Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 8:11 - ಪರಿಶುದ್ದ ಬೈಬಲ್‌

11 ಸಮುವೇಲನು, “ನೀವು ನಿಮ್ಮನ್ನು ಆಳಲು ರಾಜನು ಬೇಕೆಂದರೆ, ಅವನು ಬಲವಂತದಿಂದ ಹೀಗೆಲ್ಲ ಮಾಡುತ್ತಾನೆ: ಅವನು ನಿಮ್ಮ ಗಂಡುಮಕ್ಕಳನ್ನು ತೆಗೆದುಕೊಂಡು ತನ್ನ ಸೇವಕರನ್ನಾಗಿಯೂ ಸೈನಿಕರನ್ನಾಗಿಯೂ ಮಾಡಿಕೊಳ್ಳುವನು. ಅವರು ಅವನ ರಥಸೈನ್ಯದಲ್ಲಿಯೂ ಅಶ್ವಸೈನ್ಯದಲ್ಲಿಯೂ ಸೇರಿ ಹೋರಾಡಬೇಕಾಗುತ್ತದೆ. ನಿನ್ನ ಮಕ್ಕಳು ರಾಜನ ರಥದ ಮುಂದೆ ಓಡುವ ಬೆಂಗಾವಲಿನವರಾಗಬೇಕಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 “ಅರಸನಿಗಿರುವ ಅಧಿಕಾರವೆಷ್ಟೆಂದು ಕೇಳಿರಿ, ಅವನು ನಿಮ್ಮ ಮಕ್ಕಳನ್ನು ತೆಗೆದುಕೊಂಡು ತನ್ನ ಸಾರಥಿಗಳನ್ನಾಗಿಯೂ ರಾಹುತರನ್ನಾಗಿಯೂ ಮಾಡಿಕೊಳ್ಳುವನು. ಅವರು ಅವನ ರಥಗಳ ಮುಂದೆ ಓಡುವವರಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಸರ್ವೇಶ್ವರನ ಮಾತುಗಳನ್ನೆಲ್ಲಾ ತಿಳಿಸಿದನು. “ಅರಸನ ಅಧಿಕಾರ ಎಷ್ಟೆಂದು ಕೇಳಿರಿ; ಅವನು ನಿಮ್ಮ ಮಕ್ಕಳನ್ನು ತೆಗೆದುಕೊಂಡು ತನ್ನ ಸಾರಥಿಗಳನ್ನಾಗಿಯೂ ರಾಹುತರನ್ನಾಗಿಯೂ ಮಾಡಿಕೊಳ್ಳುವನು; ಅವರು ಅವರ ರಥಗಳ ಮುಂದೆ ಓಡಬೇಕಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅವರಿಗೆ - ಅರಸನ ಅಧಿಕಾರವೆಷ್ಟೆಂದು ಕೇಳಿರಿ - ಅವನು ನಿಮ್ಮ ಮಕ್ಕಳನ್ನು ತೆಗೆದುಕೊಂಡು ತನ್ನ ಸಾರಥಿಗಳನ್ನಾಗಿಯೂ ರಾಹುತರನ್ನಾಗಿಯೂ ಮಾಡಿಕೊಳ್ಳುವನು; ಅವರು ಅವನ ರಥಗಳ ಮುಂದೆ ಓಡುವವರಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅವನು, “ನಿಮ್ಮನ್ನು ಆಳುವ ಅರಸನ ಅಧಿಕಾರವು ಏನೆಂದರೆ, ಅವನು ನಿಮ್ಮ ಪುತ್ರರನ್ನು ತನ್ನ ರಥಗಳಿಗೋಸ್ಕರ ಸಾರಥಿಗಳನ್ನಾಗಿಯೂ ಕುದುರೆ ಸವಾರರನ್ನಾಗಿಯೂ ತೆಗೆದುಕೊಳ್ಳುವನು. ಕೆಲವರು ಅವನ ರಥಗಳ ಮುಂದೆ ಓಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 8:11
14 ತಿಳಿವುಗಳ ಹೋಲಿಕೆ  

ಸೌಲನು ತನ್ನ ಜೀವಮಾನವೆಲ್ಲ ಶೌರ್ಯದಿಂದ ಫಿಲಿಷ್ಟಿಯರ ವಿರುದ್ಧ ತೀವ್ರವಾಗಿ ಹೋರಾಡಿದನು. ಸೌಲನು ವೀರನನ್ನಾಗಲಿ ಧೈರ್ಯಶಾಲಿಯನ್ನಾಗಲಿ ಯಾವಾಗಲಾದರೂ ನೋಡಿದರೆ, ಅಂತಹವರನ್ನು ಸೈನ್ಯಕ್ಕೆ ತೆಗೆದುಕೊಂಡು, ಅವರನ್ನು ರಾಜನ ಅಂಗರಕ್ಷಕ ಪಡೆಗೆ ಸೇರಿಸಿಕೊಳ್ಳುತ್ತಿದ್ದನು.


ಸಮುವೇಲನು ಜನರಿಗೆ ರಾಜನೀತಿಯ ನಿಯಮಗಳನ್ನು ವಿವರಿಸಿದನು. ಅವನು ಒಂದು ಪುಸ್ತಕದಲ್ಲಿ ಆ ನಿಯಮಗಳನ್ನು ಬರೆದನು. ಅವನು ಯೆಹೋವನ ಸನ್ನಿಧಿಯಲ್ಲಿ ಆ ಪುಸ್ತಕವನ್ನಿಟ್ಟನು. ಬಳಿಕ ಸಮುವೇಲನು ಜನರನ್ನು ಮನೆಗಳಿಗೆ ಹಿಂದಿರುಗಲು ಹೇಳಿದನು.


ಇದಾದನಂತರ, ಅಬ್ಷಾಲೋಮನು ತನಗಾಗಿ ರಥವನ್ನೂ ಕುದರೆಗಳನ್ನೂ ಪಡೆದನು. ಅವನು ರಥವನ್ನು ನಡೆಸುವಾಗ ಅವನ ಮುಂದೆ ಓಡಲು ಐವತ್ತು ಜನರಿದ್ದರು.


ಆದ್ದರಿಂದ ಅಸಂಖ್ಯವಾದ ರಥಗಳೂ ಕುದುರೆಗಳೂ ಸೊಲೊಮೋನನಲ್ಲಿದ್ದವು. ಅವನಲ್ಲಿ ಒಂದು ಸಾವಿರದ ನಾನೂರು ರಥಗಳು ಮತ್ತು ಹನ್ನೆರಡು ಸಾವಿರ ಕುದುರೆಗಳಿದ್ದವು. ಸೊಲೊಮೋನನು ಈ ರಥಗಳಿಗಾಗಿ ವಿಶೇಷವಾದ ನಗರಗಳನ್ನು ಕಟ್ಟಿಸಿದನು. ಆ ನಗರಗಳಲ್ಲಿ ರಥಗಳನ್ನು ಇರಿಸಿದನು. ರಾಜನಾದ ಸೊಲೊಮೋನನು ಕೆಲವು ರಥಗಳನ್ನು ಜೆರುಸಲೇಮಿನಲ್ಲಿ ತನ್ನ ಹತ್ತಿರ ಇಟ್ಟುಕೊಂಡನು.


ಯೆಹೋವನ ಶಕ್ತಿಯು ಎಲೀಯನ ಮೇಲೆ ಬಂದಿತು. ಎಲೀಯನು ಓಡುವುದಕ್ಕಾಗಿ ತನ್ನ ಬಟ್ಟೆಗಳನ್ನು ತನ್ನ ಸುತ್ತಲೂ ಬಿಗಿದುಕೊಂಡನು. ನಂತರ ಎಲೀಯನು ರಾಜನಾದ ಅಹಾಬನಿಗಿಂತ ಮುಂಚೆ ಇಜ್ರೇಲಿನ ದಾರಿಯುದ್ದಕ್ಕೂ ಓಡುತ್ತಲೇ ಹೋದನು.


ರಾಜನ ಸ್ನೇಹಿತರಾದ ಯುವಕರು, “ಆ ಜನರು ನಿನ್ನ ಬಳಿಗೆ ಬಂದು, ‘ನಿನ್ನ ತಂದೆಯು ಬಲಾತ್ಕರಿಸಿ ಹೆಚ್ಚು ಕಷ್ಟದ ಕೆಲಸಗಳನ್ನು ಮಾಡಿಸಿದನು. ಈಗ ನಮ್ಮ ಕೆಲಸವನ್ನು ಸುಲಭಗೊಳಿಸು’ ಎಂದು ಹೇಳಿದರು. ಆದ್ದರಿಂದ ನೀನು ಜಂಬದಿಂದ ಅವರಿಗೆ, ‘ನನ್ನ ಕಿರುಬೆರಳು ನನ್ನ ತಂದೆಯ ಪೂರ್ಣದೇಹಕ್ಕಿಂತ ಶಕ್ತಿಯುಳ್ಳದ್ದಾಗಿದೆ.


“ನಿನ್ನ ತಂದೆಯು ನಮ್ಮನ್ನು ಹೆಚ್ಚು ಕಷ್ಟದ ಕೆಲಸ ಮಾಡಲು ಬಲಾತ್ಕರಿಸಿದನು. ಈಗ ನೀನು ನಮಗೆ ಅದನ್ನು ಕಡಿಮೆಗೊಳಿಸು, ನಿನ್ನ ತಂದೆಯು ನಮ್ಮನ್ನು ಬಲಾತ್ಕರಿಸಿ ಮಾಡಿಸುತ್ತಿದ್ದ ಹೆಚ್ಚು ಕೆಲಸಗಳನ್ನು ನಿಲ್ಲಿಸು. ಆಗ ನಾವು ನಿನ್ನ ಸೇವೆಯನ್ನು ಮಾಡುವೆವು” ಎಂದು ಹೇಳಿದರು.


ರಾಜನಾದ ದಾವೀದನ ಮಗನಾದ ಅದೋನೀಯನು ಬಹಳ ಗರ್ವಿಷ್ಠನಾದನು. ಅವನು, “ನಾನೇ ರಾಜನಾಗುತ್ತೇನೆ” ಎಂದು ಹೇಳಿಕೊಂಡನು. (ಅದೋನೀಯನ ತಾಯಿಯ ಹೆಸರು ಹಗ್ಗೀತ.) ಅದೋನೀಯನು ರಾಜನಾಗಬೇಕೆಂಬುದಾಗಿ ಬಹಳ ಆಸೆಪಟ್ಟನು. ಆದ್ದರಿಂದ ಅವನು ತನಗಾಗಿ ಒಂದು ರಥವನ್ನು, ಕುದುರೆಗಳನ್ನು ಮತ್ತು ರಥದ ಮುಂದೆ ಓಡುವಂತಹ ಐವತ್ತು ಜನರನ್ನು ಪಡೆದನು.


ಆದ್ದರಿಂದ ಜನರ ಮಾತಿಗೆ ಕಿವಿಗೊಟ್ಟು ಅವರು ಹೇಳಿದಂತೆ ಮಾಡು. ಆದರೆ ಅವರಿಗೆ ಎಚ್ಚರಿಕೆಕೊಡು. ರಾಜನಾದವನು ಜನರಿಗೆ ಏನು ಮಾಡುತ್ತಾನೆ ಎಂಬುದನ್ನು ಅವರಿಗೆ ತಿಳಿಸಿ ಹೇಳು! ರಾಜನಾದವನು ಜನರನ್ನು ಹೇಗೆ ಆಳುತ್ತಾನೆಂಬುದನ್ನೂ ಅವರಿಗೆ ತಿಳಿಸಿಕೊಡು” ಎಂದು ಹೇಳಿದನು.


ಆದ್ದರಿಂದ ರಾಜನಾದ ರೆಹಬ್ಬಾಮನು ಅವುಗಳ ಸ್ಥಾನದಲ್ಲಿಡಲು ಅನೇಕ ಗುರಾಣಿಗಳನ್ನು ಮಾಡಿಸಿದನು. ಆದರೆ ಈ ಗುರಾಣಿಗಳನ್ನು ಮಾಡಿಸಿದ್ದು ಹಿತ್ತಾಳೆಯಲ್ಲೇ ಹೊರತು ಬಂಗಾರದಿಂದಲ್ಲ. ಅರಮನೆಯ ಬಾಗಿಲಿನ ಕಾವಲುಗಾರರಿಗೆ ಈ ಗುರಾಣಿಗಳನ್ನು ಅವನು ಕೊಟ್ಟನು.


ಸೌಲನು ತನ್ನ ಸುತ್ತಲೂ ನಿಂತಿದ್ದ ಅಧಿಕಾರಿಗಳಿಗೆ, “ಬೆನ್ಯಾಮೀನನ ಜನರೇ, ಕೇಳಿ! ಇಷಯನ ಮಗನಾದ ದಾವೀದನು ನಿಮಗೆ ಹೊಲಗಳನ್ನೂ ದ್ರಾಕ್ಷಿತೋಟಗಳನ್ನೂ ಕೊಡುತ್ತಾನೆಂದು ತಿಳಿದಿರುವಿರಾ? ದಾವೀದನು ನಿಮಗೆ ಸಹಸ್ರಾಧಿಪತಿಗಳಾಗಿ ಮತ್ತು ಶತಾಧಿಪತಿಗಳಾಗಿ ಬಡ್ತಿ ನೀಡುತ್ತಾನೆಂದು ನೀವು ತಿಳಿದಿರುವಿರಾ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು