Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 30:31 - ಪರಿಶುದ್ದ ಬೈಬಲ್‌

31 ಮತ್ತು ಹೆಬ್ರೋನಿನವರಿಗೆ ಕಳುಹಿಸಿಕೊಟ್ಟನು ಮತ್ತು ತನ್ನ ಜನರು ಹೋಗಿದ್ದ ಇತರ ಸ್ಥಳಗಳ ನಾಯಕರಿಗೂ ಆ ವಸ್ತುಗಳಲ್ಲಿ ಕೆಲವನ್ನು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಹೆಬ್ರೋನಿನವರು ಮತ್ತು ದಾವೀದನೂ ಅವನ ಜನರೂ ಸಂಚರಿಸುತ್ತಿದ್ದ ಇತರ ಎಲ್ಲಾ ಸ್ಥಳಗಳವರು ಇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಮತ್ತು ದಾವೀದನೂ ಅವನ ಜನರೂ ಸಂಚರಿಸುತ್ತಿದ್ದ ಇತರ ಎಲ್ಲಾ ಸ್ಥಳಗಳವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಹೆಬ್ರೋನಿನವರು ಮತ್ತು ದಾವೀದನೂ ಅವನ ಜನರೂ ಸಂಚರಿಸುತ್ತಿದ್ದ ಇತರ ಎಲ್ಲಾ ಸ್ಥಳಗಳವರು ಇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಹೆಬ್ರೋನಿನವರು ಮತ್ತು ದಾವೀದನೂ ಅವನ ಜನರೂ ಸಂಚರಿಸುತ್ತಿದ್ದ ಇತರ ಎಲ್ಲಾ ಸ್ಥಳದವರಿಗೂ ಬಹುಮಾನಗಳನ್ನು ಕಳುಹಿಸಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 30:31
9 ತಿಳಿವುಗಳ ಹೋಲಿಕೆ  

ತರುವಾಯ ದಾವೀದನು ಯೆಹೋವನಲ್ಲಿ ಪ್ರಾರ್ಥಿಸಿ, “ಯೆಹೂದದ ಯಾವುದಾದರೂ ನಗರಕ್ಕೆ ನಾನು ಹೋಗಬಹುದೇ?” ಎಂದು ಕೇಳಿದನು. “ಹೋಗು” ಎಂಬುದಾಗಿ ಯೆಹೋವನು ಹೇಳಿದನು. “ನಾನು ಎಲ್ಲಿಗೆ ಹೋಗಲಿ?” ಎಂದು ದಾವೀದನು ಕೇಳಿದನು. “ಹೆಬ್ರೋನಿಗೆ ಹೋಗು” ಎಂದು ಯೆಹೋವನು ಉತ್ತರಿಸಿದನು.


ಆದರೆ ಅಬ್ಷಾಲೋಮನು ಇಸ್ರೇಲಿನ ಎಲ್ಲಾ ಕುಲಗಳಿಗೂ ಗೂಢಚಾರರನ್ನು ಕಳುಹಿಸಿದನು. ಈ ಗೂಢಚಾರರು ಜನರಿಗೆ, “ನೀವು ಕಹಳೆಯ ಧ್ವನಿಯನ್ನು ಕೇಳಿದಾಗ, ‘ಅಬ್ಷಾಲೋಮನು ಹೆಬ್ರೋನಿನಲ್ಲಿ ರಾಜನಾದ’ನೆಂದು ಹೇಳಿ” ಎಂಬುದಾಗಿ ತಿಳಿಸಿದರು.


ಹೆಬ್ರೋನಿನಲ್ಲಿ ಅಬ್ನೇರನು ಸತ್ತನೆಂಬುದು ಸೌಲನ ಮಗನಾದ ಈಷ್ಬೋಶೆತನಿಗೆ ತಿಳಿಯಿತು. ಈಷ್ಬೋಶೆತನು ಮತ್ತು ಅವನ ಜನರು ಬಹಳ ಭಯಗೊಂಡರು.


ಯೆಹೂದದ ಜನರು ಬಂದು ದಾವೀದನನ್ನು ಯೆಹೂದದ ರಾಜನನ್ನಾಗಿ ಅಭಿಷೇಕಿಸಿದರು. ಬಳಿಕ ಅವರು ದಾವೀದನಿಗೆ, “ಸೌಲನ ಸಮಾಧಿ ಮಾಡಿದವರು ಯಾಬೇಷ್ ಗಿಲ್ಯಾದಿನವರೇ” ಎಂದು ಹೇಳಿದರು.


ಅವರು ನೆಗೆವ್ ಮೂಲಕ ದೇಶವನ್ನು ಪ್ರವೇಶಿಸಿ ಹೆಬ್ರೋನಿಗೆ ಹೋದರು. ಹೆಬ್ರೋನ್ ಪಟ್ಟಣವು ಈಜಿಪ್ಟ್ ದೇಶದಲ್ಲಿರುವ ಚೋವನ್ ಪಟ್ಟಣಕ್ಕಿಂತ ಏಳು ವರ್ಷಗಳ ಮುಂಚೆ ಕಟ್ಟಲ್ಪಟ್ಟಿತ್ತು. ಅಲ್ಲಿ ಅಹೀಮನ್, ಶೇಫೈ ಮತ್ತು ತಲ್ಮೈ ಎಂಬವರು ವಾಸಿಸುತ್ತಿದ್ದರು. ಇವರು ಅನಾಕನ ಸಂತತಿಯವರು.


ಅವರಿಗೆ ಹೆಬ್ರೋನ್ ಎಂಬ ಕಿರ್ಯತರ್ಬನಗರ (ಇದಕ್ಕೆ ಅನಾಕನ ತಂದೆಯಾದ ಅರ್ಬನ ಹೆಸರಿಡಲಾಗಿತ್ತು.) ಮತ್ತು ಅವರ ಪಶುಗಳಿಗಾಗಿ ಆ ನಗರದ ಹತ್ತಿರದ ಸ್ವಲ್ಪ ಭೂಮಿಯನ್ನು ಕೊಡಲಾಯಿತು.


ಹೋಗಿ, ಅವನ ಬಗ್ಗೆ ಹೆಚ್ಚು ತಿಳಿದುಕೊಳ್ಳಿ. ದಾವೀದನು ಎಲ್ಲಿ ನೆಲೆಸಿದ್ದಾನೆಂಬುದನ್ನೂ ಅವನನ್ನು ನೋಡಿದವರು ಯಾರೆಂಬುದನ್ನೂ ಕಂಡುಹಿಡಿಯಿರಿ. ಅವನು ಬಹಳ ಯುಕ್ತಿವಂತನಾಗಿದ್ದಾನೆ.


ಯೆಫುನ್ನೆಯ ಮಗನಾದ ಕಾಲೇಬನಿಗೆ ಯೆಹೂದ ಕುಲದವರ ಸ್ವಾಸ್ತ್ಯದಲ್ಲಿಯೇ ಸ್ವಲ್ಪ ಪ್ರದೇಶವನ್ನು ಕೊಡಬೇಕೆಂದು ದೇವರು ಯೆಹೋಶುವನಿಗೆ ಹೇಳಿದ್ದನು. ಅದಕ್ಕಾಗಿ ಯೆಹೋಶುವನು ಕಾಲೇಬನಿಗೆ ದೇವರು ಆಜ್ಞಾಪಿಸಿದ ಪ್ರದೇಶವನ್ನು ಕೊಟ್ಟನು. ಯೆಹೋಶುವನು ಅವನಿಗೆ ಹೆಬ್ರೋನ್ ಎಂಬ ಕಿರ್ಯಾತರ್ಬ ಊರನ್ನು ಕೊಟ್ಟನು. (ಅರ್ಬನು ಅನಾಕನ ತಂದೆ.)


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು