Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 6:19 - ಪರಿಶುದ್ದ ಬೈಬಲ್‌

19 ಆದರೆ ಯಾಜಕರಿಲ್ಲದ ಕಾರಣ ಬೇತ್‌ಷೆಮೆಷಿನ ಜನರು ಪವಿತ್ರ ಪೆಟ್ಟಿಗೆಯನ್ನು ಹಣಿಕಿ ನೋಡಿದ್ದರಿಂದ ಬೇತ್‌ಷೆಮೆಷಿನ ಎಪ್ಪತ್ತು ಜನರನ್ನು ಯೆಹೋವನು ಕೊಂದನು. ಯೆಹೋವನು ಕ್ರೂರವಾಗಿ ಶಿಕ್ಷಿಸಿದ್ದರಿಂದ ಬೇತ್‌ಷೆಮೆಷಿನ ಜನರು ಗೋಳಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಬೇತ್ ಷೆಮೆಷಿನವರು ಯೆಹೋವನ ಮಂಜೂಷದಲ್ಲಿ ಇಣಕಿ ನೋಡಿದ್ದರಿಂದ ಯೆಹೋವನು ಅವರಲ್ಲಿ ಎಪ್ಪತ್ತು ಮಂದಿಯನ್ನು ಸಾಯಿಸಿದನು. ಯೆಹೋವನು ತಮ್ಮಲ್ಲಿ ಮಹಾನಾಶನವನ್ನು ಉಂಟುಮಾಡಿದ್ದರಿಂದ ಬೇತ್ ಷೆಮೆಷಿನವರು ಗೋಳಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಮಂಜೂಷವನ್ನು ತೆರೆದು ನೋಡಿದ ಬೇತ್ ಷೆಮೆಷಿನವರಾದ ಎಪ್ಪತ್ತು ಮಂದಿಯನ್ನು ಸರ್ವೇಶ್ವರ ನಾಶಮಾಡಿದರು. ಈ ವಿನಾಶಕ್ಕಾಗಿ ಬೇತ್ ಷೆಮೆಷಿನವರು ಗೋಳಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಬೇತ್‍ಷೆಮೆಷಿನವರು ಯೆಹೋವನ ಮಂಜೂಷದಲ್ಲಿ ಹಣಿಕಿನೋಡಿದ್ದರಿಂದ ಯೆಹೋವನು ಅವರಲ್ಲಿ ಎಪ್ಪತ್ತು ಮಂದಿಯನ್ನು ಸಾಯಿಸಿದನು. ಇದಲ್ಲದೆ ಐವತ್ತು ಸಾವಿರ ಜನರು ಮರಣಹೊಂದಿದರು. ಯೆಹೋವನು ತಮ್ಮಲ್ಲಿ ಮಹಾನಾಶನವನ್ನುಂಟುಮಾಡಿದದರಿಂದ ಬೇತ್‍ಷೆಮೆಷಿನವರು ಗೋಳಾಡಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಬೇತ್ ಷೆಮೆಷ್ ಊರಿನ ಜನರು ಯೆಹೋವ ದೇವರ ಮಂಜೂಷದೊಳಗೆ ಇಣಿಕಿ ನೋಡಿದ್ದರಿಂದ, ಯೆಹೋವ ದೇವರು ಅವರೊಳಗೆ ಎಪ್ಪತ್ತು ಮಂದಿಯನ್ನು ಕಠಿಣವಾಗಿ ದಂಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 6:19
14 ತಿಳಿವುಗಳ ಹೋಲಿಕೆ  

ಇಲ್ಲವಾದರೆ, ಕೆಹಾತ್ಯರು ಒಳಗೆ ಬಂದು ಪರಿಶುದ್ಧವಸ್ತುಗಳನ್ನು ಮುಟ್ಟುವರು. ಆ ಮಹಾ ಪರಿಶುದ್ಧವಸ್ತುಗಳನ್ನು ಅವರು ಒಂದು ಕ್ಷಣ ಮುಟ್ಟಿದರೂ ಸಾಯುತ್ತಾರೆ” ಎಂದು ಹೇಳಿದನು.


ಯೆಹೋವನು ಮೋಶೆಗೆ, “ಕೆಳಗಿಳಿದು ಹೋಗಿ, ಜನರು ನನ್ನನ್ನು ನೋಡಲು ನನ್ನ ಹತ್ತಿರ ಬರಬಾರದೆಂದು ಅವರನ್ನು ಎಚ್ಚರಿಸು. ಇಲ್ಲವಾದರೆ ಅವರಲ್ಲಿ ಅನೇಕರು ಸಾಯುವರು.


ಯೆಹೋವನು ಉಜ್ಜನ ಮೇಲೆ ಕೋಪಗೊಂಡು ಅವನನ್ನು ಕೊಂದನು. ಉಜ್ಜನು ದೇವರಿಗೆ ಗೌರವವನ್ನು ತೋರಿಸದೆ ಪವಿತ್ರ ಪೆಟ್ಟಿಗೆಯನ್ನು ಸ್ಪರ್ಶಿಸಿದನು. ದೇವರ ಪವಿತ್ರ ಪಟ್ಟಿಗೆಯ ಹತ್ತಿರದಲ್ಲೇ ಉಜ್ಜನು ಸತ್ತನು.


“ಇಸ್ರೇಲರು ಪ್ರಯಾಣಮಾಡುವ ಸಮಯದಲ್ಲಿ ಆರೋನನು ಮತ್ತು ಅವನ ಪುತ್ರರು ಪವಿತ್ರವಸ್ತುಗಳಿಗೂ ಪವಿತ್ರ ಉಪಕರಣಗಳಿಗೂ ಹೊದಿಸಿದ ನಂತರ, ಕೆಹಾತ್ಯರು ಅವುಗಳನ್ನು ಹೊರುವುದಕ್ಕೆ ಹೋಗಬಹುದು. ಈ ರೀತಿ ಅವರು ಪವಿತ್ರವಸ್ತುಗಳನ್ನು ಮುಟ್ಟಬಾರದು; ಅವರು ಮುಟ್ಟಿದರೆ ಸಾಯುತ್ತಾರೆ.


ಕೆಲವರು ದೇವದೂತರ ಪೂಜೆಯಲ್ಲಿಯೂ ಅತಿವಿನಯವಂತರಂತೆ ನಟಿಸುವುದರಲ್ಲಿಯೂ ಆಸಕ್ತರಾಗಿದ್ದಾರೆ. ಆ ಜನರು ತಾವು ಕಂಡ ದರ್ಶನಗಳ ಬಗ್ಗೆ ಯಾವಾಗಲೂ ಮಾತನಾಡುತ್ತಿರುತ್ತಾರೆ. “ನೀವು ಇಂಥಿಂಥ ಕಾರ್ಯಗಳನ್ನು ಮಾಡದಿರುವುದರಿಂದ ತಪ್ಪಿತಸ್ಥರಾಗಿದ್ದೀರಿ” ಎಂದು ಆ ಜನರು ನಿಮ್ಮ ಬಗ್ಗೆ ಹೇಳಲು ಅವಕಾಶಕೊಡಬೇಡಿ. ಅವರ ಪ್ರಾಪಂಚಿಕ ಆಲೋಚನೆಯು ಅವರನ್ನು ನಿಷ್ಕಾರಣವಾಗಿ ಗರ್ವದಿಂದ ಉಬ್ಬಿಸುತ್ತದೆ.


ನಿಮ್ಮ ನ್ಯಾಯನಿರ್ಣಯದ ಕಾಲ ಬಂದಿದೆ. ಅದು ದೇವರ ಕುಟುಂಬದಿಂದಲೇ ಆರಂಭವಾಗುವುದು. ನಮ್ಮಲ್ಲಿಯೇ ಅದು ಆರಂಭವಾದರೆ, ದೇವರ ಸುವಾರ್ತೆಗೆ ವಿಧೇಯರಾಗದ ಜನರಿಗೆ ಏನಾಗಬಹುದು?


“ಯೆಹೋವನು ಕೆಲವು ಸಂಗತಿಗಳನ್ನು ಗುಪ್ತವಾಗಿಟ್ಟಿದ್ದಾನೆ. ಅದು ಆತನಿಗೆ ಮಾತ್ರ ತಿಳಿದದೆ. ಆದರೆ ಪ್ರಕಟಿಸಲ್ಪಟ್ಟಿರುವ ಸಂಗತಿಗಳನ್ನು ನಾವು ಮತ್ತು ನಮ್ಮ ಸಂತತಿಗಳವರು ಮಾತ್ರ ತಿಳಿದಿದ್ದೇವೆ. ಆ ಬೋಧನೆಗೆ ನಾವು ನಿತ್ಯಕಾಲಕ್ಕೂ ವಿಧೇಯರಾಗುವಂತೆ ಹೇಳಿದ್ದಾನೆ. ಆತನಿಗೆ ವಿಧೇಯರಾಗುವುದು ನಮ್ಮ ಕರ್ತವ್ಯ.


ಈ ದುಃಖದ ಸಮಾಚಾರವನ್ನು ಕೇಳಿ ಜನರು ನೊಂದುಕೊಂಡರು. ಅವರಲ್ಲಿ ಒಬ್ಬರಾದರೂ ತಮ್ಮ ಆಭರಣಗಳನ್ನು ಧರಿಸಿಕೊಳ್ಳಲಿಲ್ಲ.


ಪವಿತ್ರ ಗುಡಾರವನ್ನು ತೆಗೆದುಕೊಂಡು ಹೋಗುವಾಗಲೆಲ್ಲಾ ಲೇವಿಯರೇ ಅದನ್ನು ಬಿಚ್ಚಬೇಕು, ಇಳಿಸುವಾಗಲೆಲ್ಲಾ ಲೇವಿಯರೇ ಅದನ್ನು ಹಾಕಬೇಕು. ಪವಿತ್ರ ಗುಡಾರವನ್ನು ನೋಡಿಕೊಳ್ಳುವವರು ಅವರೇ. ಲೇವಿ ಕುಲಕ್ಕೆ ಸೇರದ ಯಾವನಾದರೂ ಅದರ ಸಮೀಪಕ್ಕೆ ಬಂದರೆ, ಅವನಿಗೆ ಮರಣಶಿಕ್ಷೆಯಾಗಬೇಕು.


“ಕೆಹಾತ್ಯರು ಲೇವಿಯರ ಮಧ್ಯದಿಂದ ಇಲ್ಲವಾಗದಂತೆ ಎಚ್ಚರಿಕೆಯಾಗಿರಿ.


ಹೀಗೆ ಯೆಹೂದದ ಅರಸನಾದ ಅಮಚ್ಯನು ಇಸ್ರೇಲರ ಅರಸನನ್ನು ಮುಖಾಮುಖಿಯಾಗಿ ಬೇತ್ಷೆಮೆಷಿನಲ್ಲಿ ಸಂಧಿಸಿದನು. ಬೇತ್ಷೆಮೆಷ್ ಯೆಹೂದ ರಾಜ್ಯದ ಪಟ್ಟಣ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು