Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 8:14 - ಪರಿಶುದ್ದ ಬೈಬಲ್‌

14 “ನಿಮಗೆ ಸೇರಿದ ಉತ್ತಮ ಹೊಲಗಳನ್ನೂ ದ್ರಾಕ್ಷಿತೋಟಗಳನ್ನೂ ಆಲಿವ್ ತೋಪುಗಳನ್ನೂ ರಾಜನು ಕಿತ್ತುಕೊಂಡು ತನ್ನ ಅಧಿಕಾರಿಗಳಿಗೆ ಕೊಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಿಮ್ಮ ಉತ್ತಮವಾದ ಹೊಲಗಳನ್ನೂ, ದ್ರಾಕ್ಷಿತೋಟಗಳನ್ನೂ ಎಣ್ಣೇ ಮರದ ತೋಪುಗಳನ್ನೂ ಕಿತ್ತುಕೊಂಡು ತನ್ನ ಸೇವಕರಿಗೆ ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನಿಮ್ಮ ಉತ್ತಮವಾದ ಹೊಲಗಳನ್ನೂ ದ್ರಾಕ್ಷಿತೋಟಗಳನ್ನೂ ಎಣ್ಣೆ ಮರದ ತೋಪುಗಳನ್ನೂ ಕಿತ್ತುಕೊಂಡು ತನ್ನ ಸೇವಕರಿಗೆ ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಿಮ್ಮ ಉತ್ತಮವಾದ ಹೊಲಗಳನ್ನೂ ದ್ರಾಕ್ಷೇತೋಟಗಳನ್ನೂ ಎಣ್ಣೇ ಮರದ ತೋಪುಗಳನ್ನೂ ಕಿತ್ತುಕೊಂಡು ತನ್ನ ಸೇವಕರಿಗೆ ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅವನು ಉತ್ತಮವಾದ ನಿಮ್ಮ ಹೊಲಗಳನ್ನೂ, ನಿಮ್ಮ ದ್ರಾಕ್ಷಿತೋಟಗಳನ್ನೂ, ನಿಮ್ಮ ಓಲಿವ್ ಮರದ ತೋಪುಗಳನ್ನೂ ತೆಗೆದುಕೊಂಡು ತನ್ನ ಸೇವಕರಿಗೆ ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 8:14
7 ತಿಳಿವುಗಳ ಹೋಲಿಕೆ  

ರಾಜನು ತನ್ನ ಪ್ರಜೆಯ ಭೂಮಿಯನ್ನು ತನ್ನ ಉಪಯೋಗಕ್ಕೆಂದು ಬಲತ್ಕಾರದಿಂದ ಇಟ್ಟುಕೊಳ್ಳಬಾರದು ಅಥವಾ ತೆಗೆದುಕೊಳ್ಳಲೂಬಾರದು. ತನ್ನ ಸ್ವಂತ ಭೂಮಿಯಿಂದ ಪಾಲನ್ನು ತನ್ನ ಮಕ್ಕಳಿಗೆ ಕೊಡಬೇಕು. ಹೀಗೆ ನನ್ನ ಜನರು ತಮ್ಮ ಭೂಮಿಯನ್ನು ಕಳೆದುಕೊಳ್ಳುವದಿಲ್ಲ.”


ಈಜೆಬೆಲಳು, “ನೀನು ಇಸ್ರೇಲಿಗೆಲ್ಲ ರಾಜ! ನಿನ್ನ ಹಾಸಿಗೆಯಿಂದ ಎದ್ದು ಬಾ. ನೀನು ಸ್ವಲ್ಪ ಊಟಮಾಡಿ, ಸಂತೋಷದಿಂದಿರು. ನಾನು ನಿನಗೆ ನಾಬೋತನ ದ್ರಾಕ್ಷಿತೋಟವನ್ನು ಕೊಡಿಸುತ್ತೇನೆ” ಎಂದು ಹೇಳಿದಳು.


ಯೆಹೋವನಾದ ನಾನು ಅವನಿಗೆ ಹೀಗೆ ಹೇಳಿದೆನೆಂದು ತಿಳಿಸು: ‘ಅಹಾಬನೇ! ನೀನು ನಾಬೋತನನ್ನು ಕೊಂದುಹಾಕಿದೆ. ಈಗ ನೀನು ಅವನ ದ್ರಾಕ್ಷಿತೋಟವನ್ನು ತೆಗೆದುಕೊಳ್ಳುತ್ತಿರುವೆ. ಆದ್ದರಿಂದ ನಾನಿದನ್ನು ನಿನಗೆ ಹೇಳುತ್ತೇನೆ! ನಾಬೋತನು ಸತ್ತ ಸ್ಥಳದಲ್ಲಿಯೇ ನೀನು ಸಹ ಸಾಯುವೆ. ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲಿಯೇ ನಿನ್ನ ರಕ್ತವನ್ನೂ ನೆಕ್ಕುತ್ತವೆ!’”


ಸೌಲನು ತನ್ನ ಸುತ್ತಲೂ ನಿಂತಿದ್ದ ಅಧಿಕಾರಿಗಳಿಗೆ, “ಬೆನ್ಯಾಮೀನನ ಜನರೇ, ಕೇಳಿ! ಇಷಯನ ಮಗನಾದ ದಾವೀದನು ನಿಮಗೆ ಹೊಲಗಳನ್ನೂ ದ್ರಾಕ್ಷಿತೋಟಗಳನ್ನೂ ಕೊಡುತ್ತಾನೆಂದು ತಿಳಿದಿರುವಿರಾ? ದಾವೀದನು ನಿಮಗೆ ಸಹಸ್ರಾಧಿಪತಿಗಳಾಗಿ ಮತ್ತು ಶತಾಧಿಪತಿಗಳಾಗಿ ಬಡ್ತಿ ನೀಡುತ್ತಾನೆಂದು ನೀವು ತಿಳಿದಿರುವಿರಾ?


“ರಾಜನು ನಿಮ್ಮ ಹೆಣ್ಣುಮಕ್ಕಳನ್ನು ತೆಗೆದುಕೊಂಡು ತನಗಾಗಿ ಸುಗಂಧದ್ರವ್ಯಗಳನ್ನು ತಯಾರಿಸಲೂ ಅಡಿಗೆ ಮಾಡಲೂ ರೊಟ್ಟಿಸುಡುವುದಕ್ಕೂ ನೇಮಿಸಿಕೊಳ್ಳುವನು.


ನೀವು ಬೆಳೆದ ಧಾನ್ಯಗಳಲ್ಲಿ ಮತ್ತು ದ್ರಾಕ್ಷಿಗಳಲ್ಲಿ ಅವನು ಹತ್ತನೆ ಒಂದು ಭಾಗವನ್ನು ತೆಗೆದುಕೊಂಡು ತನ್ನ ಅಧಿಕಾರಿಗಳಿಗೂ ಸೇವಕರಿಗೂ ಕೊಡುತ್ತಾನೆ.


ಒಂದು ದಿನ ಅಹಾಬನು ನಾಬೋತನಿಗೆ, “ನಿನ್ನ ದ್ರಾಕ್ಷಿತೋಟವನ್ನು ನನಗೆ ಕೊಡು. ನಾನು ಅದನ್ನು ತರಕಾರಿಯ ತೋಟವನ್ನಾಗಿ ಮಾಡುವೆನು. ನಿನ್ನ ದ್ರಾಕ್ಷಿತೋಟವು ನನ್ನ ಅರಮನೆಯ ಹತ್ತಿರದಲ್ಲಿದೆ. ನಾನು ಅದಕ್ಕೆ ಬದಲಾಗಿ ಒಂದು ಉತ್ತಮ ದ್ರಾಕ್ಷಿತೋಟವನ್ನು ನಿನಗೆ ಕೊಡುವೆನು. ನೀನು ಬಯಸಿದರೆ, ನಾನು ಅದರ ಬೆಲೆಯನ್ನು ಹಣದ ರೂಪದಲ್ಲಿ ಕೊಡುತ್ತೇನೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು