4 ಆ ಕಾರಣಕ್ಕಾಗಿ ಶೀಲೋವಿಗೆ ಜನರನ್ನು ಕಳುಹಿಸಿದರು. ಸರ್ವಶಕ್ತನಾದ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ಜನರು ತಂದರು. ಪೆಟ್ಟಿಗೆಯ ಮೇಲ್ಭಾಗದಲ್ಲಿ ಕೆರೂಬಿಗಳಿದ್ದವು. ಅವುಗಳು ಯೆಹೋವನು ಕುಳಿತುಕೊಳ್ಳುವ ಸಿಂಹಾಸನದಂತಿದ್ದವು; ಏಲಿಯ ಮಕ್ಕಳಾದ ಹೊಫ್ನಿ ಮತ್ತು ಫೀನೆಹಾಸರು ಪೆಟ್ಟಿಗೆಯ ಜೊತೆಯಲ್ಲಿ ಬಂದರು.
4 ಕೆರೂಬಿಗಳ ಮಧ್ಯದಲ್ಲಿ ಆಸೀನನಾಗಿರುವ ಸೇನಾಧೀಶ್ವರ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತರಿಸಿದರು. ಏಲಿಯ ಇಬ್ಬರು ಮಕ್ಕಳಾದ ಹೊಫ್ನಿ, ಫೀನೆಹಾಸ್ ಎಂಬವರು ದೇವರ ಒಡಂಬಡಿಕೆಯ ಮಂಜೂಷದ ಸಂಗಡ ಇದ್ದರು.
4 ಅಂತೆಯೇ ಜನರನ್ನು ಕಳುಹಿಸಿ ಕೆರೂಬಿಗಳ ಮಧ್ಯದಲ್ಲಿ ಆಸೀನರಾಗಿರುವ ಸೇನಾಧೀಶ್ವರನ ಒಡಂಬಡಿಕೆಯ ಮಂಜೂಷವನ್ನು ತರಿಸಿದರು. ಏಲಿಯ ಇಬ್ಬರು ಮಕ್ಕಳಾದ ಹೊಫ್ನಿ, ಫೀನೆಹಾಸ ಎಂಬವರು ದೇವರ ಒಡಂಬಡಿಕೆಯ ಮಂಜೂಷದ ಸಂಗಡ ಇದ್ದರು.
4 ಅವರು ಜನರನ್ನು ಕಳುಹಿಸಿ ಕೆರೂಬಿಗಳ ಮಧ್ಯದಲ್ಲಿ ಆಸೀನನಾಗಿರುವ ಸೈನ್ಯಾಧೀಶ್ವರ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತರಿಸಿದರು. ಏಲಿಯ ಇಬ್ಬರು ಮಕ್ಕಳಾದ ಹೊಫ್ನಿ, ಫೀನೆಹಾಸ್ ಎಂಬವರು ದೇವರ ಒಡಂಬಡಿಕೆಯ ಮಂಜೂಷದ ಸಂಗಡ ಇದ್ದರು.
4 ಕೆರೂಬಿಗಳ ಮಧ್ಯದಲ್ಲಿರುವ ಸೇನಾಧೀಶ್ವರ ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ತೆಗೆದುಕೊಂಡು ಬರಲು ಶೀಲೋವಿಗೆ ಜನರನ್ನು ಕಳುಹಿಸಿದರು. ಅಲ್ಲಿ ಏಲಿಯ ಇಬ್ಬರು ಮಕ್ಕಳಾದ ಹೊಫ್ನಿಯೂ, ಫೀನೆಹಾಸನೂ ದೇವರ ಒಡಂಬಡಿಕೆಯ ಮಂಜೂಷದ ಬಳಿಯಲ್ಲಿದ್ದರು.
ಆಗ ದಾವೀದನು ತನ್ನ ಜನರೊಂದಿಗೆ ಯೆಹೂದದ ಬಾಳಾ ಎಂಬಲ್ಲಿಗೆ ಹೋದನು. ಯೆಹೂದದ ಬಾಳಾ ಎಂಬ ಸ್ಥಳದಲ್ಲಿದ್ದ ಪವಿತ್ರ ಪೆಟ್ಟಿಗೆಯನ್ನು ಜೆರುಸಲೇಮಿಗೆ ತೆಗೆದುಕೊಂಡು ಬಂದನು. ಯೆಹೋವನನ್ನು ಆರಾಧಿಸುವುದಕ್ಕಾಗಿ ಜನರು ಪವಿತ್ರ ಪೆಟ್ಟಿಗೆಯ ಬಳಿ ಹೋಗುತ್ತಿದ್ದರು. ಪವಿತ್ರ ಪೆಟ್ಟಿಗೆಯು ಯೆಹೋವನ ಪೀಠದಂತಿತ್ತು. ಪವಿತ್ರ ಪೆಟ್ಟಿಗೆಯ ಮೇಲ್ಭಾಗದಲ್ಲಿ ಕೆರೂಬಿಗಳಿದ್ದವು. ಯೆಹೋವನು ರಾಜನಂತೆ ದೂತರ ಮೇಲೆ ಆಸೀನನಾಗಿದ್ದನು.
ಮೋಶೆ ಯೆಹೋವನ ಸಂಗಡ ಮಾತಾಡಲು ದೇವದರ್ಶನಗುಡಾರದೊಳಗೆ ಹೋದಾಗ, ಒಡಂಬಡಿಕೆಯ ಪವಿತ್ರ ಪೆಟ್ಟಿಗೆಯ ಹೊದಿಕೆಯ ಮೇಲಿದ್ದ ಎರಡು ಕೆರೂಬಿಗಳ ಮಧ್ಯದಿಂದ ಯೆಹೋವನ ಸ್ವರವು ಮೋಶೆಗೆ ಕೇಳಿಸಿತು. ಹೀಗೆ ಆತನು ಅವನ ಸಂಗಡ ಮಾತಾಡಿದನು.
ಹಿಜ್ಕೀಯನು ಯೆಹೋವನ ಸನ್ನಿಧಿಯಲ್ಲಿ, “ಯೆಹೋವನೇ, ಕೆರೂಬಿಗಳ ಮೇಲೆ ರಾಜನಾಗಿ ಕುಳಿತುಕೊಳ್ಳುವ ಇಸ್ರೇಲರ ದೇವರೇ, ಲೋಕದ ರಾಜ್ಯಗಳಿಗೆಲ್ಲಾ ನೀನೊಬ್ಬನೇ ದೇವರಾಗಿರುವೆ. ನೀನು ಪರಲೋಕವನ್ನು ಮತ್ತು ಈ ಲೋಕವನ್ನು ಸೃಷ್ಟಿಸಿದೆ!
“ಯಾಜಕರೇ, ಯೆಹೋವನು ನಮಗೆ ಶುಭವನ್ನು ಉಂಟುಮಾಡುವಂತೆ ಆತನನ್ನು ಕೇಳಿಕೊಳ್ಳಿರಿ. ಆದರೆ ಆತನು ನಿಮಗೆ ಕಿವಿಗೊಡುವುದಿಲ್ಲ. ನಿಮ್ಮ ತಪ್ಪು ದೋಷಗಳೇ ಅದಕ್ಕೆ ಕಾರಣ.” ಇದು ಸರ್ವಶಕ್ತನಾದ ಯೆಹೋವನ ನುಡಿ.
ಏಲಿಯು ಬಹಳ ವೃದ್ಧನಾದನು. ತನ್ನ ಗಂಡುಮಕ್ಕಳು ಶೀಲೋವಿನಲ್ಲಿ ಇಸ್ರೇಲರೊಂದಿಗೆ ನಡೆದುಕೊಳ್ಳುತ್ತಿರುವ ರೀತಿಯನ್ನು ಮತ್ತು ಅವರು ದೇವದರ್ಶನ ಗುಡಾರದ ಬಾಗಿಲಿನಲ್ಲಿ ಸೇವೆ ಮಾಡುತ್ತಿರುವ ಸ್ತ್ರೀಯರೊಡನೆ ಕೂಡುತ್ತಿರುವುದನ್ನು ಅವನು ಕೇಳುತ್ತಿದ್ದನು.
“ಇಸ್ರೇಲರು ಪ್ರಯಾಣಮಾಡುವ ಸಮಯದಲ್ಲಿ ಆರೋನನು ಮತ್ತು ಅವನ ಪುತ್ರರು ಪವಿತ್ರವಸ್ತುಗಳಿಗೂ ಪವಿತ್ರ ಉಪಕರಣಗಳಿಗೂ ಹೊದಿಸಿದ ನಂತರ, ಕೆಹಾತ್ಯರು ಅವುಗಳನ್ನು ಹೊರುವುದಕ್ಕೆ ಹೋಗಬಹುದು. ಈ ರೀತಿ ಅವರು ಪವಿತ್ರವಸ್ತುಗಳನ್ನು ಮುಟ್ಟಬಾರದು; ಅವರು ಮುಟ್ಟಿದರೆ ಸಾಯುತ್ತಾರೆ.
“ಇಸ್ರೇಲರು ಹೊಸ ಸ್ಥಳಕ್ಕೆ ಪ್ರಯಾಣ ಮಾಡುವಾಗ ಆರೋನನೂ ಅವನ ಪುತ್ರರೂ ದೇವದರ್ಶನಗುಡಾರದೊಳಕ್ಕೆ ಹೋಗಿ, ಮಹಾ ಪವಿತ್ರ ಸ್ಥಳವನ್ನು ಮರೆಮಾಡುವ ತೆರೆಯನ್ನು ಇಳಿಸಿ, ಅದನ್ನು ಒಡಂಬಡಿಕೆಯ ಪವಿತ್ರ ಪೆಟ್ಟಿಗೆಗೆ ಹೊದಿಸಬೇಕು.
ಮಗುವು ಗಟ್ಟಿಯಾದ ಊಟ ಮಾಡುವಂತಾದಾಗ ಹನ್ನಳು ಶೀಲೋವಿನಲ್ಲಿದ್ದ ಯೆಹೋವನ ಆಲಯಕ್ಕೆ ಅವನನ್ನು ಕರೆದುಕೊಂಡು ಹೋದಳು. ಹನ್ನಳು ಮೂರು ವರ್ಷದ ಒಂದು ಹೋರಿಯನ್ನೂ ಮೂವತ್ತು ಸೇರು ಹಿಟ್ಟನ್ನೂ ಒಂದು ಸೀಸೆ ದ್ರಾಕ್ಷಾರಸವನ್ನೂ ತೆಗೆದುಕೊಂಡು ಹೋದಳು.
ಚಾದೋಕನು ಮತ್ತು ಅವನೊಂದಿಗಿದ್ದ ಲೇವಿಯರೆಲ್ಲ ದೇವರ ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡಿದ್ದರು. ಅವರು ದೇವರ ಪವಿತ್ರ ಪೆಟ್ಟಿಗೆಯನ್ನು ಇಳಿಸಿದರು. ಜೆರುಸಲೇಮಿನಿಂದ ಜನರೆಲ್ಲರೂ ಹೊರಗೆ ಹೋಗುವವರೆಗೆ ಎಬ್ಯಾತಾರನು ಪ್ರಾರ್ಥನೆಗಳನ್ನು ಮಾಡಿದನು.