Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 8:8 - ಪರಿಶುದ್ದ ಬೈಬಲ್‌

8 ಅವರು ಯಾವಾಗಲೂ ಮಾಡಿದಂತೆ ಈಗಲೂ ಮಾಡುತ್ತಿದ್ದಾರೆ. ಅವರನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದೆನು. ಆದರೆ ಅವರು ನನ್ನನ್ನು ಬಿಟ್ಟು ಅನ್ಯದೇವತೆಗಳ ಸೇವೆ ಮಾಡಿದರು. ಅವರು ನಿನಗೂ ಹೀಗೆಯೇ ಮಾಡುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನಾನು ಅವರನ್ನು ಐಗುಪ್ತದಿಂದ ಬಿಡಿಸಿದಂದಿನಿಂದ ಇಂದಿನ ವರೆಗೂ ಅವರು ನನ್ನನ್ನು ಬಿಟ್ಟು ಅನ್ಯದೇವತೆಗಳನ್ನು ಸೇವಿಸಿದರು. ನನಗೆ ಹೇಗೆ ಮಾಡಿದರೋ, ಹಾಗೆಯೇ ನಿನಗೂ ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನಾನು ಅವರನ್ನು ಈಜಿಪ್ಟಿನಿಂದ ಬಿಡಿಸಿದೆ. ಅಂದಿನಿಂದ ಇಂದಿನವರೆಗೂ ಅವರು ನನ್ನನ್ನು ಬಿಟ್ಟು ಅನ್ಯದೇವತೆಗಳನ್ನು ಪೂಜಿಸಿದರು. ನನಗೆ ಹೇಗೆ ಮಾಡಿದರೋ ಹಾಗೆಯೇ ನಿನಗೂ ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನಾನು ಅವರನ್ನು ಐಗುಪ್ತದಿಂದ ಬಿಡಿಸಿದಂದಿನಿಂದ ಇಂದಿನವರೆಗೂ ಅವರು ನನ್ನನ್ನು ಬಿಟ್ಟು ಅನ್ಯದೇವತೆಗಳನ್ನು ಸೇವಿಸಿದರು. ನನಗೆ ಹೇಗೆ ಮಾಡಿದರೋ ಹಾಗೆಯೇ ನಿನಗೂ ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನಾನು ಅವರನ್ನು ಈಜಿಪ್ಟಿನಿಂದ ಬರಮಾಡಿದ ದಿನವು ಮೊದಲುಗೊಂಡು ಈ ದಿನದವರೆಗೂ ಅವರು ನನ್ನನ್ನು ಬಿಟ್ಟು, ಅನ್ಯದೇವರುಗಳನ್ನು ಸೇವಿಸಿ, ಮಾಡಿದ ಸಮಸ್ತ ಕೃತ್ಯಗಳ ಪ್ರಕಾರ ನಿನಗೂ ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 8:8
22 ತಿಳಿವುಗಳ ಹೋಲಿಕೆ  

ಬಹಳ ಸಮಯ ದಾಟಿಹೋದರೂ ಮೋಶೆ ಬೆಟ್ಟದಿಂದ ಕೆಳಗಿಳಿಯಲಿಲ್ಲವಾದ್ದರಿಂದ ಇಸ್ರೇಲರು ಆರೋನನ ಬಳಿಗೆ ಒಟ್ಟಾಗಿ ಬಂದು, “ನೋಡು, ಮೋಶೆಯು ನಮ್ಮನ್ನು ಈಜಿಪ್ಟಿನಿಂದ ಹೊರಗೆ ಕರೆದುಕೊಂಡು ಬಂದನು. ಆದರೆ ಅವನಿಗೇನಾಯಿತೋ ನಮಗೆ ತಿಳಿಯದು. ಆದ್ದರಿಂದ ನಮ್ಮನ್ನು ಮುನ್ನಡೆಸಲು ಕೆಲವು ದೇವರುಗಳನ್ನು ಮಾಡಿಕೊಡು” ಎಂದು ಹೇಳಿದರು.


ಇಸ್ರೇಲರು ಮತ್ತೆ ಯೆಹೋವನಿಗೆ ವಿರೋಧವಾಗಿ ದುಷ್ಕೃತ್ಯಗಳನ್ನು ಮಾಡಿದರು. ಆದ್ದರಿಂದ ಫಿಲಿಷ್ಟಿಯರು ನಲವತ್ತು ವರ್ಷ ಅವರನ್ನು ಆಳುವಂತೆ ಯೆಹೋವನು ಮಾಡಿದನು.


ಇಸ್ರೇಲರು ಯೆಹೋವನಿಗೆ ವಿರೋಧವಾಗಿ ಮತ್ತೆ ದುಷ್ಕೃತ್ಯಗಳನ್ನೇ ಮಾಡಿದರು. ಆದ್ದರಿಂದ ಮಿದ್ಯಾನ್ಯರು ಇಸ್ರೇಲರ ಮೇಲೆ ಏಳುವರ್ಷ ಪ್ರಭುತ್ವ ನಡೆಸುವಂತೆ ಯೆಹೋವನು ಆಸ್ಪದ ಮಾಡಿದನು.


ಏಹೂದನು ಮರಣಹೊಂದಿದ ಮೇಲೆ ಇಸ್ರೇಲರು ಮತ್ತೆ ಯೆಹೋವನ ವಿರೋಧವಾಗಿ ಪಾಪ ಮಾಡಿದರು.


ಹೀಗಾಗಿ ಯೆಹೋವನು ಇಸ್ರೇಲರ ಮೇಲೆ ಕೋಪಗೊಂಡು, “ಈ ಜನಾಂಗದವರು ಅವರ ಪೂರ್ವಿಕರ ಸಂಗಡ ನಾನು ಮಾಡಿಕೊಂಡ ಒಡಂಬಡಿಕೆಯನ್ನು ಮುರಿದಿದ್ದಾರೆ. ಇವರು ನನ್ನ ಮಾತನ್ನು ಕೇಳಲಿಲ್ಲ.


ನಾನು ನಿಮ್ಮನ್ನು ತಿಳಿದಿರುವ ಕಾಲದಿಂದ ನೀವು ಯೆಹೋವನಿಗೆ ಅವಿಧೇಯರಾಗಿಯೇ ಇದ್ದೀರಿ.


ಮರುದಿನ ಇಸ್ರೇಲರೆಲ್ಲರೂ ಮೋಶೆ ಆರೋನರ ವಿರುದ್ಧ ಗುಣುಗುಟ್ಟುತ್ತಾ, “ನೀವೇ ಯೆಹೋವನ ಜನರನ್ನು ಸಾಯಿಸಿದಿರಿ” ಎಂದು ಹೇಳಿದರು.


ಆದ್ದರಿಂದ ಅವರು ಮೋಶೆಗೆ ವಿರುದ್ಧವಾಗಿ ದಂಗೆ ಎದ್ದು ಅವನೊಡನೆ ವಾಗ್ವಾದ ಮಾಡತೊಡಗಿದರು. “ನಮಗೆ ಕುಡಿಯಲು ನೀರು ಕೊಡು” ಎಂದು ಅವರು ಕೇಳಿದರು. ಮೋಶೆ ಅವರಿಗೆ, “ನೀವು ಯಾಕೆ ನನಗೆ ವಿರುದ್ಧವಾಗಿ ದಂಗೆಯೆದ್ದಿರಿ? ನೀವು ಯಾಕೆ ಯೆಹೋವನನ್ನು ಪರೀಕ್ಷಿಸುತ್ತಿದ್ದೀರಿ? ಯೆಹೋವನು ನಮ್ಮೊಡನೆ ಇಲ್ಲವೆಂದು ನೀವು ಭಾವಿಸುತ್ತೀರೋ?” ಎಂದು ಹೇಳಿದನು.


ಅವರು, “ಯೆಹೋವನು ನಮ್ಮನ್ನು ಈಜಿಪ್ಟಿನಲ್ಲಿ ಕೊಂದಿದ್ದರೆ ಎಷ್ಟೋ ಒಳ್ಳೆಯದಾಗುತ್ತಿತ್ತು. ನಮಗೆ ಈಜಿಪ್ಟಿನಲ್ಲಿ ಮಾಂಸವೂ ರೊಟ್ಟಿಯೂ ಇತ್ತು. ನಮಗೆ ಬೇಕಿದ್ದ ಆಹಾರವೆಲ್ಲಾ ನಮ್ಮಲ್ಲಿತ್ತು. ಆದರೆ ಈಗ ನೀವು ನಮ್ಮನ್ನು ಈ ಅರಣ್ಯಕ್ಕೆ ಕರೆದುಕೊಂಡು ಬಂದಿರಿ. ನಾವೆಲ್ಲರೂ ಇಲ್ಲಿ ಹಸಿವೆಯಿಂದ ಸಾಯುವೆವು” ಎಂದು ಹೇಳಿದರು.


ಯೆಹೋವನು ಅವನಿಗೆ, “ಜನರು ನಿನಗೆ ಹೇಳಿದಂತೆ ಮಾಡು ಅವರು ನಿನ್ನನ್ನು ತಿರಸ್ಕರಿಸಲಿಲ್ಲ. ಆದರೆ ನನ್ನನ್ನು ತಿರಸ್ಕರಿಸಿದ್ದಾರೆ! ಅವರಿಗೆ ನಾನು ರಾಜನಾಗಿರುವುದು ಬೇಕಿಲ್ಲ!


ಆದ್ದರಿಂದ ಜನರ ಮಾತಿಗೆ ಕಿವಿಗೊಟ್ಟು ಅವರು ಹೇಳಿದಂತೆ ಮಾಡು. ಆದರೆ ಅವರಿಗೆ ಎಚ್ಚರಿಕೆಕೊಡು. ರಾಜನಾದವನು ಜನರಿಗೆ ಏನು ಮಾಡುತ್ತಾನೆ ಎಂಬುದನ್ನು ಅವರಿಗೆ ತಿಳಿಸಿ ಹೇಳು! ರಾಜನಾದವನು ಜನರನ್ನು ಹೇಗೆ ಆಳುತ್ತಾನೆಂಬುದನ್ನೂ ಅವರಿಗೆ ತಿಳಿಸಿಕೊಡು” ಎಂದು ಹೇಳಿದನು.


ನಾನು ನಿಮ್ಮ ಪೂರ್ವಿಕರಿಗೆ ‘ಪ್ರತಿ ಏಳು ವರ್ಷದ ಕೊನೆಯಲ್ಲಿ ಪ್ರತಿಯೊಬ್ಬ ವ್ಯಕ್ತಿಯು ತನ್ನ ಇಬ್ರಿಯ ಗುಲಾಮರನ್ನು ಬಿಡುಗಡೆ ಮಾಡಬೇಕು. ತನ್ನನ್ನು ನಿಮಗೆ ಮಾರಿಕೊಂಡ ಇಬ್ರಿಯ ಸಹೋದರ ನಿಮ್ಮಲ್ಲಿದ್ದರೆ ಅವನು ಆರು ವರ್ಷ ಸೇವೆಮಾಡಿದ ನಂತರ ಅವನನ್ನು ಬಿಡುಗಡೆ ಮಾಡಬೇಕು’ ಎಂದು ಹೇಳಿದ್ದೆ. ಆದರೆ ನಿಮ್ಮ ಪೂರ್ವಿಕರು ನನ್ನ ಮಾತುಗಳನ್ನು ಕಿವಿಗೆ ಹಾಕಿಕೊಳ್ಳಲಿಲ್ಲ; ನನ್ನ ಕಡೆಗೆ ಗಮನ ಕೊಡಲಿಲ್ಲ.


ಆತನು ನನ್ನೊಂದಿಗೆ, “ನರಪುತ್ರನೇ, ಇಸ್ರೇಲ್ ಜನಾಂಗದವರೊಡನೆ ಮಾತನಾಡಲು ನಿನ್ನನ್ನು ಕಳುಹಿಸುತ್ತಿದ್ದೇನೆ. ಅವರು ಎಷ್ಟೋಬಾರಿ ನನಗೆ ವಿರುದ್ಧವಾಗಿ ಎದ್ದರು. ಅವರ ಪೂರ್ವಿಕರೂ ನನಗೆ ವಿರುದ್ಧವಾಗಿ ಎದ್ದಿದ್ದರು. ನನಗೆ ವಿರುದ್ಧವಾಗಿ ಎಷ್ಟೋವೇಳೆ ಪಾಪ ಮಾಡಿದರು. ಈಗಲೂ ಅವರು ಪಾಪ ಮಾಡುತ್ತಲೇ ಇದ್ದಾರೆ.


ಜನರು ತಮ್ಮ ಮಕ್ಕಳಿಗೆ ದೇವರ ಆಜ್ಞೆಗಳನ್ನು ಉಪದೇಶಿಸಿದರೆ, ಮಕ್ಕಳು ತಮ್ಮ ಪೂರ್ವಿಕರಂತಾಗುವುದಿಲ್ಲ. ಅವರ ಪೂರ್ವಿಕರು ದೇವರಿಗೆ ವಿಮುಖರಾಗಿ ಆತನಿಗೆ ವಿಧೇಯರಾಗಲಿಲ್ಲ. ಅವರು ಮೊಂಡರಾಗಿದ್ದರು. ಅವರು ದೇವರಿಗೆ ನಂಬಿಗಸ್ತರಾಗಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು