Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 9:12 - ಪರಿಶುದ್ದ ಬೈಬಲ್‌

12 ಆ ಯುವತಿಯರು, “ಹೌದು ದರ್ಶಿಯು ಇಲ್ಲಿದ್ದಾನೆ. ಅವನು ದಾರಿಯಲ್ಲಿ ನಿಮಗಿಂತ ಸ್ವಲ್ಪ ಮುಂದೆ ಹೋಗುತ್ತಿದ್ದಾನೆ. ಈ ಹೊತ್ತು ನಮ್ಮ ಊರಿನವರು ಗುಡ್ಡದ ಮೇಲೆ ಯಜ್ಞವನ್ನು ಅರ್ಪಿಸುವುದರಿಂದ ಅವನು ಇಲ್ಲಿಗೆ ಬಂದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಈ ಹೊತ್ತು ನಮ್ಮ ಊರಿನವರು ಗುಡ್ಡದ ಮೇಲೆ ಯಜ್ಞವನ್ನು ಅರ್ಪಿಸುತ್ತಿರುವುದರಿಂದ ಅವನು ಈಗಲೇ ಇಲ್ಲಿಗೆ ಬಂದಿರುವನು; ಬೇಗನೆ ಹೋಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 “ಈ ದಿನ ನಮ್ಮ ಊರಿನವರು ಗುಡ್ಡದ ಮೇಲೆ ಬಲಿಯನ್ನರ್ಪಿಸುವುದರಿಂದ ಅವರು ಈಗಲೇ ಇಲ್ಲಿಗೆ ಬಂದರು; ಬೇಗನೆ ಹೋಗಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಈ ಹೊತ್ತು ನಮ್ಮ ಊರಿನವರು ಗುಡ್ಡದ ಮೇಲೆ ಯಜ್ಞವನ್ನರ್ಪಿಸುವದರಿಂದ ಅವನು ಈಗಲೇ ಇಲ್ಲಿಗೆ ಬಂದನು; ಬೇಗನೆ ಹೋಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅವರು ಇವರಿಗೆ ಉತ್ತರವಾಗಿ, “ಅವನು ಇದ್ದಾನೆ, ನಿಮ್ಮ ಮುಂದೆ ಇದ್ದಾನೆ, ಈಗ ಬೇಗ ಹೋಗಿರಿ, ಏಕೆಂದರೆ ಈ ಹೊತ್ತು ಗುಡ್ಡದ ಮೇಲೆ ಜನರು ಬಲಿಯನ್ನು ಅರ್ಪಿಸುವುದರಿಂದ ಅವನು ಈ ಹೊತ್ತು ಪಟ್ಟಣಕ್ಕೆ ಬಂದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 9:12
11 ತಿಳಿವುಗಳ ಹೋಲಿಕೆ  

ಆಮೇಲೆ ಯಾಕೋಬನು ಒಂದು ಪಶುವನ್ನು ಕೊಂದು ಅದನ್ನು ಬೆಟ್ಟದ ಮೇಲೆ ಯಜ್ಞವಾಗಿ ಅರ್ಪಿಸಿದನು; ತನ್ನ ಜನರನ್ನು ಊಟಕ್ಕೆ ಆಹ್ವಾನಿಸಿದನು. ಅವರು ಊಟ ಮಾಡಿದ ಮೇಲೆ, ಆ ರಾತ್ರಿ ಬೆಟ್ಟದ ಮೇಲೆ ಇದ್ದರು.


ಅದಕ್ಕೆ ಸಮುವೇಲನು, “ನಾನು ಹೊರಟರೆ ಸೌಲನಿಗೆ ಈ ಸುದ್ದಿಯು ತಿಳಿಯುತ್ತದೆ. ಆಗ ಅವನು ನನ್ನನ್ನು ಕೊಲ್ಲಲು ಪ್ರಯತ್ನಿಸುತ್ತಾನೆ” ಎಂದನು. ಯೆಹೋವನು, “ಬೆತ್ಲೆಹೇಮಿಗೆ ಹೋಗು. ನಿನ್ನೊಡನೆ ಒಂದು ಎಳೆಕರುವನ್ನು ತೆಗೆದುಕೊಂಡು ಹೋಗು. ‘ನಾನು ಯೆಹೋವನಿಗೆ ಯಜ್ಞವನ್ನರ್ಪಿಸಲು ಬಂದಿದ್ದೇನೆ’ ಎಂದು ಹೇಳು.


ನಂತರ ನೀನು ಗಿಬಿಯತ್ ಎಲೋಹಿಮಿಗೆ ಹೋಗುವೆ. ಅಲ್ಲಿ ಒಂದು ಫಿಲಿಷ್ಟಿಯರ ಕೋಟೆಯಿದೆ. ನೀನು ಆ ಪಟ್ಟಣಕ್ಕೆ ಬಂದಾಗ, ಪ್ರವಾದಿಗಳ ಗುಂಪೊಂದು ಹೊರಬರುತ್ತದೆ. ಈ ಪ್ರವಾದಿಗಳು ಆರಾಧನಾ ಸ್ಥಳದಿಂದ ಇಳಿದು ಬರುತ್ತಾರೆ, ಅವರು ಪ್ರವಾದಿಸುತ್ತಿರುತ್ತಾರೆ. ಅವರು ಸ್ವರಮಂಡಲವನ್ನೂ ದಮ್ಮಡಿಯನ್ನೂ ಕೊಳಲನ್ನೂ ಕಿನ್ನರಿಯನ್ನೂ ನುಡಿಸುತ್ತಿರುತ್ತಾರೆ.


ಗಿಬ್ಯೋನಿನ ಉನ್ನತಸ್ಥಳದಲ್ಲಿದ್ದ ದೇವದರ್ಶನ ಗುಡಾರದಲ್ಲಿ ಸೇವೆಮಾಡಲು ದಾವೀದನು ಚಾದೋಕನನ್ನು ಮತ್ತು ಇತರ ಯಾಜಕರನ್ನು ನೇಮಿಸಿದನು.


ಆದರೆ ಸಮುವೇಲನ ಮನೆಯು ರಾಮದಲ್ಲಿತ್ತು. ಆದ್ದರಿಂದ ಸಮುವೇಲನು ಯಾವಾಗಲೂ ರಾಮಕ್ಕೆ ಹಿಂತಿರುಗುತ್ತಿದ್ದನು. ಸಮುವೇಲನು ರಾಮದಿಂದ ಇಸ್ರೇಲರಿಗೆ ನ್ಯಾಯತೀರ್ಪು ನೀಡುತ್ತಾ ಆಳಿದನು; ರಾಮದಲ್ಲಿ ಯೆಹೋವನಿಗಾಗಿ ಯಜ್ಞವೇದಿಕೆಯೊಂದನ್ನು ನಿರ್ಮಿಸಿದನು.


ನಾನು ನನಗೋಸ್ಕರ ನಂಬಿಗಸ್ತನಾದ ಯಾಜಕನೊಬ್ಬನನ್ನು ಆರಿಸಿಕೊಳ್ಳುತ್ತೇನೆ. ಈ ಯಾಜಕನು ನಾನು ಹೇಳುವುದನ್ನು ಕೇಳುವನು ಮತ್ತು ನನಗೆ ಇಷ್ಟವಾದುದನ್ನು ಮಾಡುವನು. ಈ ಯಾಜಕನ ಕುಟುಂಬವನ್ನು ನಾನು ಬಲಗೊಳಿಸುವೆನು. ನಾನು ಆರಿಸಿಕೊಂಡಿರುವ ರಾಜನ ಬಳಿಯಲ್ಲಿ ಅವನು ಸದಾಕಾಲ ಸೇವೆಮಾಡುವನು.


ನಾನು ಇಲ್ಲದಿರುವುದನ್ನು ನಿಮ್ಮ ತಂದೆಯು ಗಮನಿಸಿದರೆ ಅವನಿಗೆ, ‘ದಾವೀದನು ಬೆತ್ಲೆಹೇಮಿನ ತನ್ನ ಮನೆಗೆ ಹೋಗಲು ಬಯಸಿದನು. ಅವನ ಕುಟುಂಬದವರು ಅಲ್ಲಿ ವಾರ್ಷಿಕಯಜ್ಞದ ಔತಣವನ್ನು ಏರ್ಪಡಿಸಿದ್ದಾರೆ. ಬೆತ್ಲೆಹೇಮಿಗೆ ಹೋಗಿ ತನ್ನ ಕುಟುಂಬದವರ ಜೊತೆಯಿರಲು ಅವಕಾಶ ಕೊಡಬೇಕೆಂದು ದಾವೀದನು ನನ್ನನ್ನು ಕೇಳಿಕೊಂಡನು’ ಎಂದು ಹೇಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು