Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 30:23 - ಪರಿಶುದ್ದ ಬೈಬಲ್‌

23 ದಾವೀದನು, “ನನ್ನ ಸಹೋದರರೇ, ಆ ರೀತಿ ಮಾಡಬೇಡಿ! ಯೆಹೋವನು ನಮಗೆ ದಯಪಾಲಿಸಿರುವುದನ್ನು ಕುರಿತು ಯೋಚಿಸಿ! ನಮ್ಮ ಮೇಲೆ ಧಾಳಿಮಾಡಿದ ಶತ್ರುಗಳನ್ನು ಸೋಲಿಸಲು ಯೆಹೋವನು ನಮ್ಮನ್ನು ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆಗ ದಾವೀದನು ಅವರಿಗೆ, “ಸಹೋದರರೇ, ಯೆಹೋವನು ನಮ್ಮನ್ನು ಕಾಪಾಡಿ ನಮಗೆ ವಿರೋಧವಾಗಿ ಬಂದಿದ್ದ ಶತ್ರುಗಳ ಗುಂಪನ್ನು ನಮ್ಮ ಕೈಗೆ ಒಪ್ಪಿಸಿ ನಮಗೆ ಇಷ್ಟನ್ನೆಲ್ಲಾ ಕೊಟ್ಟ ಮೇಲೆ ನೀವು ಹೀಗೆ ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಆಗ ದಾವೀದನು ಅವರಿಗೆ, “ಸಹೋದರರೇ, ಸರ್ವೇಶ್ವರ ನಮ್ಮನ್ನು ಕಾಪಾಡಿ, ನಮಗೆ ವಿರುದ್ಧ ಬಂದಿದ್ದ ಶತ್ರುಗಳ ಗುಂಪನ್ನು ನಮ್ಮ ಕೈಗೆ ಒಪ್ಪಿಸಿ, ನಮಗೆ ಇಷ್ಟನ್ನೆಲ್ಲಾ ಅನುಗ್ರಹಿಸಿದ ಮೇಲೆ ನೀವು ಹೀಗೆ ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆಗ ದಾವೀದನು ಅವರಿಗೆ - ಸಹೋದರರೇ, ಯೆಹೋವನು ನಮ್ಮನ್ನು ಕಾಪಾಡಿ ನಮಗೆ ವಿರೋಧವಾಗಿ ಬಂದಿದ್ದ ಶತ್ರುಗಳ ಗುಂಪನ್ನು ನಮ್ಮ ಕೈಗೆ ಒಪ್ಪಿಸಿ ನಮಗೆ ಇಷ್ಟನ್ನೆಲ್ಲಾ ಕೊಟ್ಟ ಮೇಲೆ ನೀವು ಹೀಗೆ ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಅದಕ್ಕೆ ದಾವೀದನು, “ನನ್ನ ಸಹೋದರರೇ, ನಮ್ಮನ್ನು ಕಾಪಾಡಿ ನಮಗೆ ವಿರೋಧವಾಗಿ ಬಂದ ಈ ಗುಂಪನ್ನು ನಮ್ಮ ಕೈಯಲ್ಲಿ ಒಪ್ಪಿಸಿಕೊಟ್ಟ ಯೆಹೋವ ದೇವರು ನಮಗೆ ಕೊಟ್ಟದ್ದಕ್ಕೆ ನೀವು ಹಾಗೆ ಮಾಡಬೇಡಿರಿ. ಈ ಕಾರ್ಯಕ್ಕೋಸ್ಕರ ನಿಮ್ಮ ಮಾತನ್ನು ಯಾರು ಕೇಳುವರು?

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 30:23
16 ತಿಳಿವುಗಳ ಹೋಲಿಕೆ  

ನಿಮ್ಮ ದೇವರಾದ ಯೆಹೋವನನ್ನು ಜ್ಞಾಪಕಮಾಡಿಕೊಳ್ಳಿ. ಇವೆಲ್ಲಾ ಸಂಪಾದಿಸುವುದಕ್ಕೆ ಆತನೇ ನಿಮಗೆ ಶಕ್ತಿ ಕೊಟ್ಟನು ಎಂಬುದನ್ನು ನೆನಪಿನಲ್ಲಿಟ್ಟುಕೊಳ್ಳಿ. ಯೆಹೋವನು ನಿಮಗೆ ಹೀಗೆ ಮಾಡುವುದರ ಉದ್ದೇಶವೇನಾಗಿತ್ತು? ಆತನು ನಿಮ್ಮ ಪೂರ್ವಿಕರಿಗೆ ಮಾಡಿದ ವಾಗ್ದಾನವನ್ನು ನೆರವೇರಿಸಬೇಕೆಂಬುದೇ ಆತನ ಉದ್ದೇಶವಾಗಿತ್ತು.


ಪೌಲನು, “ನನ್ನ ಸಹೋದರರೇ, ನನ್ನ ತಂದೆಗಳೇ, ನನ್ನ ಪ್ರತಿವಾದವನ್ನು ಕೇಳಿರಿ!” ಎಂದನು.


ಪ್ರತ್ಯುತ್ತರವಾಗಿ ಅವನು ಹೀಗೆಂದನು: “ನನ್ನ ಯೆಹೂದ್ಯತಂದೆಗಳೇ, ಸಹೋದರರೇ, ನನಗೆ ಕಿವಿಗೊಡಿರಿ. ನಮ್ಮ ಪಿತೃವಾದ ಅಬ್ರಹಾಮನಿಗೆ ನಮ್ಮ ಪ್ರಭಾವಸ್ವರೂಪನಾದ ದೇವರು ಕಾಣಸಿಕೊಂಡನು. ಅಬ್ರಹಾಮನು ಹಾರಾನಿನಲ್ಲಿ ವಾಸಮಾಡುವ ಮೊದಲು ಮೆಸಪೊಟೇಮಿಯದಲ್ಲಿದ್ದನು.


ಯೆಹೋವನು ಜನರನ್ನು ಬಡವರನ್ನಾಗಿಸುತ್ತಾನೆ. ಆತನು ಜನರನ್ನು ಹಣವಂತರನ್ನಾಗಿಸುತ್ತಾನೆ. ಯೆಹೋವನು ಜನರನ್ನು ದೀನರನ್ನಾಗಿಸುತ್ತಾನೆ. ಆತನು ಜನರನ್ನು ದೊಡ್ಡವರನ್ನಾಗಿಸುತ್ತಾನೆ.


ಆ ವೃದ್ಧನು ಮನೆಯಿಂದ ಹೊರಗೆ ಬಂದು ಆ ನೀಚರ ಜೊತೆ ಮಾತನಾಡಿ, “ಬೇಡ, ನನ್ನ ಮಿತ್ರರೇ, ಅಂಥ ಪಾಪದ ಕೆಲಸವನ್ನು ಮಾಡಬೇಡಿ. ಆ ಮನುಷ್ಯ ನನ್ನ ಅತಿಥಿಯಾಗಿದ್ದಾನೆ. ಈ ಭಯಂಕರ ಪಾಪವನ್ನು ಮಾಡಬೇಡಿ.


ನಿಮಗೆ ಬೇಕಾದಷ್ಟು ಆಹಾರ ಇರುವುದು. ಆಗ ನೀವು ನಿಮಗೆ ಉತ್ತಮ ದೇಶವನ್ನು ಕೊಟ್ಟಿರುವ ಯೆಹೋವ ದೇವರನ್ನು ಸ್ತುತಿಸುವಿರಿ.


ಆ ಗಂಡಸರಿಗೆ, “ನನ್ನ ಸಹೋದರರೇ, ನಾನು ನಿಮ್ಮನ್ನು ಬೇಡಿಕೊಳ್ಳುತ್ತಿದ್ದೇನೆ. ದಯವಿಟ್ಟು ಈ ಕೆಟ್ಟಕಾರ್ಯವನ್ನು ಮಾಡಬೇಡಿ.


ಅವನ ಬಲೆಗಳು ಅವನು ಧನಿಕನಂತೆ ಜೀವಿಸಲು ಸಹಾಯ ಮಾಡುವವು. ಅವನು ಒಳ್ಳೆಯ ಆಹಾರವನ್ನು ಉಣ್ಣುವನು. ಅದಕ್ಕೆ ವೈರಿಯು ತನ್ನ ಬಲೆಯನ್ನು ಆರಾಧಿಸುವನು. ಅವನು ಯಜ್ಞವನ್ನರ್ಪಿಸಿ ಧೂಪ ಹಾಕುವನು. ಬಲೆಯನ್ನು ಗೌರವಿಸುವನು.


ನಂತರ ದಾವೀದನು ಯೆಹೋವನಲ್ಲಿ, “ನಮ್ಮ ಕುಟುಂಬಗಳನ್ನು ಅಪಹರಿಸಿದ ಜನರನ್ನು ನಾನು ಅಟ್ಟಿಸಿಕೊಂಡು ಹೋಗಬೇಕೇ? ನಾನು ಅವರನ್ನು ಸೆರೆಹಿಡಿಯುವೆನೇ?” ಎಂದು ಪ್ರಾರ್ಥಿಸಿದನು. ಯೆಹೋವನು, “ಅವರನ್ನು ಅಟ್ಟಿಸಿಕೊಂಡು ಹೋಗು. ಅವರನ್ನು ನೀನು ಸೆರೆಹಿಡಿಯಬಹುದು. ನಿಮ್ಮ ಕುಟುಂಬಗಳನ್ನು ನೀವು ರಕ್ಷಿಸಬಹುದು” ಎಂದು ಉತ್ತರಿಸಿದನು.


ಆದರೆ ದಾವೀದನ ಜೊತೆಯಲ್ಲಿ ಹೋಗಿದ್ದ ಜನರ ಗುಂಪಿನಲ್ಲಿ ಕೆಟ್ಟ ಜನರೂ ಕಿಡಿಗೇಡಿಗಳೂ ಇದ್ದರು. ಆ ಕೀಡಿಗೇಡಿಗಳು, “ಈ ಇನ್ನೂರು ಜನರು ನಮ್ಮೊಡನೆ ಬರಲಿಲ್ಲ. ಆದ್ದರಿಂದ ನಾವು ವಶಪಡಿಸಿಕೊಂಡ ವಸ್ತುಗಳಲ್ಲಿ ಯಾವುದನ್ನೂ ಇವರಿಗೆ ಕೊಡುವುದಿಲ್ಲ. ಇವರು ತಮ್ಮ ಹೆಂಡತಿಯರನ್ನು ಮತ್ತು ಮಕ್ಕಳನ್ನು ಮಾತ್ರ ತೆಗೆದುಕೊಳ್ಳಬಹುದು” ಎಂದು ಹೇಳಿದರು.


ನೀವು ಹೇಳುವುದನ್ನು ಯಾರೂ ಕೇಳುವುದಿಲ್ಲ! ಯುದ್ಧಮಾಡುವವನಿಗೆ ಸಿಗುವ ಪಾಲು ಮತ್ತು ಯುದ್ಧ ಸಾಮಾಗ್ರಿಗಳನ್ನು ಕಾಯುವವನಿಗೆ ಸಿಗುವ ಪಾಲು ಒಂದೇ ಸಮನಾಗಿರಬೇಕು. ಪ್ರತಿಯೊಬ್ಬರ ಪಾಲೂ ಒಂದೇ ಸಮವಾಗಿರಬೇಕು” ಎಂದು ಉತ್ತರಿಸಿದನು.


‘ಇವೆಲ್ಲಾ ನಾವೇ ಸಂಪಾದಿಸಿದ್ದು, ನಮ್ಮ ಶಕ್ತಿಸಾಮರ್ಥ್ಯಗಳಿಂದ ಇವುಗಳನ್ನು ನಾವು ಪಡೆದೆವು’ ಎಂದು ನಿಮ್ಮೊಳಗೆ ಅಂದುಕೊಳ್ಳಬೇಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು