Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 30:6 - ಪರಿಶುದ್ದ ಬೈಬಲ್‌

6 ಸೈನ್ಯದಲ್ಲಿದ್ದ ಎಲ್ಲರೂ ದುಃಖತಪ್ತರಾಗಿದ್ದರು ಮತ್ತು ಕೋಪಗೊಂಡಿದ್ದರು; ಯಾಕೆಂದರೆ ಅವರ ಗಂಡು ಮತ್ತು ಹೆಣ್ಣುಮಕ್ಕಳೆಲ್ಲ ಸೆರೆಯಾಳುಗಳಾಗಿ ಒಯ್ಯಲ್ಪಟ್ಟಿದರು. ದಾವೀದನನ್ನು ಕಲ್ಲುಗಳಿಂದ ಕೊಲ್ಲಬೇಕೆಂದು ಅವರು ಮಾತಾಡಿಕೊಳ್ಳುತ್ತಿದ್ದರು. ದಾವೀದನು ಇದರಿಂದ ತಳಮಳಗೊಂಡರೂ ತನ್ನ ದೇವರಾದ ಯೆಹೋವನಲ್ಲಿ ತನ್ನನ್ನು ಬಲಪಡಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಇದಲ್ಲದೆ ಜನರು ತಮ್ಮ ಗಂಡು ಹೆಣ್ಣು ಮಕ್ಕಳಿಗಾಗಿ ಮನಸ್ಸಿನಲ್ಲಿ ಬಹಳವಾಗಿ ನೊಂದುಕೊಂಡು, ದಾವೀದನನ್ನು ಕಲ್ಲೆಸೆದು ಕೊಲ್ಲಬೇಕೆಂದಿದ್ದುದರಿಂದ ಅವನು ಬಲು ಇಕ್ಕಟ್ಟಿನಲ್ಲಿ ಬಿದ್ದನು. ಆದರೂ ಅವನು ತನ್ನ ದೇವರಾದ ಯೆಹೋವನಲ್ಲಿ ತನ್ನನ್ನು ಬಲಪಡಿಸಿಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಇದಲ್ಲದೆ ಜನರು ತಮ್ಮ ಗಂಡುಹೆಣ್ಣು ಮಕ್ಕಳಿಗಾಗಿ ಮನಸ್ಸಿನಲ್ಲಿ ಬಹಳವಾಗಿ ನೊಂದುಕೊಂಡರು. ಮಾತ್ರವಲ್ಲ, ದಾವೀದನನ್ನು ಕಲ್ಲೆಸೆದು ಕೊಲ್ಲಬೇಕೆಂದಿದ್ದರು. ಆದುದರಿಂದ ಅವನು ಬಲು ಇಕ್ಕಟ್ಟಿಗೆ ಸಿಕ್ಕಿಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಇದಲ್ಲದೆ ಜನರು ತಮ್ಮ ಗಂಡುಹೆಣ್ಣು ಮಕ್ಕಳಿಗಾಗಿ ಮನಸ್ಸಿನಲ್ಲಿ ಬಹಳವಾಗಿ ನೊಂದುಕೊಂಡು ದಾವೀದನನ್ನು ಕಲ್ಲೆಸೆದು ಕೊಲ್ಲಬೇಕೆಂದಿದ್ದದರಿಂದ ಅವನು ಬಲು ಇಕ್ಕಟ್ಟಿನಲ್ಲಿ ಬಿದ್ದನು. ಆದರೂ ಅವನು ತನ್ನ ದೇವರಾದ ಯೆಹೋವನಲ್ಲಿ ತನ್ನನ್ನು ಬಲಪಡಿಸಿಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಜನರೆಲ್ಲರೂ ಪ್ರತಿಯೊಬ್ಬನು ತನ್ನ ಪುತ್ರಪುತ್ರಿಯರಿಗೋಸ್ಕರವಾಗಿಯೂ ಮನೋವ್ಯಥೆಪಟ್ಟು, ದಾವೀದನನ್ನು ಕಲ್ಲೆಸೆಯಬೇಕೆಂದು ಹೇಳಿಕೊಂಡದ್ದರಿಂದ, ಅವನು ಬಹಳ ಇಕ್ಕಟ್ಟಿನಲ್ಲಿ ಸಿಕ್ಕಿಕೊಂಡಿದ್ದನು. ಆದರೂ ದಾವೀದನು ಯೆಹೋವ ದೇವರಲ್ಲಿ ತನ್ನನ್ನು ಬಲಪಡಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 30:6
51 ತಿಳಿವುಗಳ ಹೋಲಿಕೆ  

ನಾನು ದೇವರಲ್ಲಿ ಭರವಸವಿಟ್ಟಿರುವುದರಿಂದ ಜನರಿಗೆ ಭಯಪಡುವುದಿಲ್ಲ. ಕ್ಷಣಿಕರಾದ ಮಾನವರು ನನಗೇನು ಮಾಡಬಲ್ಲರು?


ನನ್ನ ಮನವೇ, ದೇವರನ್ನೇ ನಂಬಿ ಶಾಂತವಾಗಿರು. ನನ್ನ ನಿರೀಕ್ಷೆ ದೇವರಲ್ಲಿಯೇ.


ಆಗ ನಾನು ಸಹಾಯಕ್ಕಾಗಿ ಯೆಹೋವನನ್ನು ಕೂಗಿಕೊಂಡೆನು; ನನ್ನ ದೇವರಿಗೆ ಮೊರೆಯಿಟ್ಟೆನು. ಆತನು ತನ್ನ ಆಲಯದಲ್ಲಿ ನನ್ನ ಸ್ವರವನ್ನು ಕೇಳಿದನು; ನನ್ನ ಮೊರೆಗೆ ಕಿವಿಗೊಟ್ಟನು.


ಇಕ್ಕಟ್ಟುಗಳಿಂದ ನನ್ನನ್ನು ಬಿಡಿಸು. ನನ್ನ ಸಮಸ್ಯೆಗಳನ್ನು ಪರಿಹರಿಸು.


ಆದ್ದರಿಂದ ನಾವು ಖಚಿತವಾಗಿ ಹೀಗೆ ಹೇಳಬಹುದು: “ಪ್ರಭುವೇ ನನ್ನ ಸಹಾಯಕನು; ನಾನು ಹೆದರುವುದಿಲ್ಲ. ಜನರು ನನಗೆ ಏನೂ ಮಾಡಲಾರರು.”


ಅಬ್ರಹಾಮನಿಗೆ ಮಕ್ಕಳಾಗುವ ಆಸ್ಪದವೇ ಇರಲಿಲ್ಲ. ಆದರೂ ಅವನು ದೇವರನ್ನು ನಂಬಿ ತನ್ನ ನಿರೀಕ್ಷೆಯಲ್ಲಿಯೇ ಮುಂದುವರೆದನು. ಆದಕಾರಣವೇ ಅವನು ಅನೇಕ ಜನಾಂಗಗಳಿಗೆ ತಂದೆಯಾದನು. ದೇವರು ಅವನಿಗೆ, “ನೀನು ಅನೇಕ ಜನಾಂಗಗಳನ್ನು ಪಡೆಯುವೆ” ಎಂದು ಹೇಳಿದ್ದಂತೆಯೇ ಇದಾಯಿತು.


“ನಾಶವಾದೆನು!” ಎಂದು ನಾನು ಹೇಳಿದಾಗಲೂ ನಂಬಿಕೊಂಡೇ ಇದ್ದೆನು.


ಹೀಗಿರುವಲ್ಲಿ ಇದರ ಬಗ್ಗೆ ನಾವು ಏನು ಹೇಳೋಣ? ದೇವರು ನಮ್ಮೊಂದಿಗೆ ಇರುವಾಗ, ನಮ್ಮನ್ನು ಯಾರೂ ಸೋಲಿಸಲಾರರು.


ಆದ್ದರಿಂದ ಮೋಶೆಯು ಯೆಹೋವನಿಗೆ ಮೊರೆಯಿಟ್ಟು, “ಈ ಜನರ ವಿಷಯದಲ್ಲಿ ನಾನೇನು ಮಾಡಲಿ? ಅವರು ಕಲ್ಲೆಸೆದು ನನ್ನನ್ನು ಕೊಲ್ಲುವುದಕ್ಕೆ ಸಿದ್ಧರಾಗಿದ್ದಾರೆ” ಅಂದನು.


ನನ್ನ ಆತ್ಮವೇ, ನೀನು ವ್ಯಸನದಿಂದಿರುವುದೇಕೆ? ಗಲಿಬಿಲಿಗೊಂಡಿರುವುದೇಕೆ? ದೇವರನ್ನು ನಿರೀಕ್ಷಿಸು; ನನ್ನ ರಕ್ಷಕನೂ ದೇವರೂ ಆಗಿರುವ ಆತನನ್ನು ಸ್ತುತಿಸುತ್ತಲೇ ಇರುವೆನು.


ಯೆಹೋವನ ಸಹಾಯಕ್ಕಾಗಿ ಕಾದುಕೊಂಡಿರಿ! ಬಲವಾಗಿಯೂ ಧೈರ್ಯವಾಗಿಯೂ ಇರಿ! ಯೆಹೋವನ ಸಹಾಯಕ್ಕಾಗಿ ಕಾದುಕೊಂಡಿರಿ!


ನಮ್ಮ ಸುತ್ತಮುತ್ತಲೆಲ್ಲಾ ಇಕ್ಕಟ್ಟುಗಳಿವೆ, ಆದರೆ ಸೋತುಹೋಗಿಲ್ಲ. ಅನೇಕಸಲ, ಏನು ಮಾಡಬೇಕೋ ನಮಗೆ ತಿಳಿಯದು, ಆದರೂ ನಾವು ಧೈರ್ಯಗೆಡುವುದಿಲ್ಲ.


ಹನ್ನಳು ಬಹು ದುಃಖಿತಳಾಗಿದ್ದುದರಿಂದ ಕಣ್ಣೀರು ಸುರಿಯುತ್ತಿತ್ತು. ಅವಳು ಯೆಹೋವನಿಗೆ ಪ್ರಾರ್ಥಿಸುತ್ತಿದ್ದಳು.


ಇದನ್ನು ಕೇಳಿದ ಕೂಡಲೇ ಜನರು ಆತನತ್ತ ಬೀರಲು ಕಲ್ಲುಗಳನ್ನು ತೆಗೆದುಕೊಂಡರು. ಆದರೆ ಯೇಸು ಅಡಗಿಕೊಂಡು ದೇವಾಲಯದಿಂದ ಹೊರಟುಹೋದನು.


ಎಲ್ಲಾ ಜನರು ಯೆಹೋಶುವನನ್ನು ಮತ್ತು ಕಾಲೇಬನನ್ನು ಕಲ್ಲೆಸೆದು ಕೊಲ್ಲಬೇಕೆಂದು ಮಾತಾಡತೊಡಗಿದರು. ಆದರೆ ಯೆಹೋವನ ಮಹಿಮೆ ದೇವದರ್ಶನಗುಡಾರ ಮೇಲೆ ಪ್ರತ್ಯಕ್ಷವಾದದ್ದು ಇಸ್ರೇಲರೆಲ್ಲರಿಗೆ ಕಾಣಿಸಿತು. ಯೆಹೋವನು ಮೋಶೆಯೊಡನೆ ಮಾತಾಡಿ,


ನಾವು ಮಕೆದೋನಿಯಕ್ಕೆ ಬಂದಾಗ ನಮಗೆ ವಿಶ್ರಾಂತಿಯೇ ಇರಲಿಲ್ಲ. ನಮ್ಮ ಸುತ್ತಮುತ್ತಲೆಲ್ಲಾ ಇಕ್ಕಟ್ಟುಗಳಿದ್ದವು. ಹೊರಗೆ ಕಲಹವಿತ್ತು, ಒಳಗೆ ಭಯವಿತ್ತು.


ಯೆಹೋವನ ಹೆಸರು ಬಲವಾದ ಗೋಪುರದಂತಿದೆ. ಒಳ್ಳೆಯವರು ಅದರೊಳಗೆ ಓಡಿಹೋಗಿ ಸುರಕ್ಷಿತವಾಗಿರುವರು.


ಯೆಹೋವನೇ, ನೀನೇ ನನ್ನ ಬಲವಾಗಿರುವೆ. ನನ್ನ ರಕ್ಷಕನಾಗಿರುವೆ. ಕಷ್ಟ ಬಂದಾಗ ಓಡಿಬಂದು ಆಶ್ರಯ ಪಡೆಯಲು ಸುರಕ್ಷಿತ ಸ್ಥಳವಾಗಿರುವೆ. ಜಗತ್ತಿನ ಎಲ್ಲಾ ಭಾಗಗಳ ಜನಾಂಗದ ಜನರು ನಿನ್ನಲ್ಲಿಗೆ ಬರುವರು. ಅವರು, “ನಮ್ಮ ಪೂರ್ವಿಕರು ಸುಳ್ಳುದೇವರುಗಳನ್ನಿಟ್ಟುಕೊಂಡಿದ್ದರು. ಅವರು ಆ ನಿರರ್ಥಕವಾದ ವಿಗ್ರಹಗಳನ್ನು ಪೂಜಿಸಿದರು. ಆದರೆ ಆ ವಿಗ್ರಹಗಳು ಅವರಿಗೆ ಕೊಂಚವೂ ಸಹಾಯ ಮಾಡಲಿಲ್ಲ” ಎಂದು ಹೇಳುವರು.


ದೇವರು ನನ್ನನ್ನು ಕೊಂದರೂ ಆತನಲ್ಲಿಯೇ ಭರವಸವಿಟ್ಟಿರುವೆನು. ನನ್ನ ನಡತೆಯ ಕುರಿತು ಆತನ ಮುಂದೆ ವಾದಿಸುವೆನು.


ನಮಗೆ ಸಂಕಷ್ಟಗಳಿರುವುದಾದರೆ, ಆ ಸಂಕಷ್ಟಗಳು ನಿಮ್ಮ ಆದರಣೆಗಾಗಿಯೇ ಮತ್ತು ರಕ್ಷಣೆಗಾಗಿಯೇ. ನಮಗೆ ಆದರಣೆ ಇರುವುದಾದರೆ, ಅದು ನಿಮ್ಮ ಆದರಣೆಗಾಗಿಯೇ. ನಮಗಿರುವಂಥ ಬಾಧೆಗಳನ್ನು ನೀವು ತಾಳ್ಮೆಯಿಂದ ಸ್ವೀಕರಿಸಿಕೊಳ್ಳಲು ಇದು ನಿಮಗೆ ಸಹಾಯವಾಗಿದೆ.


ದೇವರು ಮಾಡಿದ ವಾಗ್ದಾನದ ವಿಷಯದಲ್ಲಿ ಅವನು ಸಂಶಯಪಡಲಿಲ್ಲ ಮತ್ತು ತನ್ನ ನಂಬಿಕೆಯನ್ನು ಕೊನೆಗೊಳಿಸಲಿಲ್ಲ. ಅವನು ತನ್ನ ನಂಬಿಕೆಯಲ್ಲಿ ಬಲವಾಗಿ ಬೆಳೆದನು ಮತ್ತು ದೇವರಿಗೆ ಸ್ತೋತ್ರ ಸಲ್ಲಿಸಿದನು.


ಪಿಲಾತನು, “ಹಾಗಾದರೆ ಕ್ರಿಸ್ತನೆಂದು ಕರೆಸಿಕೊಳ್ಳುವ ಯೇಸುವನ್ನು ನಾನೇನು ಮಾಡಲಿ?” ಎಂದು ಕೇಳಿದನು. ಜನರೆಲ್ಲರೂ, “ಅವನನ್ನು ಶಿಲುಬೆಗೇರಿಸು!” ಎಂದು ಉತ್ತರಕೊಟ್ಟರು.


ಕೆಲವರು ಯೇಸುವಿನ ಮುಂದೆ ನಡೆದು ಹೋಗುತ್ತಿದ್ದರು. ಕೆಲವರು ಯೇಸುವಿನ ಹಿಂದೆ ನಡೆದು ಬರುತ್ತಿದ್ದರು. ಜನರೆಲ್ಲರೂ ಹೀಗೆ ಆರ್ಭಟಿಸಿದರು: “ದಾವೀದನ ಕುಮಾರನನ್ನು ಕೊಂಡಾಡಿರಿ! ‘ಪ್ರಭುವಿನ ಹೆಸರಿನಲ್ಲಿ ಬರುವವನನ್ನು ದೇವರು ಆಶೀರ್ವದಿಸಲಿ!’ ಪರಲೋಕದ ದೇವರನ್ನು ಕೊಂಡಾಡಿರಿ!”


ಯೆಹೋವನೇ, ನೀನೇ ನಮ್ಮ ಆಶ್ರಯವು. ಬಡವರಿಗೆ ನೀನೇ ಆಧಾರ. ಅವರ ಸಮಸ್ಯೆಗಳು ಅವರನ್ನು ಕಷ್ಟಕ್ಕೆ ಗುರಿಪಡಿಸುವವು. ಆದರೆ ನೀನು ಅವರನ್ನು ಸಂರಕ್ಷಿಸುವೆ. ಯೆಹೋವನೇ, ಒಂದು ಮನೆಯ ಜನರನ್ನು ಪ್ರವಾಹದಿಂದಲೂ, ಬಿಸಿಲಿನ ತಾಪದಿಂದಲೂ ಕಾಪಾಡುವಂತೆ ನೀನಿರುವೆ. ಮುಂದಿನ ತೊಂದರೆಗಳು ಬಿರುಗಾಳಿಯಂತೆಯೂ ಮಳೆಯಂತೆಯೂ ಇವೆ. ಮಳೆಯು ಗೋಡೆಗೆ ಬಡಿದು ಕೆಳಗೆ ಇಳಿಯುವದು. ಆದರೆ ಮನೆಯೊಳಗಿರುವವರಿಗೆ ಹಾನಿಯೇ ಆಗದು.


ನನ್ನ ಮನಸ್ಸು ದೇವರನ್ನೇ ನಂಬಿ ಶಾಂತವಾಗಿರುವುದು. ಆತನಿಂದಲೇ ನನಗೆ ರಕ್ಷಣೆಯಾಗುವುದು.


ಜಲಪಾತದ ಘೋಷದಂತೆಯೂ ಪ್ರವಾಹದ ಘರ್ಜನೆಯಂತೆಯೂ ಇಕ್ಕಟ್ಟುಗಳು ನನಗೆ ಬಂದಿವೆ. ಸಮುದ್ರದ ಅಲೆಗಳಂತೆ ದುಃಖವು ನನ್ನನ್ನು ಆವರಿಸಿಕೊಂಡಿದೆ.


ಅದಕ್ಕೆ ದಾನ್ಯರು, “ನೀನು ನಮ್ಮ ಜೊತೆ ವಾದವಿವಾದ ಮಾಡದಿರುವುದೇ ಒಳ್ಳೆಯದು. ನಮ್ಮಲ್ಲಿ ಬಹಳ ಸಿಟ್ಟಿನ ಕೆಲವರಿದ್ದಾರೆ. ನೀನು ಹೀಗೆ ಕೂಗಾಡಿದರೆ ಅವರು ನಿಮ್ಮ ಮೇಲೆ ಧಾಳಿ ಮಾಡಬಹುದು. ಆಗ ನೀನು ಮತ್ತು ನಿನ್ನ ಕುಟುಂಬದವರು ಸತ್ತು ಹೋಗುವಿರಿ” ಎಂದು ಪ್ರತ್ಯುತ್ತರ ಕೊಟ್ಟರು.


ಯಾಕೋಬನಿಗೆ ಭಯವಾಯಿತು. ಅವನು ತನ್ನೊಡನೆ ಇದ್ದ ಜನರನ್ನು ಎರಡು ಗುಂಪುಗಳನ್ನಾಗಿ ವಿಂಗಡಿಸಿದನು. ಅವನು ಎಲ್ಲಾ ಆಡುಕುರಿಗಳನ್ನೂ ದನಕರುಗಳನ್ನೂ ಒಂಟೆಗಳನ್ನೂ ಎರಡು ಗುಂಪುಗಳನ್ನಾಗಿ ವಿಂಗಡಿಸಿದನು.


ನನ್ನ ಆತ್ಮವೇ, ನೀನು ವ್ಯಸನದಿಂದಿರುವುದೇಕೆ? ಗಲಿಬಿಲಿಗೊಂಡಿರುವುದೇಕೆ? ದೇವರನ್ನು ನಿರೀಕ್ಷಿಸು; ನನ್ನ ರಕ್ಷಕನೂ ದೇವರೂ ಆಗಿರುವ ಆತನನ್ನು ಸ್ತುತಿಸುತ್ತಲೇ ಇರುವೆನು.


ಅವನು ಮಾತನ್ನು ಮುಂದುವರಿಸಿ, “ನಿನ್ನ ತಂದೆಯು ಮತ್ತು ಅವನ ಜನರು ಶೂರರೆಂಬುದು ನಿನಗೆ ತಿಳಿದಿದೆ. ಕಾಡಿನಲ್ಲಿ ತನ್ನ ಮರಿಗಳನ್ನು ಕಳೆದುಕೊಂಡ ಕರಡಿಯಂತೆ ಅವರು ರೋಷವುಳ್ಳವರಾಗಿದ್ದಾರೆ. ನಿನ್ನ ತಂದೆಯು ಒಬ್ಬ ನುರಿತ ಹೋರಾಟಗಾರ. ಅವನು ಜನರೊಂದಿಗೆ ರಾತ್ರಿಯಲ್ಲಿ ಇರುವುದಿಲ್ಲ.


ಆದರೆ ಶೂನೇಮಿನ ಈ ಸ್ತ್ರೀಯು ದೇವಮನುಷ್ಯನಿದ್ದ ಬೆಟ್ಟದವರೆಗೆ ಹೋದಳು. ಅವಳು ನೆಲಕ್ಕೆ ಬಾಗಿ, ಎಲೀಷನ ಪಾದಗಳನ್ನು ಹಿಡಿದುಕೊಂಡಳು. ಶೂನೇಮಿನ ಆ ಸ್ತ್ರೀಯನ್ನು ತಳ್ಳಿಬಿಡಲು ಗೇಹಜಿಯು ಹತ್ತಿರಕ್ಕೆ ಬಂದನು. ಆದರೆ ದೇವಮನುಷ್ಯನು ಗೇಹಜಿಗೆ, “ಅವಳನ್ನು ತಡೆಯಬೇಡ! ಅವಳು ಬಹಳ ತಳಮಳಗೊಂಡಿದ್ದಾಳೆ. ಯೆಹೋವನು ನನಗೆ ಆಕೆಯ ದುಃಖವನ್ನು ಪ್ರಕಟಿಸಲಿಲ್ಲ; ನನಗೆ ಮರೆಮಾಡಿದ್ದಾನೆ” ಎಂದು ಹೇಳಿದನು.


ಆದರೆ ಸೌಲನ ಮಗನಾದ ಯೋನಾತಾನನು ಹೋರೆಷಿಗೆ ಹೋಗಿ ದಾವೀದನನ್ನು ಸಂಧಿಸಿ ದೇವರಲ್ಲಿ ಹೆಚ್ಚು ನಂಬಿಕೆಯನ್ನಿಡುವಂತೆ ಅವನನ್ನು ಪ್ರೋತ್ಸಾಹಿಸಿ,


ಯೆಹೋವನು ನನ್ನ ಬಂಡೆಯೂ ನನ್ನ ಕೋಟೆಯೂ ನನ್ನ ಆಶ್ರಯಗಿರಿಯೂ ನನ್ನ ಗುರಾಣಿಯೂ ನನ್ನ ರಕ್ಷಣಾಬಲವೂ ನನ್ನ ದುರ್ಗವೂ ಆಗಿದ್ದಾನೆ.


ಯೆಹೋವನನ್ನು ನಿರೀಕ್ಷಿಸಿಕೊಂಡಿರುವವರೇ, ದೃಢವಾಗಿಯೂ ಧೈರ್ಯವಾಗಿಯೂ ಇರಿ.


ನನ್ನ ದೇವರೇ, ದುಷ್ಟರಿಂದಲೂ ಕ್ರೂರವಾದ ಕೆಟ್ಟವರಿಂದಲೂ ನನ್ನನ್ನು ರಕ್ಷಿಸು.


ನನ್ನ ಒಡೆಯನೇ, ನನ್ನ ಬಾಲ್ಯದಿಂದಲೂ ನೀನೇ ನನ್ನ ನಿರೀಕ್ಷೆಯೂ ಭರವಸವೂ ಆಗಿರುವೆ.


“ನಾನು ದೊಡ್ಡ ಆಪತ್ತಿನಲ್ಲಿದ್ದೆನು. ಸಹಾಯಕ್ಕಾಗಿ ನಾನು ಯೆಹೋವನಿಗೆ ಮೊರೆಯಿಟ್ಟೆನು. ಆತನು ನನಗೆ ಉತ್ತರ ದಯಪಾಲಿಸಿದನು. ನಾನು ಆಳವಾದ ಸಮಾಧಿಯೊಳಗಿದ್ದೆನು. ನಾನು ನಿನಗೆ ಮೊರೆಯಿಟ್ಟಾಗ, ಯೆಹೋವನೇ, ನೀನು ನನ್ನ ಸ್ವರವನ್ನು ಕೇಳಿದೆ.


ಇಸ್ರೇಲರು ಯೆಹೋವನ ಬಳಿಗೆ ಹೋಗಿ ಸಾಯಂಕಾಲದವರೆಗೂ ಮೊರೆಯಿಟ್ಟರು. “ನಾವು ಮತ್ತೆ ಬೆನ್ಯಾಮೀನ್ಯರೊಡನೆ ಯುದ್ಧ ಮಾಡಲು ಹೋಗಬೇಕೇ? ಅವರು ನಮ್ಮ ಬಂಧುಗಳು” ಎಂದು ಅವರು ಯೆಹೋವನನ್ನು ಕೇಳಿದರು. ಅದಕ್ಕೆ ಯೆಹೋವನು, “ಹೋಗಿರಿ, ಅವರ ವಿರುದ್ಧ ಯುದ್ಧ ಮಾಡಿರಿ” ಎಂದು ಉತ್ತರಿಸಿದನು. ಇಸ್ರೇಲರು ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿದರು. ಮೊದಲನೇ ದಿನದಂತೆ ಅವರು ಮತ್ತೊಮ್ಮೆ ಯುದ್ಧಕ್ಕೆ ಹೋದರು.


ಸಮುವೇಲನು, “ನನಗೆ ತೊಂದರೆಯನ್ನೇಕೆ ಕೊಡುತ್ತಿರುವೆ? ನೀನು ನನ್ನನ್ನು ನೆಲದ ಮೇಲಕ್ಕೆ ಬರಮಾಡಿದ್ದೇಕೆ?” ಎಂದು ಸೌಲನನ್ನು ಕೇಳಿದನು. ಸೌಲನು, “ನಾನು ತೊಂದರೆಯಲ್ಲಿದ್ದೇನೆ! ಫಿಲಿಷ್ಟಿಯರು ನನ್ನ ವಿರುದ್ಧ ಹೋರಾಡಲು ಬರುತ್ತಿದ್ದಾರೆ; ದೇವರು ನನ್ನನ್ನು ತ್ಯಜಿಸಿದ್ದಾನೆ. ದೇವರು ನನಗೆ ಉತ್ತರವನ್ನೇ ಕೊಡುತ್ತಿಲ್ಲ; ಆತನು ಪ್ರವಾದಿಗಳಿಂದಾಗಲೀ ಕನಸುಗಳಿಂದಾಗಲೀ ನನಗೆ ಉತ್ತರಿಸುತ್ತಿಲ್ಲ. ಆದ ಕಾರಣವೇ ನಾನು ನಿನ್ನನ್ನು ಕರೆದೆನು. ನಾನು ಮಾಡಬೇಕಾದದ್ದನ್ನು ನನಗೆ ತಿಳಿಸು!” ಎಂದನು.


ನಾನು ಸಹಾಯಕ್ಕಾಗಿ ನಿನಗೆ ಮೊರೆಯಿಟ್ಟಾಗ ನೀನು ನನಗೆ ಸದುತ್ತರವನ್ನು ದಯಪಾಲಿಸಿದೆ; ನನಗೆ ಬಲವನ್ನು ಅನುಗ್ರಹಿಸಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು