Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 6:14 - ಪರಿಶುದ್ದ ಬೈಬಲ್‌

14-15 ಬೇತ್‌ಷೆಮೆಷಿನ ಯೆಹೋಶುವನಿಗೆ ಸೇರಿದ ಹೊಲಕ್ಕೆ ಆ ಬಂಡಿಯು ಬಂದಿತು. ಆ ಹೊಲದ ಒಂದು ದೊಡ್ಡ ಕಲ್ಲಿನ ಬಳಿ ಆ ಬಂಡಿಯು ನಿಂತಿತು. ಬೇತ್‌ಷೆಮೆಷಿನ ಜನರು ಬಂಡಿಯ ಕಟ್ಟಿಗೆಗಳನ್ನು ಒಡೆದು ಆ ಹಸುಗಳನ್ನು ಯೆಹೋವನಿಗೆ ಆಹುತಿಯಾಗಿ ಅರ್ಪಿಸಿದರು. ಕೆಲವು ಲೇವಿಯರು ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಇಳಿಸಿದರು. ಅಲ್ಲದೆ ಅವರು ಚಿನ್ನದ ಮಾದರಿಗಳಿದ್ದ ಚೀಲವನ್ನು ಇಳಿಸಿದರು. ಲೇವಿಯರು ಯೆಹೋವನ ಪೆಟ್ಟಿಗೆಯನ್ನು ಮತ್ತು ಆ ಚೀಲವನ್ನು ದೊಡ್ಡಕಲ್ಲಿನ ಮೇಲಿಟ್ಟರು. ಅದೇ ದಿನ ಬೇತ್‌ಷೆಮೆಷಿನ ಜನರು ಯೆಹೋವನಿಗೆ ಸರ್ವಾಂಗಹೋಮಗಳನ್ನು ಅರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಬಂಡಿಯು ಬೇತ್ ಷೆಮೆಷಿನವನಾದ ಯೆಹೋಶುವನ ಹೊಲದಲ್ಲಿದ್ದ ದೊಡ್ಡ ಕಲ್ಲಿನ ಬಳಿಯಲ್ಲಿ ಬಂದು ನಿಂತಿತು. ಆಗ ಅವರು ಹೋಗಿ ಬಂಡಿಯ ಕಟ್ಟಿಗೆಗಳನ್ನು ಸೀಳಿ, ಆ ಹಸುಗಳನ್ನು ಯೆಹೋವನಿಗೆ ಯಜ್ಞಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಆ ಬಂಡಿ ಬೇತ್‍ಷೆಮೆಷಿನವನಾದ ಯೆಹೋಶುವನ ಹೊಲದಲ್ಲಿದ್ದ ಒಂದು ದೊಡ್ಡ ಕಲ್ಲಿನ ಬಳಿ ಬಂದು ನಿಂತಿತು. ಅವರು ಅಲ್ಲಿಗೆ ಹೋಗಿ, ಬಂಡಿಯ ಕಟ್ಟಿಗೆಗಳನ್ನು ಮುರಿದು, ಅಗ್ನಿ ಮಾಡಿ ಆ ಹಸುಗಳನ್ನು ಸರ್ವೇಶ್ವರನಿಗೆ ದಹನಬಲಿಯಾಗಿ ಅರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಬಂಡಿಯು ಬೇತ್‍ಷೆಮೆಷಿನವನಾದ ಯೆಹೋಶುವನ ಹೊಲದಲ್ಲಿದ್ದ ದೊಡ್ಡ ಕಲ್ಲಿನ ಬಳಿಯಲ್ಲಿ ಬಂದು ನಿಲ್ಲಲು ಅವರು ಹೋಗಿ ಬಂಡಿಯ ಕಟ್ಟಿಗೆಗಳನ್ನು ಒಡೆದು ಅಗ್ನಿಮಾಡಿ ಆ ಹಸುಗಳನ್ನು ಯೆಹೋವನಿಗೋಸ್ಕರ ಆಹುತಿಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆ ಬಂಡಿಯು ಬೇತ್ ಷೆಮೆಷ್ ಊರಿನವನಾದ ಯೆಹೋಶುವನ ಹೊಲದಲ್ಲಿ ಬಂದು ನಿಂತಿತು. ಅಲ್ಲಿ ಒಂದು ದೊಡ್ಡ ಬಂಡೆ ಇತ್ತು. ಆಗ ಅವರು ಆ ಬಂಡಿಯ ಕಟ್ಟಿಗೆಗಳನ್ನು ಸೀಳಿ, ಹಸುಗಳನ್ನು ಯೆಹೋವ ದೇವರಿಗೆ ದಹನಬಲಿಯಾಗಿ ಅರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 6:14
13 ತಿಳಿವುಗಳ ಹೋಲಿಕೆ  

ಅರೌನನು ದಾವೀದನಿಗೆ, “ರಾಜನಾದ ನನ್ನ ಒಡೆಯನೇ, ಯಜ್ಞವನ್ನು ಸಮರ್ಪಿಸಲು ನೀನು ಏನನ್ನು ಬೇಕಾದರೂ ತೆಗೆದುಕೊ. ಸರ್ವಾಂಗಹೋಮವನ್ನು ಅರ್ಪಿಸಲು ಇಲ್ಲಿ ಕೆಲವು ಹೋರಿಗಳಿವೆ, ನೊಗ ಮುಂತಾದ ಮರದ ಸಲಕರಣೆಗಳಿವೆ.


ಮರುದಿನ ಬೆಳಿಗ್ಗೆ ಅವರು ಒಂದು ಯಜ್ಞವೇದಿಕೆಯನ್ನು ಕಟ್ಟಿದರು. ಅವರು ಆ ಯಜ್ಞವೇದಿಕೆಯ ಮೇಲೆ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸಿದರು.


ನಂತರ ಎಲೀಷನು ಹೋಗಿ ತಾನು ಉಳುತ್ತಿದ್ದ ಎತ್ತುಗಳನ್ನು ವಧಿಸಿ, ಮಾಂಸವನ್ನು ನೊಗದಿಂದಲೇ ಬೇಯಿಸಿ ಜನರೆಲ್ಲರಿಗೆ ಔತಣವನ್ನು ಏರ್ಪಡಿಸಿದನು. ನಂತರ ಅವನು ಎಲೀಯನನ್ನು ಹಿಂಬಾಲಿಸಿ ಅವನ ಸಹಾಯಕನಾದನು.


ನಂತರ ದಾವೀದನು ಅಲ್ಲಿ ಯೆಹೋವನಿಗಾಗಿ ಯಜ್ಞವೇದಿಕೆಯನ್ನು ನಿರ್ಮಿಸಿದನು. ದಾವೀದನು ಸರ್ವಾಂಗಹೋಮಗಳನ್ನು ಮತ್ತು ಸಮಾಧಾನಯಜ್ಞಗಳನ್ನು ಸಮರ್ಪಿಸಿದನು. ಅವನು ದೇಶಕ್ಕಾಗಿ ಮಾಡಿದ ಪ್ರಾರ್ಥನೆಗೆ ಯೆಹೋವನು ಉತ್ತರಕೊಟ್ಟನು. ಯೆಹೋವನು ಇಸ್ರೇಲಿನ ರೋಗರುಜಿನಗಳನ್ನು ನಿಲ್ಲಿಸಿದನು.


ಆ ದಿನ ಗಾದನು ದಾವೀದನ ಬಳಿಗೆ ಬಂದು, “ಹೋಗಿ, ಯೆಬೂಸಿಯನಾದ ಅರೌನನ ಕಣದಲ್ಲಿ ಯೆಹೋವನಿಗಾಗಿ ಯಜ್ಞವೇದಿಕೆಯನ್ನು ನಿರ್ಮಿಸು” ಎಂದು ಹೇಳಿದನು.


‘ನಮ್ಮ ಗೋತ್ರದವರು ಬೆತ್ಲೆಹೇಮಿನಲ್ಲಿ ಯಜ್ಞವನ್ನು ಅರ್ಪಿಸುತ್ತಿರುವುದರಿಂದ ನನ್ನ ಸಹೋದರರು ನನಗೂ ಬರಬೇಕೆಂದು ಕೇಳಿಕೊಂಡಿದ್ದಾರೆ. ನೀನು ನನ್ನ ಗೆಳೆಯನಾಗಿರುವುದಾದರೆ ನನ್ನ ಸೋದರರನ್ನು ನೋಡಿಕೊಂಡು ಬರಲು ದಯವಿಟ್ಟು ನನಗೆ ಅವಕಾಶಕೊಡು ಎಂದು ಹೇಳಿದನು.’ ಆದ್ದರಿಂದಲೇ ದಾವೀದನು ರಾಜನ ಊಟದ ಮೇಜಿಗೆ ಬಂದಿಲ್ಲ” ಎಂದು ಉತ್ತರಿಸಿದನು.


ಸೌಲನು ಹಸುಗಳನ್ನು ಹೊಡೆದುಕೊಂಡು ಹೊಲಕ್ಕೆ ಹೋಗಿದ್ದನು. ಸೌಲನು ಹೊಲದಿಂದ ಬಂದಾಗ ಜನರೆಲ್ಲ ಅಳುವುದು ಕೇಳಿಸಿತು. ಸೌಲನು, “ಏನಾಯಿತು? ಜನರು ಅಳುತ್ತಿರುವುದೇಕೆ?” ಎಂದು ಕೇಳಿದನು. ಆಗ ಜನರೆಲ್ಲ ಯಾಬೇಷಿನ ಸಂದೇಶಕರು ಹೇಳಿದ್ದನ್ನೆಲ್ಲ ಸೌಲನಿಗೆ ತಿಳಿಸಿದರು.


ಬಳಿಕ ನಿಮ್ಮ ದೇವರಾದ ಯೆಹೋವನಿಗಾಗಿ ಸರಿಯಾದ ಯಜ್ಞವೇದಿಕೆಯನ್ನು ಈ ಗುಡ್ಡದ ಶಿಖರದಲ್ಲಿ ಕಟ್ಟಿಸು. ಆಮೇಲೆ ಆ ಎರಡನೆಯ ಹೋರಿಯನ್ನು ಈ ಯಜ್ಞವೇದಿಕೆಯ ಮೇಲೆ ಸರ್ವಾಂಗಹೋಮವಾಗಿ ಅರ್ಪಿಸು; ಅಶೇರಸ್ತಂಭದ ಕಟ್ಟಿಗೆಯನ್ನು ಈ ಸರ್ವಾಂಗಹೋಮಕ್ಕೆ ಉಪಯೋಗಿಸು” ಎಂದು ಹೇಳಿದನು.


“ಒಂದು ವಿಶೇಷ ಯಜ್ಞವೇದಿಕೆಯನ್ನು ನನಗೋಸ್ಕರ ಮಣ್ಣಿನಿಂದ ಕಟ್ಟಿರಿ. ಈ ಯಜ್ಞವೇದಿಕೆಯ ಮೇಲೆ ಕುರಿದನಗಳನ್ನು ನನಗೆ ಸರ್ವಾಂಗಹೋಮಗಳನ್ನಾಗಿಯೂ ಸಮಾಧಾನಯಜ್ಞಗಳನ್ನಾಗಿಯೂ ಸಮರ್ಪಿಸಿರಿ. ನಾನು ನಿಮಗೆ ಹೇಳುವ ಪ್ರತಿಯೊಂದು ಸ್ಥಳದಲ್ಲಿಯೂ ನನ್ನನ್ನು ಜ್ಞಾಪಕಮಾಡಿಕೊಳ್ಳಲು ಹೀಗೆಯೇ ಮಾಡಿರಿ. ಆಗ ನಾನು ಬಂದು ನಿಮ್ಮನ್ನು ಆಶೀರ್ವದಿಸುವೆನು.


ಬೇತ್‌ಷೆಮೆಷಿನ ಕಣಿವೆಯಲ್ಲಿ ಅಲ್ಲಿನ ಜನರು ಗೋಧಿಯ ಬೆಳೆಯನ್ನು ಕೊಯ್ಯುತ್ತಿದ್ದರು. ಅವರು ಕಣ್ಣೆತ್ತಿ ನೋಡಿದಾಗ, ಪವಿತ್ರ ಪೆಟ್ಟಿಗೆಯು ಅವರಿಗೆ ಕಾಣಿಸಿತು. ಅವರಿಗೆ ಬಹಳ ಸಂತೋಷವಾಯಿತು. ಅವರು ಅದನ್ನು ಸ್ವೀಕರಿಸಲು ಓಡಿಹೋದರು.


ಫಿಲಿಷ್ಟಿಯರು ಚಿನ್ನದ ಇಲಿಗಳನ್ನೂ ಕಳುಹಿಸಿದ್ದರು. ಫಿಲಿಷ್ಟಿಯರ ಐದು ಅಧಿಪತಿಗಳಿಗೆ ಸೇರಿದ್ದ ಐದು ಪಟ್ಟಣಗಳ ಸಂಖ್ಯೆಗನುಸಾರವಾಗಿ ಈ ಇಲಿಗಳಿದ್ದವು. ಈ ಪಟ್ಟಣಗಳ ಸುತ್ತ ಗೋಡೆಗಳಿದ್ದು ಹಳ್ಳಿಗಳು ಈ ಪಟ್ಟಣಗಳನ್ನು ಸುತ್ತುವರಿದಿದ್ದವು. ಬೇತ್‌ಷೆಮೆಷಿನ ಜನರು ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಒಂದು ಕಲ್ಲಿನ ಮೇಲಿಟ್ಟರು. ಬೇತ್‌ಷೆಮೆಷಿನವನಾದ ಯೆಹೋಶುವನ ಹೊಲದಲ್ಲಿ ಆ ಕಲ್ಲು ಈಗಲೂ ಇದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು