಲ್ಲಿ ಹೋರಾಡಲು ಕಳುಹಿಸಿದನು. ದಾವೀದನು ಆ ಯುದ್ಧಗಳಲ್ಲೆಲ್ಲಾ ಯಶ್ವಸಿಯಾದನು. ಆದ್ದರಿಂದ ಸೌಲನು ದಾವೀದನನ್ನು ಸೈನ್ಯಾಧಿಪತಿಯನ್ನಾಗಿ ನೇಮಿಸಿದನು. ಇದು ಸೌಲನ ಅಧಿಕಾರಿಗಳಿಗೂ ಇತರರಿಗೂ ಸಂತಸವನ್ನು ಉಂಟುಮಾಡಿತು!


ಯೆಹೋವನು ಸೌಲನನ್ನು ಬಿಟ್ಟು ದಾವೀದನ ಜೊತೆಗಿದ್ದನು. ಆದ್ದರಿಂದ ಸೌಲನು ದಾವೀದನಿಗೆ ಭಯಪಟ್ಟನು.


ಯೆಹೋವನು ಹೇಳಿದ್ದೆಲ್ಲವೂ ಸಂಭವಿಸುತ್ತದೆ ಎಂಬುದನ್ನು ನೀವು ತಿಳಿದಿರಬೇಕು. ಅಹಾಬನ ಕುಟುಂಬಕ್ಕೆ ಇವುಗಳು ಸಂಭವಿಸುತ್ತವೆಯೆಂದು ಯೆಹೋವನು ಎಲೀಯನ ಮೂಲಕ ತಿಳಿಸಿದ್ದನು. ಅಂತೆಯೇ ಆತನು ಮಾಡಿದ್ದಾನೆ” ಅಂದನು.


ಹೀಗೆ ಯೆಹೋವನ ವಾಕ್ಯವು ನೆರವೇರಿತು. ಯೇಹುವಿನ ಸಂತತಿಯವರು ನಾಲ್ಕನೆಯ ತಲೆಮಾರಿನವರೆಗೆ ಇಸ್ರೇಲಿನ ರಾಜರಾಗಿರುತ್ತಾರೆ ಎಂದು ಯೆಹೋವನು ಅವನಿಗೆ ಮೊದಲೇ ತಿಳಿಸಿದ್ದನು.


ಇಸ್ರೇಲಿನ ದೇವರಾದ ಯೆಹೋವನು ಹೀಗೆನ್ನುತ್ತಾನೆ: ‘ಈ ದೇಶದ ಮೇಲೆ ಮತ್ತು ಇಲ್ಲಿ ವಾಸಮಾಡುತ್ತಿರುವ ಜನರ ಮೇಲೆ ನಾನು ಕೇಡುಗಳನ್ನು ಬರಮಾಡುವೆನು. ಯೆಹೂದದ ರಾಜನು ಓದಿದ ಗ್ರಂಥದಲ್ಲಿ ಈ ಕೇಡುಗಳನ್ನು ತಿಳಿಸಲಾಗಿದೆ.


ಅದೇ ಪ್ರಕಾರ ನನ್ನ ಬಾಯಿಂದ ಹೊರಟ ಮಾತುಗಳು ಯೋಚಿಸಿದ ಕಾರ್ಯಗಳನ್ನು ಮಾಡದೆ ಹಿಂತಿರುಗುವುದಿಲ್ಲ. ನನ್ನ ಮಾತುಗಳು ನನ್ನ ಆಲೋಚನೆಗೆ ಸರಿಯಾಗಿ ಕಾರ್ಯ ಮಾಡುವವು. ನನ್ನ ಮಾತುಗಳು ತಮಗೆ ನೇಮಕವಾದ ಆ ಕಾರ್ಯಗಳನ್ನು ಮಾಡಿಮುಗಿಸುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು