Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 30:21 - ಪರಿಶುದ್ದ ಬೈಬಲ್‌

21 ದಾವೀದನು ತನ್ನ ಇನ್ನೂರು ಮಂದಿ ಉಳಿದುಕೊಂಡಿದ್ದ ಬೆಸೋರ್ ಹಳ್ಳಕ್ಕೆ ಬಂದನು. ತಮ್ಮ ಅತಿಯಾದ ಆಯಾಸದಿಂದಲೂ ಬಲಹೀನತೆಯಿಂದಲೂ ದಾವೀದನನ್ನು ಹಿಂಬಾಲಿಸಲಾಗದ ಜನರೇ ಇವರು. ದಾವೀದನನ್ನು ಮತ್ತು ಅವನೊಡನೆ ಹೋಗಿದ್ದ ಸೈನಿಕರನ್ನು ಸಂಧಿಸಲು ಇವರು ಹೊರಗೆ ಬಂದರು. ದಾವೀದ ಮತ್ತು ಅವನ ಸೈನ್ಯವು ಸಮೀಪಿಸಿದಾಗ, ಬೆಸೋರ್ ಹಳ್ಳದಲ್ಲಿದ್ದ ಜನರು ಅವರನ್ನು ವಂದಿಸಿದರು. ದಾವೀದನು ಸಹ ಅವರನ್ನು ಸಂಧಿಸಿ ಅವರ ಯೋಗಕ್ಷೇಮವನ್ನು ವಿಚಾರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅನಂತರ ದಾವೀದನು ಆಯಾಸದಿಂದ ತನ್ನ ಹಿಂದೆ ಬರಲಾರದೆ ಬೆಸೋರ್ ಹಳ್ಳದ ಹತ್ತಿರ ಉಳಿದಿದ್ದ ಇನ್ನೂರು ಜನರ ಬಳಿಗೆ ಹೋಗುತ್ತಿರುವಾಗ, ಅವರು ಅವನನ್ನೂ ಅವನೊಂದಿಗಿದ್ದ ಜನರನ್ನೂ ಸಂಧಿಸಿ, ಅವರ ಕ್ಷೇಮಸಮಾಚಾರವನ್ನು ವಿಚಾರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಅನಂತರ ದಾವೀದನು ಮೊದಲು ಆಯಾಸದಿಂದ ತನ್ನ ಹಿಂದೆ ಬರಲಾರದೆ ಬೆಸೋರ್ ಹಳ್ಳದ ಹತ್ತಿರ ಉಳಿದಿದ್ದ ಇನ್ನೂರು ಜನರ ಬಳಿಗೆ ಹೋದನು. ಅವನನ್ನೂ ಅವನೊಂದಿಗಿದ್ದ ಜನರನ್ನೂ ಎದುರುಗೊಳ್ಳಲು ಆ ಜನರು ಬಂದರು. ದಾವೀದನು ಅವರನ್ನು ಸಂಧಿಸಿ ಕ್ಷೇಮಸಮಾಚಾರವನ್ನು ವಿಚಾರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅನಂತರ ದಾವೀದನು ಮೊದಲು ಆಯಾಸದಿಂದ ತನ್ನ ಹಿಂದೆ ಬರಲಾರದೆ ಬೆಸೋರ್ ಹಳ್ಳದ ಹತ್ತಿರ ಇಳಿದಿದ್ದ ಇನ್ನೂರು ಜನರ ಬಳಿಗೆ ಹೋಗುತ್ತಿರುವಾಗ ಅವರು ಅವನನ್ನೂ ಅವನೊಂದಿಗಿದ್ದ ಜನರನ್ನೂ ಎದುರುಗೊಳ್ಳಬಂದರು. ದಾವೀದನು ಅವರನ್ನು ಸಂಧಿಸಿ ಅವರ ಕ್ಷೇಮಸಮಾಚಾರವನ್ನು ವಿಚಾರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆದರೆ ದಣಿದಿದ್ದರಿಂದ ದಾವೀದನ ಹಿಂದೆ ಬರಲಾರದೆ ಬೆಸೋರಿನ ಹಳ್ಳದ ಬಳಿಯಲ್ಲಿ ಬಿಟ್ಟುಹೋಗಿದ್ದ ಇನ್ನೂರು ಜನರ ಬಳಿಗೆ ದಾವೀದನು ಬಂದಾಗ, ಅವರು ದಾವೀದನನ್ನೂ, ಅವನ ಸಂಗಡ ಇದ್ದ ಜನರನ್ನೂ ಎದುರುಗೊಳ್ಳಲು ಹೋದರು. ದಾವೀದನು ಆ ಜನರ ಬಳಿಗೆ ಸೇರಿ, ಅವರ ಕ್ಷೇಮಸಮಾಚಾರವನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 30:21
7 ತಿಳಿವುಗಳ ಹೋಲಿಕೆ  

ನೀವು ಕ್ರಿಸ್ತನಲ್ಲಿ ಸಹೋದರ ಸಹೋದರಿಯರಾಗಿರುವುದರಿಂದ ಒಬ್ಬರನ್ನೊಬ್ಬರು ಪ್ರೀತಿಸಿರಿ.


ಗಿದ್ಯೋನನು ಸುಖೋತ್ ನಗರಕ್ಕೆ ಬಂದು ಆ ನಗರದ ಜನರಿಗೆ, “ನೋಡಿರಿ, ಜೆಬಹ ಮತ್ತು ಚಲ್ಮುನ್ನ ಇಲ್ಲಿದ್ದಾರೆ. ‘ಜೆಬಹ ಮತ್ತು ಚಲ್ಮುನ್ನರನ್ನು ನೀವು ಇನ್ನೂ ಸೆರೆಹಿಡಿದಿಲ್ಲ. ನಿಮ್ಮ ದಣಿದ ಸೈನಿಕರಿಗೆ ಆಹಾರವನ್ನು ನಾವೇಕೆ ಕೊಡಬೇಕು?’ ಎಂದು ನನ್ನನ್ನು ತಮಾಷೆ ಮಾಡಿದಿರಿ” ಎಂದನು.


ಆದ್ದರಿಂದ ನೀವೆಲ್ಲರೂ ಒಟ್ಟಾಗಿ ಶಾಂತಿಯಿಂದ ಬಾಳಿರಿ; ಒಬ್ಬರನ್ನೊಬ್ಬರು ಅರ್ಥಮಾಡಿಕೊಳ್ಳಲು ಪ್ರಯತ್ನಿಸಿರಿ. ಒಬ್ಬರನ್ನೊಬ್ಬರು ಸಹೋದರರಂತೆ ಪ್ರೀತಿಸಿರಿ. ದಯೆ ತೋರುವವರೂ ಮತ್ತು ದೀನತೆ ಉಳ್ಳವರೂ ಆಗಿರಿ.


ಆದರೆ ದಾವೀದನ ಜೊತೆಯಲ್ಲಿ ಹೋಗಿದ್ದ ಜನರ ಗುಂಪಿನಲ್ಲಿ ಕೆಟ್ಟ ಜನರೂ ಕಿಡಿಗೇಡಿಗಳೂ ಇದ್ದರು. ಆ ಕೀಡಿಗೇಡಿಗಳು, “ಈ ಇನ್ನೂರು ಜನರು ನಮ್ಮೊಡನೆ ಬರಲಿಲ್ಲ. ಆದ್ದರಿಂದ ನಾವು ವಶಪಡಿಸಿಕೊಂಡ ವಸ್ತುಗಳಲ್ಲಿ ಯಾವುದನ್ನೂ ಇವರಿಗೆ ಕೊಡುವುದಿಲ್ಲ. ಇವರು ತಮ್ಮ ಹೆಂಡತಿಯರನ್ನು ಮತ್ತು ಮಕ್ಕಳನ್ನು ಮಾತ್ರ ತೆಗೆದುಕೊಳ್ಳಬಹುದು” ಎಂದು ಹೇಳಿದರು.


ನಿನ್ನ ಸಹೋದರರ ಸಹಸ್ರಾಧಿಪತಿಗೆ ಹತ್ತು ಉಂಡೆ ಗಿಣ್ಣನ್ನೂ ತೆಗೆದುಕೊಂಡು ಹೋಗು. ನಿನ್ನ ಸಹೋದರರ ಕ್ಷೇಮ ಸಮಾಚಾರವನ್ನು ಕೇಳಿಕೊಂಡು, ಅವರು ಕ್ಷೇಮವಾಗಿದ್ದಾರೆಂಬುದಕ್ಕೆ ಒಂದು ಗುರುತನ್ನು ತೆಗೆದುಕೊಂಡು ಬಾ.


ದಾವೀದನು ತಾನು ತಂದಿದ್ದವುಗಳನ್ನು ಕಾವಲುಗಾರನ ಬಳಿಯಲ್ಲಿಟ್ಟು ಇಸ್ರೇಲ್ ಸೈನಿಕರಿದ್ದ ಸ್ಥಳಕ್ಕೆ ಓಡಿಹೋಗಿ ತನ್ನ ಸಹೋದರರ ಬಗ್ಗೆ ವಿಚಾರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು