Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 4:21 - ಪರಿಶುದ್ದ ಬೈಬಲ್‌

21 ಏಲಿಯ ಸೊಸೆಯು, “ಇಸ್ರೇಲರ ವೈಭವವು ಇಲ್ಲವಾಯಿತು” ಎಂದು ಹೇಳಿದಳು. ಅವಳು ತನ್ನ ಮಗುವಿಗೆ ಈಕಾಬೋದ್ ಎಂಬ ಹೆಸರಿಟ್ಟು ಮೃತಳಾದಳು. ಯೆಹೋವನ ಪವಿತ್ರ ಪೆಟ್ಟಿಗೆಯು ಶತ್ರುವಶವಾದದ್ದರಿಂದ ಮಾವನು ಮತ್ತು ಗಂಡನು ಸತ್ತದ್ದರಿಂದ, ಆಕೆ ತನ್ನ ಮಗನಿಗೆ ಈಕಾಬೋದ್ ಎಂದು ಹೆಸರಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ದೇವರ ಮಂಜೂಷವು ಶತ್ರುವಶವಾದ್ದರಿಂದಲೂ, ಮಾವನೂ, ಗಂಡನೂ ಮೃತರಾದ್ದರಿಂದಲೂ, “ಮಹಿಮೆಯು ಇಸ್ರಾಯೇಲರನ್ನು ಬಿಟ್ಟು ಹೋಯಿತೆಂದು ಹೇಳಿ ಆ ಕೂಸಿಗೆ ಈಕಾಬೋದ್” ಎಂದು ಹೆಸರಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ದೇವರ ಮಂಜೂಷ ಶತ್ರುವಶವಾದುದರಿಂದಲು ಹಾಗೂ ಮಾವನೂ ಗಂಡನೂ ಮೃತರಾಗಿದ್ದರಿಂದಲು, “ದೈವಮಹಿಮೆಯು ಇಸ್ರಯೇಲರನ್ನು ಬಿಟ್ಟುಹೋಯಿತು,” ಎಂದು ಹೇಳಿ ಆ ಕೂಸಿಗೆ ‘ಈಕಾಬೋದ್’ ಎಂದು ಹೆಸರು ಇಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ದೇವರ ಮಂಜೂಷವು ಶತ್ರುವಶವಾದದರಿಂದಲೂ ಮಾವನೂ ಗಂಡನೂ ಮೃತಿ ಹೊಂದಿದರಿಂದಲೂ - ಮಹಿಮೆಯು ಇಸ್ರಾಯೇಲ್ಯರನ್ನು ಬಿಟ್ಟುಹೋಯಿತೆಂದು ಹೇಳಿ ಆ ಕೂಸಿಗೆ ಈಕಾಬೋದ್ ಎಂದು ಹೆಸರಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆದರೆ ಅವಳು ಅದಕ್ಕೆ ಉತ್ತರವಾಗಿ ಅದರ ಮೇಲೆ ಲಕ್ಷ್ಯವಿಡದೆ ದೇವರ ಮಂಜೂಷವು ಶತ್ರು ವಶವಾಯಿತೆಂದೂ ತನ್ನ ಮಾವನೂ ತನ್ನ ಗಂಡನೂ ಮರಣಹೊಂದಿದರಿಂದಲೂ ದೇವರ ಮಹಿಮೆಯು ಇಸ್ರಾಯೇಲರನ್ನು ಬಿಟ್ಟುಹೋಯಿತು ಎಂದು ಹೇಳಿ, ಆ ಕೂಸಿಗೆ, “ಈಕಾಬೋದ್,” ಎಂದು ಹೆಸರಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 4:21
12 ತಿಳಿವುಗಳ ಹೋಲಿಕೆ  

ಯೆಹೋವನೇ, ನಿನ್ನ ಆಲಯವೂ ನಿನ್ನ ಮಹಿಮಾಗುಡಾರವೂ ನನಗೆ ಎಷ್ಟೋ ಪ್ರಿಯವಾಗಿವೆ.


ಆತನು ತನ್ನ ಜನರನ್ನು ಇತರ ಜನಾಂಗಗಳ ವಶಕ್ಕೆ ಕೊಟ್ಟನು. ಶತ್ರುಗಳು ಆತನ “ಸುಂದರವಾದ ಆಭರಣವನ್ನು” ತೆಗೆದುಕೊಂಡರು.


ಯಾವ ಜನಾಂಗವಾದರೂ ಎಂದಾದರೂ ತಮ್ಮ ಹಳೆಯ ದೇವರುಗಳನ್ನು ಬದಲಾಯಿಸಿ ಹೊಸ ದೇವರುಗಳನ್ನು ಪಡೆಯಿತೇ? ಇಲ್ಲ. (ಅವರ ದೇವರುಗಳು ನಿಜವಾದ ದೇವರುಗಳೇ ಅಲ್ಲ.) ಆದರೆ ನನ್ನ ಜನರು ತಮ್ಮ ಮಹಿಮಾಶಾಲಿಯಾದ ದೇವರನ್ನು ಅಪ್ರಯೋಜಕವಾದ ವಿಗ್ರಹಗಳೊಂದಿಗೆ ಬದಲಾಯಿಸಿಕೊಂಡಿದ್ದಾರೆ.


ಯಾಜಕರು ಕತ್ತಿಯಿಂದ ಕೊಲ್ಲಲ್ಪಟ್ಟರು, ಆದರೆ ವಿಧವೆಯರು ಅವರಿಗಾಗಿ ಗೋಳಾಡಲಿಲ್ಲ.


ಒಂದುವೇಳೆ ಇಸ್ರೇಲರಿಗೆ ಮಕ್ಕಳು ಹುಟ್ಟಿದರೂ ಪ್ರಯೋಜನವಿಲ್ಲ. ಯಾಕೆಂದರೆ ಆ ಮಕ್ಕಳನ್ನು ಅವರಿಂದ ತೆಗೆದುಬಿಡುವೆನು. ನಾನು ಅವರನ್ನು ತೊರೆದುಬಿಡುವೆನು. ಆಗ ಅವರಿಗೆ ಸಂಕಟದ ಮೇಲೆ ಸಂಕಟವು ಪ್ರಾಪ್ತಿಯಾಗುವದು.”


ದೇವರ ಪವಿತ್ರ ಪೆಟ್ಟಿಗೆಯು ಫಿಲಿಷ್ಟಿಯರ ವಶವಾಯಿತು. ಏಲಿಯ ಮಕ್ಕಳಾದ ಹೊಫ್ನಿ ಮತ್ತು ಫೀನೆಹಾಸರನ್ನು ಅವರು ಕೊಂದರು.


ಹುಲ್ಲುತಿನ್ನುವ ಹೋರಿಯ ಮೂರ್ತಿಗಾಗಿ ಅವರು ಮಹಿಮಾಸ್ವರೂಪನಾದ ದೇವರನ್ನೇ ಬಿಟ್ಟುಕೊಟ್ಟರು!


ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಫಿಲಿಷ್ಟಿಯರು ತೆಗೆದುಕೊಂಡು ಹೋದದ್ದರಿಂದ ಆಕೆಯು, “ಇಸ್ರೇಲರ ವೈಭವ ಇಲ್ಲವಾಯಿತು” ಎಂದು ಹೇಳಿದಳು.


ಅವರಲ್ಲಿ ಅಹೀಯನೂ ಒಬ್ಬನು. ಶೀಲೋವಿನಲ್ಲಿ ಏಲಿಯು ಯೆಹೋವನ ಯಾಜಕನಾಗಿದ್ದನು. ಏಫೋದನ್ನು ಧರಿಸಿದ್ದ ಅಹೀಯನು ಆಗ ಅಲ್ಲಿ ಯಾಜಕನಾಗಿದ್ದನು. ಅಹೀಯನು ಈಕಾಬೋದನ ಸೋದರನಾದ ಅಹೀಟೂಬನ ಮಗ. ಈಕಾಬೋದನು ಫೀನೆಹಾಸನ ಮಗ. ಫೀನೆಹಾಸನು ಏಲಿಯ ಮಗ. ಯೋನಾತಾನನು ಹೊರಟುಹೋದನೆಂಬುದು ಜನರಿಗೆ ಗೊತ್ತಿರಲಿಲ್ಲ.


ಈ ಸಂಗತಿಗಳು ನಿಜವಾಗುತ್ತವೆಯೆಂದು ತೋರಿಸಲು ನಾನು ನಿನಗೊಂದು ಗುರುತನ್ನು ಕೊಡುವೆನು. ನಿನ್ನ ಇಬ್ಬರು ಮಕ್ಕಳಾದ ಹೊಫ್ನಿ ಮತ್ತು ಫೀನೆಹಾಸರು ಒಂದೇ ದಿನದಲ್ಲಿ ಸಾಯುವರು. ಅದೇ ಆ ಗುರುತು.


ನಾನು ಇದನ್ನು ಏಲಿ ಮತ್ತು ಅವನ ಕುಟುಂಬದ ವಿರುದ್ಧ ಸಂಪೂರ್ಣವಾಗಿ ಮಾಡುತ್ತೇನೆ.


ಕೋಪೋದ್ರಿಕ್ತನಾದ ಯೆಹೋವನು ಚೀಯೋನಿನ ಮಗಳ ಮೇಲೆ ಹೇಗೆ ಕಾರ್ಮೋಡಗಳು ಕವಿಯುವಂತೆ ಮಾಡಿದ್ದಾನೆ ನೋಡಿರಿ. ಆತನು ಇಸ್ರೇಲಿನ ವೈಭವವನ್ನು ಆಕಾಶದಿಂದ ಭೂಮಿಗೆ ಎಸೆದಿದ್ದಾನೆ. ಯೆಹೋವನಿಗೆ ಕೋಪ ಬಂದಾಗ ಆತನು ಇಸ್ರೇಲ್ ತನ್ನ ಪಾದಪೀಠವೆಂಬುದನ್ನು ಗಮನಕ್ಕೆ ತಂದುಕೊಳ್ಳಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು