Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 6:20 - ಪರಿಶುದ್ದ ಬೈಬಲ್‌

20 “ಈ ಪವಿತ್ರ ಪೆಟ್ಟಿಗೆಯನ್ನು ನೋಡಿಕೊಳ್ಳಬಲ್ಲ ಯಾಜಕನೆಲ್ಲಿದ್ದಾನೆ? ಈ ಪೆಟ್ಟಿಗೆಯು ಇಲ್ಲಿಂದ ಎಲ್ಲಿಗೆ ಹೋಗಬೇಕಾಗಿದೆ?” ಎಂದು ಬೇತ್‌ಷೆಮೆಷಿನ ಜನರು ಪ್ರಶ್ನಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಪರಿಶುದ್ಧ ದೇವರಾದ ಯೆಹೋವನ ಮುಂದೆ ಯಾರು ನಿಂತಾರು? ನಮ್ಮನ್ನು ಬಿಟ್ಟು ಈತನು ಹೋಗತಕ್ಕ ಸ್ಥಳ ಯಾವುದು ಎಂದು ಮಾತನಾಡಿಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 “ಪರಮಪಾವನ ದೇವರಾದ ಸರ್ವೆಶ್ವರನ ಮುಂದೆ ಯಾರು ತಾನೆ ನಿಂತಾರು? ಇನ್ನು ಮುಂದೆ ಇವರು ಹೋಗತಕ್ಕ ಸ್ಥಳ ಯಾವುದು?” ಎಂದು ಮಾತಾಡಿಕೊಂಡರು ಜನರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅಗಮ್ಯದೇವರಾದ ಯೆಹೋವನ ಮುಂದೆ ಯಾರು ನಿಂತಾರು? ಇನ್ನು ಮೇಲೆ ಈತನು ಹೋಗತಕ್ಕ ಸ್ಥಳವಾವದು ಎಂದು ಮಾತಾಡಿಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಯೆಹೋವ ದೇವರು ತಮ್ಮಲ್ಲಿ ದೊಡ್ಡ ನಾಶನಮಾಡಿದ್ದರಿಂದ, ಬೇತ್ ಷೆಮೆಷ್ ಊರಿನವರು ದುಃಖಪಟ್ಟು, “ಈ ಪರಿಶುದ್ಧ ದೇವರಾದ ಯೆಹೋವ ದೇವರ ಮುಂದೆ ನಿಲ್ಲತಕ್ಕವನ್ಯಾರು? ಇಲ್ಲಿಂದ ಮಂಜೂಷವು ಎಲ್ಲಿಗೆ ಹೋಗುವುದು?” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 6:20
13 ತಿಳಿವುಗಳ ಹೋಲಿಕೆ  

“ಆ ಸಮಯಕ್ಕಾಗಿ ಯಾರೂ ಸಿದ್ಧಮಾಡಿಕೊಳ್ಳಲಾರರು. ಯಾರೂ ಆತನು ಬರುವಾಗ ಆತನಿಗೆ ವಿರುದ್ಧವಾಗಿ ನಿಲ್ಲರು. ಆತನು ಸುಡುವ ಬೆಂಕಿಯಾಗಿರುವನು. ಆತನು ಶಕ್ತಿಯುತವಾದ ಸಾಬೂನಿನಂತೆ ಕೊಳೆಯನ್ನು ಹೋಗಲಾಡಿಸಿ ಶುದ್ಧಮಾಡುವನು.


ಅಂದು ದಾವೀದನು ಯೆಹೋವನಿಗೆ ಭಯಪಟ್ಟು, “ದೇವರ ಪವಿತ್ರ ಪೆಟ್ಟಿಗೆಯನ್ನು ನಾನಿರುವಲ್ಲಿಗೆ ತೆಗೆದುಕೊಂಡು ಹೋಗುವುದು ಹೇಗೆ?” ಎಂದು ಯೋಚಿಸಿಕೊಂಡು


ಆತನ ಕೋಪವು ಪ್ರಕಟವಾಗುವ ಮಹಾದಿನವು ಬಂದುಬಿಟ್ಟಿದೆ. ಆ ಕೋಪದ ಎದುರಿನಲ್ಲಿ ನಿಲ್ಲಲು ಯಾರಿಗೂ ಸಾಧ್ಯವಿಲ್ಲ” ಎಂದು ಹೇಳಿದರು.


ಜನರು ಯೇಸುವಿಗೆ, “ನೀನು ಇಲ್ಲಿಂದ ಹೊರಟುಹೋಗು” ಎಂದು ಕೇಳಿಕೊಂಡರು. ಏಕೆಂದರೆ ಅವರು ಬಹಳ ಭಯಗೊಂಡಿದ್ದರು. ಆದ್ದರಿಂದ ಯೇಸು ದೋಣಿಯನ್ನು ಹತ್ತಿ ಮತ್ತೆ ಗಲಿಲಾಯಕ್ಕೆ ಹಿಂತಿರುಗಿದನು.


ಇದನ್ನು ಕಂಡ ಬೆಸ್ತರಿಗೆಲ್ಲಾ ವಿಸ್ಮಯವಾಯಿತು. ಸೀಮೋನ್ ಪೇತ್ರನಂತೂ ಯೇಸುವಿನ ಮುಂದೆ ಮೊಣಕಾಲೂರಿ “ಪ್ರಭುವೇ ನನ್ನನ್ನು ಬಿಟ್ಟುಹೋಗು, ನಾನು ಪಾಪಿಯಾಗಿದ್ದೇನೆ!” ಎಂದನು.


ದೇವರೇ, ನೀನು ಭಯಂಕರನೇ ಸರಿ! ನೀನು ಕೋಪಗೊಂಡಿರುವಾಗ ನಿನಗೆ ವಿರೋಧವಾಗಿ ಯಾರು ನಿಂತುಕೊಳ್ಳಬಲ್ಲರು?


ಯೆಹೋವನು ಉಜ್ಜನ ಮೇಲೆ ಕೋಪಗೊಂಡು ಅವನನ್ನು ಕೊಂದನು. ಉಜ್ಜನು ದೇವರಿಗೆ ಗೌರವವನ್ನು ತೋರಿಸದೆ ಪವಿತ್ರ ಪೆಟ್ಟಿಗೆಯನ್ನು ಸ್ಪರ್ಶಿಸಿದನು. ದೇವರ ಪವಿತ್ರ ಪಟ್ಟಿಗೆಯ ಹತ್ತಿರದಲ್ಲೇ ಉಜ್ಜನು ಸತ್ತನು.


ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದ ಯೆಹೋವನೇ ನಾನು. ನೀವು ನನ್ನ ವಿಶೇಷ ಜನರಾಗಿರಬೇಕೆಂದು ಮತ್ತು ನಾನು ನಿಮ್ಮ ದೇವರಾಗಿರಬೇಕೆಂದು ನಿಮ್ಮನ್ನು ಕರೆದುಕೊಂಡು ಬಂದೆನು. ನಾನು ಪರಿಶುದ್ಧನಾಗಿರುವಂತೆಯೇ ನೀವೂ ಪರಿಶುದ್ಧರಾಗಿರಬೇಕು.”


ಯಾಕೆಂದರೆ, ನಾನೇ ನಿಮ್ಮ ದೇವರಾದ ಯೆಹೋವನು. ನಾನು ಪರಿಶುದ್ಧನಾಗಿದ್ದೇನೆ, ಆದ್ದರಿಂದ ನೀವೂ ಪರಿಶುದ್ಧರಾಗಿರಬೇಕು. ಹರಿದಾಡುವ ಆ ಜಂತುಗಳಿಂದ ನಿಮ್ಮನ್ನು ಅಶುದ್ಧರನ್ನಾಗಿ ಮಾಡಿಕೊಳ್ಳಬೇಡಿರಿ.


ಇದನ್ನೆಲ್ಲಾ ಕಂಡ ಅಷ್ಡೋದಿನ ಜನರು, “ಇಸ್ರೇಲರ ದೇವರ ಈ ಪವಿತ್ರ ಪೆಟ್ಟಿಗೆಯು ಇಲ್ಲಿರಬಾರದು. ಇಸ್ರೇಲರ ದೇವರು ನಮ್ಮನ್ನೂ ನಮ್ಮ ದೇವರಾದ ದಾಗೋನನನ್ನೂ ಬಾಧಿಸುತ್ತಿದ್ದಾನೆ” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು