Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 5:4 - ಪರಿಶುದ್ದ ಬೈಬಲ್‌

4 ಆದರೆ ಮರುದಿನ ಬೆಳಿಗ್ಗೆ ಅಷ್ಡೋದಿನ ಜನರು ಎದ್ದಾಗ ದಾಗೋನ್ ವಿಗ್ರಹವು ನೆಲದ ಮೇಲೆ ಯೆಹೋವನ ಪವಿತ್ರ ಪೆಟ್ಟಿಗೆಯ ಮುಂದೆ ಬೋರಲಬಿದ್ದಿತ್ತು. ದಾಗೋನಿನ ತಲೆಯು ಮತ್ತು ಕೈಗಳು ಮುರಿದು ಹೊಸ್ತಿಲಿನ ಮೇಲೆ ಬಿದ್ದಿದ್ದವು; ದೇಹವು ಏಕಶಿಲೆಯಾಗಿ ಬಿದ್ದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಮಾರನೆಯ ದಿನ ಬೆಳಿಗ್ಗೆ ನೋಡುವಾಗ ದಾಗೋನನ ತಲೆಯೂ, ಕೈಗಳೂ ಕಡಿಯಲ್ಪಟ್ಟು ಹೊಸ್ತಿಲಿನ ಮೇಲೆ ಬಿದ್ದಿದ್ದವು; ಮುಂಡ ಮಾತ್ರ ಯೆಹೋವನ ಮಂಜೂಷದ ಮುಂದೆ ಬಿದ್ದಿತ್ತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಮಾರನೆಯ ದಿನ ಬೆಳಿಗ್ಗೆ ನೋಡುವಾಗ ದಾಗೋನನ ತಲೆ ಮತ್ತು ಕೈಗಳು ಮುರಿದು ಹೊಸ್ತಿಲಿನ ಮೇಲೆ ಬಿದ್ದಿದ್ದವು; ಮುಂಡ ಮಾತ್ರ ಸರ್ವೇಶ್ವರನ ಮಂಜೂಷದ ಮುಂದೆ ಬಿದ್ದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಮುಂದಿನ ದಿನ ಬೆಳಿಗ್ಗೆ ನೋಡುವಾಗ ದಾಗೋನನ ತಲೆಯೂ ಕೈಗಳೂ ಕಡಿಯಲ್ಪಟ್ಟು ಹೊಸ್ತಲಿನ ಮೇಲೆ ಬಿದ್ದಿದ್ದವು; ಮುಂಡ ಮಾತ್ರ ಯೆಹೋವನ ಮಂಜೂಷದ ಮುಂದೆ ಬಿದ್ದಿತ್ತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆಗ ಅವರು ದಾಗೋನನನ್ನು ತೆಗೆದು, ಅದನ್ನು ಅದರ ಸ್ಥಳದಲ್ಲಿ ತಿರುಗಿ ಇಟ್ಟರು. ಅವರು ಮಾರನೆಯ ದಿವಸ ಬೆಳಿಗ್ಗೆ ಎದ್ದಾಗ, ದಾಗೋನ್ ಯೆಹೋವ ದೇವರ ಮಂಜೂಷದ ಮುಂದೆ ಬೋರಲು ಬಿದ್ದಿತ್ತು. ದಾಗೋನನ ತಲೆಯೂ ಅದರ ಎರಡು ಕೈಗಳೂ ಕತ್ತರಿಸಲಾಗಿ ಹೊಸ್ತಿಲ ಮೇಲೆ ಬಿದ್ದಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 5:4
11 ತಿಳಿವುಗಳ ಹೋಲಿಕೆ  

ಆಕೆಯ ವಿಗ್ರಹಗಳೆಲ್ಲಾ ಒಡೆದು ಪುಡಿಮಾಡಲ್ಪಡುವವು. ಆಕೆಯ ಸೂಳೆತನದ ಹಣವು ಬೆಂಕಿಯಲ್ಲಿ ಸುಡಲ್ಪಡುವುದು. ಆಕೆಯ ಸುಳ್ಳುದೇವರ ವಿಗ್ರಹಗಳನ್ನೆಲ್ಲಾ ನಾಶಮಾಡುವೆನು. ಯಾಕೆಂದರೆ ಸಮಾರ್ಯ ನನಗೆ ಅಪನಂಬಿಗಸ್ತಳಾಗಿ ಧನಿಕಳಾದಳು. ನನಗೆ ನಂಬಿಗಸ್ತರಲ್ಲದವರು ಆಕೆಯಿಂದ ಅದನ್ನು ಕಸಿದುಕೊಳ್ಳುವರು.


“ಎಲ್ಲಾ ಜನಾಂಗಗಳಲ್ಲಿ ಪ್ರಚಾರಪಡಿಸಿರಿ, ಒಂದು ಧ್ವಜವನ್ನು ಹಾರಿಸಿ ಈ ಸಂದೇಶವನ್ನೆಲ್ಲಾ ಸಾರಿರಿ. ‘ಬಾಬಿಲೋನ್ ಜನಾಂಗವನ್ನು ವಶಪಡಿಸಿಕೊಳ್ಳಲಾಗುವುದು. ಬೇಲ್ ದೇವತೆ ನಾಚಿಕೆಪಡುವುದು. ಮೆರೋದಾಕ್ ದೇವತೆಯು ಭಯಪಡುವುದು. ಬಾಬಿಲೋನಿನ ವಿಗ್ರಹಗಳು ನಾಚಿಕೆಪಡುವವು. ಅಲ್ಲಿಯ ದೇವತೆಗಳು ಹೆದರಿಕೊಳ್ಳುವವು.’


ಯೆಹೋವನು ಹೇಳುತ್ತಾನೆ, “ಈ ಸಂದೇಶವನ್ನು ಆ ಜನರಿಗೆ ಹೇಳು: ‘ಆ ಸುಳ್ಳುದೇವರುಗಳು ಭೂಲೋಕವನ್ನೂ ಪರಲೋಕವನ್ನೂ ಸೃಷ್ಟಿ ಮಾಡಿಲ್ಲ. ಆ ಸುಳ್ಳುದೇವರುಗಳನ್ನು ನಾಶಮಾಡಲಾಗುವುದು; ಅವುಗಳು ಭೂಲೋಕದಿಂದಲೂ ಆಕಾಶದಿಂದಲೂ ಕಣ್ಮರೆಯಾಗುವವು.’”


ಅವನು ಅವರ ವಿಗ್ರಹಗಳನ್ನು ತೆಗೆದುಕೊಳ್ಳುವನು. ಅವನು ಅವರ ಲೋಹದ ಪ್ರತಿಮೆಗಳನ್ನು ಮತ್ತು ಅವುಗಳ ಬೆಲೆಬಾಳುವ ಬೆಳ್ಳಿ ಮತ್ತು ಬಂಗಾರದ ವಸ್ತುಗಳನ್ನು ತೆಗೆದುಕೊಳ್ಳುವನು. ಆ ವಸ್ತುಗಳನ್ನೆಲ್ಲಾ ಈಜಿಪ್ಟಿಗೆ ತೆಗೆದುಕೊಂಡು ಹೋಗುವನು. ಆಮೇಲೆ ಕೆಲವು ವರ್ಷಗಳವರೆಗೆ ಅವನು ಉತ್ತರದ ರಾಜನಿಗೆ ಕಿರುಕುಳ ಕೊಡುವದಿಲ್ಲ.


ಯಾಕೋಬನ ದೋಷವು ಹೇಗೆ ಕ್ಷಮಿಸಲ್ಪಡುವದು? ಅವನ ಪಾಪಗಳು ನಿವಾರಣೆಯಾಗುವದಕ್ಕೆ ಏನು ಮಾಡಬೇಕಾಗುವದು? ಇತರ ದೇವತೆಗಳ ಪೂಜಾಸ್ಥಳಗಳೂ ವೇದಿಕೆಯ ಕಲ್ಲುಗಳೂ ಪುಡಿಪುಡಿಯಾಗಿ ನಾಶವಾಗುವವು.


ಹೀಗೆ ನಿಮ್ಮ ದೇಶವನ್ನು ನಾಶಗೊಳಿಸುತ್ತಿರುವ ಗಡ್ಡೆಗಳ, ಇಲಿಗಳ ಮಾದರಿಗಳನ್ನು ಮಾಡಿಸಿರಿ. ಇಸ್ರೇಲರ ದೇವರಿಗೆ ಚಿನ್ನದ ಆ ಮಾದರಿಗಳನ್ನು ಕಾಣಿಕೆಯಾಗಿ ಸಲ್ಲಿಸಿರಿ. ಆಗ ಇಸ್ರೇಲರ ದೇವರು ನಿಮ್ಮನ್ನೂ ನಿಮ್ಮ ದೇವರುಗಳನ್ನೂ ನಿಮ್ಮ ದೇಶವನ್ನೂ ಶಿಕ್ಷಿಸುವುದನ್ನು ನಿಲ್ಲಿಸಬಹುದು.


ಅದರ ಪೀಠಕ್ಕಾಗಿ ವಿಶೇಷ ಜಾತಿಯ ಮರವನ್ನು ಆರಿಸುವನು. ಈ ಬಗೆಯ ಮರವು ಕೊಳೆತುಹೋಗುವದಿಲ್ಲ. ಆ ಬಳಿಕ ಅವನು ಒಳ್ಳೆಯ ಬಡಗಿಯನ್ನು ನೇಮಿಸುವನು. ಆ ಬಡಗಿಯು ವಿಗ್ರಹ ನಿಲ್ಲಿಸಿದಾಗ ಅದು ಪಕ್ಕಕ್ಕೆ ವಾಲಿ ಬೀಳದಂತೆ ಮಾಡುವನು.


ಜನರು ಬುದ್ಧಿಗೇಡಿಗಳಾಗಿದ್ದಾರೆ. ತಾವು ಕೆತ್ತಿದ ವಿಗ್ರಹಗಳಿಂದ ಅಕ್ಕಸಾಲಿಗರು ಮೋಸಹೋಗುತ್ತಾರೆ. ಆ ವಿಗ್ರಹಗಳು ಕೇವಲ ಸುಳ್ಳಿನ ಕಂತೆಗಳು. ಅವುಗಳಲ್ಲಿ ಜೀವವಿಲ್ಲ.


ಆ ವಿಗ್ರಹಗಳು ನಿಷ್ಪ್ರಯೋಜಕ ವಸ್ತುಗಳಾಗಿವೆ. ಅವು ಅಪಹಾಸ್ಯಕ್ಕೆ ಯೋಗ್ಯವಾದವುಗಳಾಗಿವೆ. ನ್ಯಾಯನಿರ್ಣಯದ ಸಮಯದಲ್ಲಿ ಆ ವಿಗ್ರಹಗಳನ್ನು ನಾಶಪಡಿಸಲಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು