Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 7:5 - ಪರಿಶುದ್ದ ಬೈಬಲ್‌

5 ಸಮುವೇಲನು ಅವರಿಗೆ, “ಇಸ್ರೇಲರೆಲ್ಲರೂ ಮಿಚ್ಪೆಯಲ್ಲಿ ಒಟ್ಟುಗೂಡಬೇಕು. ನಾನು ನಿಮಗಾಗಿ ಯೆಹೋವನಲ್ಲಿ ಪ್ರಾರ್ಥಿಸುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಸಮುವೇಲನು ತಿರುಗಿ ಅವರಿಗೆ, “ಇಸ್ರಾಯೇಲ್ಯರೆಲ್ಲರೂ ಮಿಚ್ಪೆಯಲ್ಲಿ ಕೂಡಿಬರಲಿ; ನಾನು ನಿಮಗೋಸ್ಕರ ಯೆಹೋವನನ್ನು ಪ್ರಾರ್ಥಿಸುವೆನು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಸಮುವೇಲನು ಪುನಃ ಅವರಿಗೆ, “ಇಸ್ರಯೇಲರೆಲ್ಲರೂ ಮಿಚ್ಪೆಯಲ್ಲಿ ಕೂಡಿಬರಲಿ; ನಾನು ನಿಮಗೋಸ್ಕರ ಸರ್ವೇಶ್ವರನನ್ನು ಪ್ರಾರ್ಥಿಸುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಸಮುವೇಲನು ತಿರಿಗಿ ಅವರಿಗೆ - ಇಸ್ರಾಯೇಲ್ಯರೆಲ್ಲರೂ ವಿುಚ್ಪೆಯಲ್ಲಿ ಕೂಡಿ ಬರಲಿ; ನಾನು ನಿಮಗೋಸ್ಕರ ಯೆಹೋವನನ್ನು ಪ್ರಾರ್ಥಿಸುವೆನು ಅನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಸಮುಯೇಲನು, “ನಾನು ನಿಮಗೋಸ್ಕರವಾಗಿ ಯೆಹೋವ ದೇವರನ್ನು ಪ್ರಾರ್ಥಿಸುವ ಹಾಗೆ ಇಸ್ರಾಯೇಲರನ್ನೆಲ್ಲಾ ಮಿಚ್ಪೆಯಲ್ಲಿ ಕೂಡಿಸಿಕೊಳ್ಳಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 7:5
18 ತಿಳಿವುಗಳ ಹೋಲಿಕೆ  

ಇಸ್ರೇಲಿನ ಜನರೆಲ್ಲರೂ ಒಟ್ಟುಗೂಡಿದರು. ಮಿಚ್ಛೆ ನಗರದಲ್ಲಿ ಯೆಹೋವನ ಎದುರಿಗೆ ನಿಲ್ಲುವುದಕ್ಕಾಗಿ ಅವರು ಒಂದು ಕಡೆ ಸೇರಿದ್ದರು. ಇಸ್ರೇಲಿನ ಎಲ್ಲ ಕಡೆಯಿಂದಲೂ ಜನರು ಬಂದರು. ಗಿಲ್ಯಾದಿನಲ್ಲಿದ್ದ ಇಸ್ರೇಲರು ಸಹ ಅಲ್ಲಿ ಬಂದಿದ್ದರು.


ವಿಶೇಷ ಕೂಟಕ್ಕಾಗಿ ಜನರನ್ನು ಒಟ್ಟಾಗಿ ಕೂಡಿಸಿರಿ. ಪ್ರಾಯಸ್ಥರನ್ನು ಕೂಡಿಸಿರಿ. ಮಕ್ಕಳನ್ನೂ ಕೂಡಿಸಿರಿ. ಮೊಲೆಹಾಲು ಕುಡಿಯುವ ಶಿಶುಗಳನ್ನೂ ಒಟ್ಟಾಗಿ ಸೇರಿಸಿರಿ. ವಧುವರರು ತಮ್ಮ ಶೋಭನದ ಕೋಣೆಯಿಂದ ಹೊರಬರಲಿ.


ಅದೇ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಇಸ್ರೇಲರು ತಿರಿಗಿ ಸೇರಿಬಂದು ಒಂದು ದಿನದ ಉಪವಾಸ ಮಾಡಿದರು. ಶೋಕಬಟ್ಟೆಯನ್ನು ಧರಿಸಿ, ತಲೆಗೆ ಬೂದಿಯನ್ನು ಹಾಕಿ ತಮ್ಮತಮ್ಮ ದುಃಖವನ್ನು ವ್ಯಕ್ತಪಡಿಸಿದರು.


ಬಾಬಿಲೋನ್ ರಾಜನು ಗೆದಲ್ಯನನ್ನು ರಾಜ್ಯಪಾಲನನ್ನಾಗಿ ನೇಮಿಸಿರುವುದನ್ನು ಸೇನಾಧಿಪತಿಗಳು ಮತ್ತು ಅವನ ಜನರು ಕೇಳಿ ಮಿಚ್ಛದಲ್ಲಿದ್ದ ಗೆದಲ್ಯನ ಬಳಿಗೆ ಬಂದರು. ಈ ಸೇನಾಧಿಪತಿಗಳು ಯಾರೆಂದರೆ: ನೆತನ್ಯನ ಮಗನಾದ ಇಷ್ಮಾಯೇಲ, ಕಾರೇಹನ ಮಗನಾದ ಯೋಹಾನಾನ್, ನೆಟೋಫದವನೂ ತನ್ಹುಮೆತನ ಮಗನೂ ಆದ ಸೆರಾಯ, ಮಾಕಾತ್ಯರಲ್ಲಿ ಒಬ್ಬನ ಮಗನಾದ ಯಾಜನ್ಯ.


ನಾನು ನಿಮಗಾಗಿ ಪ್ರಾರ್ಥಿಸದಿದ್ದರೆ ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದವನಾಗುತ್ತೇನೆ. ನಾನು ನಿಮಗೆ ಒಳ್ಳೆಯದೂ ಯೋಗ್ಯವೂ ಆಗಿರುವ ಮಾರ್ಗವನ್ನು ಉಪದೇಶಿಸುತ್ತೇನೆ.


ಸಮುವೇಲನು ಇಸ್ರೇಲರನ್ನು ಮಿಚ್ಪೆಗೆ ಕರೆಸಿ, ಯೆಹೋವನ ಸನ್ನಿಧಿಯಲ್ಲಿ ಸಭೆಸೇರಿಸಿದನು.


ಇಸ್ರೇಲಿನಲ್ಲಿ ನ್ಯಾಯಪರಿಪಾಲನೆಗಾಗಿ ಪ್ರತಿವರ್ಷವೂ ಬೇತೇಲ್, ಗಿಲ್ಗಾಲ್ ಮತ್ತು ಮಿಚ್ಪೆ ಎಂಬ ಪಟ್ಟಣಗಳಿಗೆ ಹೋದನು. ಹೀಗೆ ಅವನು ಈ ಸ್ಥಳಗಳಲ್ಲೆಲ್ಲಾ ಇಸ್ರೇಲರಿಗೆ ನ್ಯಾಯತೀರಿಸುತ್ತಾ ಅವರನ್ನು ಆಳಿದನು.


ಅನಂತರ ಸಮುವೇಲನು ವಿಶೇಷವಾದ ಕಲ್ಲನ್ನು ನೆಡಿಸಿದನು. ಯೆಹೋವನು ಮಾಡಿದ ಕಾರ್ಯಗಳನ್ನು ಜನರು ಜ್ಞಾಪಿಸಿಕೊಳ್ಳುತ್ತಿರಲಿ ಎಂಬುದಕ್ಕಾಗಿ ಅವನು ಈ ರೀತಿ ಮಾಡಿದನು. ಸಮುವೇಲನು ಮಿಚ್ಪೆ ಮತ್ತು ಶೇನಿಗಳ ಮಧ್ಯೆ ಕಲ್ಲನ್ನು ನೆಟ್ಟು, “ಯೆಹೋವನು ಇಲ್ಲಿಯವರೆಗೂ ನಮಗೆ ಸಹಾಯ ಮಾಡಿದನು” ಎಂದು ಹೇಳಿ, ಅದಕ್ಕೆ “ಸಹಾಯದ ಕಲ್ಲು” ಎಂದು ಹೆಸರಿಟ್ಟನು.


ದಿಲಾನ್, ಮಿಚ್ಪೆ, ಯೊಕ್ತೇಲ್,


ಆದ್ದರಿಂದ ಅಬ್ರಹಾಮನಿಗೆ ಅವನ ಹೆಂಡತಿಯನ್ನು ಒಪ್ಪಿಸಿಬಿಡು. ಅಬ್ರಹಾಮನು ಪ್ರವಾದಿಯಾಗಿರುವುದರಿಂದ ನಿನಗೋಸ್ಕರ ಪ್ರಾರ್ಥಿಸುವನು, ಆಗ ನೀನು ಬದುಕಿಕೊಳ್ಳುವೆ. ನೀನು ಸಾರಳನ್ನು ಅಬ್ರಹಾಮನಿಗೆ ಹಿಂತಿರುಗಿಸದಿದ್ದರೆ, ನೀನೂ ನಿನ್ನ ಇಡೀ ಕುಟುಂಬದವರೂ ಸಾಯುವಿರೆಂದು ನಾನು ಪ್ರಮಾಣ ಮಾಡುತ್ತೇನೆ” ಎಂದು ಹೇಳಿದನು.


ಲಾಬಾನನು, “ನಾವು ಒಬ್ಬರನ್ನೊಬ್ಬರು ಅಗಲಿರುವಾಗ ಯೆಹೋವನೇ ನಮ್ಮನ್ನು ನೋಡಿಕೊಳ್ಳಲಿ” ಎಂದು ಹೇಳಿದನು. ಆದ್ದರಿಂದ ಆ ಸ್ಥಳಕ್ಕೆ ಮಿಚ್ಪಾ ಎಂದೂ ಹೆಸರಿಡಲಾಯಿತು.


ಅಮ್ಮೋನಿಯರು ಯುದ್ಧಕ್ಕೆಂದು ಒಂದೆಡೆ ಸೇರಿದರು. ಅವರು ಗಿಲ್ಯಾದ್‌ನಲ್ಲಿ ಪಾಳೆಯ ಮಾಡಿಕೊಂಡಿದ್ದರು. ಇಸ್ರೇಲರು ಒಂದೆಡೆ ಸೇರಿಕೊಂಡರು. ಅವರ ಪಾಳೆಯವು ಮಿಚ್ಛೆಯಲ್ಲಿ ಇತ್ತು.


ಆದ್ದರಿಂದ ಇಸ್ರೇಲರು ಬಾಳ್‌ದೇವರನ್ನೂ ಅಷ್ಟೋರೆತ್ ದೇವತೆಯನ್ನೂ ತ್ಯಜಿಸಿ ಯೆಹೋವನ ಸೇವೆಯನ್ನು ಮಾತ್ರ ಮಾಡಿದರು.


ಹೀಗೆ ಹಿರಿಯರೆಲ್ಲರು ತಮ್ಮನ್ನು ಮುನ್ನಡೆಸಲು ರಾಜನೊಬ್ಬನು ಬೇಕೆಂದರು. ಸಮುವೇಲನಿಗೆ ಇದು ಸರಿಯೆನಿಸಲಿಲ್ಲ. ಆದ್ದರಿಂದ ಅವನು ಯೆಹೋವನಲ್ಲಿ ಪ್ರಾರ್ಥಿಸಿದನು.


ಈಗ ಗೋಧಿಯ ಸುಗ್ಗಿಕಾಲ. ನಾನು ಯೆಹೋವನಲ್ಲಿ ಪ್ರಾರ್ಥಿಸುತ್ತೇನೆ. ಆತನು ಗುಡುಗನ್ನು ಮತ್ತು ಮಳೆಯನ್ನು ಕಳುಹಿಸಲೆಂದು ನಾನು ಪ್ರಾರ್ಥಿಸುತ್ತೇನೆ. ರಾಜನು ಬೇಕೆಂದು ನೀವು ಕೇಳಿದ್ದು ಯೆಹೋವನಿಗೆ ವಿರುದ್ಧವಾಗಿ ನೀವು ಮಾಡಿದ ಎಂತಹ ಕೆಟ್ಟಕಾರ್ಯವಾಗಿದೆ ಎಂಬದನ್ನು ನಿಮಗೇ ತಿಳಿಯುತ್ತದೆ” ಎಂದು ಹೇಳಿದನು.


ಯೆರೆಮೀಯನು ಅಹೀಕಾಮನ ಮಗನಾದ ಗೆದಲ್ಯನು ಇದ್ದ ಮಿಚ್ಫಕ್ಕೆ ಹೋದನು. ಯೆರೆಮೀಯನು ಗೆದಲ್ಯನ ಸಂಗಡ ದೇಶದಲ್ಲಿ ಉಳಿದ ಜನರ ಮಧ್ಯೆ ವಾಸಮಾಡಿದನು.


ಮಿಚ್ಪೆ, ಕೆಫೀರಾ, ಮೋಚಾ,


“ಯಾಜಕರೇ, ಇಸ್ರೇಲ್ ಜನಾಂಗವೇ, ಅರಸನ ಪರಿವಾರದವರೇ, ನನ್ನ ಮಾತುಗಳಿಗೆ ಕಿವಿಗೊಡಿರಿ. ಯಾಕೆಂದರೆ ನಿಮಗೆ ನ್ಯಾಯತೀರ್ಪು ಬಂದಿದೆ. “ಮಿಚ್ಪದಲ್ಲಿ ನೀವು ಉರುಲಿನಂತೆ ಇದ್ದಿರಿ. ತಾಬೋರಿನಲ್ಲಿ ನೆಲದ ಮೇಲೆ ಹರಡಿಸಿದ್ದ ಬಲೆಯಂತೆ ಇದ್ದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು