Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 1:14 - ಪರಿಶುದ್ದ ಬೈಬಲ್‌

14 ಪರಲೋಕದಿಂದ ಕೆಳಗಿಳಿದು ಬಂದ ಬೆಂಕಿಯು ಮೊದಲ ಇಬ್ಬರು ಸೇನಾಧಿಪತಿಗಳನ್ನೂ ಅವರ ಐವತ್ತು ಜನರನ್ನೂ ನಾಶಗೊಳಿಸಿತು. ಆದರೆ ಈಗ ನಮ್ಮ ಮೇಲೆ ಕನಿಕರ ತೋರಿ ಜೀವಿಸಲು ಅವಕಾಶ ಮಾಡಿಕೊಡು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಕಾಶದಿಂದ ಬೆಂಕಿಬಿದ್ದು ಮೊದಲು ಬಂದ ಇಬ್ಬರು ಪಂಚದಶಾಧಿಪತಿಗಳನ್ನೂ, ಅವರ ಸಿಪಾಯಿಗಳನ್ನೂ ದಹಿಸಿಬಿಟ್ಟಿತಲ್ಲಾ, ನನ್ನ ಪ್ರಾಣವಾದರೂ ನಿನ್ನ ದೃಷ್ಟಿಯಲ್ಲಿ ಬೆಲೆಯುಳ್ಳದ್ದೆಂದು ಎಣಿಸಲ್ಪಡಲಿ” ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಆಕಾಶದಿಂದ ಬೆಂಕಿಬಿದ್ದು ನನಗೆ ಮುಂದೆ ಬಂದ ಆ ಇಬ್ಬರು ಪಂಚಾಶದಧಿಪತಿಗಳನ್ನೂ ಅವರ ಸಿಪಾಯಿಗಳನ್ನೂ ದಹಿಸಿಬಿಟ್ಟಿತಲ್ಲವೆ? ನನ್ನ ಪ್ರಾಣವಾದರೂ ನಿಮ್ಮ ದೃಷ್ಟಿಯಲ್ಲಿ ಮೌಲ್ಯವುಳ್ಳದೆಂದು ಮಾನ್ಯವಾಗಲಿ,” ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆಕಾಶದಿಂದ ಬೆಂಕಿಬಿದ್ದು ಮುಂಚೆ ಬಂದ ಇಬ್ಬರು ಪಂಚದಶಾಧಿಪತಿಗಳನ್ನೂ ಅವರ ಸಿಪಾಯಿಗಳನ್ನೂ ದಹಿಸಿಬಿಟ್ಟಿತಲ್ಲಾ; ನನ್ನ ಪ್ರಾಣವಾದರೋ ನಿನ್ನ ದೃಷ್ಟಿಯಲ್ಲಿ ಬೆಲೆಯುಳ್ಳದ್ದೆಂದು ಎಣಿಸಲ್ಪಡಲಿ ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಇಗೋ, ಬೆಂಕಿಯು ಆಕಾಶದಿಂದ ಇಳಿದು ಮೊದಲಿನ ಇಬ್ಬರು ಪ್ರಧಾನರನ್ನೂ, ಅವರ ಐವತ್ತು ಮಂದಿಯನ್ನೂ ದಹಿಸಿಬಿಟ್ಟಿತು. ಆದರೆ ಈಗ ನನ್ನ ಪ್ರಾಣವು ನಿನ್ನ ಸಮ್ಮುಖದಲ್ಲಿ ಮೌಲ್ಯವುಳ್ಳದ್ದಾಗಿರಲಿ,” ಎಂದು ಹೇಳಿ ಅವನನ್ನು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 1:14
11 ತಿಳಿವುಗಳ ಹೋಲಿಕೆ  

ನಾನು ನನ್ನ ಸ್ವಂತ ಪ್ರಾಣದ ಬಗ್ಗೆ ಚಿಂತಿಸುವುದಿಲ್ಲ. ಪ್ರಭುವಾದ ಯೇಸು ನನಗೆ ಕೊಟ್ಟಿರುವ ಕೆಲಸವನ್ನು ಪೂರೈಸುವುದೇ ನನಗೆ ಅತ್ಯಂತ ಮುಖ್ಯವಾಗಿದೆ. ದೇವರ ಕೃಪೆಯ ವಿಷಯವಾದ ಸುವಾರ್ತೆಯ ಬಗ್ಗೆ ಸಾಕ್ಷಿ ನೀಡುವುದೇ ನನ್ನ ಕೆಲಸವಾಗಿದೆ. ಆ ಕೆಲಸವನ್ನು ಮಾಡಿ ಪೂರೈಸುವುದೇ ನನ್ನ ಅಪೇಕ್ಷೆಯಾಗಿದೆ.


ಸೂಳೆಯು ಒಂದು ರೊಟ್ಟಿಗೇ ಬರಬಹುದು; ಆದರೆ ಬೇರೊಬ್ಬನ ಹೆಂಡತಿಗೆ ನಿನ್ನ ಜೀವವನ್ನೇ ಕಳೆದುಕೊಳ್ಳಬೇಕಾಗುವುದು.


ಯೆಹೋವನು ತನ್ನ ಭಕ್ತರ ಮರಣವನ್ನು ಅಲ್ಪವೆಂದು ಎಣಿಸುವುದಿಲ್ಲ.


ಕ್ರೂರಿಗಳಿಂದ ಅವರನ್ನು ತಪ್ಪಿಸಿ ರಕ್ಷಿಸುವನು. ಆ ಬಡವರ ಜೀವಗಳು ರಾಜನಿಗೆ ಅಮೂಲ್ಯವಾಗಿವೆ.


ಸ್ವಂತ ಪ್ರಾಣವನ್ನು ಖರೀದಿಸಲು ಬೇಕಾಗುವಷ್ಟು ಹಣ ಯಾವನಿಗೂ ದೊರೆಯುವುದಿಲ್ಲ.


ನಿನ್ನ ಜೀವವು ನನಗೆ ಮುಖ್ಯವೆಂಬುದನ್ನು ಈ ದಿನ ನಾನು ನಿನಗೆ ತೋರಿಸಿದೆ! ಇದೇ ರೀತಿ, ನನ್ನ ಜೀವವು ತನಗೆ ಮುಖ್ಯವೆಂಬುದನ್ನು ಯೆಹೋವನು ತೋರಿಸುತ್ತಾನೆ! ಯೆಹೋವನು ನನ್ನನ್ನು ಎಲ್ಲಾ ಕೇಡುಗಳಿಂದಲೂ ರಕ್ಷಿಸುತ್ತಾನೆ” ಎಂದು ಹೇಳಿದನು.


ನಂತರ ಸೌಲನು, “ನಾನು ಪಾಪಮಾಡಿದ್ದೇನೆ. ನನ್ನ ಮಗನಾದ ದಾವೀದನೇ, ಹಿಂದಿರುಗಿ ಬಾ. ನನ್ನ ಜೀವವು ನಿನಗೆ ಮುಖ್ಯವೆಂಬುದನ್ನು ನನಗೆ ನೀನು ಈ ದಿನ ತೋರಿಸಿರುವೆ. ಆದ್ದರಿಂದ ನಾನು ನಿನ್ನನ್ನು ಹಿಂಸಿಸಲು ಪ್ರಯತ್ನಿಸುವುದಿಲ್ಲ. ನಾನು ಮೂರ್ಖನಂತೆ ವರ್ತಿಸಿದೆ. ನಾನು ದೊಡ್ಡ ತಪ್ಪನ್ನು ಮಾಡಿದ್ದೇನೆ” ಎಂದನು.


ಅಹಜ್ಯನು ಮೂರನೆಯ ಸೇನಾಧಿಪತಿಯನ್ನು ಐವತ್ತು ಜನರೊಂದಿಗೆ ಕಳುಹಿಸಿದನು. ಐವತ್ತು ಮಂದಿಯ ಮೂರನೆಯ ಸೇನಾಧಿಪತಿಯು ಎಲೀಯನ ಬಳಿಗೆ ಬಂದನು. ಸೇನಾಧಿಪತಿಯು ತನ್ನ ಮೊಣಕಾಲುಗಳ ಮೇಲೆ ಬಿದ್ದು ನಮಸ್ಕರಿಸಿದನು. ಸೇನಾಧಿಪತಿಯು ಎಲೀಯನನ್ನು ಬೇಡಿಕೊಳ್ಳುತ್ತಾ ಅವನಿಗೆ, “ದೇವ ಮನುಷ್ಯನೇ, ನನ್ನ ಮತ್ತು ಈ ಐವತ್ತು ಜನರ ಪ್ರಾಣವು ನಿನ್ನ ದೃಷ್ಟಿಯಲ್ಲಿ ಬೆಲೆಯುಳ್ಳದ್ದಾಗಿರಲಿ!


ಯೆಹೋವನ ದೂತನು ಎಲೀಯನಿಗೆ, “ಸೇನಾಧಿಪತಿಯೊಡನೆ ಹೋಗು, ಅವನಿಗೆ ಹೆದರಬೇಡ” ಎಂದು ಹೇಳಿದನು. ಎಲೀಯನು ರಾಜನಾದ ಅಹಜ್ಯನನ್ನು ನೋಡಲು ಆ ಸೇನಾಧಿಪತಿಯೊಡನೆ ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು