Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 30:7 - ಪರಿಶುದ್ದ ಬೈಬಲ್‌

7 ದಾವೀದನು ಯಾಜಕನಾದ ಎಬ್ಯಾತಾರನಿಗೆ, “ಏಫೋದನ್ನು ತೆಗೆದುಕೊಂಡು ಬಾ” ಎಂದನು. ಅವನು ಎಫೋದನ್ನು ತಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅಹೀಮೆಲೆಕನ ಮಗನಾದ ಎಬ್ಯಾತಾರನಿಗೆ, “ದಯವಿಟ್ಟು ಏಫೋದನ್ನು ಇಲ್ಲಿಗೆ ತೆಗೆದುಕೊಂಡು ಬಾ” ಎಂದು ಹೇಳಲು ಅವನು ತಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆದರೂ ಅವನು ತನ್ನ ದೇವರಾದ ಸರ್ವೇಶ್ವರನಲ್ಲಿ ಧೈರ್ಯ ತಂದುಕೊಂಡನು. ಅಹೀಮೆಲೆಕನ ಮಗನಾದ ಎಬ್ಯಾತಾರನಿಗೆ, “ದಯವಿಟ್ಟು ‘ಏಫೋದ’ನ್ನು ಇಲ್ಲಿಗೆ ತೆಗೆದುಕೊಂಡು ಬಾ,” ಎಂದು ಹೇಳಿದನು. ಅವನು ತಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅಹೀಮೆಲೆಕನ ಮಗನಾದ ಎಬ್ಯಾತಾರನಿಗೆ - ದಯವಿಟ್ಟು ಏಫೋದನ್ನು ಇಲ್ಲಿಗೆ ತೆಗೆದುಕೊಂಡು ಬಾ ಎಂದು ಹೇಳಲು ಅವನು ತಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಗ ದಾವೀದನು ಅಹೀಮೆಲೆಕನ ಮಗ ಅಬಿಯಾತರನೆಂಬ ಯಾಜಕನಿಗೆ, “ನೀನು ದಯಮಾಡಿ ಏಫೋದನ್ನು ನನ್ನ ಬಳಿಗೆ ತೆಗೆದುಕೊಂಡು ಬಾ,” ಎಂದನು. ಹಾಗೆಯೇ ಅಬ್ಯತಾರನು ಏಫೋದನ್ನು ದಾವೀದನ ಬಳಿಗೆ ತಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 30:7
8 ತಿಳಿವುಗಳ ಹೋಲಿಕೆ  

ಆಗ ರಾಜನಾದ ಸೊಲೊಮೋನನು ಯಾಜಕನಾದ ಎಬ್ಯಾತಾರನಿಗೆ, “ನಾನು ನಿನ್ನನ್ನು ಕೊಲ್ಲಲೇಬೇಕು. ಆದರೆ ಅಣತೋತಿನಲ್ಲಿರುವ ನಿನ್ನ ಮನೆಗೆ ಹಿಂತಿರುಗಿ ಹೋಗಲು ನಿನಗೆ ಅವಕಾಶ ಕೊಡುತ್ತೇನೆ. ನಾನು ನಿನ್ನನ್ನು ಕೊಲ್ಲುವುದಿಲ್ಲ ಏಕೆಂದರೆ ನನ್ನ ತಂದೆಯಾದ ದಾವೀದನೊಂದಿಗೆ ನಡೆಯುವಾಗ ಯೆಹೋವನ ಪವಿತ್ರಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗಲು ನೀನು ಸಹಾಯ ಮಾಡಿದೆ. ನನ್ನ ತಂದೆಯ ಕಷ್ಟದ ದಿನಗಳಲ್ಲೆಲ್ಲಾ ನೀನೂ ಅವನ ಕಷ್ಟಗಳಲ್ಲಿ ಪಾಲುಗಾರನಾಗಿದ್ದದ್ದು ನನಗೆ ತಿಳಿದಿದೆ” ಎಂದು ಹೇಳಿದನು.


ಅದು ಮಹಾಯಾಜಕನಾದ ಅಬಿಯಾತರನ ಕಾಲ. ದಾವೀದನು ದೇವಾಲಯಕ್ಕೆ ಹೋಗಿ, ದೇವರಿಗೆ ಅರ್ಪಿಸಿದ ರೊಟ್ಟಿಯನ್ನು ತಿಂದನು. ಯಾಜಕರು ಮಾತ್ರ ಆ ರೊಟ್ಟಿಯನ್ನು ತಿನ್ನತಕ್ಕದ್ದೆಂದು ಮೋಶೆಯ ಧರ್ಮಶಾಸ್ತ್ರ ಹೇಳುತ್ತದೆ. ದಾವೀದನು ತನ್ನೊಂದಿಗಿದ್ದ ಜನರಿಗೂ ಆ ರೊಟ್ಟಿಯನ್ನು ನೀಡಿದನು” ಎಂದು ಉತ್ತರಕೊಟ್ಟನು.


ಸೌಲನು ಅಹೀಯನಿಗೆ, “ಯೆಹೋವನ ಪವಿತ್ರ ಪೆಟ್ಟಿಗೆಯನ್ನು ತೆಗೆದುಕೊಂಡು ಬಾ” ಎಂದು ಹೇಳಿದನು. (ಆ ಸಮಯದಲ್ಲಿ ದೇವರ ಪವಿತ್ರ ಪೆಟ್ಟಿಗೆಯು ಇಸ್ರೇಲರೊಂದಿಗೆ ಇತ್ತು.)


“ಏಫೋದನ್ನು ಚಿನ್ನದ ದಾರಗಳು, ನಾರಿನಬಟ್ಟೆ, ನೀಲಿ, ನೇರಳೆ ಮತ್ತು ಕೆಂಪುದಾರಗಳನ್ನು ಉಪಯೋಗಿಸಿ ಚಾಣಾಕ್ಷತೆಯಿಂದ ಹೆಣೆದು ತಯಾರಿಸಬೇಕು.


ಆಗ ಅವರು ಯೆಹೋವನನ್ನು, “ಸೌಲನು ಇಲ್ಲಿಗೆ ಬರುವನೋ?” ಎಂದು ಕೇಳಿದರು. ಯೆಹೋವನು, “ಸೌಲನು ಸರಕುಗಳ ಹಿಂದೆ ಅಡಗಿಕೊಂಡಿದ್ದಾನೆ” ಎಂದು ಹೇಳಿದನು.


ಸೌಲನು ಯಾಜಕನಾದ ಅಹೀಯನ ಜೊತೆ ಮಾತನಾಡುತ್ತಿದ್ದನು. ಸೌಲನು ಯೆಹೋವನ ಸಲಹೆಗಾಗಿ ಕಾಯುತ್ತಿದ್ದನು. ಆದರೆ ಫಿಲಿಷ್ಟಿಯರ ಪಾಳೆಯದಲ್ಲಿ ಗದ್ದಲವೂ ಗಲಿಬಿಲಿಯೂ ಹೆಚ್ಚತೊಡಗಿದವು. ಸೌಲನು ತಾಳ್ಮೆಯಿಲ್ಲದಂತಾದನು. ಕೊನೆಯದಾಗಿ ಸೌಲನು ಯಾಜಕನಾದ ಅಹೀಯನಿಗೆ, “ಅಷ್ಟೇ ಸಾಕು, ಕೈಗಳನ್ನು ಕೆಳಗಿಳಿಸಿ ಪ್ರಾರ್ಥನೆಯನ್ನು ನಿಲ್ಲಿಸು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು