Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 30:13 - ಪರಿಶುದ್ದ ಬೈಬಲ್‌

13 ದಾವೀದನು ಈಜಿಪ್ಟಿನವನನ್ನು, “ನಿಮ್ಮ ಒಡೆಯನು ಯಾರು? ನೀನು ಬಂದಿರುವುದು ಎಲ್ಲಿಂದ?” ಎಂದು ಕೇಳಿದನು. ಈಜಿಪ್ಟಿನವನು, “ನಾನು ಒಬ್ಬ ಈಜಿಪ್ಟಿನವನು ನಾನು ಒಬ್ಬ ಅಮಾಲೇಕ್ಯನ ಗುಲಾಮನು. ಮೂರು ದಿನಗಳ ಹಿಂದೆ ನಾನು ಅಸ್ವಸ್ಥನಾಗಿದ್ದರಿಂದ ನಮ್ಮ ಒಡೆಯನು ನನ್ನನ್ನು ಬಿಟ್ಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆಗ ದಾವೀದನು ಅವನನ್ನು, “ನೀನು ಯಾರ ಕಡೆಯವನು, ಎಲ್ಲಿಯವನು?” ಎಂದು ಕೇಳಿದನು. ಅವನು “ನಾನು ಐಗುಪ್ತನು, ಒಬ್ಬ ಅಮಾಲೇಕ್ಯನ ದಾಸನು. ನಾನು ಮೂರು ದಿನಗಳ ಹಿಂದೆ ಅಸ್ವಸ್ಥನಾಗಿ ಮಲಗಿಕೊಂಡಿದ್ದರಿಂದ ನನ್ನ ಯಜಮಾನನು ನನ್ನನ್ನು ಬಿಟ್ಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆಗ ದಾವೀದನು ಅವನನ್ನು, “ನೀನು ಯಾರ ಕಡೆಯವನು? ಎಲ್ಲಿಯವನು?” ಎಂದು ಕೇಳಿದನು. ಆಗ ಅವನು, “ನಾನು ಈಜಿಪ್ಟಿನವನು; ಒಬ್ಬ ಅಮಾಲೇಕ್ಯನ ಗುಲಾಮನು. ನಾನು ಮೂರು ದಿನಗಳ ಹಿಂದೆ ಅಸ್ವಸ್ಥನಾಗಿ ಮಲಗಿಕೊಂಡದ್ದರಿಂದ ನನ್ನ ಯಜಮಾನ ನನ್ನನ್ನು ಬಿಟ್ಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆಗ ದಾವೀದನು ಅವನನ್ನು - ನೀನು ಯಾರ ಕಡೆಯವನು? ಎಲ್ಲಿಯವನು ಎಂದು ಕೇಳಲು ಅವನು - ನಾನು ಐಗುಪ್ತ್ಯನು; ಒಬ್ಬ ಅಮಾಲೇಕ್ಯನ ದಾಸನು. ನಾನು ಮೂರು ದಿನಗಳ ಹಿಂದೆ ಅಸ್ವಸ್ಥನಾಗಿ ಮಲಗಿಕೊಂಡದರಿಂದ ನನ್ನ ಯಜಮಾನನು ನನ್ನನ್ನು ಬಿಟ್ಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ದಾವೀದನು ಅವನನ್ನು, “ನೀನು ಯಾರ ಕಡೆಯವನು? ನೀನು ಎಲ್ಲಿಯವನು?” ಎಂದು ಕೇಳಿದನು. ಅವನು, “ನಾನು ಈಜಿಪ್ಟಿನವನು, ಒಬ್ಬ ಅಮಾಲೇಕ್ಯನ ಸೇವಕನು. ಮೂರು ದಿನಗಳಿಂದ ನಾನು ರೋಗದಲ್ಲಿ ಬಿದ್ದುದರಿಂದ ನನ್ನ ಯಜಮಾನನು ನನ್ನನ್ನು ಬಿಟ್ಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 30:13
9 ತಿಳಿವುಗಳ ಹೋಲಿಕೆ  

ಹೌದು, ಇತರರಿಗೆ ನೀವು ಕರುಣೆ ತೋರಬೇಕು. ಇಲ್ಲವಾದರೆ ದೇವರು ತೀರ್ಪು ನೀಡುವಾಗ ನಿಮಗೂ ಕರುಣೆ ತೋರನು. ಕರುಣೆ ತೋರುವವನು ದೇವರ ನ್ಯಾಯತೀರ್ಪಿನಲ್ಲಿ ಭಯವಿಲ್ಲದೆ ಇರುವನು.


ಶಿಷ್ಟನು ತನ್ನ ಪಶುಗಳನ್ನು ನೋಡಿಕೊಳ್ಳುತ್ತಾನೆ. ಆದರೆ ದುಷ್ಟನ ವಾತ್ಸಲ್ಯವು ಕ್ರೂರವಾಗಿದೆ.


ಅವರು ಈಜಿಪ್ಟಿನವನಿಗೆ ಅಂಜೂರದ ಹಣ್ಣಿನ ಉಂಡೆಯನ್ನೂ ಎರಡು ಗೊಂಚಲು ಒಣ ದ್ರಾಕ್ಷಿಯನ್ನೂ ಕೊಟ್ಟರು. ಅವನು ತಿಂದನಂತರ ಚೇತರಿಸಿಕೊಂಡನು. ಅವನು ಮೂರು ದಿವಸ ಹಗಲಿರುಳು ಆಹಾರವನ್ನೇನೂ ತಿಂದಿರಲಿಲ್ಲ; ನೀರನ್ನೂ ಕುಡಿದಿರಲಿಲ್ಲ.


ಕೆರೇತ್ಯರು ವಾಸಿಸುವ ನೆಗೆವ್ ಮೇಲೆ ನಾವು ಆಕ್ರಮಣ ಮಾಡಿದೆವು. ನಾವು ಯೆಹೂದ ದೇಶದ ಮೇಲೆ ಮತ್ತು ಕಾಲೇಬ್ಯರು ವಾಸಿಸುವ ನೆಗೆವ್ ಪ್ರಾಂತ್ಯಗಳ ಮೇಲೆ ಆಕ್ರಮಣ ಮಾಡಿದೆವು. ನಾವು ಚಿಕ್ಲಗನ್ನು ಸುಟ್ಟುಹಾಕಿದೆವು” ಎಂದು ಹೇಳಿದನು.


ನಂತರ ಸೌಲನು, ‘ನೀನು ಯಾರು?’ ಎಂದು ಕೇಳಿದನು. ‘ನಾನೊಬ್ಬ ಅಮಾಲೇಕ್ಯನು’ ಎಂದು ನಾನು ಹೇಳಿದೆನು.


ಆಗ ಅವರು ಯೋನನಿಗೆ, “ನೋಡು, ನಿನ್ನಿಂದಾಗಿ ನಮಗೆ ಈ ಸಂಕಟ ಬಂದಿದೆ. ನೀನು ಏನು ಮಾಡಿದಿ ಎಂದು ನಮಗೆ ಹೇಳು. ನಿನ್ನ ಕೆಲಸವೇನು? ನೀನು ಎಲ್ಲಿಂದ ಬಂದಿ? ನಿನ್ನ ದೇಶ ಯಾವುದು? ನಿನ್ನ ಜನರು ಯಾರು?” ಎಂದೆಲ್ಲಾ ವಿಚಾರಿಸಿದರು.


ದಾವೀದನು ಅವನಿಗೆ, “ನೀನು ಎಲ್ಲಿಂದ ಬಂದೆ?” ಎಂದು ಅವನನ್ನು ಕೇಳಿದನು. ಅದಕ್ಕೆ ಅವನು, “ನಾನು ಇಸ್ರೇಲರ ಪಾಳೆಯದಿಂದ ತಪ್ಪಿಸಿಕೊಂಡು ಬಂದೆ” ಎಂದು ಹೇಳಿದನು.


ಸೌಲನ ಮರಣದ ಬಗ್ಗೆ ತಿಳಿಸಿದ ಯುವಕನಿಗೆ ದಾವೀದನು, “ನೀನು ಎಲ್ಲಿಂದ ಬಂದಿರುವೆ?” ಎಂದು ಕೇಳಿದನು. ಆ ಯುವಕನು, “ನಾನು ಇಸ್ರೇಲ್ ಜನರಲ್ಲಿ ವಾಸಿಸುತ್ತಿರುವ ವಿದೇಶೀಯನ ಮಗ. ನಾನೊಬ್ಬ ಅಮಾಲೇಕ್ಯನು” ಎಂದು ಉತ್ತರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು