Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 8:9 - ಪರಿಶುದ್ದ ಬೈಬಲ್‌

9 ಆದ್ದರಿಂದ ಜನರ ಮಾತಿಗೆ ಕಿವಿಗೊಟ್ಟು ಅವರು ಹೇಳಿದಂತೆ ಮಾಡು. ಆದರೆ ಅವರಿಗೆ ಎಚ್ಚರಿಕೆಕೊಡು. ರಾಜನಾದವನು ಜನರಿಗೆ ಏನು ಮಾಡುತ್ತಾನೆ ಎಂಬುದನ್ನು ಅವರಿಗೆ ತಿಳಿಸಿ ಹೇಳು! ರಾಜನಾದವನು ಜನರನ್ನು ಹೇಗೆ ಆಳುತ್ತಾನೆಂಬುದನ್ನೂ ಅವರಿಗೆ ತಿಳಿಸಿಕೊಡು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನೀನು ಈಗ ಅವರು ಕೇಳಿಕೊಂಡಂತೆ ಮಾಡು; ಆದರೆ ಅವರ ಮೇಲೆ ರಾಜರಿಗಿರುವ ಅಧಿಕಾರ ಎಷ್ಟೆಂಬುದನ್ನು ಅವರಿಗೆ ತಿಳಿಸಿ, ಎಚ್ಚರಿಸು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನೀನು ಈಗ ಅವರು ಕೇಳಿಕೊಂಡಂತೆ ಮಾಡು; ಆದರೆ ಅವರ ಮೇಲೆ ರಾಜರಿಗಿರುವ ಅಧಿಕಾರ ಎಷ್ಟು ಘನವಾದುದೆಂಬುದನ್ನು ಅವರಿಗೆ ತಿಳಿಸಿ ಎಚ್ಚರಿಸದೆ ಇರಬೇಡ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನೀನು ಈಗ ಅವರು ಕೇಳಿಕೊಂಡಂತೆ ಮಾಡು; ಆದರೆ ಅವರ ಮೇಲೆ ರಾಜರಿಗಿರುವ ಅಧಿಕಾರವೆಷ್ಟೆಂಬದನ್ನು ಅವರಿಗೆ ತಿಳಿಸಿ ಎಚ್ಚರಿಸದೆ ಇರಬೇಡ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಈಗ ಅವರ ಮಾತನ್ನು ಕೇಳು. ಆದರೆ ನೀನು ಅವರಿಗೆ ಕಟ್ಟಳೆಯನ್ನು ಕೊಟ್ಟು, ಅವರನ್ನು ಆಳುವ ಅರಸನ ಅಧಿಕಾರವು ಎಂಥದ್ದೆಂಬುದನ್ನು ತಿಳಿಸು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 8:9
10 ತಿಳಿವುಗಳ ಹೋಲಿಕೆ  

ಸಮುವೇಲನು ಜನರಿಗೆ ರಾಜನೀತಿಯ ನಿಯಮಗಳನ್ನು ವಿವರಿಸಿದನು. ಅವನು ಒಂದು ಪುಸ್ತಕದಲ್ಲಿ ಆ ನಿಯಮಗಳನ್ನು ಬರೆದನು. ಅವನು ಯೆಹೋವನ ಸನ್ನಿಧಿಯಲ್ಲಿ ಆ ಪುಸ್ತಕವನ್ನಿಟ್ಟನು. ಬಳಿಕ ಸಮುವೇಲನು ಜನರನ್ನು ಮನೆಗಳಿಗೆ ಹಿಂದಿರುಗಲು ಹೇಳಿದನು.


ರಾಜನು ತನ್ನ ಪ್ರಜೆಯ ಭೂಮಿಯನ್ನು ತನ್ನ ಉಪಯೋಗಕ್ಕೆಂದು ಬಲತ್ಕಾರದಿಂದ ಇಟ್ಟುಕೊಳ್ಳಬಾರದು ಅಥವಾ ತೆಗೆದುಕೊಳ್ಳಲೂಬಾರದು. ತನ್ನ ಸ್ವಂತ ಭೂಮಿಯಿಂದ ಪಾಲನ್ನು ತನ್ನ ಮಕ್ಕಳಿಗೆ ಕೊಡಬೇಕು. ಹೀಗೆ ನನ್ನ ಜನರು ತಮ್ಮ ಭೂಮಿಯನ್ನು ಕಳೆದುಕೊಳ್ಳುವದಿಲ್ಲ.”


ನಾನು ದುಷ್ಟನಿಗೆ, ‘ನೀನು ಸಾಯುವೆ’ ಎಂದು ಹೇಳುವಾಗ, ನೀನು ಅವನನ್ನು ಎಚ್ಚರಿಸಬೇಕು. ಅವನು ತನ್ನ ಪ್ರಾಣವನ್ನು ರಕ್ಷಿಸಿಕೊಳ್ಳುವದಕ್ಕಾಗಿ ತನ್ನ ಜೀವಿತವನ್ನು ಮಾರ್ಪಡಿಸಿಕೊಂಡು ದುಷ್ಕೃತ್ಯ ನಿಲ್ಲಿಸಬೇಕೆಂದು ನೀನು ಅವನಿಗೆ ಹೇಳಬೇಕು. ನೀನು ಅವನನ್ನು ಎಚ್ಚರಿಸದಿದ್ದರೆ ಅವನು ತನ್ನ ಪಾಪದ ದೆಸೆಯಿಂದ ಸಾಯುವನು. ಆದರೆ ಅವನ ಮರಣಕ್ಕೆ ನಾನು ನಿನ್ನನ್ನೇ ಹೊಣೆಗಾರನನ್ನಾಗಿ ಮಾಡುತ್ತೇನೆ.


ಸೌಲನು ತನ್ನ ಜೀವಮಾನವೆಲ್ಲ ಶೌರ್ಯದಿಂದ ಫಿಲಿಷ್ಟಿಯರ ವಿರುದ್ಧ ತೀವ್ರವಾಗಿ ಹೋರಾಡಿದನು. ಸೌಲನು ವೀರನನ್ನಾಗಲಿ ಧೈರ್ಯಶಾಲಿಯನ್ನಾಗಲಿ ಯಾವಾಗಲಾದರೂ ನೋಡಿದರೆ, ಅಂತಹವರನ್ನು ಸೈನ್ಯಕ್ಕೆ ತೆಗೆದುಕೊಂಡು, ಅವರನ್ನು ರಾಜನ ಅಂಗರಕ್ಷಕ ಪಡೆಗೆ ಸೇರಿಸಿಕೊಳ್ಳುತ್ತಿದ್ದನು.


ಯಾಜಕರು ಜನರೊಡನೆ ಯಾವ ರೀತಿ ವರ್ತಿಸಬೇಕು ಎಂಬುದನ್ನು ಅವರು ಲಕ್ಷಿಸುತ್ತಿರಲಿಲ್ಲ. ಯಾಜಕರು ಜನರಿಗಾಗಿ ಮಾಡಬೇಕಾದ ಕಾರ್ಯವೆಂದರೆ: ಒಬ್ಬ ವ್ಯಕ್ತಿಯು ಪ್ರತಿಸಲ ಯಜ್ಞವನ್ನರ್ಪಿಸಲು ಬಂದಾಗ ಯಾಜಕರು ಯಜ್ಞಮಾಂಸವನ್ನು ಒಂದು ಮಡಕೆಯಲ್ಲಿ ಬೇಯಿಸಬೇಕು. ಯಾಜಕರ ಸೇವಕನು ಕೈಯಲ್ಲಿ ತ್ರಿಶೂಲವನ್ನು ಹಿಡಿದುಕೊಂಡು ಬರಬೇಕು.


ಅವರು ಯಾವಾಗಲೂ ಮಾಡಿದಂತೆ ಈಗಲೂ ಮಾಡುತ್ತಿದ್ದಾರೆ. ಅವರನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದೆನು. ಆದರೆ ಅವರು ನನ್ನನ್ನು ಬಿಟ್ಟು ಅನ್ಯದೇವತೆಗಳ ಸೇವೆ ಮಾಡಿದರು. ಅವರು ನಿನಗೂ ಹೀಗೆಯೇ ಮಾಡುತ್ತಿದ್ದಾರೆ.


ಸಮುವೇಲನು ಇಸ್ರೇಲರೆಲ್ಲರಿಗೆ, “ನೀವು ನನ್ನಿಂದ ಅಪೇಕ್ಷಿಸಿದ ಎಲ್ಲವನ್ನೂ ನಾನು ಮಾಡಿರುತ್ತೇನೆ. ನಾನು ನಿಮಗಾಗಿ ಒಬ್ಬ ರಾಜನನ್ನು ನೇಮಿಸಿದ್ದೇನೆ.


ನಾನು ನಿಮ್ಮ ಪೂರ್ವಿಕರನ್ನು ಈಜಿಪ್ಟಿನಿಂದ ಹೊರತಂದಾಗ ಅವರಿಗೆ ಒಂದು ಮುನ್ನೆಚ್ಚರಿಕೆಯನ್ನು ಕೊಟ್ಟೆನು. ಇಂದಿನವರೆಗೂ ನಾನು ಮತ್ತೆಮತ್ತೆ ಅವರಿಗೆ ಮುನ್ನೆಚ್ಚರಿಕೆಯನ್ನು ಕೊಟ್ಟೆ. ನನ್ನ ಆಜ್ಞಾಪಾಲನೆ ಮಾಡಬೇಕೆಂದು ಅವರಿಗೆ ಹೇಳಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು