Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 30:8 - ಪರಿಶುದ್ದ ಬೈಬಲ್‌

8 ನಂತರ ದಾವೀದನು ಯೆಹೋವನಲ್ಲಿ, “ನಮ್ಮ ಕುಟುಂಬಗಳನ್ನು ಅಪಹರಿಸಿದ ಜನರನ್ನು ನಾನು ಅಟ್ಟಿಸಿಕೊಂಡು ಹೋಗಬೇಕೇ? ನಾನು ಅವರನ್ನು ಸೆರೆಹಿಡಿಯುವೆನೇ?” ಎಂದು ಪ್ರಾರ್ಥಿಸಿದನು. ಯೆಹೋವನು, “ಅವರನ್ನು ಅಟ್ಟಿಸಿಕೊಂಡು ಹೋಗು. ಅವರನ್ನು ನೀನು ಸೆರೆಹಿಡಿಯಬಹುದು. ನಿಮ್ಮ ಕುಟುಂಬಗಳನ್ನು ನೀವು ರಕ್ಷಿಸಬಹುದು” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆಗ ದಾವೀದನು ಯೆಹೋವನನ್ನು, “ನಾನು ಆ ಗುಂಪನ್ನು ಹಿಂದಟ್ಟಬಹುದೋ, ಅದು ನನಗೆ ಸಿಕ್ಕುವುದೋ?” ಎಂದು ಕೇಳಲು ಆತನು, “ಹಿಂದಟ್ಟು, ಅದು ನಿನಗೆ ಸಿಕ್ಕುವುದು, ನೀನು ಎಲ್ಲರನ್ನೂ ಬಿಡಿಸಿಕೊಂಡು ಬರುವಿ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆಗ ದಾವೀದನು ಸರ್ವೇಶ್ವರನನ್ನು, “ನಾನು ಆ ದಾಳಿಕಾರರನ್ನು ಬೆನ್ನಟ್ಟಬಹುದೇ? ಅವರು ನನಗೆ ವಶವಾಗುವರೇ?” ಎಂದು ಕೇಳಿದನು. “ಬೆನ್ನಟ್ಟು, ಅವರು ನಿನ್ನ ವಶವಾಗುವರು, ನೀನು ನಿನ್ನವರೆಲ್ಲರನ್ನೂ ಬಿಡಿಸಿಕೊಂಡು ಬರುವೆ,” ಎಂದು ಉತ್ತರಕೊಟ್ಟನು ಸರ್ವೇಶ್ವರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆಗ ದಾವೀದನು ಯೆಹೋವನನ್ನು - ನಾನು ಆ ಗುಂಪನ್ನು ಹಿಂದಟ್ಟಬಹುದೋ? ಅದು ನನಗೆ ಸಿಕ್ಕುವದೋ ಎಂದು ಕೇಳಲು ಅತನು - ಹಿಂದಟ್ಟು, ಅದು ನಿನಗೆ ಸಿಕ್ಕುವದು; ನೀನು ಎಲ್ಲರನ್ನೂ ಬಿಡಿಸಿಕೊಂಡು ಬರುವಿ ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ದಾವೀದನು ಯೆಹೋವ ದೇವರಿಗೆ, “ನಾನು ಆ ದಂಡಿನ ಹಿಂದೆ ಬೆನ್ನಟ್ಟಲೋ? ಅವರು ನನಗೆ ವಶವಾಗುವರೋ?” ಎಂದು ಕೇಳಿದನು. ಅದಕ್ಕೆ ಯೆಹೋವ ದೇವರು, “ಬೆನ್ನಟ್ಟು, ಅವರು ನಿನ್ನ ವಶವಾಗುವರು; ನೀನು ನಿನ್ನವರನ್ನು ಬಿಡಿಸಿಕೊಂಡು ಬರುವೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 30:8
21 ತಿಳಿವುಗಳ ಹೋಲಿಕೆ  

ದಾವೀದನು ತನ್ನ ಇಬ್ಬರು ಹೆಂಡತಿಯರನ್ನು ಮರಳಿ ಪಡೆದನು. ಅಮಾಲೇಕ್ಯರು ಸೂರೆಮಾಡಿದ್ದೆಲ್ಲವನ್ನೂ ದಾವೀದನು ಮತ್ತೆ ಹಿಂದಕ್ಕೆ ಪಡೆದನು.


ದಾವೀದನು, “ನಾನು ಹೋಗಿ ಈ ಫಿಲಿಷ್ಟಿಯರೊಡನೆ ಹೋರಾಡಲೇ?” ಎಂದು ಯೆಹೋವನನ್ನು ಕೇಳಿದನು. ಯೆಹೋವನು ದಾವೀದನಿಗೆ, “ಹೋಗು ಫಿಲಿಷ್ಟಿಯರ ಮೇಲೆ ಆಕ್ರಮಣ ಮಾಡು. ಕೆಯೀಲಾವನ್ನು ರಕ್ಷಿಸು” ಎಂದು ಹೇಳಿದನು.


ದಾವೀದನು ಯೆಹೋವನಿಗೆ, “ಫಿಲಿಷ್ಟಿಯರ ವಿರುದ್ಧ ಹೋರಾಡಲು ನಾನು ಹೋಗಬಹುದೇ? ಫಿಲಿಷ್ಟಿಯರನ್ನು ಸೋಲಿಸಲು ನೀನು ಸಹಾಯ ಮಾಡುವೆಯಾ?” ಎಂದು ಕೇಳಿದನು. ಯೆಹೋವನು ದಾವೀದನಿಗೆ, “ಹೋಗು, ಫಿಲಿಷ್ಟಿಯರನ್ನು ಸೋಲಿಸಲು ನಾನು ಖಂಡಿತವಾಗಿಯೂ ನಿನಗೆ ಸಹಾಯ ಮಾಡುತ್ತೇನೆ” ಎಂದು ಹೇಳಿದನು.


ದಾವೀದನು ಯೆಹೋವನಿಗೆ ಪ್ರಾರ್ಥಿಸಿದನು. ಈ ಸಮಯದಲ್ಲಿ ಯೆಹೋವನು ದಾವೀದನಿಗೆ, “ಅಲ್ಲಿಗೆ ಹೋಗಬೇಡ. ಅವರ ಸೈನ್ಯವನ್ನು ಸುತ್ತಿಕೊಂಡು ಹಿಂದಿನಿಂದ ಅವರನ್ನು ಸಮೀಪಿಸು. ಬಾಲ್ಯಾಮ್ ಮರಗಳಿರುವ ಮತ್ತೊಂದು ಕಡೆಯಿಂದ ಅವರ ಮೇಲೆ ಆಕ್ರಮಣ ಮಾಡು.


ದಾವೀದನು ಮತ್ತೆ ಯೆಹೋವನನ್ನು ಕೇಳಿದನು. ಯೆಹೋವನು ದಾವೀದನಿಗೆ, “ಕೆಯೀಲಾಕ್ಕೆ ಹೋಗು. ಫಿಲಿಷ್ಟಿಯರನ್ನು ಸೋಲಿಸಲು ನಾನು ನಿನಗೆ ಸಹಾಯ ಮಾಡುತ್ತೇನೆ” ಎಂದು ಹೇಳಿದನು.


ನನ್ನ ಭಕ್ತರು ಸಹಾಯಕ್ಕಾಗಿ ಮೊರೆಯಿಡುವಾಗ, ಸದುತ್ತರವನ್ನು ದಯಪಾಲಿಸುವೆನು. ಆಪತ್ತಿನಲ್ಲಿಯೂ ನಾನು ಅವರೊಂದಿಗಿರುವೆನು; ಅವರನ್ನು ತಪ್ಪಿಸಿ ಘನಪಡಿಸುವೆನು.


ದೇವರು ಹೀಗೆನ್ನುತ್ತಾನೆ: “ಆಪತ್ಕಾಲಗಳಲ್ಲಿ ನನಗೆ ಮೊರೆಯಿಡಿರಿ! ನಾನು ನಿಮಗೆ ಸಹಾಯ ಮಾಡುವೆನು, ಆಗ ನೀವು ನನ್ನನ್ನು ಸನ್ಮಾನಿಸುವಿರಿ.”


ಯೆಹೋಶುವನು ತೀರ್ಮಾನವೇನಾದರೂ ಮಾಡಬೇಕಾದರೆ ಅವನು ಯಾಜಕನಾದ ಎಲ್ಲಾಜಾರನ ಬಳಿಗೆ ಹೋಗಲಿ, ಎಲ್ಲಾಜಾರನು ಊರೀಮಿನಿಂದ ಯೆಹೋವನ ಉತ್ತರವನ್ನು ಪಡೆಯುವನು. ಆಗ ಯೆಹೋಶುವನೂ ಇಸ್ರೇಲರೆಲ್ಲರೂ ದೇವರು ಹೇಳುವ ಕಾರ್ಯಗಳನ್ನು ಮಾಡುವರು. ಆತನು, ‘ಯುದ್ಧಕ್ಕೆ ಹೋಗಿರಿ’ ಎಂದು ಹೇಳಿದರೆ ಅವರು ಯುದ್ಧಕ್ಕೆ ಹೋಗುವರು. ಆತನು, ‘ಮನೆಗೆ ಹೋಗಿರಿ’ ಎಂದು ಹೇಳಿದರೆ ಅವರು ಮನೆಗೆ ಹೋಗುವರು” ಎಂದು ಹೇಳಿದನು.


ಸೌಲನು ಯೆಹೋವನಿಗೆ ಪ್ರಾರ್ಥನೆ ಮಾಡಿದನು. ಆದರೆ ಯೆಹೋವನು ಅವನಿಗೆ ಉತ್ತರ ನೀಡಲಿಲ್ಲ. ದೇವರು ಕನಸುಗಳಲ್ಲಿಯೂ ಸೌಲನೊಡನೆ ಮಾತನಾಡಲಿಲ್ಲ. ದೇವರು ಅವನಿಗೆ ಊರೀಮಿನಿಂದಾಗಲಿ ಪ್ರವಾದಿಗಳಿಂದಾಗಲಿ ಉತ್ತರಕೊಡಲಿಲ್ಲ.


ಇಸ್ರೇಲಿನ ಜನರು ಬೇತೇಲಿಗೆ ಹೋದರು. ಬೇತೇಲಿನಲ್ಲಿ ಅವರು “ಯಾವ ಕುಲದವರು ಮೊದಲು ಬೆನ್ಯಾಮೀನ್ಯರ ಮೇಲೆ ಧಾಳಿಮಾಡಬೇಕು” ಎಂದು ಯೆಹೋವನನ್ನು ಕೇಳಿದರು. ಅದಕ್ಕೆ ಯೆಹೋವನು, “ಯೆಹೂದ ಕುಲದವರು ಮೊದಲು ಹೋಗಬೇಕು” ಎಂದು ಉತ್ತರಿಸಿದನು.


ಫೀನೆಹಾಸನು ಅಲ್ಲಿ ದೇವರ ಸೇವೆ ಮಾಡುವ ಯಾಜಕನಾಗಿದ್ದನು. ಫೀನೆಹಾಸನು ಎಲ್ಲಾಜಾರನ ಮಗನಾಗಿದ್ದನು. ಎಲ್ಲಾಜಾರನು ಆರೋನನ ಮಗನಾಗಿದ್ದನು.) ಇಸ್ರೇಲರು, “ಬೆನ್ಯಾಮೀನ್ಯರು ನಮ್ಮ ಬಂಧುಗಳು. ನಾವು ಅವರ ವಿರುದ್ಧ ಯುದ್ಧ ಮಾಡುವುದಕ್ಕೆ ಮತ್ತೆ ಹೋಗಬೇಕೇ? ಅಥವಾ ನಾವು ಯುದ್ಧ ಮಾಡುವುದನ್ನು ನಿಲ್ಲಿಸಿ ಬಿಡಬೇಕೇ?” ಎಂದು ಯೆಹೋವನನ್ನು ಕೇಳಿದರು. “ಹೋಗಿರಿ, ನಾಳೆ ಅವರನ್ನು ಸೋಲಿಸಲು ನಾನು ನಿಮಗೆ ಸಹಾಯ ಮಾಡುತ್ತೇನೆ” ಎಂದು ಯೆಹೋವನು ಉತ್ತರಕೊಟ್ಟನು.


ಆದ್ದರಿಂದ ಸೌಲನು ದೇವರನ್ನು, “ನಾವು ಫಿಲಿಷ್ಟಿಯರನ್ನು ಅಟ್ಟಿಸಿಕೊಂಡು ಹೋಗಬೇಕೇ? ನಾವು ಫಿಲಿಷ್ಟಿಯರನ್ನು ಸೋಲಿಸುವಂತೆ ನೀನು ಮಾಡುವಿಯೋ?” ಎಂದು ಕೇಳಿದನು. ಆದರೆ ದೇವರು ಆ ದಿನ ಸೌಲನಿಗೆ ಉತ್ತರಿಸಲಿಲ್ಲ.


ಆಮೇಲೆ ಶತ್ರುಗಳು ಅಪಹರಿಸಿದ್ದ ಎಲ್ಲಾ ವಸ್ತುಗಳನ್ನು ಮತ್ತು ಲೋಟನ ಆಸ್ತಿಯನ್ನು ಅಬ್ರಾಮನು ತೆಗೆದುಕೊಂಡು ಲೋಟನೊಡನೆ ಬಂದನು. ಅಲ್ಲದೆ ಸೆರೆಹಿಡಿಯಲ್ಪಟ್ಟಿದ್ದ ಸ್ತ್ರೀಯರನ್ನು ಮತ್ತು ಇತರ ಜನರನ್ನು ಹಿಂದಕ್ಕೆ ಕರೆದುಕೊಂಡು ಬಂದನು.


“‘ನಾವು ಅವರನ್ನು ಬೆನ್ನಟ್ಟಿ ಹಿಡಿಯುವೆವು; ನಾವು ಅವರ ಸಂಪತ್ತನ್ನೆಲ್ಲಾ ತೆಗೆದುಕೊಳ್ಳುವೆವು. ನಾವು ಖಡ್ಗದಿಂದ ಅವರನ್ನು ಸಂಹರಿಸುವೆವು. ನಮ್ಮ ಭುಜಬಲದಿಂದ ಅವರ ಸ್ವತ್ತುಗಳನ್ನೆಲ್ಲಾ ವಶಪಡಿಸಿಕೊಳ್ಳುವೆವು’ ಎಂದುಕೊಂಡರು ವೈರಿಗಳು.


ಏನೂ ಕಳೆದು ಹೋಗಿರಲಿಲ್ಲ. ಅವರು ತಮ್ಮ ಎಲ್ಲ ಮಕ್ಕಳನ್ನೂ ಮುದುಕರನ್ನೂ ಅವರ ಗಂಡುಹೆಣ್ಣು ಮಕ್ಕಳನ್ನೂ ಮತ್ತೆ ಪಡೆದುಕೊಂಡರು. ಅವರು ತಮ್ಮ ಬೆಲೆಬಾಳುವ ವಸ್ತುಗಳನ್ನೂ ಅಮಾಲೇಕ್ಯರು ತೆಗೆದುಕೊಂಡು ಹೋಗಿದ್ದ ಎಲ್ಲವನ್ನೂ ಮತ್ತೆ ಪಡೆದುಕೊಂಡರು. ಹೀಗೆ ದಾವೀದನು ಎಲ್ಲವನ್ನೂ ತೆಗೆದುಕೊಂಡು ಬಂದನು.


ಗಿದ್ಯೋನ ಮತ್ತು ಅವನ ಮುನ್ನೂರು ಜನರು ಜೋರ್ಡನ್ ನದಿಯನ್ನು ದಾಟಿ ಆಚೆದಡಕ್ಕೆ ಹೋದರು. ಅವರು ಬಹಳ ದಣಿದಿದ್ದರು ಮತ್ತು ಹಸಿದಿದ್ದರು.


ಆಗ ಅವರು ಯೆಹೋವನನ್ನು, “ಸೌಲನು ಇಲ್ಲಿಗೆ ಬರುವನೋ?” ಎಂದು ಕೇಳಿದರು. ಯೆಹೋವನು, “ಸೌಲನು ಸರಕುಗಳ ಹಿಂದೆ ಅಡಗಿಕೊಂಡಿದ್ದಾನೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು